Homeಕರ್ನಾಟಕಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

ಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

- Advertisement -
- Advertisement -

ಡಾ.ರಾಜ್‌ಕುಮಾರ್‌ ಕುಟುಂಬದ ಮಹಾನ್‌ ಪ್ರತಿಭೆ, ಮೇರು ನಟ, ಸಹೃದಯಿ ಪುನೀತ್‌ ರಾಜ್‌ಕುಮಾರ್‌ ಅವರು ನಾಲ್ಕು ದಶಕಗಳ ಸಿನಿಮಾ ಪಯಣವನ್ನು ಮುಗಿಸಿ ಇಹಲೋಹ ತ್ಯಜಿಸಿದ್ದಾರೆ.

ಬಾಲ ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟ ಪುನೀತ್‌ ರಾಜ್‌ಕುಮಾರ್‌ ಅವರು ಕನ್ನಡಿಗರ ಹೃದಯದಲ್ಲಿ ನೆಲೆಸಿದರು. ನಟರಾಗಿ ಅಷ್ಟೇ ಆಗಿ ಉಳಿಯದೇ ಕನ್ನಡ ಚಿತ್ರರಂಗದಲ್ಲಿ ಹೊಸ ನೀರು ಹರಿಯಬೇಕೆಂದು ಹಂಬಲಿಸಿದ ವ್ಯಕ್ತಿ ಅವರಾಗಿದ್ದರು. ಚಿತ್ರರಂಗಕ್ಕೆ ಹೊಸದಾಗಿ ಕಾಲಿಟ್ಟವರನ್ನು ಪೊರೆಯುತ್ತಿದ್ದರು. ಸೋತವರಿಗೆ ಮತ್ತೊಂದು ಅವಕಾಶ ದೊರಕಿಸಿ ನೆಲೆ ನಿಲ್ಲಲು ಬೆನ್ನೆಲುಬಾಗಿದ್ದರು.

ಪುನೀತ್‌ ರಾಜ್‌ಕುಮಾರ್‌ ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರ ಮಾಲೀಕತ್ವದ ಪಿ.ಆರ್‌.ಕೆ.ಪ್ರೊಡಕ್ಷನ್ಸ್‌ ಹೊಸ ತಂತ್ರಜ್ಞರು, ಯುವ ಪ್ರತಿಭೆಗಳನ್ನು ಹುಟ್ಟು ಹಾಕುವ ವೇದಿಕೆಯಾಗಿ ಹೊಮ್ಮಿದೆ. ಹೊಸ ಪ್ರತಿಭೆಗಳಿಗೆ ಪುನೀತ್‌ ರಾಜ್‌ಕುಮಾರ್‌ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.

2017ರಲ್ಲಿ ಸ್ಥಾಪನೆಯಾದ ಪಿ.ಆರ್‌.ಕೆ. ಪ್ರೊಡಕ್ಷನ್ಸ್‌‌ 2019ರಲ್ಲಿ ‘ಕವಲುದಾರಿ’ ಸಿನಿಮಾವನ್ನು ನಿರ್ಮಾಣ ಮಾಡಿತು. 2016ರಲ್ಲಿ ‘ಗೋದಿ ಬಣ್ಣ ಸಾಧಾರಣ ಮೈಕಟ್ಟು’ ಎಂಬ ಅತ್ಯುತ್ತಮ ಸಿನಿಮಾ ನೀಡಿದ ಹೇಮಂತ್‌ ಎಂ.ರಾವ್‌ ಅವರು ತಮ್ಮ ಎರಡನೇ ಸಿನಿಮಾ ‘ಕವಲುದಾರಿ’ ನಿರ್ದೇಶನಕ್ಕೆ ಪಿಆರ್‌ಕೆ ಅವಕಾಶ ನೀಡಿತು. ಯುವ ಪ್ರತಿಭೆ ರಿಷಿ ಹಾಗೂ ಹಿರಿಯ ನಟ ಅನಂತನಾಗ್‌ ಅವರು ಅಭಿನಯಿಸಿದ್ದ ಈ ಸಿನಿಮಾ, ಥ್ರಿಲ್ಲರ್‌ ಕಥೆಯೊಂದಿಗೆ ವಿಶಿಷ್ಟ ಅನುಭವವನ್ನು ಪ್ರೇಕ್ಷಕರಿಗೆ ನೀಡಿತು.

2020ರಲ್ಲಿ ತೆರೆಕಂಡ ‘ಮಾಯಾಬಜಾರ್‌’ ಹಾಸ್ಯಪ್ರಧಾನ ಸಿನಿಮಾ. ರಾಧಾಕೃಷ್ಣ ರೆಡ್ಡಿ ಎಂಬ ಹೊಸ ಪ್ರತಿಭೆ ನಿರ್ದೇಶನ ಮಾಡಲು ಪಿಆರ್‌ಕೆ ಪ್ರೊಡಕ್ಷನ್‌ ಅವಕಾಶ ನೀಡಿತು. ರಾಜ್‌ ಬಿ.ಶೆಟ್ಟಿ, ವಶಿಷ್ಟ ಎನ್‌.ಸಿಂಹ, ಪ್ರಕಾಶ್‌ ರಾಜ್‌, ಅಚ್ಯುತ್‌ ಕುಮಾರ್‌, ಸುಧಾರಾಣಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದರು. ದುಡ್ಡಿನ ಅನಿವಾರ್ಯತೆ ಹೊಂದಿದ್ದ ಪ್ರಾಮಾಣಿಕ ಪೊಲೀಸ್ ಅಧಿಕಾರಿ, ಒಬ್ಬ ಕಳ್ಳ ಹಾಗೂ ಜೀವನದಲ್ಲಿ ಸೆಟಲ್‌ ಆಗಬೇಕೆಂದು ಪರಿತಪಿಸುತ್ತಿರುವ ಪ್ರೇಮಿಯ ಸುತ್ತ ಎಣೆದ ಈ ಸಿನಿಮಾ, ನವಿರಾದ ಹಾಸ್ಯವನ್ನು ಕನ್ನಡಿಗರಿಗೆ ಉಣಬಡಿಸಿತ್ತು.

ಕೋವಿಡ್‌ ಬಿಕ್ಕಟ್ಟಿನಿಂದಾಗಿ ಜನರು ಓಟಿಟಿ ವೇದಿಕೆಯಲ್ಲಿ ಸಿನಿಮಾಗಳನ್ನು ನೋಡಲು ಶುರು ಮಾಡಿದರು. ಇತರೆ ಭಾಷಿಯ ಸಿನಿಮಾಗಳು ಓಟಿಟಿಯಲ್ಲಿ ಬಿಡುಗಡೆಯಾಗುತ್ತಿದ್ದಾಗ, ಕನ್ನಡದವರೂ ನೇರವಾಗಿ ಓಟಿಟಿಯಲ್ಲಿ ಸಿನಿಮಾ ಬಿಡುಗಡೆ ಮಾಡುವತ್ತ ಹೆಜ್ಜೆ ಇರಿಸಲು ಪಿಆರ್‌ಕೆ ಪ್ರೊಡಕ್ಷನ್ಸ್‌ ಕಾರಣವಾಯಿತು. ಪಿಆರ್‌ಕೆ ಪ್ರೊಡಕ್ಷನ್ಸ್‌‌ನಲ್ಲಿ ಮೂಡಿಬಂದ ‘ಲಾ’ (2020) ಸಿನಿಮಾ ಓಟಿಟಿಯಲ್ಲಿ ಬಿಡುಗಡೆಯಾದ ಮೊದಲ ಕನ್ನಡ ಸಿನಿಮಾ.

ರಘು ಸಮರ್ಥ ಅವರು ನಿರ್ದೇಶಿಸಿದ್ದ ಈ ಸಿನಿಮಾದಲ್ಲಿ ನಟ ಪ್ರಜ್ವಲ್‌ ದೇವರಾಜ್‌ ಅವರ ಪತ್ನಿ ರಾಗಿಣಿ ಪ್ರಜ್ವಲ್‌ ಅವರು ಮೊದಲ ಬಾರಿಗೆ ನಾಯಕ ನಟಿಯಾಗಿ ಅಭಿನಯಿಸಿದ್ದರು. ಕೋರ್ಟ್ ರೂಮ್‌ ಡ್ರಾಮಾವಾಗಿದ್ದ ಈ ಸಿನಿಮಾಕ್ಕೆ ಮಿಶ್ರಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ‘ಸ್ಮೈಲ್‌ ಪ್ಲೀಸ್‌’ ಸಿನಿಮಾ ನಂತರ ರಘು ಸಮರ್ಥ ‘ಲಾ’ ಸಿನಿಮಾ ನಿರ್ದೇಶಿಸಿದ್ದರು.

ಇದನ್ನೂ ಓದಿರಿ: ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಓಟಿಟಿಯಲ್ಲಿ ತೆರೆಕಂಡ ‘ಫ್ರೆಂಚ್‌ ಬಿರಿಯಾನಿ’ ಪಿಆರ್‌ಕೆ ಪ್ರೊಡಕ್ಷನ್ಸ್‌ನ ಮತ್ತೊಂದು ಸಿನಿಮಾ. ಪನ್ನಗ ಭರಣ (ಖ್ಯಾತ ನಿರ್ದೇಶಕ ಟಿ.ಆರ್‌.ನಾಗಭರಣ ಅವರ ಪುತ್ರ) ಅವರು 2017ರಲ್ಲಿ ‘ಹ್ಯಾಪಿ ನ್ಯೂ ಇಯರ್‌’ ನಿರ್ದೇಶಿಸಿದ್ದರು. ಆದರೆ ಅಷ್ಟಾಗಿ ಸದ್ದು ಮಾಡಲಿಲ್ಲ. ‘ಫ್ರೆಂಚ್ ಬಿರಿಯಾನಿ’ ಮೂಲಕ ನಿರ್ದೇಶನ ಮುಂದುವರಿಸಲು ಪಿಆರ್‌ಕೆ ಪ್ರೊಡಕ್ಷನ್‌ ಪ್ರೋತ್ಸಾಹ ನೀಡಿತು.

“ಯಾವುದೇ ಒಬ್ಬ ವ್ಯಕ್ತಿ ಏನೇ ಹೇಳಿದರೂ ಅದನ್ನು ಸರಿಯಾಗಿ ಕೇಳಿಸಿಕೊಳ್ಳಬೇಕು ಇಲ್ಲದೇ ಹೋದರೆ ಒಂದಷ್ಟು ಅನಾಹುತಗಳಾಗುತ್ತವೆ” ಎಂಬುದನ್ನು ಹಾಸ್ಯದ ಮೂಲಕ ಹೇಳುವ ಪ್ರಯತ್ನವನ್ನು ಫ್ರೆಂಚ್ ಬಿರಿಯಾನಿಯಲ್ಲಿ ಮಾಡಲಾಯಿತು. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಗಳು ಈ ಸಿನಿಮಾಮಕ್ಕೆ ಬಂದವು. ಡ್ಯಾನಿಷ್‌ ಸೇಟ್‌, ಸಾಲ್‌ ಯುಸೆಫ್‌ ಅಭಿನಯಿಸಿದ್ದರು. ಸಾಮಾಜಿಕ ಮಾಧ್ಯಮವಾದ ಟಿಕ್‌ಟಾಕ್‌ ಮೂಲಕ ಜನಪ್ರಿಯರಾಗಿದ್ದ ದಿಶಾ ಮದನ್‌ ಅವರು ಮೊದಲ ಭಾರಿಗೆ ಸಿನಿಮಾದಲ್ಲಿ ಅಭಿನಯಿಸಲು ‘ಫ್ರೆಂಚ್ ಬಿರಿಯಾನಿ’ ಅವಕಾಶ ನೀಡಿತ್ತು.

ಪಿಆರ್‌ಕೆ ನಿರ್ಮಾಣದ ಮತ್ತೊಂದು ಸಿನಿಮಾ ‘ಫ್ಯಾಮಿಲಿ ಪ್ಯಾಕ್‌’ ಚಿತ್ರೀಕರಣ ಮುಗಿದಿದ್ದು, ಬಿಡುಗಡೆಯಾಗಬೇಕಿದೆ. ಅರ್ಜುನ್‌ ಕುಮಾರ್‌ ಎಸ್‌. ನಿರ್ದೇಶಿಸಲು ಪಿಆರ್‌ಕೆ ಅವಕಾಶ ನೀಡಿದೆ. ಈ ಹಿಂದೆ ಲಿಖಿತ್‌ ಶೆಟ್ಟಿ ಹಾಗೂ ಅರ್ಜನ್‌ ಕುಮಾರ್‌ ಅವರು ಸಂಕಷ್ಟಕರ ಗಣಪತಿ ಸಿನಿಮಾದಲ್ಲಿ ಕೆಲಸ ಮಾಡಿದ್ದರು. ಪಿಆರ್‌ಕೆ ಪ್ರೊಡಕ್ಷನ್ಸ್‌ ಈ ಹೊಸ ಪ್ರತಿಭೆಗಳು ಬೆಳೆಯಲು ಅವಕಾಶ ನೀಡಿದೆ. ರಂಗಾಯಣ ರಘು, ಅಚ್ಯುತ್‌ ಕುಮಾರ್‌, ದತ್ತಣ್ಣ, ತಿಲಕ್‌, ನಾಗಭೂಷಣ್‌ ಮುಖ್ಯಭೂಮಿಕೆಯಲ್ಲಿ ಇದ್ದಾರೆ.

‘ರಾಮ್‌ ರಾಮ ರೇ’, ‘ಒಂದಲ್ಲ ಎರಡಲ್ಲ’ ಥರದ ಸಂವೇದನಾಶೀಲ ಸಿನಿಮಾಗಳನ್ನು ನಿರ್ದೇಶಿಸಿರುವ ಡಿ.ಸತ್ಯಪ್ರಕಾಶ್ ಅವರು ತಮ್ಮ ಮುಂದಿನ ಸಿನಿಮಾವನ್ನು ಪಿಆರ್‌ಕೆ ಮೂಲಕ ಹೊರ ತರುತ್ತಿದ್ದಾರೆ. ಚಿತ್ರೀಕರಣ ಮುಕ್ತಾಯವಾಗಿದೆ. ರಾಘವ್‌ ನಾಯಕ್‌‌, ಪ್ರಶಾಂತ್‌ ರಾಜ್‌ ಅವರ ನಿರ್ದೇಶನದಲ್ಲಿ ಮೂಡಿರುವ ಸಿನಿಮಾಕ್ಕೆ ಪಿಆರ್‌ಕೆ ನಿರ್ಮಾಣದ ಹೊಣೆ ಹೊತ್ತಿದೆ.

‘ಎರಡು ನಿಮಿಷ ಮಾತನಾಡಿದರೂ ತನ್ಮಯತೆ ಇರುತ್ತಿತ್ತು’

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಜಟ್ಟ, ಮೈತ್ರಿ, ಅಮರಾವತಿ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌, ಮೈತ್ರಿ ಸಿನಿಮಾ ನಿರ್ದೇಶಿಸುವಾಗ ಪುನೀತ್‌ ರಾಜ್‌ಕುಮಾರ್‌ ಅವರೊಂದಿಗಿನ ಅನುಭವಗಳನ್ನು ಹಂಚಿಕೊಂಡರು.

“ಪುನೀತ್‌ ರಾಜ್‌ಕುಮಾರ್‌ ಅವರ ದೊಡ್ಡತನವೆಂದರೆ ನೀವು ಅಪರಿಚಿತರಿದ್ದರೂ ಅವರ ಬಳಿ ಎರಡು ನಿಮಿಷ ಮಾತನಾಡಿದರೂ ಆ ಎರಡು ನಿಮಿಷ ನಿಮಗೆ ವಿಶೇಷವೆನಿಸುತ್ತಿತ್ತು. ಈ ಸಮಯ ನಿಮಗಾಗಿ ಮೀಸಲಾಗಿದೆ ಎಂಬುದನ್ನು ಪುನೀತ್‌ ರಾಜ್‌ಕುಮಾರ್‌ ಅವರು ಮನದಟ್ಟು ಮಾಡಿ ಮಾತನಾಡುತ್ತಿದ್ದರು. ನಾನು ಅವರ ಮನೆಗೆ ಮೈತ್ರಿ ಸಿನಿಮಾದ ಕತೆ ಹೇಳಲು ಹೋದಾಗ ನಾನು ಯಾರು ಎಂಬುದು ಯಾರಿಗೂ ಗೊತ್ತಿರಲಿಲ್ಲ. ಆಗ ನನ್ನ ಯಾವ ಸಿನಿಮಾವೂ ಬಿಡುಗಡೆಯಾಗಿರಲಿಲ್ಲ. ಅವರೇ ಬಂದು ಕರೆದುಕೊಂಡು ಹೋಗಿ ಬಹಳ ಪ್ರೀತಿಯಿಂದ ಮಾತನಾಡಿದರು. ಅವರು ಇಲ್ಲ ಎಂದು ಹೇಳಿದರೂ, ನಮಗೆ ಯಾರಿಗೂ ನೋವಾಗದಂತೆ ಹೇಳುತ್ತಿದ್ದರು. ಅವರು ಹೇಳಿದ್ದನ್ನು ಅಲ್ಲಗಳೆಯಲು ಸಾಧ್ಯವಾಗದಂತೆ ಮನದಟ್ಟು ಮಾಡುತ್ತಿದ್ದರು” ಎಂದರು ಗಿರಿರಾಜ್‌.

ಮುಂದುವರಿದು, “ಮೈತ್ರಿ ಸಿನಿಮಾ ಹೆಸರಘಟ್ಟದಲ್ಲಿ ಶೂಟ್‌ ಆಗುತ್ತಿತ್ತು. ನೂರೈವತ್ತು ಮಕ್ಕಳು ಬಂದಿದ್ದರು. ಸಂಯೋಜಕರು ಮಕ್ಕಳನ್ನು ಎಲ್ಲಿಂದಲೋ ಕರೆತಂದಿದ್ದರು. ಪುನೀತ್‌ ರಾಜ್‌ ಕುಮಾರ್‌ ಅವರು ಮಕ್ಕಳನ್ನು ನೋಡಿ, ಅವರು ಬರಿಗಾಲಲ್ಲಿ ಓಡಾಡುತ್ತಿದ್ದಾರೆ ಎಂದು ಎಲ್ಲ ಮಕ್ಕಳಿಗೂ ಫುಟ್‌ವೇರ್‌ಗಳನ್ನು ತರಿಸಿಕೊಟ್ಟರು. ಅವರು ಮಾಡಿರುವ ಮೈತ್ರಿಯಂತಹ ಸಿನಿಮಾ- ಸ್ಟಾರ್‌ ನಟರು ರಿಸ್ಕ್‌ ತೆಗೆದುಕೊಳ್ಳುವಂತಹದ್ದು. ಹೊಸತನ ಬರಬೇಕೆಂಬುದು ಅವರ ಉದ್ದೇಶವಾಗಿತ್ತು. ಕೊನೆಗೆ ಅವರೇ ಪ್ರೊಡಕ್ಷನ್‌ ಹೌಸ್‌ ತೆರೆದರು. ಹೊಸ ಬರಹಗಾರರಿಗೆ ಒತ್ತು ನೀಡುತ್ತಿದ್ದರು. ಸ್ಟಾರ್‌ ನಟರಿಗಿಂತ ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದರು. ಜಂಟಲ್‌ ಮ್ಯಾನ್‌ ಎಂಬುದಕ್ಕೆ ಮೂರ್ತರೂಪ ಪುನೀತ್ ರಾಜ್‌ಕುಮಾರ್‌” ಎಂದು ಬಣ್ಣಿಸುತ್ತಾರೆ ಗಿರಿರಾಜ್‌.


ಇದನ್ನೂ ಓದಿರಿ: ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೋಮಾಂಸ ಸಾಗಣೆ ಆರೋಪದ ಮೇಲೆ ವಾಹನ ಮುಟ್ಟುಗೋಲು: ಉತ್ತರ ಪ್ರದೇಶ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಹೈಕೋರ್ಟ್

ಗೋಮಾಂಸ ಸಾಗಣೆ ಮಾಡುತ್ತಿದ್ದಾರೆ ಎಂದು ಕೇವಲ ಅನುಮಾನದ ಮೇಲೆ ವ್ಯಕ್ತಿಯ ವಿರುದ್ಧ ಕ್ರಮ ಕೈಗೊಳ್ಳುವುದು ಕಾನೂನುಬಾಹಿರ ಎಂದು ಅಲಹಾಬಾದ್ ಹೈಕೋರ್ಟ್ ಅಭಿಪ್ರಾಯಪಟ್ಟಿದ್ದು, ಅಂತಹ ಯಾವುದೇ ಕ್ರಮ ತೆಗೆದುಕೊಳ್ಳುವ ಮೊದಲು ವೈಜ್ಞಾನಿಕ ದೃಢೀಕರಣ ಅಗತ್ಯ...

ಎಕ್ಸಿಟ್‌ ಪೋಲ್ಸ್‌ಗಳು ‘ಹಣ-ಒತ್ತಡ’ದಿಂದ ಕೂಡಿವೆ; ಟಿಎಂಸಿ 226 ಸ್ಥಾನಗಳನ್ನು ಮೀರಲಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದಲ್ಲಿ ಎರಡನೇ ಹಂತದ ಮತದಾನದ ನಂತರ ಇತ್ತೀಚಿನ ಚುನಾವಣೋತ್ತರ ಸಮೀಕ್ಷೆಗಳ ವಿಶ್ವಾಸಾರ್ಹತೆಯನ್ನು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಲವಾಗಿ ತಳ್ಳಿಹಾಕಿದ್ದಾರೆ. ಅವರ ಪಕ್ಷವಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) 294 ಸದಸ್ಯರ ವಿಧಾನಸಭೆಯಲ್ಲಿ 226...

ಗುಜರಾತ್‌| ರಾಮ ಮಂದಿರ ಕಾರ್ಯಕ್ರಮದಲ್ಲಿ ದಲಿತರಿಗೆ ಪ್ರತ್ಯೇಕ ಊಟದ ವ್ಯವಸ್ಥೆ; ಅಸ್ಪೃಶ್ಯತೆ ಆಚರಣೆ ಆರೋಪ

ಗುಜರಾತ್‌ನ ಜುನಾಗಢ್ ಜಿಲ್ಲೆಯಲ್ಲಿ ಜಾತಿ ತಾರತಮ್ಯದ ಆರೋಪ ಹೊರಿಸಲಾಗಿದ್ದು, ಧಾರ್ಮಿಕ ಕಾರ್ಯಕ್ರಮದ ಸಂದರ್ಭದಲ್ಲಿ ದೇವಾಲಯದ ಆಯೋಜಕರು ಅಸ್ಪೃಶ್ಯತೆ ಆಚರಿಸುತ್ತಿದ್ದಾರೆ ಎಂದು ದಲಿತ ಸಮುದಾಯದ ಸದಸ್ಯರು ಆರೋಪಿಸಿದ್ದಾರೆ. ಭುಟ್ಡಿ ಗ್ರಾಮದ ನಿವಾಸಿ 25 ವರ್ಷದ ಅಜಯ್...

ಕೋಗಿಲು ಬಡಾವಣೆ ಮನೆಗಳ ನೆಲಸಮ: ಹದಿನೈದು ದಿನಗಳೊಳಗೆ ಪುನರ್ವಸತಿ ಕಲ್ಪಿಸದಿದ್ದರೆ ತೀವ್ರ ಹೋರಾಟದ ಎಚ್ಚರಿಕೆ

ಬೆಂಗಳೂರು ಉತ್ತರ ತಾಲ್ಲೂಕಿನ ಯಲಹಂಕ ಪ್ರದೇಶದ ಕೋಗಿಲು ಲೇಔಟ್‌ನ ಫಕೀರ್ ಕಾಲೋನಿ ಮತ್ತು ಮಹಾನಾಯಕ ಅಂಬೇಡ್ಕರ್ ನಗರ (ವಾಸಿಂ ಲೇಔಟ್‌) ಪ್ರದೇಶದ ಬಡ ನಿವಾಸಿಗಳ ಮನೆಗಳನ್ನು 2025 ಡಿಸೆಂಬರ್ 20ರಂದು ಬೆಳಿಗ್ಗೆ ಸುಮಾರು...

ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟ 95.20 ರೂ.ಗೆ ಕುಸಿತ ಕಂಡ ಭಾರತೀಯ ರೂಪಾಯಿ ಮೌಲ್ಯ 

ನವದೆಹಲಿ: ಏಪ್ರಿಲ್ 30ರಂದು ಆರಂಭಿಕ ವಹಿವಾಟಿನಲ್ಲಿ ಭಾರತೀಯ ರೂಪಾಯಿ ಮೌಲ್ಯವು ಅಮೆರಿಕನ್ ಡಾಲರ್ ಎದುರು ಸಾರ್ವಕಾಲಿಕ ಕನಿಷ್ಠ ಮಟ್ಟವಾದ 95.07 ಕ್ಕೆ ಕುಸಿದಿದೆ. ಕರೆನ್ಸಿ 0.4% ಕುಸಿತದೊಂದಿಗೆ 95.2325 ಕ್ಕೆ ಇಳಿದಿದೆ. ಇದು ಮಾರ್ಚ್...

ತಮಿಳುನಾಡು| ದಲಿತ ಯುವಕನ ಶವ ಪತ್ತೆ; ‘ಜಾತಿ ಕಾರಣಕ್ಕೆ ಹತ್ಯೆಯಾಗಿದೆ’ ಎಂದು ಕುಟುಂಬದ ಆರೋಪ

ತಮಿಳುನಾಡಿನ ಪುದುಕ್ಕೊಟ್ಟೈ ಜಿಲ್ಲೆಯ ಕ್ವಾರಿ ಕೆರೆಯ ಬಳಿ 20 ವರ್ಷದ ದಲಿತ ಯುವಕನ ಶವ ಪತ್ತೆಯಾಗಿದ್ದು, ಹಿಂದುಳಿದ ವರ್ಗದ ಯುವತಿಯೊಂದಿಗಿನ ಸಂಬಂಧದಿಂದಾಗಿ ಆತನನ್ನು ಕೊಲ್ಲಲಾಗಿದೆ ಎಂದು ಆತನ ಕುಟುಂಬ ಆರೋಪಿಸಿದೆ. ಆದರೆ, ಈ...

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...