Homeಅಂತರಾಷ್ಟ್ರೀಯಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಶಿಕ್ಷೆ: ಭೂತಾನ್

ಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಶಿಕ್ಷೆ: ಭೂತಾನ್

ಕಳೆದ ವಾರ, ಚೀನಾ ಸರ್ಕಾರವು ಭೂತಾನ್‌ನ “ಪೂರ್ವ ವಲಯ” ಗಳನ್ನು ಉಭಯ ದೇಶಗಳ ನಡುವಿನ ವಿವಾದಿತ ಪ್ರದೇಶಗಳ ಭಾಗವಾಗಿ ಸೇರಿಸಿಕೊಂಡಿತು.

- Advertisement -
- Advertisement -

ಭಾರತ – ಚೀನಾ ನಡುವೆ ನಡೆದ ಭೀಕರ ಗಡಿ ಚಕಮಕಿಯ ನಂತರ ಭಾರತೀಯ ಮತ್ತು ಚೀನಾದ ಸೈನಿಕರು ಲಡಾಖ್‌ನಿಂದ ಹಿಂತಿರುಗುತ್ತಿದ್ದಂತೆ ಏಷ್ಯಾದ ಎರಡು ದೈತ್ಯ ರಾಷ್ಟ್ರಗಳ ನಡುವೆ ಸಿಕ್ಕಿಕೊಂಡಂತೆ ಭಾಸವಾಗುತ್ತಿದೆ ಎಂದು ಭೂತಾನ್ ಹೇಳಿದೆ.

ಕಳೆದ ವಾರ, ಚೀನಾ ಸರ್ಕಾರವು ಭೂತಾನ್‌ನ “ಪೂರ್ವ ವಲಯ” ಗಳನ್ನು ಉಭಯ ದೇಶಗಳ ನಡುವಿನ ವಿವಾದಿತ ಪ್ರದೇಶಗಳ ಭಾಗವಾಗಿ ಸೇರಿಸಿಕೊಂಡಿತು. “ಪೂರ್ವ, ಮಧ್ಯ ಮತ್ತು ಪಶ್ಚಿಮ ಕ್ಷೇತ್ರಗಳಲ್ಲಿ ದೀರ್ಘಕಾಲದ ವಿವಾದಗಳಿವೆ” ಎಂದು ಚೀನಾದ ವಿದೇಶಾಂಗ ಸಚಿವಾಲಯ ಹೇಳಿಕೆಯಲ್ಲಿ ತಿಳಿಸಿದೆ.

ಯುನೈಟೆಡ್ ನೇಷನ್ಸ್ ಡೆವಲಪ್ಮೆಂಟ್ ಪ್ರೊಗ್ರಾಂನ ಜಾಗತಿಕ ಪರಿಸರ ಸೌಲಭ್ಯದಿಂದ ದೂರದ ಪೂರ್ವ ಭೂತಾನ್ ನಲ್ಲಿರುವ ಸಕ್ಟೆಂಗ್ ವನ್ಯಜೀವಿ ಅಭಯಾರಣ್ಯಕ್ಕೆ ಧನಸಹಾಯವನ್ನು ನಿಲ್ಲಿಸುವ ಪ್ರಯತ್ನವನ್ನು ಚೀನಾ ಅನುಸರಿಸುತ್ತಿದೆ. ಯುನೈಟೆಡ್ ಸ್ಟೇಟ್ಸ್ ಮೂಲದ ಜಾಗತಿಕ ಸಂಸ್ಥೆಯು ಪರಿಸರ ಯೋಜನೆಗಳಿಗೆ ಹಣವನ್ನು ನೀಡುತ್ತದೆ. ಈಗ ಅಭಯಾರಣ್ಯವು “ವಿವಾದಿತ ಪ್ರದೇಶ” ದಲ್ಲಿದೆ ಎಂದು ಚೀನಾ ಹೇಳಿಕೊಂಡಿದೆ.

ಭೂತಾನ್‌ನ ಸುದ್ದಿ ವರದಿಗಳು ಹೇಳುವಂತೆ, ಚೀನಾ ಸರ್ಕಾರವು ಉಭಯ ದೇಶಗಳ ರಾಜತಾಂತ್ರಿಕ ವಿಷಯಗಳನ್ನು ಹಂಚಿಕೊಳ್ಳಲಾಗುವುದಿಲ್ಲ ಎಂಬ ಪ್ರತಿಭಟನಾತ್ಮಕ ಕ್ರಮ ತೆಗೆದುಕೊಳ್ಳಲಾಗಿದೆ. ಆದರೆ ಚೀನಾ ಸರ್ಕಾರ ಇದನ್ನು ನಿರಾಕರಿಸಿದೆ.

ಚೀನಾದ ಈ ಕ್ರಮವು ಭಾರತದೊಂದಿಗಿನ ದ್ವೇಷದೊಂದಿಗೆ ಸಂಬಂಧ ಹೊಂದಿರಬಹುದು ಎಂದು ಹಲವರು ಹೇಳುತ್ತಾರೆ.

“ಸಿನೊ-ಭೂತಾನ್ ಗಡಿ ವಿವಾದವು ಅಷ್ಟೇನೂ ತೀವ್ರವಾಗಿಲ್ಲ. ಭೂತಾನ್ ಭಾರತದೊಂದಿಗೆ ಮೈತ್ರಿ ಮಾಡಿಕೊಂಡಿದ್ದಕ್ಕಾಗಿ ಸೇಡು ತೀರಿಸಿಕೊಳ್ಳಲು ಚೀನಾ ಬಯಸುತ್ತಿದೆ” ಎಂದು ಭೂತಾನ್‌ನ ಒಟ್ಟು ರಾಷ್ಟ್ರೀಯ ಸಂತೋಷ ಅಧ್ಯಯನ ಕೇಂದ್ರದ ಮುಖ್ಯಸ್ಥ ಡೋರ್ಜಿ ಪೆಂಜೋರ್ “Security of Bhutan: Walking Between the Giants” ಎಂಬ ಶೀರ್ಷಿಕೆಯ ಲೇಖನದಲ್ಲಿ ಬರೆದಿದ್ದಾರೆ.

ನಮಗೆ ಚೀನಾದೊಂದಿಗೆ ಯಾವುದೇ ಸಂಬಂಧವಿಲ್ಲ. ಆದರೂ ನಾವು ಚೀನಾದೊಂದಿಗೆ ವಿವಾದಕ್ಕೆ ಸಿಲುಕುತ್ತಿದ್ದೇವೆ. ಏಕೆಂದರೆ ಭಾರತವು ಚೀನಾದೊಂದಿಗೆ ವಿವಾದಗಳನ್ನು ಎದುರಿಸುತ್ತಿದೆ. ಚೀನಾ ಮತ್ತು ಭಾರತದ ನಡುವಿನ ಸಂಬಂಧ ಸುಧಾರಿಸಿದರೆ ನಮಗೆ ತೊಂದರೆಯಿಲ್ಲ ಎಂದು ಅವರು ಹೇಳಿದರು.

ಸಾರ್ವಜನಿಕ ವಲಯದಲ್ಲಿ ವಿಶ್ವಾಸಾರ್ಹ ಮಾಹಿತಿಯ ಕೊರತೆಯಿದೆ. ಸ್ಥಳೀಯ ಮಾಧ್ಯಮಗಳು ಇಲ್ಲಿಯವರೆಗಿನ ಬೆಳವಣಿಗೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸಿವೆ. ಭೂತಾನಿಯರಲ್ಲಿ ಭಾರತೀಯ ಮಾಧ್ಯಮಗಳ ಮೇಲೆ ನಂಬಿಕೆ ಬಹಳ ಕಡಿಮೆ ಎಂದು ಪತ್ರಕರ್ತರು ಹೇಳಿದ್ದಾರೆ.

ಐತಿಹಾಸಿಕವಾಗಿ ನಡೆದಂತೆ, ಭೂತಾನ್ ಸಹಾನುಭೂತಿ ಭಾರತದೊಂದಿಗೆ ಮುಂದುವರೆದಿದೆ ಎಂದು ಡಕಾಲ್ ಹೇಳಿದರು. “ಒಂದೇ ಸಮಸ್ಯೆ ಎಂದರೆ ನೇಪಾಳದಂತೆಯೇ, ಭಾರತೀಯ ಮಾಧ್ಯಮಗಳು ಭೂತಾನ್ ಬಗ್ಗೆ ತಪ್ಪು ಮಾಹಿತಿಯನ್ನು ಹರಡುತ್ತವೆ. ಇದು ಇಲ್ಲಿಯ ಬಹಳಷ್ಟು ಜನರನ್ನು ಆತಂಕಕ್ಕೆ ತಳ್ಳಿದೆ ಎಂದು ಅವರು ಹೇಳಿದರು.


ಇದನ್ನೂ ಓದಿ: ಭಾರತ-ಚೀನಾ ಗಡಿ ಬಿಕ್ಕಟ್ಟಿಗೆ ಕಾರಣಗಳೇನು? ಈಗಲಾದರೂ ಮೌನ ಮುರಿಯುವರೆ ಮೋದಿ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...