Homeಕರ್ನಾಟಕಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ನಟರ ಅಭಿಮಾನಿಗಳು ಪರಸ್ಪರ ಕ್ಷಮೆಯಾಚಿಸಿರುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

- Advertisement -
- Advertisement -

ಕಳೆದ ಶುಕ್ರವಾರ (ಅ.29) ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ನಮ್ಮನ್ನಗಲಿದ್ದಾರೆ. ಭಾನುವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಕುಟುಂಬ ವರ್ಗ, ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿರುವ ಅಪ್ಪು ನಿಧನಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ.

ಅಪ್ಪು ನಿಧನ ದುಃಖದ ಜೊತೆಗೆ ಹಲವು ಪಾಠಗಳನ್ನು ಕಲಿಸುತ್ತಿದೆ. ಕನ್ನಡ ಸಿನಿರಂಗದಲ್ಲಿ ಅತಿ ಹೆಚ್ಚು ಸುದ್ದಿಯಾಗುವ ಫ್ಯಾನ್ಸ್ ವಾರ್‌ಗೆ ಕಡಿವಾಣ ಬೀಳುವ ಸಮಯವಾಗಿದೆ. ನಟನ ಸಾವು ಎಲ್ಲರಲ್ಲೂ ಬದಲಾವಣೆ ತರುತ್ತಿದೆ ಎಂದರೆ ತಪ್ಪಾಗಲಾರದು.

ನಟ ಯಶ್, ದರ್ಶನ್, ಸುದೀಪ್, ಶಿವರಾಜ್‌ಕುಮಾರ್‌, ಧ್ರುವ ಸರ್ಜಾ ಫ್ಯಾನ್ಸ್‌ಗಳ ನಡುವೆ ಪೈಪೋಟೆ ನಡೆಯುತ್ತಲೆ ಇರುತ್ತದೆ. ಒಂದು ಹಾಡಿನಲ್ಲಿ ಬರುವ ಪದ, ಸಿನಿಮಾದ ಒಂದು ಡೈಲಾಗ್‌, ಚಿತ್ರಮಂದಿರದ ಮುಂದೆ ಹಾಕುವ ಕಟೌಟ್‌…ಹೀಗೆ ಚಿಕ್ಕ ಚಿಕ್ಕ ವಿಷಯಗಳಿಗೂ ಗಲಾಟೆಗಳು ನಡೆಯುತ್ತಲೇ ಇವೆ. ಇವುಗಳಿಗೆ ಕಡಿವಾಣ ಬೀಳುವ ಸಮಯ ಇದು ಎಂಬುದರ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾರಂಗವನ್ನು ಉಳಿಸಲು ಒಟ್ಟಿಗೆ ಸಾಗೋಣ, ಮನುಷ್ಯನನ್ನೆ ಕಳೆದುಕೊಂಡ ಮೇಲೆ ಈ ಜಗಳ ಯಾಕೆ, ಚಿತ್ರರಂಗದ ಅಭಿವೃದ್ಧಿಗೆ ಒಟ್ಟಾಗಿ, ನೆಗೆಟಿವಿಟಿ ಬಿಟ್ಟು ಪಾಸಿಟಿವಿಟಿ ಹಂಚೋಣ ಎಂಬ ಪೋಸ್ಟ್‌ಗಳು ಕಾಣಿಸಿಕೊಂಡಿವೆ.

ನಟ ಸುದೀಪ್ ಅಭಿಮಾನಿಗಳು ತಮ್ಮ ಪೇಜ್‌ನಿಂದ ಬಹಿರಂಗವಾಗಿಯೇ ಕ್ಷಮೆ ಕೇಳಿ ಪತ್ರ ಬಿಡುಗಡೆ ಮಾಡಿದ್ದಾರೆ. ’ಇಷ್ಟು ದಿನ ಬೇರೆ ನಟರನ್ನು ಟ್ರೋಲ್ ಮಾಡಿದಕ್ಕೆ, ಕೆಟ್ಟದಾಗಿ ನಡೆದುಕೊಂಡಿದ್ದಕ್ಕೆ ಕ್ಷಮಿಸಿ, ಫ್ಯಾನ್ಸ್ ವಾರ್ ಬಿಟ್ಟು ಬಿಡೋಣ. ನಾವೆಲ್ಲಾ ಒಂದಾದರೇ ನಮ್ಮ ಚಿತ್ರರಂಗ ಬೆಳೆಯುತ್ತದೆ. ನಮ್ಮ ಒಂದು ದೊಡ್ಡ ಪಿಲ್ಲರ್‌ ಅನ್ನೇ ನಾವು ಕಳೆದುಕೊಂಡಿದ್ದೇವೆ. ದರ್ಶನ್, ಪುನೀತ್‌, ಯಶ್ ಸರ್‌ ಫ್ಯಾನ್ಸ್‌ ನನ್ನನ್ನು ಕ್ಷಮಿಸಿ” ಎಂದು ಮನವಿ ಮಾಡಿದ್ದಾರೆ.

ಪುನೀತ್ ರಾಜ್‌ಕುಮಾರ್‌ ಅಭಿಮಾನಿಗಳು ಕೂಡ ಇತರೆ ನಟರನ್ನು ಟ್ರೋಲ್ ಮಾಡಿದಕ್ಕಾಗಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಕಿಚ್ಚ ಸುದೀಪ್, ನಟ ಯಶ್ ಅವರನ್ನು ಟ್ರೋಲ್ ಮಾಡಿದ್ದಕ್ಕೆ ಕ್ಷಮೆ ಕೇಳಿದ್ದಾರೆ.

ಇನ್ನು ದಾಸ ದರ್ಶನ್ ಅಭಿಮಾನಿಗಳು ಕೂಡ ಎಲ್ಲರ ಕ್ಷಮೆ ಕೇಳಿ, ಮುಂದೆ ಫ್ಯಾನ್ಸ್‌ ವಾರ್‌ಗೆ ಬರುವುದಿಲ್ಲ ಎಂದಿದ್ದಾರೆ. ’ಫ್ಯಾನ್ ವಾರ್ ನಿಲ್ಲಿಸಿ ಸಾಕು. ಮತ್ತೆ ನಾನು ಫ್ಯಾನ್ಸ್ ವಾರ್‌ಗೆ ಎಂಟ್ರಿ ಆಗಲ್ಲ’ ಎಂದು ದರ್ಶನ್, ಸುದೀಪ್, ಯಶ್ ಅವರನ್ನು ಟ್ಯಾಗ್ ಮಾಡಿ ಎಲ್ಲಾ ನಟರ ಮುಂಬರುವ ಚಿತ್ರಗಳನ್ನು ಹ್ಯಾಶ್‌ಟ್ಯಾಗ್ ಹಾಕಲಾಗಿದೆ.

ನಟರ ಅಭಿಮಾನಿಗಳ ನಿರ್ಣಯಕ್ಕೆ ಹಲವು ಮಂದಿ ಸಂತಸ ವ್ಯಕ್ತಪಡಿಸಿದ್ದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡ ಟ್ವೀಟ್ ಮಾಡಿ, ’ನನ್ನ ವೈಯಕ್ತಿಕ ಕೋರಿಕೆ ಇಷ್ಟೇ
ಇನ್ನಾದ್ರೂ ಒಂದಷ್ಟು ಅಭಿಮಾನಿಗಳು ಫ್ಯಾನ್ಸ್ ವಾರ್ ಅನ್ನೋದನ್ನ ಬಿಟ್ಟು ಒಂದಾಗಿ ಪ್ರತಿಯೊಬ್ಬ ನಟರು ನಮ್ಮ ಕನ್ನಡಿಗರು, ನಮ್ಮವ್ರು ಅನ್ನೋ ಭಾವನೆಯೊಂದಿಗೆ ಪ್ರೀತಿಸಿ, ಗೌರವಿಸಿ, ಅಭಿಮಾನಿಸಿ ಅನ್ನೋದಷ್ಟೇ ನನ್ನ ಕೋರಿಕೆ. ಅಪ್ಪು ಸಾರ್ ನಮ್ಮೆಲ್ಲರನ್ನು ಬೆಸೆದು ಹೋದರೇನು ಅನ್ನಿಸುತ್ತಿದೆ. ಕನ್ನಡಕ್ಕಾಗಿ ಒಂದಾಗೋಣ” ಎಂದಿದ್ದಾರೆ.

ಇನ್ನು ನವೆಂಬರ್‌ 2 ರಂದು ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳಿಂದ ಸಂಜೆ 6 ಗಂಟೆಗೆ ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #UnitedKFI, #StopFanWars, #unitedsandalwood ಹ್ಯಾಶ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಲಾಗುತ್ತಿದೆ.

ಒಟ್ಟಾರೆ, ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳು ಫ್ಯಾನ್ಸ್ ವಾರ್‌ ಅನ್ನು ಬಿಟ್ಟು ಕನ್ನಡ ಚಿತ್ರರಂಗದ ಬೆಳವಣಿಗೆಗೆ ಒಂದಾಗೋಣ ಎನ್ನುತ್ತಿದ್ದಾರೆ. ನಟರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಅಭಿಮಾನಿಗಳ ನಡುವೆ ಈ ವಾರ್‌ ಮುಂದುವರೆಯುತ್ತಲೇ ಇತ್ತು. ಆದರೆ, ಪುನೀತ್ ರಾಜ್‌ಕುಮಾರ್‌ ಅವರ ನಿಧನ ಎಲ್ಲರ ಮನವನ್ನು ಛಿದ್ರಗೊಳಿಸಿದೆ. ಅವರ ಅಂತಿಮ ದರ್ಶನದಲ್ಲಿ ಯಶ್ ಮತ್ತು ಕಿಚ್ಚ ಸುದೀಪ್, ದರ್ಶನ್ ಅವರ ಕಣ್ಣ ಹನಿಗಳು ಅಭಿಮಾನಿಗಳ ಮನಸ್ಸು ಕದಡಿದ್ದು, ಈ ಫ್ಯಾನ್ಸ್ ವಾರ್‌ಗೆ ಅಂತ್ಯಹಾಡಲು ಕಾರಣವಾಗಿದೆ.


ಇದನ್ನೂ ಓದಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋದವು ಸಾಲು ಸಾಲು ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...