Homeಮುಖಪುಟವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ಮಕ್ಕಳ ಲೈಂಗಿಕ ದುರ್ಬಳಕೆ ವಸ್ತುಗಳಿಗೆ (CSAM - child sexual abuse material) ಆನ್‌ಲೈನ್‌ನಲ್ಲಿ ಹೆಚ್ಚುತ್ತಿರುವ ಬೇಡಿಕೆ ನಮ್ಮ ಸಮಾಜದ ಕೊಳಕು ಮನಸ್ಥಿತಿಯ ವಾಸ್ತವದ ರೂಪವಾಗಿದೆ.

- Advertisement -
- Advertisement -

ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ಮುಗ್ಧತೆಯನ್ನು ಬಳಸಿಕೊಳ್ಳುವ ಉದ್ಯಮವು ದಿನೇ-ದಿನೇ ಅಭಿವೃದ್ಧಿ ಹೊಂದುತ್ತಿದ್ದು, ಕೇರಳದಲ್ಲಿ ಇತ್ತೀಚಿಗೆ ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳು ಮತ್ತು ಪೊಲೀಸರು ಮಾಡಿರುವ ಬಂಧನಗಳು ಅದನ್ನು ಸಾಬೀತುಪಡಿಸುತ್ತಿವೆ.

ಕಳೆದ ವಾರದ ಆರಂಭದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ತೆಗೆದ ಆರೋಪದಲ್ಲಿ 41 ಜನರನ್ನು ಬಂಧಿಸಲಾಯಿತು. ಕಳೆದ ಜೂನ್‌ನಲ್ಲಿ ಇದೇ ರೀತಿಯ ಕಾರ್ಯಾಚರಣೆಯಿಂದಾಗಿ 47 ಜನರನ್ನು ಬಂಧಿಸಲಾಗಿತ್ತು.

ಮಕ್ಕಳ ಲೈಂಗಿಕ ದುರ್ಬಳಕೆ ವಸ್ತುಗಳಿಗೆ (CSAM – child sexual abuse material) ಆನ್‌ಲೈನ್‌ನಲ್ಲಿ ಹೆಚ್ಚುತ್ತಿರುವ ಬೇಡಿಕೆ ನಮ್ಮ ಸಮಾಜದ ಕೊಳಕು ಮನಸ್ಥಿತಿಯ ವಾಸ್ತವದ ರೂಪವಾಗಿದೆ. ಇತ್ತೀಚಿನ ಅಧ್ಯಯನವೊಂದರ ಪ್ರಕಾರ ಈ ಮನಸ್ಥಿತಿ ನಿರ್ಮಾಣಕ್ಕೆ ಸಾಂಕ್ರಾಮಿಕ ರೋಗವನ್ನು ಒಳಗೊಂಡಿರುವಂತೆ ಲಾಕ್‌ಡೌನ್ ಹೇರಿರುವುದು ಕೂಡ ಕಾರಣವಾಗಿದೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಏಪ್ರಿಲ್ 2019 ರಿಂದ, ಕೇರಳ ಪೊಲೀಸರು ಸೈಬರ್‌ಸ್ಪೇಸ್‌ನಲ್ಲಿ ಅಡಗಿದ್ದ ಶಿಶುಕಾಮಿಗಳನ್ನು ಪತ್ತೆಹಚ್ಚಿ ಬಂಧಿಸಲು ಆಪರೇಷನ್ ಪಿ-ಹಂಟ್ ಶುರುಮಾಡಿದ್ದರು. ಈ ಆಪರೇಷನ್ ಪಿ-ಹಂಟ್‌ ಮೂಲಕ 124 ಜನರನ್ನು ಬಂಧಿಸಲಾಗಿದೆ.

ಆದರೆ ಮಕ್ಕಳ ಅಶ್ಲೀಲತೆಯ ವ್ಯಾಪಕ ಬಳಕೆಯಿಂದಾಗಿ ತನಿಖಾಧಿಕಾರಿಗಳು ಈ ದುಷ್ಕೃತ್ಯದ ಮೇಲ್ಮೈಯನ್ನು ಮಾತ್ರ ತಾಕಿದ್ದಾರೆ. ಬಂಧಿಸಲ್ಪಟ್ಟವರಲ್ಲಿ ಕೆಲವರು ಜಾಗತಿಕ ಮಕ್ಕಳ ಅಶ್ಲೀಲ ದಂಧೆಯ ಭಾಗವೆಂದು ಕಂಡುಬಂದಿದೆ. ಇವರು ಅಶ್ಲೀಲ ವಿಷಯಗಳನ್ನು ರಚಿಸುತ್ತಿದ್ದರು ಮತ್ತು ಅವುಗಳನ್ನು ಪೂರೈಸುತ್ತಿದ್ದರು.

ಮಕ್ಕಳ ಅಶ್ಲೀಲತೆಯನ್ನು ರೂಪಿಸುವುದನ್ನು ವ್ಯಾಖ್ಯಾನಿಸುವ CSAM ಅನ್ನು ಐಟಿ ಆಕ್ಟ್ 2000 ಮತ್ತು ಪೋಕ್ಸೊ ಆಕ್ಟ್ 2012 ಎರಡನ್ನೂ ಬಳಸಿಕೊಂಡು ವ್ಯವಹರಿಸಲು ಭಾರತ ಕಾನೂನು ಅವಕಾಶ ನೀಡಿದೆ. ಇನ್ನು ಸೈಬರ್‌ ಅಪರಾಧಿಗಳಿಗೆ ಅರ್ಹವಾದ ಶಿಕ್ಷೆ ದೊರೆಯುವುದು ಬಹುತೇಕ ಕಡಿಮೆಯಾಗಿದೆ. ಅವರು ಜಾಮೀನಿನ ಮೇಲೆ ಹೊರಬರುತ್ತಾರೆ. ಹಾಗಾಗಿ ತಮ್ಮ ಚಟುವಟಿಕೆಗಳನ್ನು ಮತ್ತೆ ಮುಂದುವರಿಸುವುದು ಹೆಚ್ಚಾಗಿದೆ.

ಇದನ್ನೂ ಓದಿ:ಅಪರಾಧದ ಮರುವ್ಯಾಖ್ಯಾನ; ಪ್ರಭುತ್ವ, ಪ್ರತಿರೋಧ ಮತ್ತು ಪ್ರಜಾಪ್ರಭುತ್ವ

ಇಂತಹ ವಿಕೃತ ಕೃತ್ಯ ಎಸಗುವ ಜನರ ಬಗ್ಗೆ ಹೆಚ್ಚು ಎಚ್ಚರದಿಂದಿರುವುದು ಮಾತ್ರವಲ್ಲ ಮಕ್ಕಳಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಅಪರಾಧಗಳು ಹೆಚ್ಚು ಹೊರಬೀಳದ ಕಾರಣ ಸಂತ್ರಸ್ತರು ಭವಿಷ್ಯದಲ್ಲಿ ದೊಡ್ಡ ಅಪಾಯಗಳಿಗೆ ಒಳಗಾಗುವ ಸಂಭವವಿರುತ್ತದೆ.

ಅಪರಾಧಿಗಳನ್ನು ಅಪರಾಧಗಳಿಂದ ದೂರವಿರಿಸಲು ಕೇವಲ ಕಠಿಣ ಕಾನೂನುಗಳು ಮಾತ್ರ ಸಾಕಾಗುವುದಿಲ್ಲ. ಇಂತಹ ಘಟನೆಗಳನ್ನು ಪತ್ತೆಹಚ್ಚುವುದು, ಅದರ ದೂರು ದಾಖಲಿಸುವುದು ಮುಂತಾದವುಗಳ ಕುರಿತು  ಆಕ್ರಮಣಕಾರಿ ಜಾಗೃತಿ ಅಭಿಯಾನಗಳನ್ನು ಕೈಗೊಳ್ಳಬೇಕು ಎನ್ನುತ್ತಾರೆ ತಜ್ಙರು.


ಇದನ್ನೂ ಓದಿ:ಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ; ಎರಡು ತಿಂಗಳ ನಂತರ FIR!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಜೆಪಿ ತೊರೆದು ಪ್ರಾದೇಶಿಕ ಪಕ್ಷದತ್ತ ಅಣ್ಣಾಮಲೈ : ದ್ರಾವಿಡ ಮಣ್ಣಿನಲ್ಲಿ ವಿಫಲವಾದ ಹಿಂದುತ್ವ ರಾಜಕೀಯ

ಮಾಜಿ ಐಪಿಎಸ್‌ ಅಧಿಕಾರಿ ಹಾಗೂ ಬಿಜೆಪಿ ತಮಿಳುನಾಡು ರಾಜ್ಯ ಘಟಕದ ಮಾಜಿ ಅಧ್ಯಕ್ಷ ಕೆ. ಅಣ್ಣಾಮಲೈ ಬಿಜೆಪಿ ತೊರೆದಿದ್ದು, ಹೊಸ ಪ್ರಾದೇಶಿಕ ಪಕ್ಷ ಕಟ್ಟಲು ಮುಂದಾಗಿದ್ದಾರೆ ಎಂದು ವರದಿಯಾಗಿದೆ. ಮಂಗಳವಾರ...

45 ಲೀಟರ್ ಟ್ಯಾಂಕಿಗೆ 52 ಲೀಟರ್ ಬಿಲ್ ಕೊಟ್ಟ ಚತುರ ಕಳ್ಳರು: ಕಾನ್ಪುರದಲ್ಲಿ ಪೆಟ್ರೋಲ್ ಬಂಕ್ ವಂಚನೆ ಪತ್ತೆ

ಉತ್ತರ ಪ್ರದೇಶದ ಕಾನ್ಪುರದಲ್ಲಿ ಹೊಸ ಕಾರು ಖರೀದಿಸಿದ ಮಾಲೀಕರೊಬ್ಬರು ಸ್ಥಳೀಯ ಪೆಟ್ರೋಲ್ ಬಂಕ್‌ಗೆ ಹೋದಾಗ ಅವರಿಗೆ ಒಂದು ಶಾಕಿಂಗ್ ಅನುಭವವಾಗಿದೆ. ಅವರ ಕಾರಿನ ಗರಿಷ್ಠ ಇಂಧನ ಟ್ಯಾಂಕ್ ಸಾಮರ್ಥ್ಯ ಕೇವಲ 45 ಲೀಟರ್...

ಆರು ಮಕ್ಕಳಿದ್ದರೆ ನೀವು ಮತದಾನದ ಹಕ್ಕನ್ನು ಕಳೆದುಕೊಳ್ಳಬಹುದು: ಮತದಾರರ ಪಟ್ಟಿ ‘ಕ್ಲೀನ್’ ಮಾಡಲು ECI ಹೊಸ ಪ್ಲಾನ್!

ಭಾರತದಲ್ಲಿ 'ಆರು ಅಥವಾ ಅದಕ್ಕಿಂತ ಹೆಚ್ಚು ಮಕ್ಕಳನ್ನು ಹೊಂದಿದ್ದಾರೆ' ಎಂಬ ಕಾರಣಕ್ಕೆ ಯಾರಾದರೂ ಮತದಾನದ ಹಕ್ಕನ್ನು ಕಳೆದುಕೊಳ್ಳಲು ಸಾಧ್ಯವೇ? ಮೇಲ್ನೋಟಕ್ಕೆ ಹೌದು ಎನ್ನುವಂತಿದೆ ಉತ್ತರ ಪ್ರದೇಶದ ವಾರಾಣಸಿಯ ಕ್ಯಾಂಟೋನ್ಮೆಂಟ್ ಕ್ಷೇತ್ರದ ಮತದಾರ ಸೋನು...

ಕದನ ವಿರಾಮವೆಂಬ ಕಳ್ಳಾಟ : ಗಾಝಾದಿಂದ ಸಿರಿಯಾವರೆಗೆ ಮುಂದುವರಿದ ಇಸ್ರೇಲ್ ನರಮೇಧ

ಬರೋಬ್ಬರಿ ಎಪ್ಪತ್ತು ಸಾವಿರದಷ್ಟು (ವರದಿಗಳ ಪ್ರಕಾರ 67, 900) ಜನರನ್ನು ಹತ್ಯೆಗೈದು, ಶೇಕಡ 90ರಷ್ಟು ಜನರನ್ನು ನಿರಾಶ್ರಿತರನ್ನಾಗಿ ಮಾಡಿದ ಬಳಿಕ, ಅಕ್ಟೋಬರ್ 10, 2025ರಂದು ಗಾಝಾ ಮೇಲಿನ ಆಕ್ರಮಣಕ್ಕೆ ಸಂಬಂಧಿಸಿದಂತೆ ಇಸ್ರೇಲ್ ಕದನ...

ಚುನಾವಣಾ ಆಯೋಗಕ್ಕೆ ಪೌರತ್ವ ನಿರ್ಧಾರ ಮಾಡುವ ಹಕ್ಕಿದೆಯೇ? SIR ತೀರ್ಪಿನ ಬಗ್ಗೆ ಸುಪ್ರೀಂ ಕೋರ್ಟ್ ಹೇಳಿದ್ದೇನು?

ಮೇ 27 ರಂದು 'ಅಸೋಸಿಯೇಷನ್ ಫಾರ್ ಡೆಮಾಕ್ರಟಿಕ್ ರಿಫಾರ್ಮ್ಸ್ ಮತ್ತು ಭಾರತೀಯ ಚುನಾವಣಾ ಆಯೋಗ (ECI)' ನಡುವಿನ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪು ನೀಡಿದೆ. ಚುನಾವಣಾ ಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ'...

ಮಹಾರಾಷ್ಟ್ರ: 80 ಲಕ್ಷ ಮಹಿಳೆಯರು ‘ಲಡ್ಕಿ ಬಹಿನ್’ ಯೋಜನೆಗೆ ಅನರ್ಹ: ಆರ್ಥಿಕ ಬಿಕ್ಕಟ್ಟಿಗೆ ಸಾಕ್ಷಿ ಎಂದು ವಿಪಕ್ಷಗಳ ಆರೋಪ

ಮುಂಬೈ: ಮಹಾರಾಷ್ಟ್ರ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದ 'ಮುಖ್ಯಮಂತ್ರಿ ಮಾಝಿ ಲಡ್ಕಿ ಬಹಿನ್' ಇ-ಕೆವೈಸಿ (e-KYC) ಪ್ರಕ್ರಿಯೆ ಪೂರ್ಣಗೊಳಿಸಲು ನೀಡಿದ್ದ ಗಡುವು ಮುಗಿದಿದ್ದು, ಸುಮಾರು 80 ಲಕ್ಷ ಮಹಿಳೆಯರು ಯೋಜನೆಯಿಂದ ಅನರ್ಹರಾಗಿದ್ದಾರೆ. ರಾಜ್ಯ ಸರ್ಕಾರವು...

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...