Homeಮುಖಪುಟಪುನೀತ್ ಕೆರೆಹಳ್ಳಿ ಫೇಸ್‌ಬುಕ್ ಖಾತೆಯನ್ನು ತಾನೇ ಡಿಆಕ್ಟಿವೇಟ್ ಮಾಡಿಕೊಂಡಿದ್ದಾನೆ: ರಾಮನಗರ ಎಸ್.ಪಿ

ಪುನೀತ್ ಕೆರೆಹಳ್ಳಿ ಫೇಸ್‌ಬುಕ್ ಖಾತೆಯನ್ನು ತಾನೇ ಡಿಆಕ್ಟಿವೇಟ್ ಮಾಡಿಕೊಂಡಿದ್ದಾನೆ: ರಾಮನಗರ ಎಸ್.ಪಿ

- Advertisement -
- Advertisement -

ಪುನೀತ್ ಕೆರೆಹಳ್ಳಿ ಫೇಸ್ ಬುಕ್ ಖಾತೆಯನ್ನು ನಾವು ಡಿಲೀಟ್ ಮಾಡಿಸಿಲ್ಲ. ಬದಲಿಗೆ ತಾನೇ ಡಿಆಕ್ಟಿವೇಟ್ ಮಾಡಿಕೊಂಡಿದ್ದಾನೆ. ಅಲ್ಲದೇ ಫೇಸ್‌ಬುಕ್‌ ಲೈವ್‌ನಲ್ಲಿ ಪೊಲೀಸರು ಎಫ್‌ಐಆರ್ ತಿದ್ದಿದ್ದಾರೆ ಎಂದು ಸುಳ್ಳು ಹೇಳುವ ಮೂಲಕ ಜನರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾನೆ ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿ ಹೇಳಿದ್ದಾರೆ.

ಪುನೀತ್ ಕೆರೆಹಳ್ಳಿ ಮತ್ತು ಆತನ ನಾಲ್ವರು ಸಹಚರರನ್ನು ರಾಜಸ್ಥಾನದಲ್ಲಿ ಬಂಧಿಸಿರುವುದರ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಎಫ್‌ಐಆರ್ ದಾಖಲಿಸಿದ ನಂತರ ಅದನ್ನು ತಿದ್ದುವ ಅಧಿಕಾರಿ ಯಾರಿಗೂ ಇಲ್ಲ. ನಾವು ಆತನ ಮೇಲೆ ಎರಡು ಎಫ್‌ಐಆರ್ ದಾಖಲಿಸಿದ್ದೀವಿ. ಇನ್ನು ಪೊಲೀಸರು ನನ್ನನ್ನು ವಿಚಾರಣೆಗೆ ಕರೆದಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದಾನೆ. ಆದರೆ ಆತ ಎರಡು ದಿನ ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆ ಮರೆಸಿಕೊಂಡಿದ್ದ” ಎಂದು ಎಸ್‌ಪಿ ತಿಳಿಸಿದ್ದಾರೆ.

ಆತನ ನೈತಿಕ ಪೊಲೀಸ್‌ಗಿರಿ ವಿಚಾರ ಕುರಿತ ಮಾತನಾಡಿದ ಅವರು ಆತನ ಮೇಲೆ ಅದಕ್ಕಾಗಿ 341 ಸೆಕ್ಷನ್ ಹಾಕಿದ್ದೇವೆ ಎಂದರು. ಅಲ್ಲದೆ ಸಾರ್ವಜನಿಕರು ಯಾರೂ ನೈತಿಕ ಪೊಲೀಸ್ ಗಿರಿ ತೋರಿಸುವ ಅವಶ್ಯಕತೆ ಇಲ್ಲ. ಎಲ್ಲಾದರೂ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂದರೆ ದಯವಿಟ್ಟು ಪೊಲೀಸರ ಗಮನಕ್ಕೆ ತನ್ನಿ ಎಂದು ಮನವಿ ಮಾಡಿದರು.

ಅಕ್ರಮ ಚಟುವಟಿಕೆ ಎಸಗುವವರ ಮೇಲೆ ಪೊಲೀಸರು ಶೇ. ನೂರರಷ್ಟು ಕ್ರಮ ಕೈಗೊಳ್ಳುತ್ತೇವೆ. ಹಾಗಾಗಿ ನೀವು ಯಾರೂ ನೈತಿಕ ಪೊಲೀಸ್‌ಗಿರಿ, ಹಿರೋಇಸಂ ತೋರಿಸಲು ಹೋಗಬೇಡಿ. ಹಾಗೆ ಮಾಡಿದರೆ ನಿಮ್ಮ ಮೇಲೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ವರ್ಷದಲ್ಲಿ ಅಕ್ರಮ ಗೋ ಸಾಗಣೆ ವಿರುದ್ಧ ಈಗಾಗಲೇ 12 ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ. ನಮ್ಮ ಗಮನಕ್ಕೆ ಬಂದ ಯಾವುದನ್ನು ನಾವು ಬಿಡುವುದಿಲ್ಲ. ಆದರೆ ಸಾರ್ವಜನಿಕರು ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದರು.

ಸದ್ಯಕ್ಕೆ ಕೃತ್ಯದಲ್ಲಿ ಭಾಗಿಯಾದ ರಾಷ್ಟ್ರೀಯ ರಕ್ಷಣೆ ಪಡೆಯ ಪುನೀತ್ ಕೆರೆಹಳ್ಳಿ ಸೇರಿ, ರಾಮನಗರದ ಗೋಪಿ, ತೀರ್ಥಹಳ್ಳಿಯ ಪವನ್ ಕುಮಾರ್, ಬಸವನಗುಡಿಯ ಪಿಲ್ಲಿಂಗ ಅಂಬಿಗಾರ್ ಮತ್ತು ರಾಯಚೂರಿನ ಸುರೇಶ್ ಕುಮಾರ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದೇವೆ. ಅವರು ಪರಾರಿಯಾಗಲು ಸಹಕರಿಸಿದವರು ಕಂಡು ಬಂದರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇವರಿಗೆ ರಾಜಕೀಯ ಪಕ್ಷಗಳ ಅಥವಾ ರಾಜಕಾರಣಿಗಳ ಬೆಂಬಲವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಕಂಡುಬಂದಿಲ್ಲ. ಆದರೆ ಆ ಕುರಿತು ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ; ಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಕೊನೆಗೂ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...