Homeಕರ್ನಾಟಕಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

ಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

- Advertisement -
- Advertisement -

ಡಾ.ರಾಜ್‌ಕುಮಾರ್‌ ಕುಟುಂಬದ ಮಹಾನ್‌ ಪ್ರತಿಭೆ, ಮೇರು ನಟ, ಸಹೃದಯಿ ಪುನೀತ್‌ ರಾಜ್‌ಕುಮಾರ್‌ ಅವರು ನಾಲ್ಕು ದಶಕಗಳ ಸಿನಿಮಾ ಪಯಣವನ್ನು ಮುಗಿಸಿ ಇಹಲೋಹ ತ್ಯಜಿಸಿದ್ದಾರೆ.

ಬಾಲ ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟ ಪುನೀತ್‌ ರಾಜ್‌ಕುಮಾರ್‌ ಅವರು ಕನ್ನಡಿಗರ ಹೃದಯದಲ್ಲಿ ನೆಲೆಸಿದರು. ನಟರಾಗಿ ಅಷ್ಟೇ ಆಗಿ ಉಳಿಯದೇ ಕನ್ನಡ ಚಿತ್ರರಂಗದಲ್ಲಿ ಹೊಸ ನೀರು ಹರಿಯಬೇಕೆಂದು ಹಂಬಲಿಸಿದ ವ್ಯಕ್ತಿ ಅವರಾಗಿದ್ದರು. ಚಿತ್ರರಂಗಕ್ಕೆ ಹೊಸದಾಗಿ ಕಾಲಿಟ್ಟವರನ್ನು ಪೊರೆಯುತ್ತಿದ್ದರು. ಸೋತವರಿಗೆ ಮತ್ತೊಂದು ಅವಕಾಶ ದೊರಕಿಸಿ ನೆಲೆ ನಿಲ್ಲಲು ಬೆನ್ನೆಲುಬಾಗಿದ್ದರು.

ಪುನೀತ್‌ ರಾಜ್‌ಕುಮಾರ್‌ ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರ ಮಾಲೀಕತ್ವದ ಪಿ.ಆರ್‌.ಕೆ.ಪ್ರೊಡಕ್ಷನ್ಸ್‌ ಹೊಸ ತಂತ್ರಜ್ಞರು, ಯುವ ಪ್ರತಿಭೆಗಳನ್ನು ಹುಟ್ಟು ಹಾಕುವ ವೇದಿಕೆಯಾಗಿ ಹೊಮ್ಮಿದೆ. ಹೊಸ ಪ್ರತಿಭೆಗಳಿಗೆ ಪುನೀತ್‌ ರಾಜ್‌ಕುಮಾರ್‌ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.

2017ರಲ್ಲಿ ಸ್ಥಾಪನೆಯಾದ ಪಿ.ಆರ್‌.ಕೆ. ಪ್ರೊಡಕ್ಷನ್ಸ್‌‌ 2019ರಲ್ಲಿ ‘ಕವಲುದಾರಿ’ ಸಿನಿಮಾವನ್ನು ನಿರ್ಮಾಣ ಮಾಡಿತು. 2016ರಲ್ಲಿ ‘ಗೋದಿ ಬಣ್ಣ ಸಾಧಾರಣ ಮೈಕಟ್ಟು’ ಎಂಬ ಅತ್ಯುತ್ತಮ ಸಿನಿಮಾ ನೀಡಿದ ಹೇಮಂತ್‌ ಎಂ.ರಾವ್‌ ಅವರು ತಮ್ಮ ಎರಡನೇ ಸಿನಿಮಾ ‘ಕವಲುದಾರಿ’ ನಿರ್ದೇಶನಕ್ಕೆ ಪಿಆರ್‌ಕೆ ಅವಕಾಶ ನೀಡಿತು. ಯುವ ಪ್ರತಿಭೆ ರಿಷಿ ಹಾಗೂ ಹಿರಿಯ ನಟ ಅನಂತನಾಗ್‌ ಅವರು ಅಭಿನಯಿಸಿದ್ದ ಈ ಸಿನಿಮಾ, ಥ್ರಿಲ್ಲರ್‌ ಕಥೆಯೊಂದಿಗೆ ವಿಶಿಷ್ಟ ಅನುಭವವನ್ನು ಪ್ರೇಕ್ಷಕರಿಗೆ ನೀಡಿತು.

2020ರಲ್ಲಿ ತೆರೆಕಂಡ ‘ಮಾಯಾಬಜಾರ್‌’ ಹಾಸ್ಯಪ್ರಧಾನ ಸಿನಿಮಾ. ರಾಧಾಕೃಷ್ಣ ರೆಡ್ಡಿ ಎಂಬ ಹೊಸ ಪ್ರತಿಭೆ ನಿರ್ದೇಶನ ಮಾಡಲು ಪಿಆರ್‌ಕೆ ಪ್ರೊಡಕ್ಷನ್‌ ಅವಕಾಶ ನೀಡಿತು. ರಾಜ್‌ ಬಿ.ಶೆಟ್ಟಿ, ವಶಿಷ್ಟ ಎನ್‌.ಸಿಂಹ, ಪ್ರಕಾಶ್‌ ರಾಜ್‌, ಅಚ್ಯುತ್‌ ಕುಮಾರ್‌, ಸುಧಾರಾಣಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದರು. ದುಡ್ಡಿನ ಅನಿವಾರ್ಯತೆ ಹೊಂದಿದ್ದ ಪ್ರಾಮಾಣಿಕ ಪೊಲೀಸ್ ಅಧಿಕಾರಿ, ಒಬ್ಬ ಕಳ್ಳ ಹಾಗೂ ಜೀವನದಲ್ಲಿ ಸೆಟಲ್‌ ಆಗಬೇಕೆಂದು ಪರಿತಪಿಸುತ್ತಿರುವ ಪ್ರೇಮಿಯ ಸುತ್ತ ಎಣೆದ ಈ ಸಿನಿಮಾ, ನವಿರಾದ ಹಾಸ್ಯವನ್ನು ಕನ್ನಡಿಗರಿಗೆ ಉಣಬಡಿಸಿತ್ತು.

ಕೋವಿಡ್‌ ಬಿಕ್ಕಟ್ಟಿನಿಂದಾಗಿ ಜನರು ಓಟಿಟಿ ವೇದಿಕೆಯಲ್ಲಿ ಸಿನಿಮಾಗಳನ್ನು ನೋಡಲು ಶುರು ಮಾಡಿದರು. ಇತರೆ ಭಾಷಿಯ ಸಿನಿಮಾಗಳು ಓಟಿಟಿಯಲ್ಲಿ ಬಿಡುಗಡೆಯಾಗುತ್ತಿದ್ದಾಗ, ಕನ್ನಡದವರೂ ನೇರವಾಗಿ ಓಟಿಟಿಯಲ್ಲಿ ಸಿನಿಮಾ ಬಿಡುಗಡೆ ಮಾಡುವತ್ತ ಹೆಜ್ಜೆ ಇರಿಸಲು ಪಿಆರ್‌ಕೆ ಪ್ರೊಡಕ್ಷನ್ಸ್‌ ಕಾರಣವಾಯಿತು. ಪಿಆರ್‌ಕೆ ಪ್ರೊಡಕ್ಷನ್ಸ್‌‌ನಲ್ಲಿ ಮೂಡಿಬಂದ ‘ಲಾ’ (2020) ಸಿನಿಮಾ ಓಟಿಟಿಯಲ್ಲಿ ಬಿಡುಗಡೆಯಾದ ಮೊದಲ ಕನ್ನಡ ಸಿನಿಮಾ.

ರಘು ಸಮರ್ಥ ಅವರು ನಿರ್ದೇಶಿಸಿದ್ದ ಈ ಸಿನಿಮಾದಲ್ಲಿ ನಟ ಪ್ರಜ್ವಲ್‌ ದೇವರಾಜ್‌ ಅವರ ಪತ್ನಿ ರಾಗಿಣಿ ಪ್ರಜ್ವಲ್‌ ಅವರು ಮೊದಲ ಬಾರಿಗೆ ನಾಯಕ ನಟಿಯಾಗಿ ಅಭಿನಯಿಸಿದ್ದರು. ಕೋರ್ಟ್ ರೂಮ್‌ ಡ್ರಾಮಾವಾಗಿದ್ದ ಈ ಸಿನಿಮಾಕ್ಕೆ ಮಿಶ್ರಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ‘ಸ್ಮೈಲ್‌ ಪ್ಲೀಸ್‌’ ಸಿನಿಮಾ ನಂತರ ರಘು ಸಮರ್ಥ ‘ಲಾ’ ಸಿನಿಮಾ ನಿರ್ದೇಶಿಸಿದ್ದರು.

ಇದನ್ನೂ ಓದಿರಿ: ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಓಟಿಟಿಯಲ್ಲಿ ತೆರೆಕಂಡ ‘ಫ್ರೆಂಚ್‌ ಬಿರಿಯಾನಿ’ ಪಿಆರ್‌ಕೆ ಪ್ರೊಡಕ್ಷನ್ಸ್‌ನ ಮತ್ತೊಂದು ಸಿನಿಮಾ. ಪನ್ನಗ ಭರಣ (ಖ್ಯಾತ ನಿರ್ದೇಶಕ ಟಿ.ಆರ್‌.ನಾಗಭರಣ ಅವರ ಪುತ್ರ) ಅವರು 2017ರಲ್ಲಿ ‘ಹ್ಯಾಪಿ ನ್ಯೂ ಇಯರ್‌’ ನಿರ್ದೇಶಿಸಿದ್ದರು. ಆದರೆ ಅಷ್ಟಾಗಿ ಸದ್ದು ಮಾಡಲಿಲ್ಲ. ‘ಫ್ರೆಂಚ್ ಬಿರಿಯಾನಿ’ ಮೂಲಕ ನಿರ್ದೇಶನ ಮುಂದುವರಿಸಲು ಪಿಆರ್‌ಕೆ ಪ್ರೊಡಕ್ಷನ್‌ ಪ್ರೋತ್ಸಾಹ ನೀಡಿತು.

“ಯಾವುದೇ ಒಬ್ಬ ವ್ಯಕ್ತಿ ಏನೇ ಹೇಳಿದರೂ ಅದನ್ನು ಸರಿಯಾಗಿ ಕೇಳಿಸಿಕೊಳ್ಳಬೇಕು ಇಲ್ಲದೇ ಹೋದರೆ ಒಂದಷ್ಟು ಅನಾಹುತಗಳಾಗುತ್ತವೆ” ಎಂಬುದನ್ನು ಹಾಸ್ಯದ ಮೂಲಕ ಹೇಳುವ ಪ್ರಯತ್ನವನ್ನು ಫ್ರೆಂಚ್ ಬಿರಿಯಾನಿಯಲ್ಲಿ ಮಾಡಲಾಯಿತು. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಗಳು ಈ ಸಿನಿಮಾಮಕ್ಕೆ ಬಂದವು. ಡ್ಯಾನಿಷ್‌ ಸೇಟ್‌, ಸಾಲ್‌ ಯುಸೆಫ್‌ ಅಭಿನಯಿಸಿದ್ದರು. ಸಾಮಾಜಿಕ ಮಾಧ್ಯಮವಾದ ಟಿಕ್‌ಟಾಕ್‌ ಮೂಲಕ ಜನಪ್ರಿಯರಾಗಿದ್ದ ದಿಶಾ ಮದನ್‌ ಅವರು ಮೊದಲ ಭಾರಿಗೆ ಸಿನಿಮಾದಲ್ಲಿ ಅಭಿನಯಿಸಲು ‘ಫ್ರೆಂಚ್ ಬಿರಿಯಾನಿ’ ಅವಕಾಶ ನೀಡಿತ್ತು.

ಪಿಆರ್‌ಕೆ ನಿರ್ಮಾಣದ ಮತ್ತೊಂದು ಸಿನಿಮಾ ‘ಫ್ಯಾಮಿಲಿ ಪ್ಯಾಕ್‌’ ಚಿತ್ರೀಕರಣ ಮುಗಿದಿದ್ದು, ಬಿಡುಗಡೆಯಾಗಬೇಕಿದೆ. ಅರ್ಜುನ್‌ ಕುಮಾರ್‌ ಎಸ್‌. ನಿರ್ದೇಶಿಸಲು ಪಿಆರ್‌ಕೆ ಅವಕಾಶ ನೀಡಿದೆ. ಈ ಹಿಂದೆ ಲಿಖಿತ್‌ ಶೆಟ್ಟಿ ಹಾಗೂ ಅರ್ಜನ್‌ ಕುಮಾರ್‌ ಅವರು ಸಂಕಷ್ಟಕರ ಗಣಪತಿ ಸಿನಿಮಾದಲ್ಲಿ ಕೆಲಸ ಮಾಡಿದ್ದರು. ಪಿಆರ್‌ಕೆ ಪ್ರೊಡಕ್ಷನ್ಸ್‌ ಈ ಹೊಸ ಪ್ರತಿಭೆಗಳು ಬೆಳೆಯಲು ಅವಕಾಶ ನೀಡಿದೆ. ರಂಗಾಯಣ ರಘು, ಅಚ್ಯುತ್‌ ಕುಮಾರ್‌, ದತ್ತಣ್ಣ, ತಿಲಕ್‌, ನಾಗಭೂಷಣ್‌ ಮುಖ್ಯಭೂಮಿಕೆಯಲ್ಲಿ ಇದ್ದಾರೆ.

‘ರಾಮ್‌ ರಾಮ ರೇ’, ‘ಒಂದಲ್ಲ ಎರಡಲ್ಲ’ ಥರದ ಸಂವೇದನಾಶೀಲ ಸಿನಿಮಾಗಳನ್ನು ನಿರ್ದೇಶಿಸಿರುವ ಡಿ.ಸತ್ಯಪ್ರಕಾಶ್ ಅವರು ತಮ್ಮ ಮುಂದಿನ ಸಿನಿಮಾವನ್ನು ಪಿಆರ್‌ಕೆ ಮೂಲಕ ಹೊರ ತರುತ್ತಿದ್ದಾರೆ. ಚಿತ್ರೀಕರಣ ಮುಕ್ತಾಯವಾಗಿದೆ. ರಾಘವ್‌ ನಾಯಕ್‌‌, ಪ್ರಶಾಂತ್‌ ರಾಜ್‌ ಅವರ ನಿರ್ದೇಶನದಲ್ಲಿ ಮೂಡಿರುವ ಸಿನಿಮಾಕ್ಕೆ ಪಿಆರ್‌ಕೆ ನಿರ್ಮಾಣದ ಹೊಣೆ ಹೊತ್ತಿದೆ.

‘ಎರಡು ನಿಮಿಷ ಮಾತನಾಡಿದರೂ ತನ್ಮಯತೆ ಇರುತ್ತಿತ್ತು’

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಜಟ್ಟ, ಮೈತ್ರಿ, ಅಮರಾವತಿ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌, ಮೈತ್ರಿ ಸಿನಿಮಾ ನಿರ್ದೇಶಿಸುವಾಗ ಪುನೀತ್‌ ರಾಜ್‌ಕುಮಾರ್‌ ಅವರೊಂದಿಗಿನ ಅನುಭವಗಳನ್ನು ಹಂಚಿಕೊಂಡರು.

“ಪುನೀತ್‌ ರಾಜ್‌ಕುಮಾರ್‌ ಅವರ ದೊಡ್ಡತನವೆಂದರೆ ನೀವು ಅಪರಿಚಿತರಿದ್ದರೂ ಅವರ ಬಳಿ ಎರಡು ನಿಮಿಷ ಮಾತನಾಡಿದರೂ ಆ ಎರಡು ನಿಮಿಷ ನಿಮಗೆ ವಿಶೇಷವೆನಿಸುತ್ತಿತ್ತು. ಈ ಸಮಯ ನಿಮಗಾಗಿ ಮೀಸಲಾಗಿದೆ ಎಂಬುದನ್ನು ಪುನೀತ್‌ ರಾಜ್‌ಕುಮಾರ್‌ ಅವರು ಮನದಟ್ಟು ಮಾಡಿ ಮಾತನಾಡುತ್ತಿದ್ದರು. ನಾನು ಅವರ ಮನೆಗೆ ಮೈತ್ರಿ ಸಿನಿಮಾದ ಕತೆ ಹೇಳಲು ಹೋದಾಗ ನಾನು ಯಾರು ಎಂಬುದು ಯಾರಿಗೂ ಗೊತ್ತಿರಲಿಲ್ಲ. ಆಗ ನನ್ನ ಯಾವ ಸಿನಿಮಾವೂ ಬಿಡುಗಡೆಯಾಗಿರಲಿಲ್ಲ. ಅವರೇ ಬಂದು ಕರೆದುಕೊಂಡು ಹೋಗಿ ಬಹಳ ಪ್ರೀತಿಯಿಂದ ಮಾತನಾಡಿದರು. ಅವರು ಇಲ್ಲ ಎಂದು ಹೇಳಿದರೂ, ನಮಗೆ ಯಾರಿಗೂ ನೋವಾಗದಂತೆ ಹೇಳುತ್ತಿದ್ದರು. ಅವರು ಹೇಳಿದ್ದನ್ನು ಅಲ್ಲಗಳೆಯಲು ಸಾಧ್ಯವಾಗದಂತೆ ಮನದಟ್ಟು ಮಾಡುತ್ತಿದ್ದರು” ಎಂದರು ಗಿರಿರಾಜ್‌.

ಮುಂದುವರಿದು, “ಮೈತ್ರಿ ಸಿನಿಮಾ ಹೆಸರಘಟ್ಟದಲ್ಲಿ ಶೂಟ್‌ ಆಗುತ್ತಿತ್ತು. ನೂರೈವತ್ತು ಮಕ್ಕಳು ಬಂದಿದ್ದರು. ಸಂಯೋಜಕರು ಮಕ್ಕಳನ್ನು ಎಲ್ಲಿಂದಲೋ ಕರೆತಂದಿದ್ದರು. ಪುನೀತ್‌ ರಾಜ್‌ ಕುಮಾರ್‌ ಅವರು ಮಕ್ಕಳನ್ನು ನೋಡಿ, ಅವರು ಬರಿಗಾಲಲ್ಲಿ ಓಡಾಡುತ್ತಿದ್ದಾರೆ ಎಂದು ಎಲ್ಲ ಮಕ್ಕಳಿಗೂ ಫುಟ್‌ವೇರ್‌ಗಳನ್ನು ತರಿಸಿಕೊಟ್ಟರು. ಅವರು ಮಾಡಿರುವ ಮೈತ್ರಿಯಂತಹ ಸಿನಿಮಾ- ಸ್ಟಾರ್‌ ನಟರು ರಿಸ್ಕ್‌ ತೆಗೆದುಕೊಳ್ಳುವಂತಹದ್ದು. ಹೊಸತನ ಬರಬೇಕೆಂಬುದು ಅವರ ಉದ್ದೇಶವಾಗಿತ್ತು. ಕೊನೆಗೆ ಅವರೇ ಪ್ರೊಡಕ್ಷನ್‌ ಹೌಸ್‌ ತೆರೆದರು. ಹೊಸ ಬರಹಗಾರರಿಗೆ ಒತ್ತು ನೀಡುತ್ತಿದ್ದರು. ಸ್ಟಾರ್‌ ನಟರಿಗಿಂತ ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದರು. ಜಂಟಲ್‌ ಮ್ಯಾನ್‌ ಎಂಬುದಕ್ಕೆ ಮೂರ್ತರೂಪ ಪುನೀತ್ ರಾಜ್‌ಕುಮಾರ್‌” ಎಂದು ಬಣ್ಣಿಸುತ್ತಾರೆ ಗಿರಿರಾಜ್‌.


ಇದನ್ನೂ ಓದಿರಿ: ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...