Homeಮುಖಪುಟಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಪುನೀತ್ ರಾಜ್‌ಕುಮಾರ್‌ ನಿಧನ: ಗಣ್ಯರ ಕಂಬನಿ, ಚಿತ್ರನಟ-ನಟಿಯರ ನುಡಿನಮನ

ಬೆಂಗಳೂರಿನ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಇಂದು ಸಂಜೆಯಿಂದ ನಾಳೆಯವರೆಗೆ ಅವಕಾಶ ನೀಡಲಾಗಿದೆ.

- Advertisement -
- Advertisement -

ಕನ್ನಡದ ಪ್ರತಿಭಾವಂತ ನಟ ಪುನೀತ್ ರಾಜ್‌ಕುಮಾರ್‌ರವರಿಗೆ (45) ಕೊನೆಯುಸಿದಿರುವುದರಿಂದ ಕನ್ನಡ ನಾಡು ದುಃಖದ ಮಡಿಲಲ್ಲಿ ಮುಳುಗಿದೆ. ಲಕ್ಷಾಂತರ ಅಭಿಮಾನಿಗಳು ಕಣ್ಣೀರು ಹರಿಸಿದ್ದಾರೆ. ನಾಡಿನ ಗಣ್ಯರು ಕಂಬಿನಿ ಮಿಡಿದಿದ್ದಾರೆ.

ಬೆಂಗಳೂರಿನ ಸದಾಶಿವನಗರದಲ್ಲಿ ಮೊದಲು ಗಣ್ಯರಿಗೆ ಅಂತಿಮ ದರ್ಶನಕ್ಕೆ ಅವಕಾಶ ನೀಡಲಾಗಿದೆ. ನಂತರ ಕಂಠೀರವ ಸ್ಟೇಡಿಯಂನಲ್ಲಿ ಪುನೀತ್ ಅಂತಿಮ ದರ್ಶನಕ್ಕೆ ಸಾರ್ವಜನಿಕರಿಗೆ ಇಂದು ಸಂಜೆಯಿಂದ ನಾಳೆಯವರೆಗೆ ಅವಕಾಶ ನೀಡಲಾಗಿದೆ.

ಕನ್ನಡದ ಖ್ಯಾತನಟ ಶ್ರೀ ಪುನೀತ್ ರಾಜ್ ಕುಮಾರ್ ಅವರು ಹೃದಯಾಘಾತದಿಂದ ನಿಧನರಾಗಿದ್ದು ನಾನು ತೀವ್ರ ಆಘಾತಕ್ಕೆ ಒಳಗಾಗಿದ್ದೇನೆ. ಕನ್ನಡಿಗರ ಮೆಚ್ಚಿನ ನಟ ಅಪ್ಪು ನಿಧನದಿಂದ ಕನ್ನಡ ಹಾಗೂ ಕರ್ನಾಟಕಕ್ಕೆ ಅಪಾರ ನಷ್ಟ ವಾಗಿದ್ದು, ದೇವರು ಅವರ ಆತ್ಮಕ್ಕೆ ಶಾಂತಿ ಕರುಣಿಸಿ, ಅಭಿಮಾನಿಗಳಿಗೆ ಈ ನೋವನ್ನು ಸಹಿಸುವ ಶಕ್ತಿ ನೀಡಲಿಯೆಂದು ಪ್ರಾರ್ಥಿಸುತ್ತೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು “ಕನ್ನಡದ ಪ್ರತಿಭಾವಂತ ಯುವ ನಟ ಪುನೀತ್ ರಾಜಕುಮಾರ್ ಹಠಾತ್ ನಿಧನದಿಂದ ಆಘಾತಕ್ಕೀಡಾಗಿದ್ದೇನೆ. ನಟನಾ ಕೌಶಲದ ಜೊತೆ ಸರಳ-ಸಜ್ಜನಿಕೆಯ ನಡವಳಿಕೆಯಿಂದಲೂ ಕನ್ನಡಿಗರ ಮ‌ನೆ ಮಗನಂತಿದ್ದ ಪುನೀತ್ ಸಾವು ತುಂಬಿಬಾರದ ನಷ್ಟ. ರಾಜ್ ಕುಮಾರ್ ಕಾಲದಿಂದಲೂ ಅವರ ಕುಟುಂಬದ ಜೊತೆಯಲ್ಲಿ ಆತ್ಮೀಯ ಸಂಬಂಧ ಹೊಂದಿದ್ದ ನನ್ನ ಪಾಲಿಗೆ ಪುನೀತ್ ಸಾವು ಮನೆ ಸದಸ್ಯನೊಬ್ಬನನ್ನು ಕಳೆದುಕೊಂಡ ಶೋಕ. ಪುನೀತ್ ಕುಟುಂಬ ಮತ್ತು ಅಭಿಮಾನಿಗಳ ದುಃಖದಲ್ಲಿ ನಾನೂ ಭಾಗಿಯಾಗಿದ್ದೇನೆ” ಎಂದು ದುಃಖ ವ್ಯಕ್ತಪಡಿಸಿದ್ದಾರೆ.

ಕನ್ನಡದ ಅತ್ಯಂತ ಪ್ರೀತಿಯ ಕಲಾವಿದ ಶ್ರೀ ಪುನೀತ್ ರಾಜಕುಮಾರ್ ಅವರ ನಿಧನದ ಸುದ್ದಿ ಅತೀವ ದುಃಖ ತಂದಿದೆ. ಚಿತ್ರರಂಗಕ್ಕೆ ಅವರ ಕೊಡುಗೆ ಅಪಾರ. ಕನ್ನಡ ಕಲಾಲೋಕಕ್ಕೆ ತುಂಬಲಾರದ ನಷ್ಟವುಂಟಾಗಿದೆ. ದೇವರು ಅವರ ಆತ್ಮಕ್ಕೆ ಸದ್ಗತಿ ಕರುಣಿಸಲಿ. ಅವರ ಕುಟುಂಬ, ಅಪಾರ ಅಭಿಮಾನಿ ಬಳಗಕ್ಕೆ ನೋವನ್ನು ಭರಿಸುವ ಶಕ್ತಿಯನ್ನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಮಾಜಿ ಪ್ರಧಾನಿಗಳಾದ ಎಚ್.ಡಿ ದೇವೇಗೌಡರು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

ಮಲೆಯಾಳಂ ಚಿತ್ರನಟ ಪೃಥ್ವಿರಾಜ್ ಸುಕುಮಾರನ್ ಟ್ವೀಟ್ ಮಾಡಿ, “ತುಂಬಾ ನೋವುಂಟುಮಾಡುವ ಸುದ್ದಿ. ಚಿರಶಾಂತಿಯಲ್ಲಿರು ಸೂಪರ್ ಸ್ಟಾರ್. ಕುಟುಂಬ, ಸ್ನೇಹಿತರು ಮತ್ತು ಲಕ್ಷಾಂತರ ಅಭಿಮಾನಿಗಳಿಗೆ ಈ ದುಃಖವನ್ನು ಭರಿಸುವ ಶಕ್ತಿಯನ್ನು ನೀಡಲಿ” ಎಂದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

“ಪದಗಳಲ್ಲಿ ವ್ಯಕ್ತಪಡಿಸಲಾಗದಷ್ಟು ನೋವುಂಟು ಮಾಡುತ್ತಿದೆ ಪುನೀತ್” ಎಂದು ಬಹುಭಾಷಾ ನಟಿ ಪಾರ್ವತಿ ತಿರುವೊತ್ತು ನೋವು ವ್ಯಕ್ತಪಡಿಸಿದ್ದಾರೆ.

ತಮಿಳು ಚಿತ್ರನಟ ಜೀವ ಟ್ವೀಟ್ ಮಾಡಿ, “ಆಘಾತಕಾರಿ! ನಂಬಲು ಸಾಧ್ಯವಿಲ್ಲ! ಜೀವನವು ಅನಿರೀಕ್ಷಿತವಾಗಿದೆ, RIP” ಎಂದು ಶ್ರದ್ಧಾಂಜಲಿ ಅರ್ಪಿಸಿದ್ದಾರೆ.

“ಪುನೀತ್ ರಾಜ್ ಕುಮಾರ್ ಅವರ ನಿಧನದ ಸುದ್ದಿ ಕೇಳಿ ದುಃಖವಾಯಿತು. ಸ್ನೇಹ ಜೀವ, ವಿನಮ್ರ ಮನಸ್ಸಿನ ಅವರ ನಿಧನವು ಭಾರತೀಯ ಚಿತ್ರರಂಗಕ್ಕೆ ದೊಡ್ಡ ಹೊಡೆತವಾಗಿದೆ. ಅವರ ಆತ್ಮಕ್ಕೆ ಸದ್ಗತಿ ಸಿಗಲಿ. ಓಂ ಶಾಂತಿ” ಎಂದು ಮಾಜಿ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ನುಡಿನಮನ ಸಲ್ಲಿಸಿದ್ದಾರೆ.

ಕರುಣಾಮಯಿ ಮತ್ತು ಪ್ರೀತಿಯ ನಟರಾದ ಸಜ್ಜನರಲ್ಲಿ ಒಬ್ಬರಾದ ಪುನೀತ್ ರಾಜ್ ಕುಮಾರ್ ಇನ್ನಿಲ್ಲ. ಈ ಭರಿಸಲಾಗದ ನಷ್ಟವನ್ನು ಭರಿಸುವ ಶಕ್ತಿಯನ್ನು ಪುನೀತ್ ಅವರ ಕುಟುಂಬಕ್ಕೆ, ಸ್ನೇಹಿತರಿಗೆ ಮತ್ತು ಅವರ ಅಭಿಮಾನಿಗಳ ಸಾಗರಕ್ಕೆ ಭಗವಂತನು ನೀಡಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಬಹುಭಾಷ ನಟ ದುಲ್ಖರ್ ಸಲ್ಮಾನ್ ಪ್ರಾರ್ಥಿಸಿದ್ದಾರೆ.

ಮಾಜಿ ಕ್ರಿಕೆಟಿಗ ಅನಿಲ್ ಕುಂಬ್ಳೆ, ಚಿತ್ರನಟರಾದ ಚಿರಂಜೀವಿ, ಪ್ರಕಾಶ್ ರಾಜ್ ಆರ್ಯ ನಿರ್ದೇಶಕರಾದ ವಿ‍ಘ್ನೇಶ್ ಶಿವನ್, ನಟಿಯರಾದ ಶ್ರದ್ಧಾ ಶ್ರೀನಾಥ್, ತಮನ್ನಾ ಭಾಟಿಯ ಸೇರಿದಂತೆ ನೂರಾರು ಜನರು ನುಡಿನಮನ ಸಲ್ಲಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರ ರಾಜಕುಮಾರ, ಪ್ರೀತಿಯ ’ಅಪ್ಪು’ ನಡೆದು ಬಂದ ಹಾದಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...