Homeಮುಖಪುಟಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಇಂದು ಸಂಜೆಯಿಂದ ನಾಳೆಯವರೆಗೆ ಅವಕಾಶ ನೀಡಲಾಗಿದೆ.

- Advertisement -
- Advertisement -

ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ಕೊನೆಯುಸಿದಿರುವುದರಿಂದ ಕನ್ನಡ ನಾಡು ದುಃಖದ ಮಡಿಲಲ್ಲಿ ಮುಳುಗಿದೆ. ಲಕ್ಷಾಂತರ ಅಭಿಮಾನಿಗಳು ಕಣ್ಣೀರು ಹರಿಸಿದ್ದಾರೆ. ನಾಡಿನ ಗಣ್ಯರು ಕಂಬಿನಿ ಮಿಡಿದಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಮೊದಲು ಗಣ್ಯರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಂತರ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಇಂದು ಸಂಜೆಯಿಂದ ನಾಳೆಯವರೆಗೆ ಅವಕಾಶ ನೀಡಲಾಗಿದೆ.

ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟ ವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲದ ಜೊತೆ ಸರಳ-ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮ‌ನೆ ಮಗನಂತಿದ್ದ ಪುನೀತ್ ಸಾವು ತುಂಬಿಬಾರದ ನಷ್ಟ. ರಾಜ್ ಕುಮಾರ್ ಕಾಲದಿಂದಲೂ ಅವರ ಕುಟುಂಬದ ಜೊತೆಯಲ್ಲಿ ಆತ್ಮೀಯ ಸಂಬಂಧ ಹೊಂದಿದ್ದ ನನ್ನ ಪಾಲಿಗೆ ಪುನೀತ್ ಸಾವು ಮನೆ ಸದಸ್ಯನೊಬ್ಬನನ್ನು ಕಳೆದುಕೊಂಡ ಶೋಕ. ಪುನೀತ್ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ದುಃಖ ವ್ಯಕ್ತಪಡಿಸಿದ್ದಾರೆ.

ಕನ್ನಡದ ಅತ್ಯಂತ ಪ್ರೀತಿಯ ಕಲಾವಿದ ಶ್ರೀ ಪುನೀತ್ ರಾಜಕುಮಾರ್ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಎಚ್.ಡಿ ದೇವೇಗೌಡರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಮಲೆಯಾಳಂ ಚಿತ್ರನಟ ಪೃಥ್ವಿರಾಜ್ ಸುಕುಮಾರನ್ ಟ್ವೀಟ್ ಮಾಡಿ, “ತುಂಬಾ ನೋವುಂಟುಮಾಡುವ ಸುದ್ದಿ. ಚಿರಶಾಂತಿಯಲ್ಲಿರು ಸೂಪರ್ ಸ್ಟಾರ್. ಕುಟುಂಬ, ಸ್ನೇಹಿತರು ಮತ್ತು ಲಕ್ಷಾಂತರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

“ಪದಗಳಲ್ಲಿ ವ್ಯಕ್ತಪಡಿಸಲಾಗದಷ್ಟು ನೋವುಂಟು ಮಾಡುತ್ತಿದೆ ಪುನೀತ್” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತ್ತು ನೋವು ವ್ಯಕ್ತಪಡಿಸಿದ್ದಾರೆ.

ತಮಿಳು ಚಿತ್ರನಟ ಜೀವ ಟ್ವೀಟ್ ಮಾಡಿ, “ಆಘಾತಕಾರಿ! ನಂಬಲು ಸಾಧ್ಯವಿಲ್ಲ! ಜೀವನವು ಅನಿರೀಕ್ಷಿತವಾಗಿದೆ, RIP” ಎಂದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

“ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸ್ನೇಹ ಜೀವ, ವಿನಮ್ರ ಮನಸ್ಸಿನ ಅವರ ನಿಧನವು ಭಾರತೀಯ ಚಿತ್ರರಂಗಕ್ಕೆ ದೊಡ್ಡ ಹೊಡೆತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಓಂ ಶಾಂತಿ” ಎಂದು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ನುಡಿನಮನ ಸಲ್ಲಿಸಿದ್ದಾರೆ.

ಕರುಣಾಮಯಿ ಮತ್ತು ಪ್ರೀತಿಯ ನಟರಾದ ಸಜ್ಜನರಲ್ಲಿ ಒಬ್ಬರಾದ ಪುನೀತ್ ರಾಜ್ ಕುಮಾರ್ ಇನ್ನಿಲ್ಲ. ಈ ಭರಿಸಲಾಗದ ನಷ್ಟವನ್ನು ಭರಿಸುವ ಶಕ್ತಿಯನ್ನು ಪುನೀತ್ ಅವರ ಕುಟುಂಬಕ್ಕೆ, ಸ್ನೇಹಿತರಿಗೆ ಮತ್ತು ಅವರ ಅಭಿಮಾನಿಗಳ ಸಾಗರಕ್ಕೆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಹುಭಾಷ ನಟ ದುಲ್ಖರ್ ಸಲ್ಮಾನ್ ಪ್ರಾರ್ಥಿಸಿದ್ದಾರೆ.

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಚಿತ್ರನಟರಾದ ಚಿರಂಜೀವಿ, ಪ್ರಕಾಶ್ ರಾಜ್ ಆರ್ಯ ನಿರ್ದೇಶಕರಾದ ವಿ‍ಘ್ನೇಶ್ ಶಿವನ್, ನಟಿಯರಾದ ಶ್ರದ್ಧಾ ಶ್ರೀನಾಥ್, ತಮನ್ನಾ ಭಾಟಿಯ ಸೇರಿದಂತೆ ನೂರಾರು ಜನರು ನುಡಿನಮನ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರ ರಾಜಕುಮಾರ, ಪ್ರೀತಿಯ ’ಅಪ್ಪು’ ನಡೆದು ಬಂದ ಹಾದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...