Homeಕರ್ನಾಟಕಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

ಹೊಸ ಪ್ರತಿಭೆಗಳ ಮಹಾನ್‌ ಪ್ರೋತ್ಸಾಹಕ ಪುನೀತ್‌ ರಾಜ್‌ಕುಮಾರ್

- Advertisement -
- Advertisement -

ಡಾ.ರಾಜ್‌ಕುಮಾರ್‌ ಕುಟುಂಬದ ಮಹಾನ್‌ ಪ್ರತಿಭೆ, ಮೇರು ನಟ, ಸಹೃದಯಿ ಪುನೀತ್‌ ರಾಜ್‌ಕುಮಾರ್‌ ಅವರು ನಾಲ್ಕು ದಶಕಗಳ ಸಿನಿಮಾ ಪಯಣವನ್ನು ಮುಗಿಸಿ ಇಹಲೋಹ ತ್ಯಜಿಸಿದ್ದಾರೆ.

ಬಾಲ ನಟರಾಗಿ ಚಿತ್ರರಂಗಕ್ಕೆ ಕಾಲಿಟ್ಟ ಪುನೀತ್‌ ರಾಜ್‌ಕುಮಾರ್‌ ಅವರು ಕನ್ನಡಿಗರ ಹೃದಯದಲ್ಲಿ ನೆಲೆಸಿದರು. ನಟರಾಗಿ ಅಷ್ಟೇ ಆಗಿ ಉಳಿಯದೇ ಕನ್ನಡ ಚಿತ್ರರಂಗದಲ್ಲಿ ಹೊಸ ನೀರು ಹರಿಯಬೇಕೆಂದು ಹಂಬಲಿಸಿದ ವ್ಯಕ್ತಿ ಅವರಾಗಿದ್ದರು. ಚಿತ್ರರಂಗಕ್ಕೆ ಹೊಸದಾಗಿ ಕಾಲಿಟ್ಟವರನ್ನು ಪೊರೆಯುತ್ತಿದ್ದರು. ಸೋತವರಿಗೆ ಮತ್ತೊಂದು ಅವಕಾಶ ದೊರಕಿಸಿ ನೆಲೆ ನಿಲ್ಲಲು ಬೆನ್ನೆಲುಬಾಗಿದ್ದರು.

ಪುನೀತ್‌ ರಾಜ್‌ಕುಮಾರ್‌ ಮತ್ತು ಅಶ್ವಿನಿ ಪುನೀತ್ ರಾಜ್‌ಕುಮಾರ್‌ ಅವರ ಮಾಲೀಕತ್ವದ ಪಿ.ಆರ್‌.ಕೆ.ಪ್ರೊಡಕ್ಷನ್ಸ್‌ ಹೊಸ ತಂತ್ರಜ್ಞರು, ಯುವ ಪ್ರತಿಭೆಗಳನ್ನು ಹುಟ್ಟು ಹಾಕುವ ವೇದಿಕೆಯಾಗಿ ಹೊಮ್ಮಿದೆ. ಹೊಸ ಪ್ರತಿಭೆಗಳಿಗೆ ಪುನೀತ್‌ ರಾಜ್‌ಕುಮಾರ್‌ ನಿರಂತರ ಪ್ರೋತ್ಸಾಹ ನೀಡುತ್ತಾ ಬಂದಿದ್ದಾರೆ.

2017ರಲ್ಲಿ ಸ್ಥಾಪನೆಯಾದ ಪಿ.ಆರ್‌.ಕೆ. ಪ್ರೊಡಕ್ಷನ್ಸ್‌‌ 2019ರಲ್ಲಿ ‘ಕವಲುದಾರಿ’ ಸಿನಿಮಾವನ್ನು ನಿರ್ಮಾಣ ಮಾಡಿತು. 2016ರಲ್ಲಿ ‘ಗೋದಿ ಬಣ್ಣ ಸಾಧಾರಣ ಮೈಕಟ್ಟು’ ಎಂಬ ಅತ್ಯುತ್ತಮ ಸಿನಿಮಾ ನೀಡಿದ ಹೇಮಂತ್‌ ಎಂ.ರಾವ್‌ ಅವರು ತಮ್ಮ ಎರಡನೇ ಸಿನಿಮಾ ‘ಕವಲುದಾರಿ’ ನಿರ್ದೇಶನಕ್ಕೆ ಪಿಆರ್‌ಕೆ ಅವಕಾಶ ನೀಡಿತು. ಯುವ ಪ್ರತಿಭೆ ರಿಷಿ ಹಾಗೂ ಹಿರಿಯ ನಟ ಅನಂತನಾಗ್‌ ಅವರು ಅಭಿನಯಿಸಿದ್ದ ಈ ಸಿನಿಮಾ, ಥ್ರಿಲ್ಲರ್‌ ಕಥೆಯೊಂದಿಗೆ ವಿಶಿಷ್ಟ ಅನುಭವವನ್ನು ಪ್ರೇಕ್ಷಕರಿಗೆ ನೀಡಿತು.

2020ರಲ್ಲಿ ತೆರೆಕಂಡ ‘ಮಾಯಾಬಜಾರ್‌’ ಹಾಸ್ಯಪ್ರಧಾನ ಸಿನಿಮಾ. ರಾಧಾಕೃಷ್ಣ ರೆಡ್ಡಿ ಎಂಬ ಹೊಸ ಪ್ರತಿಭೆ ನಿರ್ದೇಶನ ಮಾಡಲು ಪಿಆರ್‌ಕೆ ಪ್ರೊಡಕ್ಷನ್‌ ಅವಕಾಶ ನೀಡಿತು. ರಾಜ್‌ ಬಿ.ಶೆಟ್ಟಿ, ವಶಿಷ್ಟ ಎನ್‌.ಸಿಂಹ, ಪ್ರಕಾಶ್‌ ರಾಜ್‌, ಅಚ್ಯುತ್‌ ಕುಮಾರ್‌, ಸುಧಾರಾಣಿ ಮುಖ್ಯಭೂಮಿಕೆಯಲ್ಲಿ ಅಭಿನಯಿಸಿದ್ದರು. ದುಡ್ಡಿನ ಅನಿವಾರ್ಯತೆ ಹೊಂದಿದ್ದ ಪ್ರಾಮಾಣಿಕ ಪೊಲೀಸ್ ಅಧಿಕಾರಿ, ಒಬ್ಬ ಕಳ್ಳ ಹಾಗೂ ಜೀವನದಲ್ಲಿ ಸೆಟಲ್‌ ಆಗಬೇಕೆಂದು ಪರಿತಪಿಸುತ್ತಿರುವ ಪ್ರೇಮಿಯ ಸುತ್ತ ಎಣೆದ ಈ ಸಿನಿಮಾ, ನವಿರಾದ ಹಾಸ್ಯವನ್ನು ಕನ್ನಡಿಗರಿಗೆ ಉಣಬಡಿಸಿತ್ತು.

ಕೋವಿಡ್‌ ಬಿಕ್ಕಟ್ಟಿನಿಂದಾಗಿ ಜನರು ಓಟಿಟಿ ವೇದಿಕೆಯಲ್ಲಿ ಸಿನಿಮಾಗಳನ್ನು ನೋಡಲು ಶುರು ಮಾಡಿದರು. ಇತರೆ ಭಾಷಿಯ ಸಿನಿಮಾಗಳು ಓಟಿಟಿಯಲ್ಲಿ ಬಿಡುಗಡೆಯಾಗುತ್ತಿದ್ದಾಗ, ಕನ್ನಡದವರೂ ನೇರವಾಗಿ ಓಟಿಟಿಯಲ್ಲಿ ಸಿನಿಮಾ ಬಿಡುಗಡೆ ಮಾಡುವತ್ತ ಹೆಜ್ಜೆ ಇರಿಸಲು ಪಿಆರ್‌ಕೆ ಪ್ರೊಡಕ್ಷನ್ಸ್‌ ಕಾರಣವಾಯಿತು. ಪಿಆರ್‌ಕೆ ಪ್ರೊಡಕ್ಷನ್ಸ್‌‌ನಲ್ಲಿ ಮೂಡಿಬಂದ ‘ಲಾ’ (2020) ಸಿನಿಮಾ ಓಟಿಟಿಯಲ್ಲಿ ಬಿಡುಗಡೆಯಾದ ಮೊದಲ ಕನ್ನಡ ಸಿನಿಮಾ.

ರಘು ಸಮರ್ಥ ಅವರು ನಿರ್ದೇಶಿಸಿದ್ದ ಈ ಸಿನಿಮಾದಲ್ಲಿ ನಟ ಪ್ರಜ್ವಲ್‌ ದೇವರಾಜ್‌ ಅವರ ಪತ್ನಿ ರಾಗಿಣಿ ಪ್ರಜ್ವಲ್‌ ಅವರು ಮೊದಲ ಬಾರಿಗೆ ನಾಯಕ ನಟಿಯಾಗಿ ಅಭಿನಯಿಸಿದ್ದರು. ಕೋರ್ಟ್ ರೂಮ್‌ ಡ್ರಾಮಾವಾಗಿದ್ದ ಈ ಸಿನಿಮಾಕ್ಕೆ ಮಿಶ್ರಪ್ರತಿಕ್ರಿಯೆಗಳು ವ್ಯಕ್ತವಾಗಿದ್ದವು. ‘ಸ್ಮೈಲ್‌ ಪ್ಲೀಸ್‌’ ಸಿನಿಮಾ ನಂತರ ರಘು ಸಮರ್ಥ ‘ಲಾ’ ಸಿನಿಮಾ ನಿರ್ದೇಶಿಸಿದ್ದರು.

ಇದನ್ನೂ ಓದಿರಿ: ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಓಟಿಟಿಯಲ್ಲಿ ತೆರೆಕಂಡ ‘ಫ್ರೆಂಚ್‌ ಬಿರಿಯಾನಿ’ ಪಿಆರ್‌ಕೆ ಪ್ರೊಡಕ್ಷನ್ಸ್‌ನ ಮತ್ತೊಂದು ಸಿನಿಮಾ. ಪನ್ನಗ ಭರಣ (ಖ್ಯಾತ ನಿರ್ದೇಶಕ ಟಿ.ಆರ್‌.ನಾಗಭರಣ ಅವರ ಪುತ್ರ) ಅವರು 2017ರಲ್ಲಿ ‘ಹ್ಯಾಪಿ ನ್ಯೂ ಇಯರ್‌’ ನಿರ್ದೇಶಿಸಿದ್ದರು. ಆದರೆ ಅಷ್ಟಾಗಿ ಸದ್ದು ಮಾಡಲಿಲ್ಲ. ‘ಫ್ರೆಂಚ್ ಬಿರಿಯಾನಿ’ ಮೂಲಕ ನಿರ್ದೇಶನ ಮುಂದುವರಿಸಲು ಪಿಆರ್‌ಕೆ ಪ್ರೊಡಕ್ಷನ್‌ ಪ್ರೋತ್ಸಾಹ ನೀಡಿತು.

“ಯಾವುದೇ ಒಬ್ಬ ವ್ಯಕ್ತಿ ಏನೇ ಹೇಳಿದರೂ ಅದನ್ನು ಸರಿಯಾಗಿ ಕೇಳಿಸಿಕೊಳ್ಳಬೇಕು ಇಲ್ಲದೇ ಹೋದರೆ ಒಂದಷ್ಟು ಅನಾಹುತಗಳಾಗುತ್ತವೆ” ಎಂಬುದನ್ನು ಹಾಸ್ಯದ ಮೂಲಕ ಹೇಳುವ ಪ್ರಯತ್ನವನ್ನು ಫ್ರೆಂಚ್ ಬಿರಿಯಾನಿಯಲ್ಲಿ ಮಾಡಲಾಯಿತು. ಪ್ರೇಕ್ಷಕರಿಂದ ಮಿಶ್ರ ಪ್ರತಿಕ್ರಿಯೆಗಳು ಈ ಸಿನಿಮಾಮಕ್ಕೆ ಬಂದವು. ಡ್ಯಾನಿಷ್‌ ಸೇಟ್‌, ಸಾಲ್‌ ಯುಸೆಫ್‌ ಅಭಿನಯಿಸಿದ್ದರು. ಸಾಮಾಜಿಕ ಮಾಧ್ಯಮವಾದ ಟಿಕ್‌ಟಾಕ್‌ ಮೂಲಕ ಜನಪ್ರಿಯರಾಗಿದ್ದ ದಿಶಾ ಮದನ್‌ ಅವರು ಮೊದಲ ಭಾರಿಗೆ ಸಿನಿಮಾದಲ್ಲಿ ಅಭಿನಯಿಸಲು ‘ಫ್ರೆಂಚ್ ಬಿರಿಯಾನಿ’ ಅವಕಾಶ ನೀಡಿತ್ತು.

ಪಿಆರ್‌ಕೆ ನಿರ್ಮಾಣದ ಮತ್ತೊಂದು ಸಿನಿಮಾ ‘ಫ್ಯಾಮಿಲಿ ಪ್ಯಾಕ್‌’ ಚಿತ್ರೀಕರಣ ಮುಗಿದಿದ್ದು, ಬಿಡುಗಡೆಯಾಗಬೇಕಿದೆ. ಅರ್ಜುನ್‌ ಕುಮಾರ್‌ ಎಸ್‌. ನಿರ್ದೇಶಿಸಲು ಪಿಆರ್‌ಕೆ ಅವಕಾಶ ನೀಡಿದೆ. ಈ ಹಿಂದೆ ಲಿಖಿತ್‌ ಶೆಟ್ಟಿ ಹಾಗೂ ಅರ್ಜನ್‌ ಕುಮಾರ್‌ ಅವರು ಸಂಕಷ್ಟಕರ ಗಣಪತಿ ಸಿನಿಮಾದಲ್ಲಿ ಕೆಲಸ ಮಾಡಿದ್ದರು. ಪಿಆರ್‌ಕೆ ಪ್ರೊಡಕ್ಷನ್ಸ್‌ ಈ ಹೊಸ ಪ್ರತಿಭೆಗಳು ಬೆಳೆಯಲು ಅವಕಾಶ ನೀಡಿದೆ. ರಂಗಾಯಣ ರಘು, ಅಚ್ಯುತ್‌ ಕುಮಾರ್‌, ದತ್ತಣ್ಣ, ತಿಲಕ್‌, ನಾಗಭೂಷಣ್‌ ಮುಖ್ಯಭೂಮಿಕೆಯಲ್ಲಿ ಇದ್ದಾರೆ.

‘ರಾಮ್‌ ರಾಮ ರೇ’, ‘ಒಂದಲ್ಲ ಎರಡಲ್ಲ’ ಥರದ ಸಂವೇದನಾಶೀಲ ಸಿನಿಮಾಗಳನ್ನು ನಿರ್ದೇಶಿಸಿರುವ ಡಿ.ಸತ್ಯಪ್ರಕಾಶ್ ಅವರು ತಮ್ಮ ಮುಂದಿನ ಸಿನಿಮಾವನ್ನು ಪಿಆರ್‌ಕೆ ಮೂಲಕ ಹೊರ ತರುತ್ತಿದ್ದಾರೆ. ಚಿತ್ರೀಕರಣ ಮುಕ್ತಾಯವಾಗಿದೆ. ರಾಘವ್‌ ನಾಯಕ್‌‌, ಪ್ರಶಾಂತ್‌ ರಾಜ್‌ ಅವರ ನಿರ್ದೇಶನದಲ್ಲಿ ಮೂಡಿರುವ ಸಿನಿಮಾಕ್ಕೆ ಪಿಆರ್‌ಕೆ ನಿರ್ಮಾಣದ ಹೊಣೆ ಹೊತ್ತಿದೆ.

‘ಎರಡು ನಿಮಿಷ ಮಾತನಾಡಿದರೂ ತನ್ಮಯತೆ ಇರುತ್ತಿತ್ತು’

‘ನಾನುಗೌರಿ.ಕಾಂ’ ಜೊತೆ ಮಾತನಾಡಿದ ಜಟ್ಟ, ಮೈತ್ರಿ, ಅಮರಾವತಿ ಸಿನಿಮಾಗಳ ನಿರ್ದೇಶಕ ಬಿ.ಎಂ.ಗಿರಿರಾಜ್‌, ಮೈತ್ರಿ ಸಿನಿಮಾ ನಿರ್ದೇಶಿಸುವಾಗ ಪುನೀತ್‌ ರಾಜ್‌ಕುಮಾರ್‌ ಅವರೊಂದಿಗಿನ ಅನುಭವಗಳನ್ನು ಹಂಚಿಕೊಂಡರು.

“ಪುನೀತ್‌ ರಾಜ್‌ಕುಮಾರ್‌ ಅವರ ದೊಡ್ಡತನವೆಂದರೆ ನೀವು ಅಪರಿಚಿತರಿದ್ದರೂ ಅವರ ಬಳಿ ಎರಡು ನಿಮಿಷ ಮಾತನಾಡಿದರೂ ಆ ಎರಡು ನಿಮಿಷ ನಿಮಗೆ ವಿಶೇಷವೆನಿಸುತ್ತಿತ್ತು. ಈ ಸಮಯ ನಿಮಗಾಗಿ ಮೀಸಲಾಗಿದೆ ಎಂಬುದನ್ನು ಪುನೀತ್‌ ರಾಜ್‌ಕುಮಾರ್‌ ಅವರು ಮನದಟ್ಟು ಮಾಡಿ ಮಾತನಾಡುತ್ತಿದ್ದರು. ನಾನು ಅವರ ಮನೆಗೆ ಮೈತ್ರಿ ಸಿನಿಮಾದ ಕತೆ ಹೇಳಲು ಹೋದಾಗ ನಾನು ಯಾರು ಎಂಬುದು ಯಾರಿಗೂ ಗೊತ್ತಿರಲಿಲ್ಲ. ಆಗ ನನ್ನ ಯಾವ ಸಿನಿಮಾವೂ ಬಿಡುಗಡೆಯಾಗಿರಲಿಲ್ಲ. ಅವರೇ ಬಂದು ಕರೆದುಕೊಂಡು ಹೋಗಿ ಬಹಳ ಪ್ರೀತಿಯಿಂದ ಮಾತನಾಡಿದರು. ಅವರು ಇಲ್ಲ ಎಂದು ಹೇಳಿದರೂ, ನಮಗೆ ಯಾರಿಗೂ ನೋವಾಗದಂತೆ ಹೇಳುತ್ತಿದ್ದರು. ಅವರು ಹೇಳಿದ್ದನ್ನು ಅಲ್ಲಗಳೆಯಲು ಸಾಧ್ಯವಾಗದಂತೆ ಮನದಟ್ಟು ಮಾಡುತ್ತಿದ್ದರು” ಎಂದರು ಗಿರಿರಾಜ್‌.

ಮುಂದುವರಿದು, “ಮೈತ್ರಿ ಸಿನಿಮಾ ಹೆಸರಘಟ್ಟದಲ್ಲಿ ಶೂಟ್‌ ಆಗುತ್ತಿತ್ತು. ನೂರೈವತ್ತು ಮಕ್ಕಳು ಬಂದಿದ್ದರು. ಸಂಯೋಜಕರು ಮಕ್ಕಳನ್ನು ಎಲ್ಲಿಂದಲೋ ಕರೆತಂದಿದ್ದರು. ಪುನೀತ್‌ ರಾಜ್‌ ಕುಮಾರ್‌ ಅವರು ಮಕ್ಕಳನ್ನು ನೋಡಿ, ಅವರು ಬರಿಗಾಲಲ್ಲಿ ಓಡಾಡುತ್ತಿದ್ದಾರೆ ಎಂದು ಎಲ್ಲ ಮಕ್ಕಳಿಗೂ ಫುಟ್‌ವೇರ್‌ಗಳನ್ನು ತರಿಸಿಕೊಟ್ಟರು. ಅವರು ಮಾಡಿರುವ ಮೈತ್ರಿಯಂತಹ ಸಿನಿಮಾ- ಸ್ಟಾರ್‌ ನಟರು ರಿಸ್ಕ್‌ ತೆಗೆದುಕೊಳ್ಳುವಂತಹದ್ದು. ಹೊಸತನ ಬರಬೇಕೆಂಬುದು ಅವರ ಉದ್ದೇಶವಾಗಿತ್ತು. ಕೊನೆಗೆ ಅವರೇ ಪ್ರೊಡಕ್ಷನ್‌ ಹೌಸ್‌ ತೆರೆದರು. ಹೊಸ ಬರಹಗಾರರಿಗೆ ಒತ್ತು ನೀಡುತ್ತಿದ್ದರು. ಸ್ಟಾರ್‌ ನಟರಿಗಿಂತ ರಂಗಭೂಮಿ ಪ್ರತಿಭೆಗಳಿಗೆ ಅವಕಾಶ ನೀಡುತ್ತಿದ್ದರು. ಜಂಟಲ್‌ ಮ್ಯಾನ್‌ ಎಂಬುದಕ್ಕೆ ಮೂರ್ತರೂಪ ಪುನೀತ್ ರಾಜ್‌ಕುಮಾರ್‌” ಎಂದು ಬಣ್ಣಿಸುತ್ತಾರೆ ಗಿರಿರಾಜ್‌.


ಇದನ್ನೂ ಓದಿರಿ: ಮತ್ತೆ ಮತ್ತೆ ಗುನುಗುವಂತೆ ಮಾಡುವ ಅಪ್ಪು ಕಂಠಸಿರಿಯಲ್ಲಿ ಮೂಡಿದ ಹಾಡುಗಳಿವು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...