Homeಕರ್ನಾಟಕಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ನಟರ ಅಭಿಮಾನಿಗಳು ಪರಸ್ಪರ ಕ್ಷಮೆಯಾಚಿಸಿರುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

- Advertisement -
- Advertisement -

ಕಳೆದ ಶುಕ್ರವಾರ (ಅ.29) ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ನಮ್ಮನ್ನಗಲಿದ್ದಾರೆ. ಭಾನುವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಕುಟುಂಬ ವರ್ಗ, ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿರುವ ಅಪ್ಪು ನಿಧನಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ.

ಅಪ್ಪು ನಿಧನ ದುಃಖದ ಜೊತೆಗೆ ಹಲವು ಪಾಠಗಳನ್ನು ಕಲಿಸುತ್ತಿದೆ. ಕನ್ನಡ ಸಿನಿರಂಗದಲ್ಲಿ ಅತಿ ಹೆಚ್ಚು ಸುದ್ದಿಯಾಗುವ ಫ್ಯಾನ್ಸ್ ವಾರ್‌ಗೆ ಕಡಿವಾಣ ಬೀಳುವ ಸಮಯವಾಗಿದೆ. ನಟನ ಸಾವು ಎಲ್ಲರಲ್ಲೂ ಬದಲಾವಣೆ ತರುತ್ತಿದೆ ಎಂದರೆ ತಪ್ಪಾಗಲಾರದು.

ನಟ ಯಶ್, ದರ್ಶನ್, ಸುದೀಪ್, ಶಿವರಾಜ್‌ಕುಮಾರ್‌, ಧ್ರುವ ಸರ್ಜಾ ಫ್ಯಾನ್ಸ್‌ಗಳ ನಡುವೆ ಪೈಪೋಟೆ ನಡೆಯುತ್ತಲೆ ಇರುತ್ತದೆ. ಒಂದು ಹಾಡಿನಲ್ಲಿ ಬರುವ ಪದ, ಸಿನಿಮಾದ ಒಂದು ಡೈಲಾಗ್‌, ಚಿತ್ರಮಂದಿರದ ಮುಂದೆ ಹಾಕುವ ಕಟೌಟ್‌…ಹೀಗೆ ಚಿಕ್ಕ ಚಿಕ್ಕ ವಿಷಯಗಳಿಗೂ ಗಲಾಟೆಗಳು ನಡೆಯುತ್ತಲೇ ಇವೆ. ಇವುಗಳಿಗೆ ಕಡಿವಾಣ ಬೀಳುವ ಸಮಯ ಇದು ಎಂಬುದರ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾರಂಗವನ್ನು ಉಳಿಸಲು ಒಟ್ಟಿಗೆ ಸಾಗೋಣ, ಮನುಷ್ಯನನ್ನೆ ಕಳೆದುಕೊಂಡ ಮೇಲೆ ಈ ಜಗಳ ಯಾಕೆ, ಚಿತ್ರರಂಗದ ಅಭಿವೃದ್ಧಿಗೆ ಒಟ್ಟಾಗಿ, ನೆಗೆಟಿವಿಟಿ ಬಿಟ್ಟು ಪಾಸಿಟಿವಿಟಿ ಹಂಚೋಣ ಎಂಬ ಪೋಸ್ಟ್‌ಗಳು ಕಾಣಿಸಿಕೊಂಡಿವೆ.

ನಟ ಸುದೀಪ್ ಅಭಿಮಾನಿಗಳು ತಮ್ಮ ಪೇಜ್‌ನಿಂದ ಬಹಿರಂಗವಾಗಿಯೇ ಕ್ಷಮೆ ಕೇಳಿ ಪತ್ರ ಬಿಡುಗಡೆ ಮಾಡಿದ್ದಾರೆ. ’ಇಷ್ಟು ದಿನ ಬೇರೆ ನಟರನ್ನು ಟ್ರೋಲ್ ಮಾಡಿದಕ್ಕೆ, ಕೆಟ್ಟದಾಗಿ ನಡೆದುಕೊಂಡಿದ್ದಕ್ಕೆ ಕ್ಷಮಿಸಿ, ಫ್ಯಾನ್ಸ್ ವಾರ್ ಬಿಟ್ಟು ಬಿಡೋಣ. ನಾವೆಲ್ಲಾ ಒಂದಾದರೇ ನಮ್ಮ ಚಿತ್ರರಂಗ ಬೆಳೆಯುತ್ತದೆ. ನಮ್ಮ ಒಂದು ದೊಡ್ಡ ಪಿಲ್ಲರ್‌ ಅನ್ನೇ ನಾವು ಕಳೆದುಕೊಂಡಿದ್ದೇವೆ. ದರ್ಶನ್, ಪುನೀತ್‌, ಯಶ್ ಸರ್‌ ಫ್ಯಾನ್ಸ್‌ ನನ್ನನ್ನು ಕ್ಷಮಿಸಿ” ಎಂದು ಮನವಿ ಮಾಡಿದ್ದಾರೆ.

ಪುನೀತ್ ರಾಜ್‌ಕುಮಾರ್‌ ಅಭಿಮಾನಿಗಳು ಕೂಡ ಇತರೆ ನಟರನ್ನು ಟ್ರೋಲ್ ಮಾಡಿದಕ್ಕಾಗಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಕಿಚ್ಚ ಸುದೀಪ್, ನಟ ಯಶ್ ಅವರನ್ನು ಟ್ರೋಲ್ ಮಾಡಿದ್ದಕ್ಕೆ ಕ್ಷಮೆ ಕೇಳಿದ್ದಾರೆ.

ಇನ್ನು ದಾಸ ದರ್ಶನ್ ಅಭಿಮಾನಿಗಳು ಕೂಡ ಎಲ್ಲರ ಕ್ಷಮೆ ಕೇಳಿ, ಮುಂದೆ ಫ್ಯಾನ್ಸ್‌ ವಾರ್‌ಗೆ ಬರುವುದಿಲ್ಲ ಎಂದಿದ್ದಾರೆ. ’ಫ್ಯಾನ್ ವಾರ್ ನಿಲ್ಲಿಸಿ ಸಾಕು. ಮತ್ತೆ ನಾನು ಫ್ಯಾನ್ಸ್ ವಾರ್‌ಗೆ ಎಂಟ್ರಿ ಆಗಲ್ಲ’ ಎಂದು ದರ್ಶನ್, ಸುದೀಪ್, ಯಶ್ ಅವರನ್ನು ಟ್ಯಾಗ್ ಮಾಡಿ ಎಲ್ಲಾ ನಟರ ಮುಂಬರುವ ಚಿತ್ರಗಳನ್ನು ಹ್ಯಾಶ್‌ಟ್ಯಾಗ್ ಹಾಕಲಾಗಿದೆ.

ನಟರ ಅಭಿಮಾನಿಗಳ ನಿರ್ಣಯಕ್ಕೆ ಹಲವು ಮಂದಿ ಸಂತಸ ವ್ಯಕ್ತಪಡಿಸಿದ್ದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡ ಟ್ವೀಟ್ ಮಾಡಿ, ’ನನ್ನ ವೈಯಕ್ತಿಕ ಕೋರಿಕೆ ಇಷ್ಟೇ
ಇನ್ನಾದ್ರೂ ಒಂದಷ್ಟು ಅಭಿಮಾನಿಗಳು ಫ್ಯಾನ್ಸ್ ವಾರ್ ಅನ್ನೋದನ್ನ ಬಿಟ್ಟು ಒಂದಾಗಿ ಪ್ರತಿಯೊಬ್ಬ ನಟರು ನಮ್ಮ ಕನ್ನಡಿಗರು, ನಮ್ಮವ್ರು ಅನ್ನೋ ಭಾವನೆಯೊಂದಿಗೆ ಪ್ರೀತಿಸಿ, ಗೌರವಿಸಿ, ಅಭಿಮಾನಿಸಿ ಅನ್ನೋದಷ್ಟೇ ನನ್ನ ಕೋರಿಕೆ. ಅಪ್ಪು ಸಾರ್ ನಮ್ಮೆಲ್ಲರನ್ನು ಬೆಸೆದು ಹೋದರೇನು ಅನ್ನಿಸುತ್ತಿದೆ. ಕನ್ನಡಕ್ಕಾಗಿ ಒಂದಾಗೋಣ” ಎಂದಿದ್ದಾರೆ.

ಇನ್ನು ನವೆಂಬರ್‌ 2 ರಂದು ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳಿಂದ ಸಂಜೆ 6 ಗಂಟೆಗೆ ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #UnitedKFI, #StopFanWars, #unitedsandalwood ಹ್ಯಾಶ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಲಾಗುತ್ತಿದೆ.

ಒಟ್ಟಾರೆ, ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳು ಫ್ಯಾನ್ಸ್ ವಾರ್‌ ಅನ್ನು ಬಿಟ್ಟು ಕನ್ನಡ ಚಿತ್ರರಂಗದ ಬೆಳವಣಿಗೆಗೆ ಒಂದಾಗೋಣ ಎನ್ನುತ್ತಿದ್ದಾರೆ. ನಟರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಅಭಿಮಾನಿಗಳ ನಡುವೆ ಈ ವಾರ್‌ ಮುಂದುವರೆಯುತ್ತಲೇ ಇತ್ತು. ಆದರೆ, ಪುನೀತ್ ರಾಜ್‌ಕುಮಾರ್‌ ಅವರ ನಿಧನ ಎಲ್ಲರ ಮನವನ್ನು ಛಿದ್ರಗೊಳಿಸಿದೆ. ಅವರ ಅಂತಿಮ ದರ್ಶನದಲ್ಲಿ ಯಶ್ ಮತ್ತು ಕಿಚ್ಚ ಸುದೀಪ್, ದರ್ಶನ್ ಅವರ ಕಣ್ಣ ಹನಿಗಳು ಅಭಿಮಾನಿಗಳ ಮನಸ್ಸು ಕದಡಿದ್ದು, ಈ ಫ್ಯಾನ್ಸ್ ವಾರ್‌ಗೆ ಅಂತ್ಯಹಾಡಲು ಕಾರಣವಾಗಿದೆ.


ಇದನ್ನೂ ಓದಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋದವು ಸಾಲು ಸಾಲು ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...