Homeಕರ್ನಾಟಕಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ಅಪ್ಪು ಅಗಲಿಕೆ: ಎಲ್ಲಾ ನಟರ ಅಭಿಮಾನಿಗಳಿಂದ ’ಸ್ಟಾಪ್ ಫ್ಯಾನ್ಸ್ ವಾರ್’ ಅಭಿಯಾನ

ನಟರ ಅಭಿಮಾನಿಗಳು ಪರಸ್ಪರ ಕ್ಷಮೆಯಾಚಿಸಿರುವ ಪೋಸ್ಟ್‌ಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿವೆ.

- Advertisement -
- Advertisement -

ಕಳೆದ ಶುಕ್ರವಾರ (ಅ.29) ನಾಡಿನ ಪ್ರತಿಭಾನ್ವಿತ ನಟ ಪುನೀತ್ ರಾಜ್‌ಕುಮಾರ್‌ ನಮ್ಮನ್ನಗಲಿದ್ದಾರೆ. ಭಾನುವಾರ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಅಂತ್ಯಕ್ರಿಯೆ ನೆರವೇರಿದೆ. ಕುಟುಂಬ ವರ್ಗ, ಅಪಾರ ಅಭಿಮಾನಿಗಳನ್ನು ಬಿಟ್ಟು ಅಗಲಿರುವ ಅಪ್ಪು ನಿಧನಕ್ಕೆ ದೇಶಾದ್ಯಂತ ಸಂತಾಪ ವ್ಯಕ್ತವಾಗಿದೆ.

ಅಪ್ಪು ನಿಧನ ದುಃಖದ ಜೊತೆಗೆ ಹಲವು ಪಾಠಗಳನ್ನು ಕಲಿಸುತ್ತಿದೆ. ಕನ್ನಡ ಸಿನಿರಂಗದಲ್ಲಿ ಅತಿ ಹೆಚ್ಚು ಸುದ್ದಿಯಾಗುವ ಫ್ಯಾನ್ಸ್ ವಾರ್‌ಗೆ ಕಡಿವಾಣ ಬೀಳುವ ಸಮಯವಾಗಿದೆ. ನಟನ ಸಾವು ಎಲ್ಲರಲ್ಲೂ ಬದಲಾವಣೆ ತರುತ್ತಿದೆ ಎಂದರೆ ತಪ್ಪಾಗಲಾರದು.

ನಟ ಯಶ್, ದರ್ಶನ್, ಸುದೀಪ್, ಶಿವರಾಜ್‌ಕುಮಾರ್‌, ಧ್ರುವ ಸರ್ಜಾ ಫ್ಯಾನ್ಸ್‌ಗಳ ನಡುವೆ ಪೈಪೋಟೆ ನಡೆಯುತ್ತಲೆ ಇರುತ್ತದೆ. ಒಂದು ಹಾಡಿನಲ್ಲಿ ಬರುವ ಪದ, ಸಿನಿಮಾದ ಒಂದು ಡೈಲಾಗ್‌, ಚಿತ್ರಮಂದಿರದ ಮುಂದೆ ಹಾಕುವ ಕಟೌಟ್‌…ಹೀಗೆ ಚಿಕ್ಕ ಚಿಕ್ಕ ವಿಷಯಗಳಿಗೂ ಗಲಾಟೆಗಳು ನಡೆಯುತ್ತಲೇ ಇವೆ. ಇವುಗಳಿಗೆ ಕಡಿವಾಣ ಬೀಳುವ ಸಮಯ ಇದು ಎಂಬುದರ ಮುನ್ಸೂಚನೆ ಸಿಕ್ಕಿದೆ.

ಇದನ್ನೂ ಓದಿ: ಫ್ಯಾಕ್ಟ್‌ಚೆಕ್: ಪುನೀತ್‌ರವರ ‘ಬೊಂಬೆ ಹೇಳುತೈತೆ’ ಹಾಡನ್ನು ಪಾಕ್ ಅಭಿಮಾನಿ ಹಾಡಿದ್ದು 2018 ರಲ್ಲಿ!

ಸಾಮಾಜಿಕ ಜಾಲತಾಣಗಳಲ್ಲಿ ಕನ್ನಡ ಸಿನಿಮಾರಂಗವನ್ನು ಉಳಿಸಲು ಒಟ್ಟಿಗೆ ಸಾಗೋಣ, ಮನುಷ್ಯನನ್ನೆ ಕಳೆದುಕೊಂಡ ಮೇಲೆ ಈ ಜಗಳ ಯಾಕೆ, ಚಿತ್ರರಂಗದ ಅಭಿವೃದ್ಧಿಗೆ ಒಟ್ಟಾಗಿ, ನೆಗೆಟಿವಿಟಿ ಬಿಟ್ಟು ಪಾಸಿಟಿವಿಟಿ ಹಂಚೋಣ ಎಂಬ ಪೋಸ್ಟ್‌ಗಳು ಕಾಣಿಸಿಕೊಂಡಿವೆ.

ನಟ ಸುದೀಪ್ ಅಭಿಮಾನಿಗಳು ತಮ್ಮ ಪೇಜ್‌ನಿಂದ ಬಹಿರಂಗವಾಗಿಯೇ ಕ್ಷಮೆ ಕೇಳಿ ಪತ್ರ ಬಿಡುಗಡೆ ಮಾಡಿದ್ದಾರೆ. ’ಇಷ್ಟು ದಿನ ಬೇರೆ ನಟರನ್ನು ಟ್ರೋಲ್ ಮಾಡಿದಕ್ಕೆ, ಕೆಟ್ಟದಾಗಿ ನಡೆದುಕೊಂಡಿದ್ದಕ್ಕೆ ಕ್ಷಮಿಸಿ, ಫ್ಯಾನ್ಸ್ ವಾರ್ ಬಿಟ್ಟು ಬಿಡೋಣ. ನಾವೆಲ್ಲಾ ಒಂದಾದರೇ ನಮ್ಮ ಚಿತ್ರರಂಗ ಬೆಳೆಯುತ್ತದೆ. ನಮ್ಮ ಒಂದು ದೊಡ್ಡ ಪಿಲ್ಲರ್‌ ಅನ್ನೇ ನಾವು ಕಳೆದುಕೊಂಡಿದ್ದೇವೆ. ದರ್ಶನ್, ಪುನೀತ್‌, ಯಶ್ ಸರ್‌ ಫ್ಯಾನ್ಸ್‌ ನನ್ನನ್ನು ಕ್ಷಮಿಸಿ” ಎಂದು ಮನವಿ ಮಾಡಿದ್ದಾರೆ.

ಪುನೀತ್ ರಾಜ್‌ಕುಮಾರ್‌ ಅಭಿಮಾನಿಗಳು ಕೂಡ ಇತರೆ ನಟರನ್ನು ಟ್ರೋಲ್ ಮಾಡಿದಕ್ಕಾಗಿ ಕ್ಷಮೆ ಕೇಳಿದ್ದಾರೆ.

ಇದನ್ನೂ ಓದಿ: ಅಪ್ಪು ಒಡನಾಟದ ನೆನಪುಗಳನ್ನು ಹಂಚಿಕೊಂಡ ಮಿಲನ ಸಿನಿಮಾ ನಟಿ ಪಾರ್ವತಿ ತಿರುವೊತು

ಕಿಚ್ಚ ಸುದೀಪ್, ನಟ ಯಶ್ ಅವರನ್ನು ಟ್ರೋಲ್ ಮಾಡಿದ್ದಕ್ಕೆ ಕ್ಷಮೆ ಕೇಳಿದ್ದಾರೆ.

ಇನ್ನು ದಾಸ ದರ್ಶನ್ ಅಭಿಮಾನಿಗಳು ಕೂಡ ಎಲ್ಲರ ಕ್ಷಮೆ ಕೇಳಿ, ಮುಂದೆ ಫ್ಯಾನ್ಸ್‌ ವಾರ್‌ಗೆ ಬರುವುದಿಲ್ಲ ಎಂದಿದ್ದಾರೆ. ’ಫ್ಯಾನ್ ವಾರ್ ನಿಲ್ಲಿಸಿ ಸಾಕು. ಮತ್ತೆ ನಾನು ಫ್ಯಾನ್ಸ್ ವಾರ್‌ಗೆ ಎಂಟ್ರಿ ಆಗಲ್ಲ’ ಎಂದು ದರ್ಶನ್, ಸುದೀಪ್, ಯಶ್ ಅವರನ್ನು ಟ್ಯಾಗ್ ಮಾಡಿ ಎಲ್ಲಾ ನಟರ ಮುಂಬರುವ ಚಿತ್ರಗಳನ್ನು ಹ್ಯಾಶ್‌ಟ್ಯಾಗ್ ಹಾಕಲಾಗಿದೆ.

ನಟರ ಅಭಿಮಾನಿಗಳ ನಿರ್ಣಯಕ್ಕೆ ಹಲವು ಮಂದಿ ಸಂತಸ ವ್ಯಕ್ತಪಡಿಸಿದ್ದು ಒಳ್ಳೆಯ ಬೆಳವಣಿಗೆ ಎಂದಿದ್ದಾರೆ.

ಕನ್ನಡಪರ ಹೋರಾಟಗಾರ ರೂಪೇಶ್ ರಾಜಣ್ಣ ಕೂಡ ಟ್ವೀಟ್ ಮಾಡಿ, ’ನನ್ನ ವೈಯಕ್ತಿಕ ಕೋರಿಕೆ ಇಷ್ಟೇ
ಇನ್ನಾದ್ರೂ ಒಂದಷ್ಟು ಅಭಿಮಾನಿಗಳು ಫ್ಯಾನ್ಸ್ ವಾರ್ ಅನ್ನೋದನ್ನ ಬಿಟ್ಟು ಒಂದಾಗಿ ಪ್ರತಿಯೊಬ್ಬ ನಟರು ನಮ್ಮ ಕನ್ನಡಿಗರು, ನಮ್ಮವ್ರು ಅನ್ನೋ ಭಾವನೆಯೊಂದಿಗೆ ಪ್ರೀತಿಸಿ, ಗೌರವಿಸಿ, ಅಭಿಮಾನಿಸಿ ಅನ್ನೋದಷ್ಟೇ ನನ್ನ ಕೋರಿಕೆ. ಅಪ್ಪು ಸಾರ್ ನಮ್ಮೆಲ್ಲರನ್ನು ಬೆಸೆದು ಹೋದರೇನು ಅನ್ನಿಸುತ್ತಿದೆ. ಕನ್ನಡಕ್ಕಾಗಿ ಒಂದಾಗೋಣ” ಎಂದಿದ್ದಾರೆ.

ಇನ್ನು ನವೆಂಬರ್‌ 2 ರಂದು ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳಿಂದ ಸಂಜೆ 6 ಗಂಟೆಗೆ ಟ್ವಿಟರ್‌ ಅಭಿಯಾನ ನಡೆಸಲಾಗುತ್ತಿದೆ. #UnitedKFI, #StopFanWars, #unitedsandalwood ಹ್ಯಾಶ್‌ಟ್ಯಾಗ್‌ಗಳನ್ನು ಟ್ರೆಂಡ್ ಮಾಡಲಾಗುತ್ತಿದೆ.

ಒಟ್ಟಾರೆ, ಕನ್ನಡ ಚಿತ್ರ ನಟ, ನಟಿಯರ ಅಭಿಮಾನಿಗಳು ಫ್ಯಾನ್ಸ್ ವಾರ್‌ ಅನ್ನು ಬಿಟ್ಟು ಕನ್ನಡ ಚಿತ್ರರಂಗದ ಬೆಳವಣಿಗೆಗೆ ಒಂದಾಗೋಣ ಎನ್ನುತ್ತಿದ್ದಾರೆ. ನಟರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲದಿದ್ದರೂ ಅಭಿಮಾನಿಗಳ ನಡುವೆ ಈ ವಾರ್‌ ಮುಂದುವರೆಯುತ್ತಲೇ ಇತ್ತು. ಆದರೆ, ಪುನೀತ್ ರಾಜ್‌ಕುಮಾರ್‌ ಅವರ ನಿಧನ ಎಲ್ಲರ ಮನವನ್ನು ಛಿದ್ರಗೊಳಿಸಿದೆ. ಅವರ ಅಂತಿಮ ದರ್ಶನದಲ್ಲಿ ಯಶ್ ಮತ್ತು ಕಿಚ್ಚ ಸುದೀಪ್, ದರ್ಶನ್ ಅವರ ಕಣ್ಣ ಹನಿಗಳು ಅಭಿಮಾನಿಗಳ ಮನಸ್ಸು ಕದಡಿದ್ದು, ಈ ಫ್ಯಾನ್ಸ್ ವಾರ್‌ಗೆ ಅಂತ್ಯಹಾಡಲು ಕಾರಣವಾಗಿದೆ.


ಇದನ್ನೂ ಓದಿ: ಪುನೀತ್‌ ನಿಧನ: ಅರ್ಧಕ್ಕೆ ನಿಂತು ಹೋದವು ಸಾಲು ಸಾಲು ಸಿನಿಮಾಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...