Homeಕರ್ನಾಟಕಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ನಟರ ಅಭಿಮಾನಿಗಳು ಪರಸ್ಪರ ಕ್ಷಮೆಯಾಚಿಸಿರುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

- Advertisement -
- Advertisement -

ಕಳೆದ ಶುಕ್ರವಾರ (ಅ.29) ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ನಮ್ಮನ್ನಗಲಿದ್ದಾರೆ. ಭಾನುವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಕುಟುಂಬ ವರ್ಗ, ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿರುವ ಅಪ್ಪು ನಿಧನಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ.

ಅಪ್ಪು ನಿಧನ ದುಃಖದ ಜೊತೆಗೆ ಹಲವು ಪಾಠಗಳನ್ನು ಕಲಿಸುತ್ತಿದೆ. ಕನ್ನಡ ಸಿನಿರಂಗದಲ್ಲಿ ಅತಿ ಹೆಚ್ಚು ಸುದ್ದಿಯಾಗುವ ಫ್ಯಾನ್ಸ್ ವಾರ್‌ಗೆ ಕಡಿವಾಣ ಬೀಳುವ ಸಮಯವಾಗಿದೆ. ನಟನ ಸಾವು ಎಲ್ಲರಲ್ಲೂ ಬದಲಾವಣೆ ತರುತ್ತಿದೆ ಎಂದರೆ ತಪ್ಪಾಗಲಾರದು.

ನಟ ಯಶ್, ದರ್ಶನ್, ಸುದೀಪ್, ಶಿವರಾಜ್‌ಕುಮಾರ್‌, ಧ್ರುವ ಸರ್ಜಾ ಫ್ಯಾನ್ಸ್‌ಗಳ ನಡುವೆ ಪೈಪೋಟೆ ನಡೆಯುತ್ತಲೆ ಇರುತ್ತದೆ. ಒಂದು ಹಾಡಿನಲ್ಲಿ ಬರುವ ಪದ, ಸಿನಿಮಾದ ಒಂದು ಡೈಲಾಗ್‌, ಚಿತ್ರಮಂದಿರದ ಮುಂದೆ ಹಾಕುವ ಕಟೌಟ್‌…ಹೀಗೆ ಚಿಕ್ಕ ಚಿಕ್ಕ ವಿಷಯಗಳಿಗೂ ಗಲಾಟೆಗಳು ನಡೆಯುತ್ತಲೇ ಇವೆ. ಇವುಗಳಿಗೆ ಕಡಿವಾಣ ಬೀಳುವ ಸಮಯ ಇದು ಎಂಬುದರ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾರಂಗವನ್ನು ಉಳಿಸಲು ಒಟ್ಟಿಗೆ ಸಾಗೋಣ, ಮನುಷ್ಯನನ್ನೆ ಕಳೆದುಕೊಂಡ ಮೇಲೆ ಈ ಜಗಳ ಯಾಕೆ, ಚಿತ್ರರಂಗದ ಅಭಿವೃದ್ಧಿಗೆ ಒಟ್ಟಾಗಿ, ನೆಗೆಟಿವಿಟಿ ಬಿಟ್ಟು ಪಾಸಿಟಿವಿಟಿ ಹಂಚೋಣ ಎಂಬ ಪೋಸ್ಟ್‌ಗಳು ಕಾಣಿಸಿಕೊಂಡಿವೆ.

ನಟ ಸುದೀಪ್ ಅಭಿಮಾನಿಗಳು ತಮ್ಮ ಪೇಜ್‌ನಿಂದ ಬಹಿರಂಗವಾಗಿಯೇ ಕ್ಷಮೆ ಕೇಳಿ ಪತ್ರ ಬಿಡುಗಡೆ ಮಾಡಿದ್ದಾರೆ. ’ಇಷ್ಟು ದಿನ ಬೇರೆ ನಟರನ್ನು ಟ್ರೋಲ್ ಮಾಡಿದಕ್ಕೆ, ಕೆಟ್ಟದಾಗಿ ನಡೆದುಕೊಂಡಿದ್ದಕ್ಕೆ ಕ್ಷಮಿಸಿ, ಫ್ಯಾನ್ಸ್ ವಾರ್ ಬಿಟ್ಟು ಬಿಡೋಣ. ನಾವೆಲ್ಲಾ ಒಂದಾದರೇ ನಮ್ಮ ಚಿತ್ರರಂಗ ಬೆಳೆಯುತ್ತದೆ. ನಮ್ಮ ಒಂದು ದೊಡ್ಡ ಪಿಲ್ಲರ್‌ ಅನ್ನೇ ನಾವು ಕಳೆದುಕೊಂಡಿದ್ದೇವೆ. ದರ್ಶನ್, ಪುನೀತ್‌, ಯಶ್ ಸರ್‌ ಫ್ಯಾನ್ಸ್‌ ನನ್ನನ್ನು ಕ್ಷಮಿಸಿ” ಎಂದು ಮನವಿ ಮಾಡಿದ್ದಾರೆ.

ಪುನೀತ್ ರಾಜ್‌ಕುಮಾರ್‌ ಅಭಿಮಾನಿಗಳು ಕೂಡ ಇತರೆ ನಟರನ್ನು ಟ್ರೋಲ್ ಮಾಡಿದಕ್ಕಾಗಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಕಿಚ್ಚ ಸುದೀಪ್, ನಟ ಯಶ್ ಅವರನ್ನು ಟ್ರೋಲ್ ಮಾಡಿದ್ದಕ್ಕೆ ಕ್ಷಮೆ ಕೇಳಿದ್ದಾರೆ.

ಇನ್ನು ದಾಸ ದರ್ಶನ್ ಅಭಿಮಾನಿಗಳು ಕೂಡ ಎಲ್ಲರ ಕ್ಷಮೆ ಕೇಳಿ, ಮುಂದೆ ಫ್ಯಾನ್ಸ್‌ ವಾರ್‌ಗೆ ಬರುವುದಿಲ್ಲ ಎಂದಿದ್ದಾರೆ. ’ಫ್ಯಾನ್ ವಾರ್ ನಿಲ್ಲಿಸಿ ಸಾಕು. ಮತ್ತೆ ನಾನು ಫ್ಯಾನ್ಸ್ ವಾರ್‌ಗೆ ಎಂಟ್ರಿ ಆಗಲ್ಲ’ ಎಂದು ದರ್ಶನ್, ಸುದೀಪ್, ಯಶ್ ಅವರನ್ನು ಟ್ಯಾಗ್ ಮಾಡಿ ಎಲ್ಲಾ ನಟರ ಮುಂಬರುವ ಚಿತ್ರಗಳನ್ನು ಹ್ಯಾಶ್‌ಟ್ಯಾಗ್ ಹಾಕಲಾಗಿದೆ.

ನಟರ ಅಭಿಮಾನಿಗಳ ನಿರ್ಣಯಕ್ಕೆ ಹಲವು ಮಂದಿ ಸಂತಸ ವ್ಯಕ್ತಪಡಿಸಿದ್ದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡ ಟ್ವೀಟ್ ಮಾಡಿ, ’ನನ್ನ ವೈಯಕ್ತಿಕ ಕೋರಿಕೆ ಇಷ್ಟೇ
ಇನ್ನಾದ್ರೂ ಒಂದಷ್ಟು ಅಭಿಮಾನಿಗಳು ಫ್ಯಾನ್ಸ್ ವಾರ್ ಅನ್ನೋದನ್ನ ಬಿಟ್ಟು ಒಂದಾಗಿ ಪ್ರತಿಯೊಬ್ಬ ನಟರು ನಮ್ಮ ಕನ್ನಡಿಗರು, ನಮ್ಮವ್ರು ಅನ್ನೋ ಭಾವನೆಯೊಂದಿಗೆ ಪ್ರೀತಿಸಿ, ಗೌರವಿಸಿ, ಅಭಿಮಾನಿಸಿ ಅನ್ನೋದಷ್ಟೇ ನನ್ನ ಕೋರಿಕೆ. ಅಪ್ಪು ಸಾರ್ ನಮ್ಮೆಲ್ಲರನ್ನು ಬೆಸೆದು ಹೋದರೇನು ಅನ್ನಿಸುತ್ತಿದೆ. ಕನ್ನಡಕ್ಕಾಗಿ ಒಂದಾಗೋಣ” ಎಂದಿದ್ದಾರೆ.

ಇನ್ನು ನವೆಂಬರ್‌ 2 ರಂದು ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳಿಂದ ಸಂಜೆ 6 ಗಂಟೆಗೆ ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #UnitedKFI, #StopFanWars, #unitedsandalwood ಹ್ಯಾಶ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಲಾಗುತ್ತಿದೆ.

ಒಟ್ಟಾರೆ, ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳು ಫ್ಯಾನ್ಸ್ ವಾರ್‌ ಅನ್ನು ಬಿಟ್ಟು ಕನ್ನಡ ಚಿತ್ರರಂಗದ ಬೆಳವಣಿಗೆಗೆ ಒಂದಾಗೋಣ ಎನ್ನುತ್ತಿದ್ದಾರೆ. ನಟರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಅಭಿಮಾನಿಗಳ ನಡುವೆ ಈ ವಾರ್‌ ಮುಂದುವರೆಯುತ್ತಲೇ ಇತ್ತು. ಆದರೆ, ಪುನೀತ್ ರಾಜ್‌ಕುಮಾರ್‌ ಅವರ ನಿಧನ ಎಲ್ಲರ ಮನವನ್ನು ಛಿದ್ರಗೊಳಿಸಿದೆ. ಅವರ ಅಂತಿಮ ದರ್ಶನದಲ್ಲಿ ಯಶ್ ಮತ್ತು ಕಿಚ್ಚ ಸುದೀಪ್, ದರ್ಶನ್ ಅವರ ಕಣ್ಣ ಹನಿಗಳು ಅಭಿಮಾನಿಗಳ ಮನಸ್ಸು ಕದಡಿದ್ದು, ಈ ಫ್ಯಾನ್ಸ್ ವಾರ್‌ಗೆ ಅಂತ್ಯಹಾಡಲು ಕಾರಣವಾಗಿದೆ.


ಇದನ್ನೂ ಓದಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋದವು ಸಾಲು ಸಾಲು ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...