Homeಕರ್ನಾಟಕಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ನಟರ ಅಭಿಮಾನಿಗಳು ಪರಸ್ಪರ ಕ್ಷಮೆಯಾಚಿಸಿರುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

- Advertisement -
- Advertisement -

ಕಳೆದ ಶುಕ್ರವಾರ (ಅ.29) ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ನಮ್ಮನ್ನಗಲಿದ್ದಾರೆ. ಭಾನುವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಕುಟುಂಬ ವರ್ಗ, ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿರುವ ಅಪ್ಪು ನಿಧನಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ.

ಅಪ್ಪು ನಿಧನ ದುಃಖದ ಜೊತೆಗೆ ಹಲವು ಪಾಠಗಳನ್ನು ಕಲಿಸುತ್ತಿದೆ. ಕನ್ನಡ ಸಿನಿರಂಗದಲ್ಲಿ ಅತಿ ಹೆಚ್ಚು ಸುದ್ದಿಯಾಗುವ ಫ್ಯಾನ್ಸ್ ವಾರ್‌ಗೆ ಕಡಿವಾಣ ಬೀಳುವ ಸಮಯವಾಗಿದೆ. ನಟನ ಸಾವು ಎಲ್ಲರಲ್ಲೂ ಬದಲಾವಣೆ ತರುತ್ತಿದೆ ಎಂದರೆ ತಪ್ಪಾಗಲಾರದು.

ನಟ ಯಶ್, ದರ್ಶನ್, ಸುದೀಪ್, ಶಿವರಾಜ್‌ಕುಮಾರ್‌, ಧ್ರುವ ಸರ್ಜಾ ಫ್ಯಾನ್ಸ್‌ಗಳ ನಡುವೆ ಪೈಪೋಟೆ ನಡೆಯುತ್ತಲೆ ಇರುತ್ತದೆ. ಒಂದು ಹಾಡಿನಲ್ಲಿ ಬರುವ ಪದ, ಸಿನಿಮಾದ ಒಂದು ಡೈಲಾಗ್‌, ಚಿತ್ರಮಂದಿರದ ಮುಂದೆ ಹಾಕುವ ಕಟೌಟ್‌…ಹೀಗೆ ಚಿಕ್ಕ ಚಿಕ್ಕ ವಿಷಯಗಳಿಗೂ ಗಲಾಟೆಗಳು ನಡೆಯುತ್ತಲೇ ಇವೆ. ಇವುಗಳಿಗೆ ಕಡಿವಾಣ ಬೀಳುವ ಸಮಯ ಇದು ಎಂಬುದರ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾರಂಗವನ್ನು ಉಳಿಸಲು ಒಟ್ಟಿಗೆ ಸಾಗೋಣ, ಮನುಷ್ಯನನ್ನೆ ಕಳೆದುಕೊಂಡ ಮೇಲೆ ಈ ಜಗಳ ಯಾಕೆ, ಚಿತ್ರರಂಗದ ಅಭಿವೃದ್ಧಿಗೆ ಒಟ್ಟಾಗಿ, ನೆಗೆಟಿವಿಟಿ ಬಿಟ್ಟು ಪಾಸಿಟಿವಿಟಿ ಹಂಚೋಣ ಎಂಬ ಪೋಸ್ಟ್‌ಗಳು ಕಾಣಿಸಿಕೊಂಡಿವೆ.

ನಟ ಸುದೀಪ್ ಅಭಿಮಾನಿಗಳು ತಮ್ಮ ಪೇಜ್‌ನಿಂದ ಬಹಿರಂಗವಾಗಿಯೇ ಕ್ಷಮೆ ಕೇಳಿ ಪತ್ರ ಬಿಡುಗಡೆ ಮಾಡಿದ್ದಾರೆ. ’ಇಷ್ಟು ದಿನ ಬೇರೆ ನಟರನ್ನು ಟ್ರೋಲ್ ಮಾಡಿದಕ್ಕೆ, ಕೆಟ್ಟದಾಗಿ ನಡೆದುಕೊಂಡಿದ್ದಕ್ಕೆ ಕ್ಷಮಿಸಿ, ಫ್ಯಾನ್ಸ್ ವಾರ್ ಬಿಟ್ಟು ಬಿಡೋಣ. ನಾವೆಲ್ಲಾ ಒಂದಾದರೇ ನಮ್ಮ ಚಿತ್ರರಂಗ ಬೆಳೆಯುತ್ತದೆ. ನಮ್ಮ ಒಂದು ದೊಡ್ಡ ಪಿಲ್ಲರ್‌ ಅನ್ನೇ ನಾವು ಕಳೆದುಕೊಂಡಿದ್ದೇವೆ. ದರ್ಶನ್, ಪುನೀತ್‌, ಯಶ್ ಸರ್‌ ಫ್ಯಾನ್ಸ್‌ ನನ್ನನ್ನು ಕ್ಷಮಿಸಿ” ಎಂದು ಮನವಿ ಮಾಡಿದ್ದಾರೆ.

ಪುನೀತ್ ರಾಜ್‌ಕುಮಾರ್‌ ಅಭಿಮಾನಿಗಳು ಕೂಡ ಇತರೆ ನಟರನ್ನು ಟ್ರೋಲ್ ಮಾಡಿದಕ್ಕಾಗಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಕಿಚ್ಚ ಸುದೀಪ್, ನಟ ಯಶ್ ಅವರನ್ನು ಟ್ರೋಲ್ ಮಾಡಿದ್ದಕ್ಕೆ ಕ್ಷಮೆ ಕೇಳಿದ್ದಾರೆ.

ಇನ್ನು ದಾಸ ದರ್ಶನ್ ಅಭಿಮಾನಿಗಳು ಕೂಡ ಎಲ್ಲರ ಕ್ಷಮೆ ಕೇಳಿ, ಮುಂದೆ ಫ್ಯಾನ್ಸ್‌ ವಾರ್‌ಗೆ ಬರುವುದಿಲ್ಲ ಎಂದಿದ್ದಾರೆ. ’ಫ್ಯಾನ್ ವಾರ್ ನಿಲ್ಲಿಸಿ ಸಾಕು. ಮತ್ತೆ ನಾನು ಫ್ಯಾನ್ಸ್ ವಾರ್‌ಗೆ ಎಂಟ್ರಿ ಆಗಲ್ಲ’ ಎಂದು ದರ್ಶನ್, ಸುದೀಪ್, ಯಶ್ ಅವರನ್ನು ಟ್ಯಾಗ್ ಮಾಡಿ ಎಲ್ಲಾ ನಟರ ಮುಂಬರುವ ಚಿತ್ರಗಳನ್ನು ಹ್ಯಾಶ್‌ಟ್ಯಾಗ್ ಹಾಕಲಾಗಿದೆ.

ನಟರ ಅಭಿಮಾನಿಗಳ ನಿರ್ಣಯಕ್ಕೆ ಹಲವು ಮಂದಿ ಸಂತಸ ವ್ಯಕ್ತಪಡಿಸಿದ್ದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡ ಟ್ವೀಟ್ ಮಾಡಿ, ’ನನ್ನ ವೈಯಕ್ತಿಕ ಕೋರಿಕೆ ಇಷ್ಟೇ
ಇನ್ನಾದ್ರೂ ಒಂದಷ್ಟು ಅಭಿಮಾನಿಗಳು ಫ್ಯಾನ್ಸ್ ವಾರ್ ಅನ್ನೋದನ್ನ ಬಿಟ್ಟು ಒಂದಾಗಿ ಪ್ರತಿಯೊಬ್ಬ ನಟರು ನಮ್ಮ ಕನ್ನಡಿಗರು, ನಮ್ಮವ್ರು ಅನ್ನೋ ಭಾವನೆಯೊಂದಿಗೆ ಪ್ರೀತಿಸಿ, ಗೌರವಿಸಿ, ಅಭಿಮಾನಿಸಿ ಅನ್ನೋದಷ್ಟೇ ನನ್ನ ಕೋರಿಕೆ. ಅಪ್ಪು ಸಾರ್ ನಮ್ಮೆಲ್ಲರನ್ನು ಬೆಸೆದು ಹೋದರೇನು ಅನ್ನಿಸುತ್ತಿದೆ. ಕನ್ನಡಕ್ಕಾಗಿ ಒಂದಾಗೋಣ” ಎಂದಿದ್ದಾರೆ.

ಇನ್ನು ನವೆಂಬರ್‌ 2 ರಂದು ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳಿಂದ ಸಂಜೆ 6 ಗಂಟೆಗೆ ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #UnitedKFI, #StopFanWars, #unitedsandalwood ಹ್ಯಾಶ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಲಾಗುತ್ತಿದೆ.

ಒಟ್ಟಾರೆ, ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳು ಫ್ಯಾನ್ಸ್ ವಾರ್‌ ಅನ್ನು ಬಿಟ್ಟು ಕನ್ನಡ ಚಿತ್ರರಂಗದ ಬೆಳವಣಿಗೆಗೆ ಒಂದಾಗೋಣ ಎನ್ನುತ್ತಿದ್ದಾರೆ. ನಟರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಅಭಿಮಾನಿಗಳ ನಡುವೆ ಈ ವಾರ್‌ ಮುಂದುವರೆಯುತ್ತಲೇ ಇತ್ತು. ಆದರೆ, ಪುನೀತ್ ರಾಜ್‌ಕುಮಾರ್‌ ಅವರ ನಿಧನ ಎಲ್ಲರ ಮನವನ್ನು ಛಿದ್ರಗೊಳಿಸಿದೆ. ಅವರ ಅಂತಿಮ ದರ್ಶನದಲ್ಲಿ ಯಶ್ ಮತ್ತು ಕಿಚ್ಚ ಸುದೀಪ್, ದರ್ಶನ್ ಅವರ ಕಣ್ಣ ಹನಿಗಳು ಅಭಿಮಾನಿಗಳ ಮನಸ್ಸು ಕದಡಿದ್ದು, ಈ ಫ್ಯಾನ್ಸ್ ವಾರ್‌ಗೆ ಅಂತ್ಯಹಾಡಲು ಕಾರಣವಾಗಿದೆ.


ಇದನ್ನೂ ಓದಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋದವು ಸಾಲು ಸಾಲು ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...