Homeಮುಖಪುಟವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ಮಕ್ಕಳ ಲೈಂಗಿಕ ದುರ್ಬಳಕೆ ವಸ್ತುಗಳಿಗೆ (CSAM - child sexual abuse material) ಆನ್‌ಲೈನ್‌ನಲ್ಲಿ ಹೆಚ್ಚುತ್ತಿರುವ ಬೇಡಿಕೆ ನಮ್ಮ ಸಮಾಜದ ಕೊಳಕು ಮನಸ್ಥಿತಿಯ ವಾಸ್ತವದ ರೂಪವಾಗಿದೆ.

- Advertisement -
- Advertisement -

ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ಮುಗ್ಧತೆಯನ್ನು ಬಳಸಿಕೊಳ್ಳುವ ಉದ್ಯಮವು ದಿನೇ-ದಿನೇ ಅಭಿವೃದ್ಧಿ ಹೊಂದುತ್ತಿದ್ದು, ಕೇರಳದಲ್ಲಿ ಇತ್ತೀಚಿಗೆ ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳು ಮತ್ತು ಪೊಲೀಸರು ಮಾಡಿರುವ ಬಂಧನಗಳು ಅದನ್ನು ಸಾಬೀತುಪಡಿಸುತ್ತಿವೆ.

ಕಳೆದ ವಾರದ ಆರಂಭದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ತೆಗೆದ ಆರೋಪದಲ್ಲಿ 41 ಜನರನ್ನು ಬಂಧಿಸಲಾಯಿತು. ಕಳೆದ ಜೂನ್‌ನಲ್ಲಿ ಇದೇ ರೀತಿಯ ಕಾರ್ಯಾಚರಣೆಯಿಂದಾಗಿ 47 ಜನರನ್ನು ಬಂಧಿಸಲಾಗಿತ್ತು.

ಮಕ್ಕಳ ಲೈಂಗಿಕ ದುರ್ಬಳಕೆ ವಸ್ತುಗಳಿಗೆ (CSAM – child sexual abuse material) ಆನ್‌ಲೈನ್‌ನಲ್ಲಿ ಹೆಚ್ಚುತ್ತಿರುವ ಬೇಡಿಕೆ ನಮ್ಮ ಸಮಾಜದ ಕೊಳಕು ಮನಸ್ಥಿತಿಯ ವಾಸ್ತವದ ರೂಪವಾಗಿದೆ. ಇತ್ತೀಚಿನ ಅಧ್ಯಯನವೊಂದರ ಪ್ರಕಾರ ಈ ಮನಸ್ಥಿತಿ ನಿರ್ಮಾಣಕ್ಕೆ ಸಾಂಕ್ರಾಮಿಕ ರೋಗವನ್ನು ಒಳಗೊಂಡಿರುವಂತೆ ಲಾಕ್‌ಡೌನ್ ಹೇರಿರುವುದು ಕೂಡ ಕಾರಣವಾಗಿದೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಏಪ್ರಿಲ್ 2019 ರಿಂದ, ಕೇರಳ ಪೊಲೀಸರು ಸೈಬರ್‌ಸ್ಪೇಸ್‌ನಲ್ಲಿ ಅಡಗಿದ್ದ ಶಿಶುಕಾಮಿಗಳನ್ನು ಪತ್ತೆಹಚ್ಚಿ ಬಂಧಿಸಲು ಆಪರೇಷನ್ ಪಿ-ಹಂಟ್ ಶುರುಮಾಡಿದ್ದರು. ಈ ಆಪರೇಷನ್ ಪಿ-ಹಂಟ್‌ ಮೂಲಕ 124 ಜನರನ್ನು ಬಂಧಿಸಲಾಗಿದೆ.

ಆದರೆ ಮಕ್ಕಳ ಅಶ್ಲೀಲತೆಯ ವ್ಯಾಪಕ ಬಳಕೆಯಿಂದಾಗಿ ತನಿಖಾಧಿಕಾರಿಗಳು ಈ ದುಷ್ಕೃತ್ಯದ ಮೇಲ್ಮೈಯನ್ನು ಮಾತ್ರ ತಾಕಿದ್ದಾರೆ. ಬಂಧಿಸಲ್ಪಟ್ಟವರಲ್ಲಿ ಕೆಲವರು ಜಾಗತಿಕ ಮಕ್ಕಳ ಅಶ್ಲೀಲ ದಂಧೆಯ ಭಾಗವೆಂದು ಕಂಡುಬಂದಿದೆ. ಇವರು ಅಶ್ಲೀಲ ವಿಷಯಗಳನ್ನು ರಚಿಸುತ್ತಿದ್ದರು ಮತ್ತು ಅವುಗಳನ್ನು ಪೂರೈಸುತ್ತಿದ್ದರು.

ಮಕ್ಕಳ ಅಶ್ಲೀಲತೆಯನ್ನು ರೂಪಿಸುವುದನ್ನು ವ್ಯಾಖ್ಯಾನಿಸುವ CSAM ಅನ್ನು ಐಟಿ ಆಕ್ಟ್ 2000 ಮತ್ತು ಪೋಕ್ಸೊ ಆಕ್ಟ್ 2012 ಎರಡನ್ನೂ ಬಳಸಿಕೊಂಡು ವ್ಯವಹರಿಸಲು ಭಾರತ ಕಾನೂನು ಅವಕಾಶ ನೀಡಿದೆ. ಇನ್ನು ಸೈಬರ್‌ ಅಪರಾಧಿಗಳಿಗೆ ಅರ್ಹವಾದ ಶಿಕ್ಷೆ ದೊರೆಯುವುದು ಬಹುತೇಕ ಕಡಿಮೆಯಾಗಿದೆ. ಅವರು ಜಾಮೀನಿನ ಮೇಲೆ ಹೊರಬರುತ್ತಾರೆ. ಹಾಗಾಗಿ ತಮ್ಮ ಚಟುವಟಿಕೆಗಳನ್ನು ಮತ್ತೆ ಮುಂದುವರಿಸುವುದು ಹೆಚ್ಚಾಗಿದೆ.

ಇದನ್ನೂ ಓದಿ:ಅಪರಾಧದ ಮರುವ್ಯಾಖ್ಯಾನ; ಪ್ರಭುತ್ವ, ಪ್ರತಿರೋಧ ಮತ್ತು ಪ್ರಜಾಪ್ರಭುತ್ವ

ಇಂತಹ ವಿಕೃತ ಕೃತ್ಯ ಎಸಗುವ ಜನರ ಬಗ್ಗೆ ಹೆಚ್ಚು ಎಚ್ಚರದಿಂದಿರುವುದು ಮಾತ್ರವಲ್ಲ ಮಕ್ಕಳಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಅಪರಾಧಗಳು ಹೆಚ್ಚು ಹೊರಬೀಳದ ಕಾರಣ ಸಂತ್ರಸ್ತರು ಭವಿಷ್ಯದಲ್ಲಿ ದೊಡ್ಡ ಅಪಾಯಗಳಿಗೆ ಒಳಗಾಗುವ ಸಂಭವವಿರುತ್ತದೆ.

ಅಪರಾಧಿಗಳನ್ನು ಅಪರಾಧಗಳಿಂದ ದೂರವಿರಿಸಲು ಕೇವಲ ಕಠಿಣ ಕಾನೂನುಗಳು ಮಾತ್ರ ಸಾಕಾಗುವುದಿಲ್ಲ. ಇಂತಹ ಘಟನೆಗಳನ್ನು ಪತ್ತೆಹಚ್ಚುವುದು, ಅದರ ದೂರು ದಾಖಲಿಸುವುದು ಮುಂತಾದವುಗಳ ಕುರಿತು  ಆಕ್ರಮಣಕಾರಿ ಜಾಗೃತಿ ಅಭಿಯಾನಗಳನ್ನು ಕೈಗೊಳ್ಳಬೇಕು ಎನ್ನುತ್ತಾರೆ ತಜ್ಙರು.


ಇದನ್ನೂ ಓದಿ:ಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ; ಎರಡು ತಿಂಗಳ ನಂತರ FIR!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...