Homeಮುಖಪುಟವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ಮಕ್ಕಳ ಲೈಂಗಿಕ ದುರ್ಬಳಕೆ ವಸ್ತುಗಳಿಗೆ (CSAM - child sexual abuse material) ಆನ್‌ಲೈನ್‌ನಲ್ಲಿ ಹೆಚ್ಚುತ್ತಿರುವ ಬೇಡಿಕೆ ನಮ್ಮ ಸಮಾಜದ ಕೊಳಕು ಮನಸ್ಥಿತಿಯ ವಾಸ್ತವದ ರೂಪವಾಗಿದೆ.

- Advertisement -
- Advertisement -

ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ಮುಗ್ಧತೆಯನ್ನು ಬಳಸಿಕೊಳ್ಳುವ ಉದ್ಯಮವು ದಿನೇ-ದಿನೇ ಅಭಿವೃದ್ಧಿ ಹೊಂದುತ್ತಿದ್ದು, ಕೇರಳದಲ್ಲಿ ಇತ್ತೀಚಿಗೆ ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳು ಮತ್ತು ಪೊಲೀಸರು ಮಾಡಿರುವ ಬಂಧನಗಳು ಅದನ್ನು ಸಾಬೀತುಪಡಿಸುತ್ತಿವೆ.

ಕಳೆದ ವಾರದ ಆರಂಭದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ತೆಗೆದ ಆರೋಪದಲ್ಲಿ 41 ಜನರನ್ನು ಬಂಧಿಸಲಾಯಿತು. ಕಳೆದ ಜೂನ್‌ನಲ್ಲಿ ಇದೇ ರೀತಿಯ ಕಾರ್ಯಾಚರಣೆಯಿಂದಾಗಿ 47 ಜನರನ್ನು ಬಂಧಿಸಲಾಗಿತ್ತು.

ಮಕ್ಕಳ ಲೈಂಗಿಕ ದುರ್ಬಳಕೆ ವಸ್ತುಗಳಿಗೆ (CSAM – child sexual abuse material) ಆನ್‌ಲೈನ್‌ನಲ್ಲಿ ಹೆಚ್ಚುತ್ತಿರುವ ಬೇಡಿಕೆ ನಮ್ಮ ಸಮಾಜದ ಕೊಳಕು ಮನಸ್ಥಿತಿಯ ವಾಸ್ತವದ ರೂಪವಾಗಿದೆ. ಇತ್ತೀಚಿನ ಅಧ್ಯಯನವೊಂದರ ಪ್ರಕಾರ ಈ ಮನಸ್ಥಿತಿ ನಿರ್ಮಾಣಕ್ಕೆ ಸಾಂಕ್ರಾಮಿಕ ರೋಗವನ್ನು ಒಳಗೊಂಡಿರುವಂತೆ ಲಾಕ್‌ಡೌನ್ ಹೇರಿರುವುದು ಕೂಡ ಕಾರಣವಾಗಿದೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಏಪ್ರಿಲ್ 2019 ರಿಂದ, ಕೇರಳ ಪೊಲೀಸರು ಸೈಬರ್‌ಸ್ಪೇಸ್‌ನಲ್ಲಿ ಅಡಗಿದ್ದ ಶಿಶುಕಾಮಿಗಳನ್ನು ಪತ್ತೆಹಚ್ಚಿ ಬಂಧಿಸಲು ಆಪರೇಷನ್ ಪಿ-ಹಂಟ್ ಶುರುಮಾಡಿದ್ದರು. ಈ ಆಪರೇಷನ್ ಪಿ-ಹಂಟ್‌ ಮೂಲಕ 124 ಜನರನ್ನು ಬಂಧಿಸಲಾಗಿದೆ.

ಆದರೆ ಮಕ್ಕಳ ಅಶ್ಲೀಲತೆಯ ವ್ಯಾಪಕ ಬಳಕೆಯಿಂದಾಗಿ ತನಿಖಾಧಿಕಾರಿಗಳು ಈ ದುಷ್ಕೃತ್ಯದ ಮೇಲ್ಮೈಯನ್ನು ಮಾತ್ರ ತಾಕಿದ್ದಾರೆ. ಬಂಧಿಸಲ್ಪಟ್ಟವರಲ್ಲಿ ಕೆಲವರು ಜಾಗತಿಕ ಮಕ್ಕಳ ಅಶ್ಲೀಲ ದಂಧೆಯ ಭಾಗವೆಂದು ಕಂಡುಬಂದಿದೆ. ಇವರು ಅಶ್ಲೀಲ ವಿಷಯಗಳನ್ನು ರಚಿಸುತ್ತಿದ್ದರು ಮತ್ತು ಅವುಗಳನ್ನು ಪೂರೈಸುತ್ತಿದ್ದರು.

ಮಕ್ಕಳ ಅಶ್ಲೀಲತೆಯನ್ನು ರೂಪಿಸುವುದನ್ನು ವ್ಯಾಖ್ಯಾನಿಸುವ CSAM ಅನ್ನು ಐಟಿ ಆಕ್ಟ್ 2000 ಮತ್ತು ಪೋಕ್ಸೊ ಆಕ್ಟ್ 2012 ಎರಡನ್ನೂ ಬಳಸಿಕೊಂಡು ವ್ಯವಹರಿಸಲು ಭಾರತ ಕಾನೂನು ಅವಕಾಶ ನೀಡಿದೆ. ಇನ್ನು ಸೈಬರ್‌ ಅಪರಾಧಿಗಳಿಗೆ ಅರ್ಹವಾದ ಶಿಕ್ಷೆ ದೊರೆಯುವುದು ಬಹುತೇಕ ಕಡಿಮೆಯಾಗಿದೆ. ಅವರು ಜಾಮೀನಿನ ಮೇಲೆ ಹೊರಬರುತ್ತಾರೆ. ಹಾಗಾಗಿ ತಮ್ಮ ಚಟುವಟಿಕೆಗಳನ್ನು ಮತ್ತೆ ಮುಂದುವರಿಸುವುದು ಹೆಚ್ಚಾಗಿದೆ.

ಇದನ್ನೂ ಓದಿ:ಅಪರಾಧದ ಮರುವ್ಯಾಖ್ಯಾನ; ಪ್ರಭುತ್ವ, ಪ್ರತಿರೋಧ ಮತ್ತು ಪ್ರಜಾಪ್ರಭುತ್ವ

ಇಂತಹ ವಿಕೃತ ಕೃತ್ಯ ಎಸಗುವ ಜನರ ಬಗ್ಗೆ ಹೆಚ್ಚು ಎಚ್ಚರದಿಂದಿರುವುದು ಮಾತ್ರವಲ್ಲ ಮಕ್ಕಳಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಅಪರಾಧಗಳು ಹೆಚ್ಚು ಹೊರಬೀಳದ ಕಾರಣ ಸಂತ್ರಸ್ತರು ಭವಿಷ್ಯದಲ್ಲಿ ದೊಡ್ಡ ಅಪಾಯಗಳಿಗೆ ಒಳಗಾಗುವ ಸಂಭವವಿರುತ್ತದೆ.

ಅಪರಾಧಿಗಳನ್ನು ಅಪರಾಧಗಳಿಂದ ದೂರವಿರಿಸಲು ಕೇವಲ ಕಠಿಣ ಕಾನೂನುಗಳು ಮಾತ್ರ ಸಾಕಾಗುವುದಿಲ್ಲ. ಇಂತಹ ಘಟನೆಗಳನ್ನು ಪತ್ತೆಹಚ್ಚುವುದು, ಅದರ ದೂರು ದಾಖಲಿಸುವುದು ಮುಂತಾದವುಗಳ ಕುರಿತು  ಆಕ್ರಮಣಕಾರಿ ಜಾಗೃತಿ ಅಭಿಯಾನಗಳನ್ನು ಕೈಗೊಳ್ಳಬೇಕು ಎನ್ನುತ್ತಾರೆ ತಜ್ಙರು.


ಇದನ್ನೂ ಓದಿ:ಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ; ಎರಡು ತಿಂಗಳ ನಂತರ FIR!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...