Homeಮುಖಪುಟಪುನೀತ್ ಕೆರೆಹಳ್ಳಿ ಫೇಸ್‌ಬುಕ್ ಖಾತೆಯನ್ನು ತಾನೇ ಡಿಆಕ್ಟಿವೇಟ್ ಮಾಡಿಕೊಂಡಿದ್ದಾನೆ: ರಾಮನಗರ ಎಸ್.ಪಿ

ಪುನೀತ್ ಕೆರೆಹಳ್ಳಿ ಫೇಸ್‌ಬುಕ್ ಖಾತೆಯನ್ನು ತಾನೇ ಡಿಆಕ್ಟಿವೇಟ್ ಮಾಡಿಕೊಂಡಿದ್ದಾನೆ: ರಾಮನಗರ ಎಸ್.ಪಿ

- Advertisement -
- Advertisement -

ಪುನೀತ್ ಕೆರೆಹಳ್ಳಿ ಫೇಸ್ ಬುಕ್ ಖಾತೆಯನ್ನು ನಾವು ಡಿಲೀಟ್ ಮಾಡಿಸಿಲ್ಲ. ಬದಲಿಗೆ ತಾನೇ ಡಿಆಕ್ಟಿವೇಟ್ ಮಾಡಿಕೊಂಡಿದ್ದಾನೆ. ಅಲ್ಲದೇ ಫೇಸ್‌ಬುಕ್‌ ಲೈವ್‌ನಲ್ಲಿ ಪೊಲೀಸರು ಎಫ್‌ಐಆರ್ ತಿದ್ದಿದ್ದಾರೆ ಎಂದು ಸುಳ್ಳು ಹೇಳುವ ಮೂಲಕ ಜನರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾನೆ ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿ ಹೇಳಿದ್ದಾರೆ.

ಪುನೀತ್ ಕೆರೆಹಳ್ಳಿ ಮತ್ತು ಆತನ ನಾಲ್ವರು ಸಹಚರರನ್ನು ರಾಜಸ್ಥಾನದಲ್ಲಿ ಬಂಧಿಸಿರುವುದರ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಎಫ್‌ಐಆರ್ ದಾಖಲಿಸಿದ ನಂತರ ಅದನ್ನು ತಿದ್ದುವ ಅಧಿಕಾರಿ ಯಾರಿಗೂ ಇಲ್ಲ. ನಾವು ಆತನ ಮೇಲೆ ಎರಡು ಎಫ್‌ಐಆರ್ ದಾಖಲಿಸಿದ್ದೀವಿ. ಇನ್ನು ಪೊಲೀಸರು ನನ್ನನ್ನು ವಿಚಾರಣೆಗೆ ಕರೆದಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದಾನೆ. ಆದರೆ ಆತ ಎರಡು ದಿನ ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆ ಮರೆಸಿಕೊಂಡಿದ್ದ” ಎಂದು ಎಸ್‌ಪಿ ತಿಳಿಸಿದ್ದಾರೆ.

ಆತನ ನೈತಿಕ ಪೊಲೀಸ್‌ಗಿರಿ ವಿಚಾರ ಕುರಿತ ಮಾತನಾಡಿದ ಅವರು ಆತನ ಮೇಲೆ ಅದಕ್ಕಾಗಿ 341 ಸೆಕ್ಷನ್ ಹಾಕಿದ್ದೇವೆ ಎಂದರು. ಅಲ್ಲದೆ ಸಾರ್ವಜನಿಕರು ಯಾರೂ ನೈತಿಕ ಪೊಲೀಸ್ ಗಿರಿ ತೋರಿಸುವ ಅವಶ್ಯಕತೆ ಇಲ್ಲ. ಎಲ್ಲಾದರೂ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂದರೆ ದಯವಿಟ್ಟು ಪೊಲೀಸರ ಗಮನಕ್ಕೆ ತನ್ನಿ ಎಂದು ಮನವಿ ಮಾಡಿದರು.

ಅಕ್ರಮ ಚಟುವಟಿಕೆ ಎಸಗುವವರ ಮೇಲೆ ಪೊಲೀಸರು ಶೇ. ನೂರರಷ್ಟು ಕ್ರಮ ಕೈಗೊಳ್ಳುತ್ತೇವೆ. ಹಾಗಾಗಿ ನೀವು ಯಾರೂ ನೈತಿಕ ಪೊಲೀಸ್‌ಗಿರಿ, ಹಿರೋಇಸಂ ತೋರಿಸಲು ಹೋಗಬೇಡಿ. ಹಾಗೆ ಮಾಡಿದರೆ ನಿಮ್ಮ ಮೇಲೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ವರ್ಷದಲ್ಲಿ ಅಕ್ರಮ ಗೋ ಸಾಗಣೆ ವಿರುದ್ಧ ಈಗಾಗಲೇ 12 ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ. ನಮ್ಮ ಗಮನಕ್ಕೆ ಬಂದ ಯಾವುದನ್ನು ನಾವು ಬಿಡುವುದಿಲ್ಲ. ಆದರೆ ಸಾರ್ವಜನಿಕರು ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದರು.

ಸದ್ಯಕ್ಕೆ ಕೃತ್ಯದಲ್ಲಿ ಭಾಗಿಯಾದ ರಾಷ್ಟ್ರೀಯ ರಕ್ಷಣೆ ಪಡೆಯ ಪುನೀತ್ ಕೆರೆಹಳ್ಳಿ ಸೇರಿ, ರಾಮನಗರದ ಗೋಪಿ, ತೀರ್ಥಹಳ್ಳಿಯ ಪವನ್ ಕುಮಾರ್, ಬಸವನಗುಡಿಯ ಪಿಲ್ಲಿಂಗ ಅಂಬಿಗಾರ್ ಮತ್ತು ರಾಯಚೂರಿನ ಸುರೇಶ್ ಕುಮಾರ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದೇವೆ. ಅವರು ಪರಾರಿಯಾಗಲು ಸಹಕರಿಸಿದವರು ಕಂಡು ಬಂದರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇವರಿಗೆ ರಾಜಕೀಯ ಪಕ್ಷಗಳ ಅಥವಾ ರಾಜಕಾರಣಿಗಳ ಬೆಂಬಲವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಕಂಡುಬಂದಿಲ್ಲ. ಆದರೆ ಆ ಕುರಿತು ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ; ಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಕೊನೆಗೂ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...