Homeಕರ್ನಾಟಕಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ನಟರ ಅಭಿಮಾನಿಗಳು ಪರಸ್ಪರ ಕ್ಷಮೆಯಾಚಿಸಿರುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

- Advertisement -
- Advertisement -

ಕಳೆದ ಶುಕ್ರವಾರ (ಅ.29) ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ನಮ್ಮನ್ನಗಲಿದ್ದಾರೆ. ಭಾನುವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಕುಟುಂಬ ವರ್ಗ, ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿರುವ ಅಪ್ಪು ನಿಧನಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ.

ಅಪ್ಪು ನಿಧನ ದುಃಖದ ಜೊತೆಗೆ ಹಲವು ಪಾಠಗಳನ್ನು ಕಲಿಸುತ್ತಿದೆ. ಕನ್ನಡ ಸಿನಿರಂಗದಲ್ಲಿ ಅತಿ ಹೆಚ್ಚು ಸುದ್ದಿಯಾಗುವ ಫ್ಯಾನ್ಸ್ ವಾರ್‌ಗೆ ಕಡಿವಾಣ ಬೀಳುವ ಸಮಯವಾಗಿದೆ. ನಟನ ಸಾವು ಎಲ್ಲರಲ್ಲೂ ಬದಲಾವಣೆ ತರುತ್ತಿದೆ ಎಂದರೆ ತಪ್ಪಾಗಲಾರದು.

ನಟ ಯಶ್, ದರ್ಶನ್, ಸುದೀಪ್, ಶಿವರಾಜ್‌ಕುಮಾರ್‌, ಧ್ರುವ ಸರ್ಜಾ ಫ್ಯಾನ್ಸ್‌ಗಳ ನಡುವೆ ಪೈಪೋಟೆ ನಡೆಯುತ್ತಲೆ ಇರುತ್ತದೆ. ಒಂದು ಹಾಡಿನಲ್ಲಿ ಬರುವ ಪದ, ಸಿನಿಮಾದ ಒಂದು ಡೈಲಾಗ್‌, ಚಿತ್ರಮಂದಿರದ ಮುಂದೆ ಹಾಕುವ ಕಟೌಟ್‌…ಹೀಗೆ ಚಿಕ್ಕ ಚಿಕ್ಕ ವಿಷಯಗಳಿಗೂ ಗಲಾಟೆಗಳು ನಡೆಯುತ್ತಲೇ ಇವೆ. ಇವುಗಳಿಗೆ ಕಡಿವಾಣ ಬೀಳುವ ಸಮಯ ಇದು ಎಂಬುದರ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾರಂಗವನ್ನು ಉಳಿಸಲು ಒಟ್ಟಿಗೆ ಸಾಗೋಣ, ಮನುಷ್ಯನನ್ನೆ ಕಳೆದುಕೊಂಡ ಮೇಲೆ ಈ ಜಗಳ ಯಾಕೆ, ಚಿತ್ರರಂಗದ ಅಭಿವೃದ್ಧಿಗೆ ಒಟ್ಟಾಗಿ, ನೆಗೆಟಿವಿಟಿ ಬಿಟ್ಟು ಪಾಸಿಟಿವಿಟಿ ಹಂಚೋಣ ಎಂಬ ಪೋಸ್ಟ್‌ಗಳು ಕಾಣಿಸಿಕೊಂಡಿವೆ.

ನಟ ಸುದೀಪ್ ಅಭಿಮಾನಿಗಳು ತಮ್ಮ ಪೇಜ್‌ನಿಂದ ಬಹಿರಂಗವಾಗಿಯೇ ಕ್ಷಮೆ ಕೇಳಿ ಪತ್ರ ಬಿಡುಗಡೆ ಮಾಡಿದ್ದಾರೆ. ’ಇಷ್ಟು ದಿನ ಬೇರೆ ನಟರನ್ನು ಟ್ರೋಲ್ ಮಾಡಿದಕ್ಕೆ, ಕೆಟ್ಟದಾಗಿ ನಡೆದುಕೊಂಡಿದ್ದಕ್ಕೆ ಕ್ಷಮಿಸಿ, ಫ್ಯಾನ್ಸ್ ವಾರ್ ಬಿಟ್ಟು ಬಿಡೋಣ. ನಾವೆಲ್ಲಾ ಒಂದಾದರೇ ನಮ್ಮ ಚಿತ್ರರಂಗ ಬೆಳೆಯುತ್ತದೆ. ನಮ್ಮ ಒಂದು ದೊಡ್ಡ ಪಿಲ್ಲರ್‌ ಅನ್ನೇ ನಾವು ಕಳೆದುಕೊಂಡಿದ್ದೇವೆ. ದರ್ಶನ್, ಪುನೀತ್‌, ಯಶ್ ಸರ್‌ ಫ್ಯಾನ್ಸ್‌ ನನ್ನನ್ನು ಕ್ಷಮಿಸಿ” ಎಂದು ಮನವಿ ಮಾಡಿದ್ದಾರೆ.

ಪುನೀತ್ ರಾಜ್‌ಕುಮಾರ್‌ ಅಭಿಮಾನಿಗಳು ಕೂಡ ಇತರೆ ನಟರನ್ನು ಟ್ರೋಲ್ ಮಾಡಿದಕ್ಕಾಗಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಕಿಚ್ಚ ಸುದೀಪ್, ನಟ ಯಶ್ ಅವರನ್ನು ಟ್ರೋಲ್ ಮಾಡಿದ್ದಕ್ಕೆ ಕ್ಷಮೆ ಕೇಳಿದ್ದಾರೆ.

ಇನ್ನು ದಾಸ ದರ್ಶನ್ ಅಭಿಮಾನಿಗಳು ಕೂಡ ಎಲ್ಲರ ಕ್ಷಮೆ ಕೇಳಿ, ಮುಂದೆ ಫ್ಯಾನ್ಸ್‌ ವಾರ್‌ಗೆ ಬರುವುದಿಲ್ಲ ಎಂದಿದ್ದಾರೆ. ’ಫ್ಯಾನ್ ವಾರ್ ನಿಲ್ಲಿಸಿ ಸಾಕು. ಮತ್ತೆ ನಾನು ಫ್ಯಾನ್ಸ್ ವಾರ್‌ಗೆ ಎಂಟ್ರಿ ಆಗಲ್ಲ’ ಎಂದು ದರ್ಶನ್, ಸುದೀಪ್, ಯಶ್ ಅವರನ್ನು ಟ್ಯಾಗ್ ಮಾಡಿ ಎಲ್ಲಾ ನಟರ ಮುಂಬರುವ ಚಿತ್ರಗಳನ್ನು ಹ್ಯಾಶ್‌ಟ್ಯಾಗ್ ಹಾಕಲಾಗಿದೆ.

ನಟರ ಅಭಿಮಾನಿಗಳ ನಿರ್ಣಯಕ್ಕೆ ಹಲವು ಮಂದಿ ಸಂತಸ ವ್ಯಕ್ತಪಡಿಸಿದ್ದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡ ಟ್ವೀಟ್ ಮಾಡಿ, ’ನನ್ನ ವೈಯಕ್ತಿಕ ಕೋರಿಕೆ ಇಷ್ಟೇ
ಇನ್ನಾದ್ರೂ ಒಂದಷ್ಟು ಅಭಿಮಾನಿಗಳು ಫ್ಯಾನ್ಸ್ ವಾರ್ ಅನ್ನೋದನ್ನ ಬಿಟ್ಟು ಒಂದಾಗಿ ಪ್ರತಿಯೊಬ್ಬ ನಟರು ನಮ್ಮ ಕನ್ನಡಿಗರು, ನಮ್ಮವ್ರು ಅನ್ನೋ ಭಾವನೆಯೊಂದಿಗೆ ಪ್ರೀತಿಸಿ, ಗೌರವಿಸಿ, ಅಭಿಮಾನಿಸಿ ಅನ್ನೋದಷ್ಟೇ ನನ್ನ ಕೋರಿಕೆ. ಅಪ್ಪು ಸಾರ್ ನಮ್ಮೆಲ್ಲರನ್ನು ಬೆಸೆದು ಹೋದರೇನು ಅನ್ನಿಸುತ್ತಿದೆ. ಕನ್ನಡಕ್ಕಾಗಿ ಒಂದಾಗೋಣ” ಎಂದಿದ್ದಾರೆ.

ಇನ್ನು ನವೆಂಬರ್‌ 2 ರಂದು ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳಿಂದ ಸಂಜೆ 6 ಗಂಟೆಗೆ ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #UnitedKFI, #StopFanWars, #unitedsandalwood ಹ್ಯಾಶ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಲಾಗುತ್ತಿದೆ.

ಒಟ್ಟಾರೆ, ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳು ಫ್ಯಾನ್ಸ್ ವಾರ್‌ ಅನ್ನು ಬಿಟ್ಟು ಕನ್ನಡ ಚಿತ್ರರಂಗದ ಬೆಳವಣಿಗೆಗೆ ಒಂದಾಗೋಣ ಎನ್ನುತ್ತಿದ್ದಾರೆ. ನಟರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಅಭಿಮಾನಿಗಳ ನಡುವೆ ಈ ವಾರ್‌ ಮುಂದುವರೆಯುತ್ತಲೇ ಇತ್ತು. ಆದರೆ, ಪುನೀತ್ ರಾಜ್‌ಕುಮಾರ್‌ ಅವರ ನಿಧನ ಎಲ್ಲರ ಮನವನ್ನು ಛಿದ್ರಗೊಳಿಸಿದೆ. ಅವರ ಅಂತಿಮ ದರ್ಶನದಲ್ಲಿ ಯಶ್ ಮತ್ತು ಕಿಚ್ಚ ಸುದೀಪ್, ದರ್ಶನ್ ಅವರ ಕಣ್ಣ ಹನಿಗಳು ಅಭಿಮಾನಿಗಳ ಮನಸ್ಸು ಕದಡಿದ್ದು, ಈ ಫ್ಯಾನ್ಸ್ ವಾರ್‌ಗೆ ಅಂತ್ಯಹಾಡಲು ಕಾರಣವಾಗಿದೆ.


ಇದನ್ನೂ ಓದಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋದವು ಸಾಲು ಸಾಲು ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...