Homeಮುಖಪುಟಪಂಜಾಬ್‌ | ಎಎಪಿ ನಾಯಕನ ಮೇಲೆ ಗುಂಡಿನ ದಾಳಿ; ಅಕಾಲಿದಳದ ಮೇಲೆ ಆರೋಪ

ಪಂಜಾಬ್‌ | ಎಎಪಿ ನಾಯಕನ ಮೇಲೆ ಗುಂಡಿನ ದಾಳಿ; ಅಕಾಲಿದಳದ ಮೇಲೆ ಆರೋಪ

- Advertisement -
- Advertisement -

ಪಂಜಾಬ್‌ನ ಫಜಿಲ್ಕಾ ಜಿಲ್ಲೆಯ ಜಲಾಲಾಬಾದ್‌ನಲ್ಲಿ ಶಿರೋಮಣಿ ಅಕಾಲಿದಳ (ಎಸ್‌ಎಡಿ) ಸದಸ್ಯರೊಂದಿಗೆ ಶನಿವಾರ ನಡೆದ ಘರ್ಷಣೆಯ ಸಂದರ್ಭದಲ್ಲಿ ಗುಂಡಿನ ದಾಳಿಯಲ್ಲಿ ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಮುಂಬರುವ ಪಂಚಾಯತ್ ಚುನಾವಣೆಯಲ್ಲಿ ಆಪ್ ಅಭ್ಯರ್ಥಿಯಾಗಿರುವ ಮನದೀಪ್ ಸಿಂಗ್ ಬ್ರಾರ್ ಅವರ ಎದೆಗೆ ಗುಂಡು ತಗುಲಿದ್ದು, ಅವರ ಸ್ಥಿತಿ ಚಿಂತಾಜನಕವಾಗಿದೆ ಎಂದು ಹೇಳಲಾಗಿದೆ.ಪಂಜಾಬ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

ಚುನಾವಣೆ ಸಂಬಂಧ ಸಭೆ ನಡೆಯುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಲೂಧಿಯಾನ ಆಸ್ಪತ್ರೆಯಲ್ಲಿ ಆಪ್ ನಾಯಕನನ್ನು ಭೇಟಿ ಮಾಡಿದ ಪಂಜಾಬ್‌ನ ಪಂಚಾಯತ್ ರಾಜ್ ಸಚಿವ ತರುಣ್‌ಪ್ರೀತ್ ಸಿಂಗ್ ಸೌಂಧ್, “ಮನದೀಪ್ ಬ್ರಾರ್ ಅವರು ಸರಪಂಚ್ ಚುನಾವಣೆಗೆ ಸ್ಪರ್ಧಿಸಿದ್ದರು, ಅವರು ನಾಮಪತ್ರ ಸಲ್ಲಿಸಲು ಬಿಡಿಪಿಒ ಕಚೇರಿಗೆ ಹೋದಾಗ, ಅಕಾಲಿದಳಕ್ಕೆ ಸೇರಿದ ವ್ಯಕ್ತಿ ಅವರ ಪರವಾನಿಗೆ ಹೊಂದಿದ ಬಂದೂಕಿನಿಂದ ಅವರಿಗೆ ಶೂಟ್ ಮಾಡಿದ್ದಾರೆ. ಇದನ್ನು ನಾವು ಖಂಡಿಸುತ್ತೇವೆ ಮತ್ತು ಇದು ಅತ್ಯಂತ ನಾಚಿಕೆಗೇಡಿನ ಘಟನೆಯಾಗಿದೆ” ಎಂದು ಹೇಳಿದ್ದಾರೆ.ಪಂಜಾಬ್‌

ಇದನ್ನೂಓದಿ: ಮಣಿಪುರ | ಉಖ್ರುಲ್ ಹಿಂಸಾಚಾರದ ವೇಳೆ ಲೂಟಿಯಾದ 80% ಬಂದೂಕುಗಳು ಮತ್ತೆ ಪೊಲೀಸರ ವಶಕ್ಕೆ

ಪಂಜಾಬ್‌ನಲ್ಲಿ ಅಕಾಲಿದಳ ಮತ್ತು ಕಾಂಗ್ರೆಸ್ ಶಾಂತಿಯ ವಾತಾವರಣವನ್ನು ಬಯಸುವುದಿಲ್ಲ ಮತ್ತು ಪಂಚಾಯತ್ ಚುನಾವಣೆಯಲ್ಲಿ ಎಎಪಿಯನ್ನು ಬೆಂಬಲಿಸುವ ಯಾರನ್ನಾದರೂ ಹೆದರಿಸುತ್ತಿವೆ ಎಂದು ಸಚಿವರು ಆರೋಪಿಸಿದ್ದಾರೆ. ಗುಂಡಿನ ದಾಳಿ ನಡೆದ ಸಭೆಯಲ್ಲಿ ಪಾಲ್ಗೊಂಡಿದ್ದ ಆಪ್‌ನ ಜಲಾಲಾಬಾದ್ ಶಾಸಕ ಜಗದೀಪ್ ಕಾಂಬೋಜ್ ಗೋಲ್ಡಿ, ಆರೋಪಿಗಳು ಪಂಚಾಯತ್ ಭೂಮಿಯನ್ನು ವಶಪಡಿಸಿಕೊಂಡಿದ್ದಾರೆ ಎಂದು ಆರೋಪಿಸಿದ್ದು, ಇದನ್ನು ವಿರೋಧಿಸಿದ ಆಪ್ ಅಭ್ಯರ್ಥಿಯ ಮೇಲೆ ಗುಂಡಿನ ದಾಳಿ ಮಾಡಲಾಗಿದೆ ಎಂದು ಹೇಳಿದ್ದಾರೆ.

“ವಿರೋಧಿ ಪಕ್ಷದ ವ್ಯಕ್ತಿಯೊಬ್ಬರು ಪಂಚಾಯತ್ ಭೂಮಿಯನ್ನು ಅಕ್ರಮವಾಗಿ ವಶಪಡಿಸಿಕೊಂಡಿದ್ದಾರೆ. ಈ ವಿಷಯವು ಪಂಚಾಯತ್‌ನಲ್ಲಿ ಆಕ್ಷೇಪಿಸಲ್ಪಟ್ಟಿದ್ದು, ಹೈಕೋರ್ಟ್‌ನಲ್ಲಿ ವಿಚಾರಣೆಯಲ್ಲಿದೆ. ಇದನ್ನು ಉಲ್ಲೇಖಿಸಿ ನಮ್ಮ ನಾಯಕರು ಅಕಾಲಿದಳದ ಅಭ್ಯರ್ಥಿಯ ನಾಮಪತ್ರಕ್ಕೆ ಆಕ್ಷೇಪಣೆಯನ್ನು ಎತ್ತಿದರು. ಅವರು ಅಲ್ಲಿಂದ ಹೊರಬಂದಾಗ ‘ನಮ್ಮ ನಾಮಪತ್ರವನ್ನು ಪ್ರಶ್ನಿಸಲು ನೀವು ಯಾರು?’ ಪ್ರಶ್ನಿಸಿ, ಅವರ ಮೇಲೆ ಗುಂಡು ಹಾರಿಸಿದರು, ”ಎಂದು ಶಾಸಕ ಹೇಳಿದ್ದಾರೆ.

ಘಟನೆಯ ನಂತರ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದು, ಸ್ಥಳದಲ್ಲಿ ಉದ್ವಿಗ್ನತೆ ಉಂಟಾಗಿತ್ತು. ಪಂಜಾಬ್‌ನಾದ್ಯಂತ 13,229 ಗ್ರಾಮ ಪಂಚಾಯಿತಿಗಳಿಗೆ ಅಕ್ಟೋಬರ್ 15 ರಂದು ಚುನಾವಣೆ ನಡೆಯಲಿದೆ.

ವಿಡಿಯೊ ನೋಡಿ: ‘ಭೂಮಿ- ವಸತಿ ಹಕ್ಕು ವಂಚಿತರ ಪ್ರಾತಿನಿಧ್ಯ ಸಮಾವೇಶ’ದ ಕುರಿತು ಸಂಘಟಕರ ಮಾತುಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...