Homeಮುಖಪುಟಪುನೀತ್ ಕೆರೆಹಳ್ಳಿ ಫೇಸ್‌ಬುಕ್ ಖಾತೆಯನ್ನು ತಾನೇ ಡಿಆಕ್ಟಿವೇಟ್ ಮಾಡಿಕೊಂಡಿದ್ದಾನೆ: ರಾಮನಗರ ಎಸ್.ಪಿ

ಪುನೀತ್ ಕೆರೆಹಳ್ಳಿ ಫೇಸ್‌ಬುಕ್ ಖಾತೆಯನ್ನು ತಾನೇ ಡಿಆಕ್ಟಿವೇಟ್ ಮಾಡಿಕೊಂಡಿದ್ದಾನೆ: ರಾಮನಗರ ಎಸ್.ಪಿ

- Advertisement -
- Advertisement -

ಪುನೀತ್ ಕೆರೆಹಳ್ಳಿ ಫೇಸ್ ಬುಕ್ ಖಾತೆಯನ್ನು ನಾವು ಡಿಲೀಟ್ ಮಾಡಿಸಿಲ್ಲ. ಬದಲಿಗೆ ತಾನೇ ಡಿಆಕ್ಟಿವೇಟ್ ಮಾಡಿಕೊಂಡಿದ್ದಾನೆ. ಅಲ್ಲದೇ ಫೇಸ್‌ಬುಕ್‌ ಲೈವ್‌ನಲ್ಲಿ ಪೊಲೀಸರು ಎಫ್‌ಐಆರ್ ತಿದ್ದಿದ್ದಾರೆ ಎಂದು ಸುಳ್ಳು ಹೇಳುವ ಮೂಲಕ ಜನರಲ್ಲಿ ಗೊಂದಲ ಉಂಟು ಮಾಡುತ್ತಿದ್ದಾನೆ ಎಂದು ರಾಮನಗರ ಜಿಲ್ಲಾ ಪೊಲೀಸ್‌ ವರಿಷ್ಟಾಧಿಕಾರಿ ಕಾರ್ತಿಕ್‌ ರೆಡ್ಡಿ ಹೇಳಿದ್ದಾರೆ.

ಪುನೀತ್ ಕೆರೆಹಳ್ಳಿ ಮತ್ತು ಆತನ ನಾಲ್ವರು ಸಹಚರರನ್ನು ರಾಜಸ್ಥಾನದಲ್ಲಿ ಬಂಧಿಸಿರುವುದರ ಕುರಿತು ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಅವರು, “ಎಫ್‌ಐಆರ್ ದಾಖಲಿಸಿದ ನಂತರ ಅದನ್ನು ತಿದ್ದುವ ಅಧಿಕಾರಿ ಯಾರಿಗೂ ಇಲ್ಲ. ನಾವು ಆತನ ಮೇಲೆ ಎರಡು ಎಫ್‌ಐಆರ್ ದಾಖಲಿಸಿದ್ದೀವಿ. ಇನ್ನು ಪೊಲೀಸರು ನನ್ನನ್ನು ವಿಚಾರಣೆಗೆ ಕರೆದಿಲ್ಲ ಎಂದು ವಿಡಿಯೋದಲ್ಲಿ ಹೇಳಿದ್ದಾನೆ. ಆದರೆ ಆತ ಎರಡು ದಿನ ತನ್ನ ಫೋನ್ ಸ್ವಿಚ್ ಆಫ್ ಮಾಡಿಕೊಂಡು ತಲೆ ಮರೆಸಿಕೊಂಡಿದ್ದ” ಎಂದು ಎಸ್‌ಪಿ ತಿಳಿಸಿದ್ದಾರೆ.

ಆತನ ನೈತಿಕ ಪೊಲೀಸ್‌ಗಿರಿ ವಿಚಾರ ಕುರಿತ ಮಾತನಾಡಿದ ಅವರು ಆತನ ಮೇಲೆ ಅದಕ್ಕಾಗಿ 341 ಸೆಕ್ಷನ್ ಹಾಕಿದ್ದೇವೆ ಎಂದರು. ಅಲ್ಲದೆ ಸಾರ್ವಜನಿಕರು ಯಾರೂ ನೈತಿಕ ಪೊಲೀಸ್ ಗಿರಿ ತೋರಿಸುವ ಅವಶ್ಯಕತೆ ಇಲ್ಲ. ಎಲ್ಲಾದರೂ ಅಕ್ರಮ ಚಟುವಟಿಕೆ ನಡೆಯುತ್ತಿದೆ ಎಂದರೆ ದಯವಿಟ್ಟು ಪೊಲೀಸರ ಗಮನಕ್ಕೆ ತನ್ನಿ ಎಂದು ಮನವಿ ಮಾಡಿದರು.

ಅಕ್ರಮ ಚಟುವಟಿಕೆ ಎಸಗುವವರ ಮೇಲೆ ಪೊಲೀಸರು ಶೇ. ನೂರರಷ್ಟು ಕ್ರಮ ಕೈಗೊಳ್ಳುತ್ತೇವೆ. ಹಾಗಾಗಿ ನೀವು ಯಾರೂ ನೈತಿಕ ಪೊಲೀಸ್‌ಗಿರಿ, ಹಿರೋಇಸಂ ತೋರಿಸಲು ಹೋಗಬೇಡಿ. ಹಾಗೆ ಮಾಡಿದರೆ ನಿಮ್ಮ ಮೇಲೆ ಮುಲಾಜಿಲ್ಲದೆ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಎಚ್ಚರಿಕೆ ನೀಡಿದರು.

ಈ ವರ್ಷದಲ್ಲಿ ಅಕ್ರಮ ಗೋ ಸಾಗಣೆ ವಿರುದ್ಧ ಈಗಾಗಲೇ 12 ಪ್ರಕರಣ ದಾಖಲಿಸಿ ತನಿಖೆ ನಡೆಸುತ್ತಿದ್ದೇವೆ. ನಮ್ಮ ಗಮನಕ್ಕೆ ಬಂದ ಯಾವುದನ್ನು ನಾವು ಬಿಡುವುದಿಲ್ಲ. ಆದರೆ ಸಾರ್ವಜನಿಕರು ಕಾನೂನು ಕೈಗೆ ತೆಗೆದುಕೊಳ್ಳಬಾರದು ಎಂದರು.

ಸದ್ಯಕ್ಕೆ ಕೃತ್ಯದಲ್ಲಿ ಭಾಗಿಯಾದ ರಾಷ್ಟ್ರೀಯ ರಕ್ಷಣೆ ಪಡೆಯ ಪುನೀತ್ ಕೆರೆಹಳ್ಳಿ ಸೇರಿ, ರಾಮನಗರದ ಗೋಪಿ, ತೀರ್ಥಹಳ್ಳಿಯ ಪವನ್ ಕುಮಾರ್, ಬಸವನಗುಡಿಯ ಪಿಲ್ಲಿಂಗ ಅಂಬಿಗಾರ್ ಮತ್ತು ರಾಯಚೂರಿನ ಸುರೇಶ್ ಕುಮಾರ್ ಎಂಬ ಐವರು ಆರೋಪಿಗಳನ್ನು ಬಂಧಿಸಿದ್ದೇವೆ. ಅವರು ಪರಾರಿಯಾಗಲು ಸಹಕರಿಸಿದವರು ಕಂಡು ಬಂದರೆ ಅವರ ಮೇಲೂ ಕ್ರಮ ಕೈಗೊಳ್ಳುತ್ತೇವೆ ಎಂದರು.

ಇವರಿಗೆ ರಾಜಕೀಯ ಪಕ್ಷಗಳ ಅಥವಾ ರಾಜಕಾರಣಿಗಳ ಬೆಂಬಲವಿದೆಯೇ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ಸದ್ಯಕ್ಕೆ ಕಂಡುಬಂದಿಲ್ಲ. ಆದರೆ ಆ ಕುರಿತು ತನಿಖೆ ನಡೆಸಲಾಗುವುದು ಎಂದಿದ್ದಾರೆ.

ಇದನ್ನೂ ಓದಿ; ಇದ್ರೀಸ್ ಪಾಶ ಕೊಲೆ ಆರೋಪಿ ಪುನೀತ್ ಕೆರೆಹಳ್ಳಿ ಕೊನೆಗೂ ಅರೆಸ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...