Homeಮುಖಪುಟಶಿಕ್ಷೆಯಿಂದ ಸಂಸದರ ಸ್ಥಾನ ತನ್ನಿಂದತಾನೇ ಅನರ್ಹ: ತೀರ್ಪು ನೀಡುವಾಗ ನ್ಯಾಯಾಲಯಗಳು ಎಚ್ಚರವಹಿಸಬೇಕು ಎಂದ ಸುಪ್ರೀಂ

ಶಿಕ್ಷೆಯಿಂದ ಸಂಸದರ ಸ್ಥಾನ ತನ್ನಿಂದತಾನೇ ಅನರ್ಹ: ತೀರ್ಪು ನೀಡುವಾಗ ನ್ಯಾಯಾಲಯಗಳು ಎಚ್ಚರವಹಿಸಬೇಕು ಎಂದ ಸುಪ್ರೀಂ

- Advertisement -
- Advertisement -

ಪ್ರಕರಣವೊಂದರಲ್ಲಿ ಜನಪ್ರತಿನಿಧಿಗಳಿಗೆ ಶಿಕ್ಷೆ ನೀಡಿದ ನಂತರ ಸಂಸತ್ತಿನ ಸದಸ್ಯರು ತನ್ನಿಂದತಾನೇ ಅನರ್ಹಗೊಳ್ಳುವುದು “ಅತ್ಯಂತ ಕಠಿಣ” ಕ್ರಮವಾಗಿದೆ ಎಂದು ಸುಪ್ರೀಂ ಕೋರ್ಟ್ ಬುಧವಾರ ಮೌಖಿಕವಾಗಿ ಹೇಳಿದೆ ಎಂದು ಬಾರ್ ಮತ್ತು ಬೆಂಚ್ ವರದಿ ಮಾಡಿದೆ.

ಕೊಲೆ ಪ್ರಕರಣದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ ನಾಯಕ ಮೊಹಮ್ಮದ್ ಫೈಜಲ್ ಅವರ ಶಿಕ್ಷೆಯನ್ನು ಕೇರಳ ಹೈಕೋರ್ಟ್ ಜನವರಿ 25ರಂದು ಅಮಾನತ್ತುಗೊಳಿಸಿತ್ತು. ಈ ಆದೇಶದ ವಿರುದ್ಧ ಲಕ್ಷದ್ವೀಪ ಆಡಳಿತವು ಸುಪ್ರೀಂ ಕೋರ್ಟ್‌ಗೆ ಮೇಲ್ಮನ ಸಲ್ಲಿಸಿತ್ತು. ಇಂದು ವಿಚಾರಣೆಯ ಸಂದರ್ಭದಲ್ಲಿ ನ್ಯಾಯಮೂರ್ತಿಗಳಾದ ಕೆ.ಎಂ.ಜೋಸೆಫ್ ಮತ್ತು ಬಿ.ವಿ.ನಾಗರತ್ನ ಅವರ ಪೀಠವು ಈ ಹೇಳಿಕೆಯನ್ನು ನೀಡಿದೆ.

ಫೈಜಲ್‌ ಅವರು ಕ್ರಿಮಿನಲ್ ಪ್ರಕರಣದಲ್ಲಿ 10 ವರ್ಷಗಳ ಜೈಲು ಶಿಕ್ಷೆಗೆ ಗುರಿಯಾಗಿದ್ದರು. ಮೊಹಮ್ಮದ್ ಫೈಝಲ್ ಅವರನ್ನು ಕಳೆದ ಜನವರಿಯಲ್ಲಿ ಸಂಸದ ಸ್ಥಾನದಿಂದ ಅನರ್ಹಗೊಳಿಸಲಾಗಿತ್ತು.

ಪ್ರಜಾಪ್ರತಿನಿಧಿ ಕಾಯಿದೆ, 1951 ರ ಅಡಿಯಲ್ಲಿ, ಶಾಸಕ/ಸಂಸದರು ಎರಡು ವರ್ಷ ಅಥವಾ ಅದಕ್ಕಿಂತ ಹೆಚ್ಚಿನ ಅವಧಿಗೆ ಜೈಲು ಶಿಕ್ಷೆಗೆ ಒಳಗಾದರೆ, ಶಿಕ್ಷೆಯ ದಿನಾಂಕದಿಂದ ಜೈಲು ಶಿಕ್ಷೆಯ ಅವಧಿ ಮುಗಿದ ಆರು ವರ್ಷಗಳವರೆಗೆ ಅನರ್ಹರಾಗುತ್ತಾರೆ. ಯಾವುದೇ ಚುನಾವಣೆಗೂ ಸ್ಫರ್ಧಿಸಲು ಸಾಧ್ಯವಾಗುವುದಿಲ್ಲ.

ಕೇರಳ ಹೈಕೋರ್ಟ್ ಆದೇಶದ ಆಧಾರದ ಮೇಲೆ ಫೈಝಲ್ ಅವರ ಸದಸ್ಯತ್ವವನ್ನು ಮರುಸ್ಥಾಪಿಸುವಂತೆ ಕೋರಿ ಸಲ್ಲಿಸಿದ ಮನವಿಯನ್ನು ಸುಪ್ರೀಂ ಕೋರ್ಟ್ ವಿಚಾರಣೆಗೆ ನಿಗದಿಪಡಿಸುವ ಮುನ್ನವೇ ಬುಧವಾರದಂದು ಫೈಝಲ್ ಅವರ ಅನರ್ಹತೆಯನ್ನು ಹಿಂತೆಗೆದುಕೊಳ್ಳಲಾಯಿತು.

ಇದನ್ನೂ ಓದಿ: ಪ್ರಜಾಸತ್ತಾತ್ಮಕ ತತ್ವಗಳನ್ನು ಅನ್ವಯಿಸಿ: ರಾಹುಲ್ ಅನರ್ಹತೆಗೆ ಜರ್ಮನಿ ಪ್ರತಿಕ್ರಿಯೆ

ಫೈಝಲ್ ಅವರ ಮನವಿಯ ವಿಚಾರಣೆ ನಡೆಸಿದ ಪೀಠವು, ಶಾಸಕರಿಗೆ/ಸಂಸದರಿಗೆ ಶಿಕ್ಷೆ ವಿಧಿಸುವಾಗ ನ್ಯಾಯಾಲಯಗಳು ಎಚ್ಚರಿಕೆ ವಹಿಸಬೇಕು ಎಂದು ಹೇಳಿದೆ.

ಮಾರ್ಚ್ 23ರಂದು ಗುಜರಾತ್‌ನ ನ್ಯಾಯಾಲಯವು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯಲ್ಲಿ ಎರಡು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿತು. ಆ ನಂತರ ರಾಹುಲ್ ಗಾಂಧಿ ಅವರು ಸಂಸತ್ತಿನಿಂದ ಅನರ್ಹಗೊಂಡಿದ್ದಾರೆ. ಇದೀಗ ದೇಶದಲ್ಲಿ ರಾಹುಲ್‌ ಗಾಂಧಿ ಅನರ್ಹತೆ ಬಗ್ಗೆ ಚರ್ಚೆಯಾಗುತ್ತಿರುವಾಗ ಈ ಅವಲೋಕನವು ಮಹತ್ವದ್ದಾಗಿದೆ.

ಗುಜರಾತ್‌ನ ನ್ಯಾಯಾಲಯದ ತೀರ್ಪಿನ ಮೇಲೆ ಮೇಲ್ಮನವಿ ಸಲ್ಲಿಸಲು ನ್ಯಾಯಾಲಯವು ಅವರಿಗೆ 30 ದಿನಗಳ ಕಾಲ ಜಾಮೀನು ನೀಡಿದ್ದರೂ, ಲೋಕಸಭೆಯ ಸೆಕ್ರೆಟರಿಯೇಟ್ ಮಾರ್ಚ್ 24 ರಂದು ರಾಹುಲ್ ಗಾಂಧಿಯನ್ನು ಅನರ್ಹಗೊಳಿಸಿತು.

ಸತ್ಯದ ಪಥಕ್ಕೆ ಬಲ ತುಂಬಲು ದೇಣಿಗೆ ನೀಡಿ. ನಿಮ್ಮಗಳ ಬೆಂಬಲವೇ ನಮಗೆ ಬಲ. ಈ ಕೆಳಗಿನ ಲಿಂಕ್ ಮೂಲಕ ದೇಣಿಗೆ ನೀಡಿ

2 COMMENTS

  1. Is Supreme Court opinion is lower court should not give 2 years and more conviction punishment to MP MLAs. If such case it is better Supreme Court only handle all MP MLA cases so that final sentence is going to happen.

LEAVE A REPLY

Please enter your comment!
Please enter your name here

- Advertisment -

Must Read

ಮಹಿಳೆಯ ಅಪಹರಣ ಪ್ರಕರಣ: ಹೆಚ್‌.ಡಿ ರೇವಣ್ಣ ನಾಲ್ಕು ದಿನ ಎಸ್‌ಐಟಿ ವಶಕ್ಕೆ

0
ಲೈಂಗಿಕ ದೌರ್ಜನ್ಯ ಪ್ರಕರಣದ ಸಂತ್ರಸ್ತೆ ಎನ್ನಲಾದ ಮನೆ ಕೆಲಸದ ಮಹಿಳೆಯ ಅಪಹರಣ ಪ್ರಕರಣದಲ್ಲಿ ಬಂಧಿತರಾಗಿರುವ ಶಾಸಕ ಹೆಚ್‌.ಡಿ ರೇವಣ್ಣ ಅವರನ್ನು  ನಾಲ್ಕು ದಿನಗಳ ಕಾಲ ವಿಶೇಷ ತನಿಖಾ ತಂಡ (ಎಸ್‌ಐಟಿ) ವಶಕ್ಕೆ ನೀಡಿ...