Homeಮುಖಪುಟಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಸ್ಥಳವನ್ನು 'ಶಹೀದ್ ಹಿಂದೂ ಪ್ರವಾಸಿ ತಾಣ'ವೆಂದು ಘೋಷಿಸಲು ಕೋರಿ ಪಿಐಎಲ್:...

ಪಹಲ್ಗಾಮ್ ಭಯೋತ್ಪಾದಕ ದಾಳಿ ನಡೆದ ಸ್ಥಳವನ್ನು ‘ಶಹೀದ್ ಹಿಂದೂ ಪ್ರವಾಸಿ ತಾಣ’ವೆಂದು ಘೋಷಿಸಲು ಕೋರಿ ಪಿಐಎಲ್: ತಿರಸ್ಕರಿಸಿದ ಕೋರ್ಟ್

- Advertisement -
- Advertisement -

ಪಹಲ್ಗಾಮ್ ಭಯೋತ್ಪಾದಕ ದಾಳಿಯಲ್ಲಿ ಸಾವನ್ನಪ್ಪಿದ 26 ಪ್ರವಾಸಿಗರನ್ನು ‘ಹುತಾತ್ಮರು’ ಮತ್ತು ದಾಳಿ ನಡೆದ ಸ್ಥಳವನ್ನು ‘ಶಹೀದ್ ಹಿಂದೂ ಕಣಿವೆ ಪ್ರವಾಸಿ ತಾಣ’ ಎಂದು ಘೋಷಿಸಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಮಂಗಳವಾರ (ಮೇ 20) ತಿರಸ್ಕರಿಸಿದೆ.

ಆಯುಷ್ ಅಹುಜಾ ಎಂಬವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು ಮತ್ತು ನ್ಯಾಯಮೂರ್ತಿ ಸುಮೀತ್ ಗೋಯೆಲ್ ಅವರಿದ್ದ ಪೀಠ ಆದೇಶ ಪ್ರಕಟಿಸಿದೆ ಎಂದು livelaw.in ವರದಿ ಮಾಡಿದೆ.

“ಕಾರ್ಯಾಂಗಕ್ಕೆ ಮಾತ್ರ ಮೀಸಲಾಗಿರುವ ನೀತಿ ನಿರೂಪಣಾ ಕ್ಷೇತ್ರಕ್ಕೆ ನ್ಯಾಯಾಲಯ ಪ್ರವೇಶಿಸುವುದಿಲ್ಲ” ಎಂದು ಹೇಳಿದ ಪೀಠ, ಸೂಕ್ತ ಪ್ರಾಧಿಕಾರದ ಮುಂದೆ ಅರ್ಜಿ ಸಲ್ಲಿಸಲು ಅರ್ಜಿದಾರಿಗೆ ಸೂಚಿಸಿದೆ ಮತ್ತು 30 ದಿನಗಳ ಒಳಗೆ ಸಲ್ಲಿಸಿದರೆ ಅದನ್ನು ಪರಿಗಣಿಸಲಾಗುತ್ತದೆ” ಎಂದಿದೆ.

ಭಯೋತ್ಪಾದಕ ದಾಳಿಯಲ್ಲಿ ಸತ್ತವರನ್ನು ಹುತಾತ್ಮರೆಂದು ಘೋಷಿಸುವುದು ಸಂವಿಧಾನದ 226 ನೇ ವಿಧಿಯ ಅಡಿಯಲ್ಲಿ ಬರುತ್ತದೆಯೇ? ದಯವಿಟ್ಟು ಒಂದು ಪೂರ್ವನಿದರ್ಶನವನ್ನು ಒದಗಿಸಿ. ಇದು ಆಡಳಿತಾತ್ಮಕ ವಿಷಯ ಮತ್ತು ನೀತಿಯ ಪ್ರಶ್ನೆಯಾಗಿದ್ದು, ಇದನ್ನು ನಿರ್ಧರಿಸಲು ಕಾರ್ಯಾಂಗಕ್ಕೆ ಬಿಡಬೇಕು. ನಾವು ಅದನ್ನು ಮಾಡಬಹುದೇ?” ಎಂದು ವಿಚಾರಣೆಯ ಸಮಯದಲ್ಲಿ ಮುಖ್ಯ ನ್ಯಾಯಮೂರ್ತಿ ನಾಗು ಅವರು ಅರ್ಜಿದಾರರನ್ನು ಮೌಖಿಕವಾಗಿ ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿದ ಅರ್ಜಿದಾರರಾದ ಅಹುಜಾ, “ಧರ್ಮದ ಹೆಸರಿನಲ್ಲಿ ಭಯೋತ್ಪಾದಕರು ಅಮಾಯಕ ಪ್ರವಾಸಿಗರ ತಲೆಗೆ ಗುಂಡು ಹಾರಿಸಿದ್ದಾರೆ. ಮೃತರು ಅವರನ್ನು ಸೈನಿಕರಂತೆ ಎದುರಿಸಬೇಕಾಯಿತು” ಎಂದಿದ್ದಾರೆ.

ಪಿಐಎಲ್‌ ವಿರೋಧಿಸಿ ಕೇಂದ್ರದ ಪರ ನ್ಯಾಯಾಲಯಕ್ಕೆ ಹಾಜರಾಗಿದ್ದ ಸಹಾಯಕ ಮಹಾನಿರ್ದೇಶಕ ಸತ್ಯ ಪಾಲ್ ಜೈನ್, “ಅರ್ಜಿದಾರರಿಗೆ ಭಾರತ ಸರ್ಕಾರ ಏನು ಮಾಡುತ್ತಿದೆ ಎಂದು ತಿಳಿದಿಲ್ಲ. ಗೃಹ ಸಚಿವರು ಘಟನೆ ನಡೆದ ದಿನ ಸಂಜೆ ಶ್ರೀನಗರಕ್ಕೆ ಭೇಟಿ ನೀಡಿದ್ದರು. ನಾವು ಇತರ ರಾಷ್ಟ್ರದೊಂದಿಗೆ ಯುದ್ಧದ ಅಂಚಿನಲ್ಲಿದ್ದೇವೆ. ಹಾಗಾಗಿ, ಇಂತಹ ವಿಷಯಗಳನ್ನು ಚರ್ಚೆ ಮಾಡುವ ಸಮಯ ಇದಲ್ಲ, ನಾವು ಇತರ ವಿಷಯಗಳಿಗೆ ಆದ್ಯತೆ ನೀಡುತ್ತಿದ್ದೇವೆ” ಎಂದು ಹೇಳಿದ್ದಾರೆ.

“ಯಾವುದೇ ಸೈನಿಕರು ಸತ್ತರೂ ಸಹ, ಅವರನ್ನು ಪ್ರಶಸ್ತಿಗೆ ಪರಿಗಣಿಸಬೇಕು. ಆದರೆ, ಅದನ್ನು ತಕ್ಷಣವೇ ನೀಡಲಾಗುವುದಿಲ್ಲ. ಸಮಯ ತೆಗೆದುಕೊಳ್ಳುತ್ತದೆ. ಸಾಮಾನ್ಯವಾಗಿ ಕನಿಷ್ಠ ಒಂದು ವರ್ಷ” ಎಂದು ಇದೇ ವೇಳೆ ಮುಖ್ಯ ನ್ಯಾಯಮೂರ್ತಿ ಶೀಲ್ ನಾಗು ಹೇಳಿದ್ದಾರೆ.

ಪಿಐಎಲ್‌ ಸಂಬಂಧ ನ್ಯಾಯಾಲಯ ಮೇ 6 ರಂದು ತೀರ್ಪನ್ನು ಕಾಯ್ದಿರಿಸಿತ್ತು.

ಸೌಜನ್ಯ : livelaw.in & barandbench.com

ನ್ಯಾಯಾಂಗ ಸೇವೆಗೆ ಅರ್ಹತೆ ಪಡೆಯಲು ಮೂರು ವರ್ಷಗಳ ವಕೀಲಿಕೆ ಕಡ್ಡಾಯ: ಸುಪ್ರೀಂ ಕೋರ್ಟ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...

ತಪ್ಪಾಗಿ ಸುದ್ದಿ ಪ್ರಕಟ : ಗೃಹ ಸಚಿವ ಪ್ರಿಯಾಂಕ್ ಖರ್ಗೆ ಅವರಲ್ಲಿ ಕ್ಷಮೆಯಾಚಿಸಿದ PTI

ತಮ್ಮ ಹೇಳಿಕೆಯನ್ನು ತಪ್ಪಾಗಿ ಪ್ರಸಾರ ಮಾಡಿದ್ದ ಪ್ರೆಸ್ ಟ್ರಸ್ಟ್ ಆಫ್ ಇಂಡಿಯಾ (PTI) ಅಧಿಕೃತವಾಗಿ ಕ್ಷಮೆಯಾಚಿಸಿದರೂ, ಅದರಿಂದ ಈಗಾಗಲೇ ಉಂಟಾಗಿರುವ ಹಾನಿ ಸರಿಪಡಿಸಲು ಸಾಧ್ಯವಿಲ್ಲ ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಆ....

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...