Homeಮುಖಪುಟಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

ಪಂಜಾಬ್‌ ಎಎಪಿ ವಿಭಜನೆಯಾಗಲಿದೆ, 30 ಶಾಸಕರು ಸಂಪರ್ಕದಲ್ಲಿದ್ದಾರೆ : ಕಾಂಗ್ರೆಸ್

- Advertisement -
- Advertisement -

ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಹೀನಾಯ ಸೋಲಿನ ನಂತರ, ಎಎಪಿ ಪಂಜಾಬ್ ಘಟಕ ಆಂತರಿಕ ಕಲಹ ಮತ್ತು ಸಂಭಾವ್ಯ ವಿಭಜನೆ ಎದುರಿಸುವ ಸಾಧ್ಯತೆಯಿದೆ ಎಂದು ಕಾಂಗ್ರೆಸ್ ನಾಯಕ ಹಾಗೂ ಪಂಜಾಬ್ ವಿಧಾನಸಭೆಯ ಪ್ರತಿಪಕ್ಷ ನಾಯಕ ಪ್ರತಾಪ್ ಸಿಂಗ್ ಬಾಜ್ವಾ ಭಾನುವಾರ (ಫೆ.9) ಹೇಳಿದ್ದಾರೆ.

ಕಳೆದ ಒಂದು ವರ್ಷದಿಂದ 30ಕ್ಕೂ ಹೆಚ್ಚು ಎಎಪಿ ಶಾಸಕರು ನಮ್ಮ ಪಕ್ಷದೊಂದಿಗೆ ಸಂಪರ್ಕದಲ್ಲಿದ್ದು, ಪಕ್ಷ ಬದಲಾಯಿಸಲು ಸಿದ್ಧರಾಗಿದ್ದಾರೆ ಎಂದು ಹಿರಿಯ ಕಾಂಗ್ರೆಸ್ ನಾಯಕ ಹೊಸ ಬಾಂಬ್ ಸಿಡಿಸಿದ್ದಾರೆ.

“ಎಎಪಿಯ ದೆಹಲಿ ನಾಯಕತ್ವ ಭಗವಂತ್ ಮಾನ್ ಅವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಬಹುದು. ವಿಶೇಷವಾಗಿ ಪಂಜಾಬ್‌ನ ಎಲ್ಲಾ ಎಎಪಿ ಶಾಸಕರು ಮತ್ತು ಕಾರ್ಯಕರ್ತರು ಪಕ್ಷದ ರಾಷ್ಟ್ರೀಯ ಸಂಚಾಲಕ ಅರವಿಂದ್ ಕೇಜ್ರಿವಾಲ್ ಅವರ ಜೊತೆ ಇದ್ದಾರೆ. ಹಾಗಾಗಿ, ಎಎಪಿಯಲ್ಲಿ ನಾಯಕತ್ವದ ಕಲಹ ಸನ್ನಿಹಿತವಾಗಿದೆ. ಲುಧಿಯಾನ (ಪಶ್ಚಿಮ) ವಿಧಾನಸಭಾ ಕ್ಷೇತ್ರದಲ್ಲಿ ಉಪಚುನಾವಣೆ ನಡೆಯಲಿದೆ. ರಾಜ್ಯ ವಿಧಾನಸಭೆಗೆ ಸೇರಲು ಕೇಜ್ರಿವಾಲ್ ಈ ಕ್ಷೇತ್ರದ ಮೇಲೆ ಕಣ್ಣಿಟ್ಟಿರಬಹುದು” ಎಂದು ಪ್ರತಾಪ್ ಸಿಂಗ್ ಬಜ್ವಾ ಹೇಳಿದ್ದಾರೆ.

“2027ರ ಪಂಜಾಬ್‌ ವಿಧಾನಸಭೆ ಚುನಾವಣೆಗೆ ಎಎಪಿಯನ್ನು ಪ್ರಮುಖ ಪ್ರತಿಸ್ಪರ್ಧಿ ಎಂದು ಪರಿಗಣಿಸಿರುವುದರಿಂದ ಕಾಂಗ್ರೆಸ್ ಮತ್ತು ಬಿಜೆಪಿ ಎರಡೂ ಪಕ್ಷಗಳು ಪಂಜಾಬ್‌ನಲ್ಲಿ ಎಎಪಿ ವಿಭಜನೆಯಾಗಬೇಕೆಂದು ಬಯಸುತ್ತಿವೆ. ಕೇಜ್ರಿವಾಲ್ ಲುಧಿಯಾನ (ಪಶ್ಚಿಮ) ದಿಂದ ಸ್ಪರ್ಧಿಸಲು ನಿರ್ಧರಿಸಿದರೆ, ಅದು ಪಕ್ಷಕ್ಕೆ ಹಾನಿಕಾರಕವಾಗಬಹುದು ಮತ್ತು ಅವರ ರಾಷ್ಟ್ರೀಯ ಮಹತ್ವಾಕಾಂಕ್ಷೆಗಳ ಅಂತ್ಯವನ್ನು ಸೂಚಿಸಬಹುದು” ಎಂದು ಪ್ರಮುಖ ರಾಜಕೀಯ ವಿಶ್ಲೇಷಕ ಕುಲದೀಪ್ ಸಿಂಗ್ ವಿವರಿಸಿದ್ದಾರೆ.

ಕಾಂಗ್ರೆಸ್ ನಾಯಕನ ಹೇಳಿಕೆಯನ್ನು ತಳ್ಳಿ ಹಾಕಿರುವ ಪಂಜಾಬ್ ಎಎಪಿ ವಕ್ತಾರ ನೀಲ್ ಗರ್ಗ್, “ಕೇಜ್ರಿವಾಲ್ ನಮ್ಮ ರಾಷ್ಟ್ರೀಯ ಸಂಚಾಲಕರು ಮತ್ತು ಮಾನ್ ಪಂಜಾಬ್ ಸಿಎಂ. ಕಾಂಗ್ರೆಸ್‌ನ ಗ್ರಾಫ್ ವೇಗವಾಗಿ ಕುಸಿಯುತ್ತಿದೆ. ದೆಹಲಿಯಲ್ಲಿ, ಅದು ಸತತ ಮೂರನೇ ಬಾರಿಗೆ ಶೂನ್ಯ ಸ್ಥಾನ ಗಳಿಸಿದೆ. 2022ರ ಪಂಜಾಬ್ ಚುನಾವಣೆಯಲ್ಲಿ, ಅದು ಕೇವಲ 18 ಸ್ಥಾನಗಳನ್ನು ಮಾತ್ರ ಗೆದ್ದಿತ್ತು. 2027ರ ಚುನಾವಣೆಯಲ್ಲಿ ಈ ಸಂಖ್ಯೆ ಮತ್ತಷ್ಟು ಕಡಿಮೆಯಾಗಲಿದೆ. ಕಾಂಗ್ರೆಸ್‌ನ ಕಾರ್ಯಕ್ಷಮತೆ ಹೇಗಿದೆ ಎಂಬುವುದಕ್ಕೆ ರಾಜ್ಯದಲ್ಲಿ ಇತ್ತೀಚೆಗೆ ನಡೆದ ಪುರಸಭೆ ಚುನಾವಣೆಗಳನ್ನು ನೋಡಿ” ಎಂದಿದ್ದಾರೆ.

“ದೆಹಲಿಯಲ್ಲಿ ಕಾಂಗ್ರೆಸ್ ಒಂದೇ ಒಂದು ಸ್ಥಾನ ಗೆಲ್ಲದಿರುವುದರ ಬಗ್ಗೆ ಬಾಜ್ವಾ ಕಳವಳ ವ್ಯಕ್ತಪಡಿಸಬೇಕು, ಹೊರತು ಪಂಜಾಬ್‌ನ ಬಗ್ಗೆ ಅಲ್ಲ” ಎಂದು ಗರ್ಗ್ ಹೇಳಿದ್ದಾರೆ.

Biren Singh resigns | ಮಣಿಪುರ ಮುಖ್ಯಮಂತ್ರಿ ಬಿರೇನ್ ಸಿಂಗ್ ರಾಜೀನಾಮೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...