Homeಮುಖಪುಟವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ಮಕ್ಕಳ ಲೈಂಗಿಕ ದುರ್ಬಳಕೆ ವಸ್ತುಗಳಿಗೆ (CSAM - child sexual abuse material) ಆನ್‌ಲೈನ್‌ನಲ್ಲಿ ಹೆಚ್ಚುತ್ತಿರುವ ಬೇಡಿಕೆ ನಮ್ಮ ಸಮಾಜದ ಕೊಳಕು ಮನಸ್ಥಿತಿಯ ವಾಸ್ತವದ ರೂಪವಾಗಿದೆ.

- Advertisement -
- Advertisement -

ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ಮುಗ್ಧತೆಯನ್ನು ಬಳಸಿಕೊಳ್ಳುವ ಉದ್ಯಮವು ದಿನೇ-ದಿನೇ ಅಭಿವೃದ್ಧಿ ಹೊಂದುತ್ತಿದ್ದು, ಕೇರಳದಲ್ಲಿ ಇತ್ತೀಚಿಗೆ ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳು ಮತ್ತು ಪೊಲೀಸರು ಮಾಡಿರುವ ಬಂಧನಗಳು ಅದನ್ನು ಸಾಬೀತುಪಡಿಸುತ್ತಿವೆ.

ಕಳೆದ ವಾರದ ಆರಂಭದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ತೆಗೆದ ಆರೋಪದಲ್ಲಿ 41 ಜನರನ್ನು ಬಂಧಿಸಲಾಯಿತು. ಕಳೆದ ಜೂನ್‌ನಲ್ಲಿ ಇದೇ ರೀತಿಯ ಕಾರ್ಯಾಚರಣೆಯಿಂದಾಗಿ 47 ಜನರನ್ನು ಬಂಧಿಸಲಾಗಿತ್ತು.

ಮಕ್ಕಳ ಲೈಂಗಿಕ ದುರ್ಬಳಕೆ ವಸ್ತುಗಳಿಗೆ (CSAM – child sexual abuse material) ಆನ್‌ಲೈನ್‌ನಲ್ಲಿ ಹೆಚ್ಚುತ್ತಿರುವ ಬೇಡಿಕೆ ನಮ್ಮ ಸಮಾಜದ ಕೊಳಕು ಮನಸ್ಥಿತಿಯ ವಾಸ್ತವದ ರೂಪವಾಗಿದೆ. ಇತ್ತೀಚಿನ ಅಧ್ಯಯನವೊಂದರ ಪ್ರಕಾರ ಈ ಮನಸ್ಥಿತಿ ನಿರ್ಮಾಣಕ್ಕೆ ಸಾಂಕ್ರಾಮಿಕ ರೋಗವನ್ನು ಒಳಗೊಂಡಿರುವಂತೆ ಲಾಕ್‌ಡೌನ್ ಹೇರಿರುವುದು ಕೂಡ ಕಾರಣವಾಗಿದೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಏಪ್ರಿಲ್ 2019 ರಿಂದ, ಕೇರಳ ಪೊಲೀಸರು ಸೈಬರ್‌ಸ್ಪೇಸ್‌ನಲ್ಲಿ ಅಡಗಿದ್ದ ಶಿಶುಕಾಮಿಗಳನ್ನು ಪತ್ತೆಹಚ್ಚಿ ಬಂಧಿಸಲು ಆಪರೇಷನ್ ಪಿ-ಹಂಟ್ ಶುರುಮಾಡಿದ್ದರು. ಈ ಆಪರೇಷನ್ ಪಿ-ಹಂಟ್‌ ಮೂಲಕ 124 ಜನರನ್ನು ಬಂಧಿಸಲಾಗಿದೆ.

ಆದರೆ ಮಕ್ಕಳ ಅಶ್ಲೀಲತೆಯ ವ್ಯಾಪಕ ಬಳಕೆಯಿಂದಾಗಿ ತನಿಖಾಧಿಕಾರಿಗಳು ಈ ದುಷ್ಕೃತ್ಯದ ಮೇಲ್ಮೈಯನ್ನು ಮಾತ್ರ ತಾಕಿದ್ದಾರೆ. ಬಂಧಿಸಲ್ಪಟ್ಟವರಲ್ಲಿ ಕೆಲವರು ಜಾಗತಿಕ ಮಕ್ಕಳ ಅಶ್ಲೀಲ ದಂಧೆಯ ಭಾಗವೆಂದು ಕಂಡುಬಂದಿದೆ. ಇವರು ಅಶ್ಲೀಲ ವಿಷಯಗಳನ್ನು ರಚಿಸುತ್ತಿದ್ದರು ಮತ್ತು ಅವುಗಳನ್ನು ಪೂರೈಸುತ್ತಿದ್ದರು.

ಮಕ್ಕಳ ಅಶ್ಲೀಲತೆಯನ್ನು ರೂಪಿಸುವುದನ್ನು ವ್ಯಾಖ್ಯಾನಿಸುವ CSAM ಅನ್ನು ಐಟಿ ಆಕ್ಟ್ 2000 ಮತ್ತು ಪೋಕ್ಸೊ ಆಕ್ಟ್ 2012 ಎರಡನ್ನೂ ಬಳಸಿಕೊಂಡು ವ್ಯವಹರಿಸಲು ಭಾರತ ಕಾನೂನು ಅವಕಾಶ ನೀಡಿದೆ. ಇನ್ನು ಸೈಬರ್‌ ಅಪರಾಧಿಗಳಿಗೆ ಅರ್ಹವಾದ ಶಿಕ್ಷೆ ದೊರೆಯುವುದು ಬಹುತೇಕ ಕಡಿಮೆಯಾಗಿದೆ. ಅವರು ಜಾಮೀನಿನ ಮೇಲೆ ಹೊರಬರುತ್ತಾರೆ. ಹಾಗಾಗಿ ತಮ್ಮ ಚಟುವಟಿಕೆಗಳನ್ನು ಮತ್ತೆ ಮುಂದುವರಿಸುವುದು ಹೆಚ್ಚಾಗಿದೆ.

ಇದನ್ನೂ ಓದಿ:ಅಪರಾಧದ ಮರುವ್ಯಾಖ್ಯಾನ; ಪ್ರಭುತ್ವ, ಪ್ರತಿರೋಧ ಮತ್ತು ಪ್ರಜಾಪ್ರಭುತ್ವ

ಇಂತಹ ವಿಕೃತ ಕೃತ್ಯ ಎಸಗುವ ಜನರ ಬಗ್ಗೆ ಹೆಚ್ಚು ಎಚ್ಚರದಿಂದಿರುವುದು ಮಾತ್ರವಲ್ಲ ಮಕ್ಕಳಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಅಪರಾಧಗಳು ಹೆಚ್ಚು ಹೊರಬೀಳದ ಕಾರಣ ಸಂತ್ರಸ್ತರು ಭವಿಷ್ಯದಲ್ಲಿ ದೊಡ್ಡ ಅಪಾಯಗಳಿಗೆ ಒಳಗಾಗುವ ಸಂಭವವಿರುತ್ತದೆ.

ಅಪರಾಧಿಗಳನ್ನು ಅಪರಾಧಗಳಿಂದ ದೂರವಿರಿಸಲು ಕೇವಲ ಕಠಿಣ ಕಾನೂನುಗಳು ಮಾತ್ರ ಸಾಕಾಗುವುದಿಲ್ಲ. ಇಂತಹ ಘಟನೆಗಳನ್ನು ಪತ್ತೆಹಚ್ಚುವುದು, ಅದರ ದೂರು ದಾಖಲಿಸುವುದು ಮುಂತಾದವುಗಳ ಕುರಿತು  ಆಕ್ರಮಣಕಾರಿ ಜಾಗೃತಿ ಅಭಿಯಾನಗಳನ್ನು ಕೈಗೊಳ್ಳಬೇಕು ಎನ್ನುತ್ತಾರೆ ತಜ್ಙರು.


ಇದನ್ನೂ ಓದಿ:ಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ; ಎರಡು ತಿಂಗಳ ನಂತರ FIR!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...