Homeಕರ್ನಾಟಕಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ಸೇರಿದಂತೆ ಹಾಲಿ ಮುಖ್ಯಮಂತ್ರಿ ಚರಂಜಿತ್‌ ಸಿಂಗ್ ಚೆನ್ನಿ, ಹಿಂದಿನ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಸೋಲು ಕಂಡಿದ್ದಾರೆ.

- Advertisement -
- Advertisement -

ಪಂಜಾಬ್‌ ವಿಧಾನಸಭೆಯಲ್ಲಿ ಸ್ಪರ್ಧಿಸಿದ್ದ ಹಾಲಿ ಹಾಗೂ ಮಾಜಿ ಸಿಎಂಗಳಿಗೆಲ್ಲ ಸೋಲಾಗಿದೆ. ಹಾಲಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಮಾಜಿ ಸಿಎಂಗಳಾದ ಪ್ರಕಾಶ್‌ ಸಿಂಗ್ ಬಾದಲ್‌ ಹಾಗೂ ಅಮರಿಂದರ್‌ ಸಿಂಗ್ ಸಿಧು ಸೋಲು ಕಂಡಿದ್ದಾರೆ.

ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ಅವರು ತಮ್ಮ ತವರು ಕ್ಷೇತ್ರ ಲಂಬಿಯಿಂದ ಸ್ಪರ್ಧಿಸಿದ್ದರು. ಆದರೆ ಎಎಪಿ ಅಭ್ಯರ್ಥಿ ಗುರ್ಮೀತ್ ಸಿಂಗ್ ಖುಡಿಯಾನ್ ವಿರುದ್ಧ ಸೋಲು ಕಂಡಿದ್ದಾರೆ. ಲಂಬಿಯನ್ನು ಶಿರೋಮಣಿ ಅಕಾಲಿ ದಳದ ಭದ್ರಕೋಟೆಯೆಂದು ಪರಿಗಣಿಸಲಾಗಿದೆ. ಎಸ್‌ಎಡಿ ವರಿಷ್ಠರಾದ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು 1997ರಿಂದ ಸತತವಾಗಿ ಐದು ಬಾರಿ ಗೆಲುವು ಸಾಧಿಸಿದ್ದರು. ಈ ಚುನಾವಣೆಯಲ್ಲಿ ಆರನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದರು.

ಬಾದಲ್ 2017ರಲ್ಲಿ ಅಮರೀಂದರ್ ಸಿಂಗ್ ಅವರನ್ನು ಸೋಲಿಸಿದ್ದರು. ಬಾದಲ್ ಈ ಕ್ಷೇತ್ರದಿಂದ ಸ್ಪರ್ಧಿಸಿದ ಐದು ಚುನಾವಣೆಗಳಲ್ಲಿ 2007 ರಲ್ಲಿ ಕಾಂಗ್ರೆಸ್ ಅನ್ನು ಒಂಬತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದನ್ನು ಹೊರತುಪಡಿಸಿ ಪ್ರತಿ ಬಾರಿಯೂ ಅವರ ಗೆಲುವಿನ ಅಂತರ 20 ಸಾವಿರಕ್ಕಿಂತ ಹೆಚ್ಚಿರುತ್ತಿತ್ತು. ಈ ಭಾರಿಯ ಚುನಾವಣೆಯ ವೇಳೆ ಆರೋಗ್ಯ ಸರಿ ಇಲ್ಲದ ಕಾರಣ, ಚುನಾವಣಾ ಪ್ರಚಾರಗಳಲ್ಲಿ ಅವರು ಹಿನ್ನಡೆ ಅನುಭವಿಸಿದ್ದರು.

ಹಾಲಿ ಸಿಎಂಗೆ ಸೋಲು

ಪಂಜಾಬ್ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಚಮಕೌರ್ ಸಾಹಿಬ್ ಮತ್ತು ಭದೌರ್ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಸೋತಿದ್ದಾರೆ.

ಭದೌರ್‌ನಲ್ಲಿ ಆಮ್ ಆದ್ಮಿ ಪಕ್ಷದ ಲಾಭ್ ಸಿಂಗ್ ಉಗೋಕೆ 57,000 ಮತಗಳನ್ನು ಪಡೆದರೆ, ಚನ್ನಿ 23,000 ಮತಗಳನ್ನು ಪಡೆದರು. ಚಮಕೌರ್‌ ಸಾಹಿಬ್‌ನಲ್ಲಿ ಚನ್ನಿ ಸುಮಾರು 50,000 ಮತಗಳನ್ನು ಗಳಿಸಿದರು. ಆದರೆ ಅವರ ಹತ್ತಿರದ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ, ಸಿಎಂ ರೀತಿಯ ಹೆಸರನ್ನೇ ಹೊಂದಿದ್ದ ಚರಂಜಿತ್ ಸಿಂಗ್ 54,000ಗಳಿಗಿಂತ ಹೆಚ್ಚು ಮತಗಳನ್ನು ಗಳಿಸಿದರು.

ಆಮ್ ಆದ್ಮಿ ಪಕ್ಷ ಅಥವಾ ಎಎಪಿ ಪಂಜಾಬ್‌ನಲ್ಲಿ ಉತ್ತಮ ಮುನ್ನಡೆ ಸಾಧಿಸುವ ಮೂಲಕ ಸರ್ಕಾರ ರಚಿಸಲು ಸಿದ್ಧವಾಗಿದೆ. 117 ಸದಸ್ಯ ಬಲದ ಸದನದಲ್ಲಿ ಎಎಪಿ 90 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 18 ಸ್ಥಾನಗಳಲ್ಲಿ ಹಿಂದುಳಿದಿದೆ. ಬಿಜೆಪಿ 2 ಸ್ಥಾನಗಳನ್ನು ಗೆದ್ದರೆ, ಶಿರೋಮಣಿ ಅಕಾಲಿದಳ 6 ಸ್ಥಾನಗಳನ್ನು ಗೆದ್ದಿದೆ ಎಂದು ಆರಂಭಿಕ ಫಲಿತಾಂಶಗಳು ಹೇಳಿವೆ.

ಅಮರಿಂದರ್‌ಸಿಂಗ್‌ ಸೋಲು

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ಪಟಿಯಾಲ ನಗರ ಕ್ಷೇತ್ರದಲ್ಲಿ ಸೋಲನ್ನಪ್ಪಿದ್ದಾರೆ.

ಪಂಜಾಬ್‌ನಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಕ್ಲೀನ್ ಸ್ವೀಪ್ ದೊರೆಯುವ ಸೂಚನೆಗಳು ದೊರೆತಿವೆ. ಮಧ್ಯಾಹ್ನ 1 ಗಂಟೆ ವೇಳೆಗೆ 117 ಸ್ಥಾನಗಳಲ್ಲಿ 91ರಲ್ಲಿ ಎಎಪಿ ಮುನ್ನಡೆ ಸಾಧಿಸಿದೆ ಎಂದು ತಿಳಿಸಿದೆ.

ಪಟಿಯಾಲಾ ಕ್ಷೇತ್ರದಲ್ಲಿ ಅಮರಿಂದರ್ ಸಿಂಗ್ ಅವರನ್ನು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಜಿತ್ ಪಾಲ್ ಸಿಂಗ್ ಅವರು 13,000 ಮತಗಳ ಅಂತರದಿಂದ ಸೋಲಿಸಿದರು.

ಮಧ್ಯಾಹ್ನ 12.30 ರ ಹೊತ್ತಿಗೆ, ಅಜಿತ್ ಪಾಲ್ ಸಿಂಗ್ 36,645 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ 22,868 ಮತಗಳನ್ನು ಹೊಂದಿದ್ದರು.

ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅಮರಿಂದರ್‌‌, ಹಿಂದಿನ ಚುನಾವಣೆಯಲ್ಲಿ 2017ರಲ್ಲಿ ಭಾರಿ ಅಂತರದಿಂದ ಗೆದ್ದಿದ್ದರು ಎಂದು ಎನ್‌‌ಡಿಟಿವಿ ವರದಿ ಮಾಡಿದೆ. ಅವರು ನಾಲ್ಕು ಬಾರಿ ( 2002, 2007, 2012 ಮತ್ತು 2017) ಪಟಿಯಾಲಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

ನವೆಂಬರ್‌ನಲ್ಲಿ ಅಮರಿಂದರ್ ಸಿಂಗ್ ತಮ್ಮದೇ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದರು. ಪಂಜಾಬ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರು.


ಇದನ್ನೂ ಓದಿರಿ: ಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...