Homeಮುಖಪುಟವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ದುರ್ಬಳಕೆ: ಒಂದೇ ವಾರದಲ್ಲಿ 41 ಮಂದಿ ಬಂಧನ!

ಮಕ್ಕಳ ಲೈಂಗಿಕ ದುರ್ಬಳಕೆ ವಸ್ತುಗಳಿಗೆ (CSAM - child sexual abuse material) ಆನ್‌ಲೈನ್‌ನಲ್ಲಿ ಹೆಚ್ಚುತ್ತಿರುವ ಬೇಡಿಕೆ ನಮ್ಮ ಸಮಾಜದ ಕೊಳಕು ಮನಸ್ಥಿತಿಯ ವಾಸ್ತವದ ರೂಪವಾಗಿದೆ.

- Advertisement -
- Advertisement -

ವಿಕೃತ ಲೈಂಗಿಕ ಸಂತೃಪ್ತಿಗಾಗಿ ಮಕ್ಕಳ ಮುಗ್ಧತೆಯನ್ನು ಬಳಸಿಕೊಳ್ಳುವ ಉದ್ಯಮವು ದಿನೇ-ದಿನೇ ಅಭಿವೃದ್ಧಿ ಹೊಂದುತ್ತಿದ್ದು, ಕೇರಳದಲ್ಲಿ ಇತ್ತೀಚಿಗೆ ದಾಖಲಾಗುತ್ತಿರುವ ದೌರ್ಜನ್ಯ ಪ್ರಕರಣಗಳು ಮತ್ತು ಪೊಲೀಸರು ಮಾಡಿರುವ ಬಂಧನಗಳು ಅದನ್ನು ಸಾಬೀತುಪಡಿಸುತ್ತಿವೆ.

ಕಳೆದ ವಾರದ ಆರಂಭದಲ್ಲಿ ಮಕ್ಕಳ ಅಶ್ಲೀಲ ಚಿತ್ರಗಳನ್ನು ತೆಗೆದ ಆರೋಪದಲ್ಲಿ 41 ಜನರನ್ನು ಬಂಧಿಸಲಾಯಿತು. ಕಳೆದ ಜೂನ್‌ನಲ್ಲಿ ಇದೇ ರೀತಿಯ ಕಾರ್ಯಾಚರಣೆಯಿಂದಾಗಿ 47 ಜನರನ್ನು ಬಂಧಿಸಲಾಗಿತ್ತು.

ಮಕ್ಕಳ ಲೈಂಗಿಕ ದುರ್ಬಳಕೆ ವಸ್ತುಗಳಿಗೆ (CSAM – child sexual abuse material) ಆನ್‌ಲೈನ್‌ನಲ್ಲಿ ಹೆಚ್ಚುತ್ತಿರುವ ಬೇಡಿಕೆ ನಮ್ಮ ಸಮಾಜದ ಕೊಳಕು ಮನಸ್ಥಿತಿಯ ವಾಸ್ತವದ ರೂಪವಾಗಿದೆ. ಇತ್ತೀಚಿನ ಅಧ್ಯಯನವೊಂದರ ಪ್ರಕಾರ ಈ ಮನಸ್ಥಿತಿ ನಿರ್ಮಾಣಕ್ಕೆ ಸಾಂಕ್ರಾಮಿಕ ರೋಗವನ್ನು ಒಳಗೊಂಡಿರುವಂತೆ ಲಾಕ್‌ಡೌನ್ ಹೇರಿರುವುದು ಕೂಡ ಕಾರಣವಾಗಿದೆ.

ಇದನ್ನೂ ಓದಿ: ದಲಿತ ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ: ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ

ಏಪ್ರಿಲ್ 2019 ರಿಂದ, ಕೇರಳ ಪೊಲೀಸರು ಸೈಬರ್‌ಸ್ಪೇಸ್‌ನಲ್ಲಿ ಅಡಗಿದ್ದ ಶಿಶುಕಾಮಿಗಳನ್ನು ಪತ್ತೆಹಚ್ಚಿ ಬಂಧಿಸಲು ಆಪರೇಷನ್ ಪಿ-ಹಂಟ್ ಶುರುಮಾಡಿದ್ದರು. ಈ ಆಪರೇಷನ್ ಪಿ-ಹಂಟ್‌ ಮೂಲಕ 124 ಜನರನ್ನು ಬಂಧಿಸಲಾಗಿದೆ.

ಆದರೆ ಮಕ್ಕಳ ಅಶ್ಲೀಲತೆಯ ವ್ಯಾಪಕ ಬಳಕೆಯಿಂದಾಗಿ ತನಿಖಾಧಿಕಾರಿಗಳು ಈ ದುಷ್ಕೃತ್ಯದ ಮೇಲ್ಮೈಯನ್ನು ಮಾತ್ರ ತಾಕಿದ್ದಾರೆ. ಬಂಧಿಸಲ್ಪಟ್ಟವರಲ್ಲಿ ಕೆಲವರು ಜಾಗತಿಕ ಮಕ್ಕಳ ಅಶ್ಲೀಲ ದಂಧೆಯ ಭಾಗವೆಂದು ಕಂಡುಬಂದಿದೆ. ಇವರು ಅಶ್ಲೀಲ ವಿಷಯಗಳನ್ನು ರಚಿಸುತ್ತಿದ್ದರು ಮತ್ತು ಅವುಗಳನ್ನು ಪೂರೈಸುತ್ತಿದ್ದರು.

ಮಕ್ಕಳ ಅಶ್ಲೀಲತೆಯನ್ನು ರೂಪಿಸುವುದನ್ನು ವ್ಯಾಖ್ಯಾನಿಸುವ CSAM ಅನ್ನು ಐಟಿ ಆಕ್ಟ್ 2000 ಮತ್ತು ಪೋಕ್ಸೊ ಆಕ್ಟ್ 2012 ಎರಡನ್ನೂ ಬಳಸಿಕೊಂಡು ವ್ಯವಹರಿಸಲು ಭಾರತ ಕಾನೂನು ಅವಕಾಶ ನೀಡಿದೆ. ಇನ್ನು ಸೈಬರ್‌ ಅಪರಾಧಿಗಳಿಗೆ ಅರ್ಹವಾದ ಶಿಕ್ಷೆ ದೊರೆಯುವುದು ಬಹುತೇಕ ಕಡಿಮೆಯಾಗಿದೆ. ಅವರು ಜಾಮೀನಿನ ಮೇಲೆ ಹೊರಬರುತ್ತಾರೆ. ಹಾಗಾಗಿ ತಮ್ಮ ಚಟುವಟಿಕೆಗಳನ್ನು ಮತ್ತೆ ಮುಂದುವರಿಸುವುದು ಹೆಚ್ಚಾಗಿದೆ.

ಇದನ್ನೂ ಓದಿ:ಅಪರಾಧದ ಮರುವ್ಯಾಖ್ಯಾನ; ಪ್ರಭುತ್ವ, ಪ್ರತಿರೋಧ ಮತ್ತು ಪ್ರಜಾಪ್ರಭುತ್ವ

ಇಂತಹ ವಿಕೃತ ಕೃತ್ಯ ಎಸಗುವ ಜನರ ಬಗ್ಗೆ ಹೆಚ್ಚು ಎಚ್ಚರದಿಂದಿರುವುದು ಮಾತ್ರವಲ್ಲ ಮಕ್ಕಳಿಗೆ ಈ ಬಗ್ಗೆ ಜಾಗೃತಿ ಮೂಡಿಸುವ ಕೆಲಸ ಆಗಬೇಕಿದೆ. ಈ ಅಪರಾಧಗಳು ಹೆಚ್ಚು ಹೊರಬೀಳದ ಕಾರಣ ಸಂತ್ರಸ್ತರು ಭವಿಷ್ಯದಲ್ಲಿ ದೊಡ್ಡ ಅಪಾಯಗಳಿಗೆ ಒಳಗಾಗುವ ಸಂಭವವಿರುತ್ತದೆ.

ಅಪರಾಧಿಗಳನ್ನು ಅಪರಾಧಗಳಿಂದ ದೂರವಿರಿಸಲು ಕೇವಲ ಕಠಿಣ ಕಾನೂನುಗಳು ಮಾತ್ರ ಸಾಕಾಗುವುದಿಲ್ಲ. ಇಂತಹ ಘಟನೆಗಳನ್ನು ಪತ್ತೆಹಚ್ಚುವುದು, ಅದರ ದೂರು ದಾಖಲಿಸುವುದು ಮುಂತಾದವುಗಳ ಕುರಿತು  ಆಕ್ರಮಣಕಾರಿ ಜಾಗೃತಿ ಅಭಿಯಾನಗಳನ್ನು ಕೈಗೊಳ್ಳಬೇಕು ಎನ್ನುತ್ತಾರೆ ತಜ್ಙರು.


ಇದನ್ನೂ ಓದಿ:ಅತ್ಯಾಚಾರಕ್ಕೊಳಗಾದ ಬಾಲಕಿ ಆತ್ಮಹತ್ಯೆ; ಎರಡು ತಿಂಗಳ ನಂತರ FIR!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...