Homeಕರ್ನಾಟಕಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ಸೇರಿದಂತೆ ಹಾಲಿ ಮುಖ್ಯಮಂತ್ರಿ ಚರಂಜಿತ್‌ ಸಿಂಗ್ ಚೆನ್ನಿ, ಹಿಂದಿನ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್ ಸೋಲು ಕಂಡಿದ್ದಾರೆ.

- Advertisement -
- Advertisement -

ಪಂಜಾಬ್‌ ವಿಧಾನಸಭೆಯಲ್ಲಿ ಸ್ಪರ್ಧಿಸಿದ್ದ ಹಾಲಿ ಹಾಗೂ ಮಾಜಿ ಸಿಎಂಗಳಿಗೆಲ್ಲ ಸೋಲಾಗಿದೆ. ಹಾಲಿ ಮುಖ್ಯಮಂತ್ರಿ ಚರಂಜಿತ್ ಸಿಂಗ್ ಚನ್ನಿ, ಮಾಜಿ ಸಿಎಂಗಳಾದ ಪ್ರಕಾಶ್‌ ಸಿಂಗ್ ಬಾದಲ್‌ ಹಾಗೂ ಅಮರಿಂದರ್‌ ಸಿಂಗ್ ಸಿಧು ಸೋಲು ಕಂಡಿದ್ದಾರೆ.

ಐದು ಬಾರಿ ಮುಖ್ಯಮಂತ್ರಿಯಾಗಿದ್ದ ಪ್ರಕಾಶ್ ಸಿಂಗ್ ಬಾದಲ್ ಅವರು ತಮ್ಮ ತವರು ಕ್ಷೇತ್ರ ಲಂಬಿಯಿಂದ ಸ್ಪರ್ಧಿಸಿದ್ದರು. ಆದರೆ ಎಎಪಿ ಅಭ್ಯರ್ಥಿ ಗುರ್ಮೀತ್ ಸಿಂಗ್ ಖುಡಿಯಾನ್ ವಿರುದ್ಧ ಸೋಲು ಕಂಡಿದ್ದಾರೆ. ಲಂಬಿಯನ್ನು ಶಿರೋಮಣಿ ಅಕಾಲಿ ದಳದ ಭದ್ರಕೋಟೆಯೆಂದು ಪರಿಗಣಿಸಲಾಗಿದೆ. ಎಸ್‌ಎಡಿ ವರಿಷ್ಠರಾದ ಮಾಜಿ ಮುಖ್ಯಮಂತ್ರಿ ಪ್ರಕಾಶ್ ಸಿಂಗ್ ಬಾದಲ್ ಅವರು 1997ರಿಂದ ಸತತವಾಗಿ ಐದು ಬಾರಿ ಗೆಲುವು ಸಾಧಿಸಿದ್ದರು. ಈ ಚುನಾವಣೆಯಲ್ಲಿ ಆರನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗಿಳಿದಿದ್ದರು.

ಬಾದಲ್ 2017ರಲ್ಲಿ ಅಮರೀಂದರ್ ಸಿಂಗ್ ಅವರನ್ನು ಸೋಲಿಸಿದ್ದರು. ಬಾದಲ್ ಈ ಕ್ಷೇತ್ರದಿಂದ ಸ್ಪರ್ಧಿಸಿದ ಐದು ಚುನಾವಣೆಗಳಲ್ಲಿ 2007 ರಲ್ಲಿ ಕಾಂಗ್ರೆಸ್ ಅನ್ನು ಒಂಬತ್ತು ಸಾವಿರಕ್ಕೂ ಹೆಚ್ಚು ಮತಗಳಿಂದ ಸೋಲಿಸಿದ್ದನ್ನು ಹೊರತುಪಡಿಸಿ ಪ್ರತಿ ಬಾರಿಯೂ ಅವರ ಗೆಲುವಿನ ಅಂತರ 20 ಸಾವಿರಕ್ಕಿಂತ ಹೆಚ್ಚಿರುತ್ತಿತ್ತು. ಈ ಭಾರಿಯ ಚುನಾವಣೆಯ ವೇಳೆ ಆರೋಗ್ಯ ಸರಿ ಇಲ್ಲದ ಕಾರಣ, ಚುನಾವಣಾ ಪ್ರಚಾರಗಳಲ್ಲಿ ಅವರು ಹಿನ್ನಡೆ ಅನುಭವಿಸಿದ್ದರು.

ಹಾಲಿ ಸಿಎಂಗೆ ಸೋಲು

ಪಂಜಾಬ್ ಮುಖ್ಯಮಂತ್ರಿ ಮತ್ತು ಕಾಂಗ್ರೆಸ್ ನಾಯಕ ಚರಂಜಿತ್ ಸಿಂಗ್ ಚನ್ನಿ ಅವರು ಚಮಕೌರ್ ಸಾಹಿಬ್ ಮತ್ತು ಭದೌರ್ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲೂ ಸೋತಿದ್ದಾರೆ.

ಭದೌರ್‌ನಲ್ಲಿ ಆಮ್ ಆದ್ಮಿ ಪಕ್ಷದ ಲಾಭ್ ಸಿಂಗ್ ಉಗೋಕೆ 57,000 ಮತಗಳನ್ನು ಪಡೆದರೆ, ಚನ್ನಿ 23,000 ಮತಗಳನ್ನು ಪಡೆದರು. ಚಮಕೌರ್‌ ಸಾಹಿಬ್‌ನಲ್ಲಿ ಚನ್ನಿ ಸುಮಾರು 50,000 ಮತಗಳನ್ನು ಗಳಿಸಿದರು. ಆದರೆ ಅವರ ಹತ್ತಿರದ ಪ್ರತಿಸ್ಪರ್ಧಿ ಆಮ್ ಆದ್ಮಿ ಪಕ್ಷದ ಅಭ್ಯರ್ಥಿ, ಸಿಎಂ ರೀತಿಯ ಹೆಸರನ್ನೇ ಹೊಂದಿದ್ದ ಚರಂಜಿತ್ ಸಿಂಗ್ 54,000ಗಳಿಗಿಂತ ಹೆಚ್ಚು ಮತಗಳನ್ನು ಗಳಿಸಿದರು.

ಆಮ್ ಆದ್ಮಿ ಪಕ್ಷ ಅಥವಾ ಎಎಪಿ ಪಂಜಾಬ್‌ನಲ್ಲಿ ಉತ್ತಮ ಮುನ್ನಡೆ ಸಾಧಿಸುವ ಮೂಲಕ ಸರ್ಕಾರ ರಚಿಸಲು ಸಿದ್ಧವಾಗಿದೆ. 117 ಸದಸ್ಯ ಬಲದ ಸದನದಲ್ಲಿ ಎಎಪಿ 90 ಸ್ಥಾನಗಳಲ್ಲಿ ಮುನ್ನಡೆ ಸಾಧಿಸಿದ್ದರೆ, ಕಾಂಗ್ರೆಸ್ 18 ಸ್ಥಾನಗಳಲ್ಲಿ ಹಿಂದುಳಿದಿದೆ. ಬಿಜೆಪಿ 2 ಸ್ಥಾನಗಳನ್ನು ಗೆದ್ದರೆ, ಶಿರೋಮಣಿ ಅಕಾಲಿದಳ 6 ಸ್ಥಾನಗಳನ್ನು ಗೆದ್ದಿದೆ ಎಂದು ಆರಂಭಿಕ ಫಲಿತಾಂಶಗಳು ಹೇಳಿವೆ.

ಅಮರಿಂದರ್‌ಸಿಂಗ್‌ ಸೋಲು

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್ ಸಿಂಗ್ ಅವರು ತಮ್ಮ ಕುಟುಂಬದ ಭದ್ರಕೋಟೆಯಾದ ಪಟಿಯಾಲ ನಗರ ಕ್ಷೇತ್ರದಲ್ಲಿ ಸೋಲನ್ನಪ್ಪಿದ್ದಾರೆ.

ಪಂಜಾಬ್‌ನಲ್ಲಿ ಅರವಿಂದ್ ಕೇಜ್ರಿವಾಲ್ ನೇತೃತ್ವದ ಆಮ್ ಆದ್ಮಿ ಪಕ್ಷಕ್ಕೆ ಕ್ಲೀನ್ ಸ್ವೀಪ್ ದೊರೆಯುವ ಸೂಚನೆಗಳು ದೊರೆತಿವೆ. ಮಧ್ಯಾಹ್ನ 1 ಗಂಟೆ ವೇಳೆಗೆ 117 ಸ್ಥಾನಗಳಲ್ಲಿ 91ರಲ್ಲಿ ಎಎಪಿ ಮುನ್ನಡೆ ಸಾಧಿಸಿದೆ ಎಂದು ತಿಳಿಸಿದೆ.

ಪಟಿಯಾಲಾ ಕ್ಷೇತ್ರದಲ್ಲಿ ಅಮರಿಂದರ್ ಸಿಂಗ್ ಅವರನ್ನು ಆಮ್ ಆದ್ಮಿ ಪಕ್ಷದ ಅಭ್ಯರ್ಥಿ ಅಜಿತ್ ಪಾಲ್ ಸಿಂಗ್ ಅವರು 13,000 ಮತಗಳ ಅಂತರದಿಂದ ಸೋಲಿಸಿದರು.

ಮಧ್ಯಾಹ್ನ 12.30 ರ ಹೊತ್ತಿಗೆ, ಅಜಿತ್ ಪಾಲ್ ಸಿಂಗ್ 36,645 ಮತಗಳೊಂದಿಗೆ ಮುನ್ನಡೆ ಸಾಧಿಸಿದ್ದರು. ಕ್ಯಾಪ್ಟನ್ ಅಮರಿಂದರ್ ಸಿಂಗ್ 22,868 ಮತಗಳನ್ನು ಹೊಂದಿದ್ದರು.

ಎರಡು ಬಾರಿ ಮುಖ್ಯಮಂತ್ರಿಯಾಗಿದ್ದ ಅಮರಿಂದರ್‌‌, ಹಿಂದಿನ ಚುನಾವಣೆಯಲ್ಲಿ 2017ರಲ್ಲಿ ಭಾರಿ ಅಂತರದಿಂದ ಗೆದ್ದಿದ್ದರು ಎಂದು ಎನ್‌‌ಡಿಟಿವಿ ವರದಿ ಮಾಡಿದೆ. ಅವರು ನಾಲ್ಕು ಬಾರಿ ( 2002, 2007, 2012 ಮತ್ತು 2017) ಪಟಿಯಾಲಾ ಕ್ಷೇತ್ರವನ್ನು ಪ್ರತಿನಿಧಿಸಿದ್ದಾರೆ.

ನವೆಂಬರ್‌ನಲ್ಲಿ ಅಮರಿಂದರ್ ಸಿಂಗ್ ತಮ್ಮದೇ ಪಕ್ಷವಾದ ಪಂಜಾಬ್ ಲೋಕ ಕಾಂಗ್ರೆಸ್ ಸ್ಥಾಪಿಸಿದ್ದರು. ಪಂಜಾಬ್ ಚುನಾವಣೆಯಲ್ಲಿ ಬಿಜೆಪಿಯೊಂದಿಗೆ ಮೈತ್ರಿ ಮಾಡಿಕೊಂಡಿದ್ದರು.


ಇದನ್ನೂ ಓದಿರಿ: ಗೋವಾ ಚುನಾವಣಾ ಫಲಿತಾಂಶ: ಪಣಜಿಯಲ್ಲಿ 800 ಮತಗಳ ಅಂತರದಿಂದ ಸೋಲುಂಡ ಉತ್ಪಲ್ ಪರಿಕ್ಕರ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....