Homeಮುಖಪುಟಪಂಜಾಬ್ ಉಪಚುನಾವಣೆ: ಸಿಎಂ ಭಗವಂತ್ ಮಾನ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಕಳೆದುಕೊಂಡ ಆಪ್

ಪಂಜಾಬ್ ಉಪಚುನಾವಣೆ: ಸಿಎಂ ಭಗವಂತ್ ಮಾನ್ ಪ್ರತಿನಿಧಿಸುತ್ತಿದ್ದ ಕ್ಷೇತ್ರ ಕಳೆದುಕೊಂಡ ಆಪ್

- Advertisement -
- Advertisement -

ಭಾನುವಾರ ನಡೆದ ಪಂಜಾಬ್‌ನ ಸಂಗ್ರೂರ್ ಲೋಕಸಭಾ ಕ್ಷೇತ್ರದ ಉಪಚುನಾವಣೆ ಮತಎಣಿಕೆಯಲ್ಲಿ ಆಮ್ ಆದ್ಮಿ ಪಕ್ಷ (ಎಎಪಿ) ಹೀನಾಯ ಸೋಲನುಭವಿಸಿದ್ದು, ಶಿರೋಮಣಿ ಅಕಾಲಿದಳ (ಅಮೃತಸರ) ಅಭ್ಯರ್ಥಿ ಸಿಮ್ರಂಜಿತ್ ಸಿಂಗ್ ಮಾನ್ ಗೆಲುವು ಸಾಧಿಸಿದ್ದಾರೆ.

ಸಿಮ್ರಂಜಿತ್ ಸಿಂಗ್ ಮಾನ್, ಕಳೆದ ಬಾರಿ ಮುಖ್ಯಮಂತ್ರಿ ಭಗವಂತ್ ಮಾನ್ ಹೊಂದಿದ್ದ ಲೋಕಸಭೆ ಕ್ಷೇತ್ರದಲ್ಲಿಯೇ ಆಡಳಿತ ಪಕ್ಷದ ಅಭ್ಯರ್ಥಿಯನ್ನು ಸೋಲಿಸಿದ್ದಾರೆ. ಎಎಪಿ ಪ್ರತಿಸ್ಪರ್ಧಿ ಗುರ್ಮೈಲ್ ಸಿಂಗ್ ಅವರನ್ನು ಸಂಗ್ರೂರ್ ಲೋಕಸಭಾ ಕ್ಷೇತ್ರದಿಂದ 5,800 ಮತಗಳ ಅಂತರದಿಂದ ಸೋಲಿಸಿದ್ದಾರೆ.

ಸಿಮ್ರಂಜಿತ್ ಸಿಂಗ್ ಮಾನ್ 77 ವರ್ಷ ವಯಸ್ಸಿನ ಮಾಜಿ ಸಂಸದರು ಮತ್ತು ಶಿರೋಮಣಿ ಅಕಾಲಿದಳದ (ಅಮೃತಸರ) ಅಧ್ಯಕ್ಷರಾಗಿದ್ದಾರೆ. ಇವರು 1999ರಲ್ಲಿ ಇದೇ ಕ್ಷೇತ್ರದಿಂದ ಕೊನೆಯ ಬಾರಿಗೆ ಆಯ್ಕೆಯಾಗಿದ್ದರು. ಈ ಬಣ ಶಿರೋಮಣಿ ಅಕಾಲಿದಳಕ್ಕೆ ಸಂಬಂಧಿಸಿಲ್ಲ.

ಇದನ್ನೂ ಓದಿ: ಶಿವಸೇನೆಯ 15 ಬಂಡಾಯ ಶಾಸಕರಿಗೆ ವೈ-ಪ್ಲಸ್ ಭದ್ರತೆ ನೀಡಿದ ಕೇಂದ್ರ ಸರ್ಕಾರ

ಕಳೆದ ತಿಂಗಳು ಹತ್ಯೆಯಾದ ಪಂಜಾಬಿ ಗಾಯಕ ಸಿಧು ಮೂಸೆವಾಲಾ ಅವರ ಬೆಂಬಲವೂ ಸಿಮ್ರಂಜಿತ್ ಸಿಂಗ್ ಮಾನ್‌ಗೆ ಇತ್ತು ಎಂದು ವರದಿಯಾಗಿದೆ. ಹೀಗಾಗಿ ತಮ್ಮ ಗೆಲುವವನ್ನು ಸಂಗ್ರೂರಿನ ಜನರಿಗೆ ಮತ್ತು ದಿವಂಗತ ನಟ, ಸಾಮಾಜಿಕ ಕಾರ್ಯಕರ್ತ ದೀಪ್ ಸಿಧು ಮತ್ತು ಸಿಧು ಮೂಸೆವಾಲಾ ಅವರಿಗೆ ಅರ್ಪಿಸಿದ್ದಾರೆ.

“ಈ ಗೆಲುವು ಭಾರತದ ರಾಜಕೀಯದ ಮೇಲೆ ಪರಿಣಾಮ ಬೀರುತ್ತದೆ. ಅನೇಕರು ‘ಸಿಮ್ರಂಜಿತ್ ಸಿಂಗ್ ಮಾನ್ ಏನು ಮಾಡುತ್ತಾರೆ’ ಎಂದು ಗೇಲಿ ಮಾಡುತ್ತಿದ್ದರು. ಅವರು ತಪ್ಪು ಎಂದು ಇಂದು ಸಾಬೀತಾಗಿದೆ” ಸಿಮ್ರಂಜಿತ್ ಮಾನ್ ಹೇಳಿದ್ದಾರೆ.

ಈ ಬಾರಿಯ ಉಪ ಚುನಾವಣೆಯಲ್ಲಿ ಅತೀ ಕಡಿಮೆ ಮತದಾನವಾಗಿದ್ದು, ಇದು ಆಮ್ ಆದ್ಮಿ ಪಾರ್ಟಿ ಸೋಲಿಗೆ ಕಾರಣ ಎಂದು ಎಎಪಿ ಆರೋಪಿಸಿದೆ.

ಈ ವರ್ಷದ ಆರಂಭದಲ್ಲಿ ನಡೆದ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಶಾಸಕರಾಗಿ ಆಯ್ಕೆಯಾದ ನಂತರ ಭಗವಂತ್ ಮಾನ್ ಅವರು ಲೋಕಸಭೆ ಸ್ಥಾನಕ್ಕೆ ರಾಜೀನಾಮೆ ನೀಡಿದ ಕಾರಣ ಉಪಚುನಾವಣೆ ನಡೆದಿತ್ತು. ಭಗವಂತ್ ಮಾನ್ ಅವರು 2014 ಮತ್ತು 2019 ರ ಚುನಾವಣೆಯಲ್ಲಿ ಸಂಗ್ರೂರ್ ಸ್ಥಾನವನ್ನು ಗೆದ್ದಿದ್ದರು. ಈ ಬಾರಿ ಜೂನ್ 23 ರಂದು ನಡೆದ ಉಪ ಚುನಾವಣೆಯಲ್ಲಿ 16 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.

ಎಎಪಿ ಪಕ್ಷದ ಸಂಗ್ರೂರ್ ಜಿಲ್ಲಾ ಉಸ್ತುವಾರಿ ಗುರ್ಮೈಲ್ ಸಿಂಗ್ (38) ಅವರನ್ನು ಕಣಕ್ಕಿಳಿಸಿತು, ಆದರೆ ಕಾಂಗ್ರೆಸ್ ಮಾಜಿ ಶಾಸಕ ದಲ್ವಿರ್ ಸಿಂಗ್ ಗೋಲ್ಡಿ ಅವರನ್ನು ಆಯ್ಕೆ ಮಾಡಿತ್ತು. ಈ ತಿಂಗಳ ಆರಂಭದಲ್ಲಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದ ಮಾಜಿ ಬರ್ನಾಲಾ ಶಾಸಕ ಕೇವಲ್ ಧಿಲ್ಲೋನ್ ಅವರನ್ನು ಬಿಜೆಪಿ ಕಣಕ್ಕಿಳಿಸಿತ್ತು.


ಇದನ್ನೂ ಓದಿ: ‘ಎಷ್ಟು ದಿನ ಗುವಾಹಟಿಯಲ್ಲಿ ಅಡಗಿಕೊಳ್ಳುತ್ತೀರಿ?’: ಬಂಡಾಯಗಾರರಿಗೆ ಸಂಜಯ್ ರಾವತ್ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...

ಆಕಸ್ಮಿಕವಾಗಿ ಗಡಿ ದಾಟಿದ್ದ 7 ಭಾರತೀಯರನ್ನು ಹಸ್ತಾಂತರಿಸಿದ ಪಾಕಿಸ್ತಾನ

2023 ರ ಪ್ರವಾಹದ ಸಮಯದಲ್ಲಿ ಅಜಾಗರೂಕತೆಯಿಂದ ಗಡಿ ದಾಟಿದ ನಂತರ ಬಂಧಿಸಲ್ಪಟ್ಟ ಏಳು ಭಾರತೀಯ ನಾಗರಿಕರನ್ನು ಪಾಕಿಸ್ತಾನ ಶನಿವಾರ ಸ್ವದೇಶಕ್ಕೆ ವಾಪಸ್ ಕಳುಹಿಸಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪಂಜಾಬ್‌ನ ಅಟ್ಟಾರಿ ಇಂಟಿಗ್ರೇಟೆಡ್ ಚೆಕ್ ಪೋಸ್ಟ್‌ನಲ್ಲಿ...

ಮೀರತ್| ಅಪಹರಣ ಪ್ರಕರಣ ಹಿಂಪಡೆಯುವಂತೆ ಪೊಲೀಸರ ಒತ್ತಡ; ‘ಗೃಹಬಂಧನ’ದಲ್ಲಿ ದಲಿತ ಕುಟುಂಬ

ಜನವರಿ ತಿಂಗಳ ಆರಂಭದಲ್ಲಿ ಉತ್ತರ ಪ್ರದೇಶದ ಮೀರತ್ ಜಿಲ್ಲೆಯ ಕಪ್ಸಾದ್ ಗ್ರಾಮದಲ್ಲಿ ತಾಯಿಯ ಕೊಲೆಯ ನಂತರ ಅಪಹರಿಸಲ್ಪಟ್ಟ ದಲಿತ ಹುಡುಗಿಯ ಕುಟುಂಬ ಸದಸ್ಯರು ತಾವು ಗೃಹಬಂಧನದಲ್ಲಿದ್ದು, ಆರೋಪಿಗಳ ವಿರುದ್ಧ ಪ್ರಕರಣವನ್ನು ಮುಂದುವರಿಸದಂತೆ ಪೊಲೀಸರು...

ಉದ್ಯಮಿ ಸಿಜೆ ರಾಯ್ ಮರಣೋತ್ತರ ಪರೀಕ್ಷೆ; ಹೃದಯ-ಶ್ವಾಸಕೋಶದಲ್ಲಿ 6.35 ಎಂಎಂ ಗುಂಡಿನ ಗಾಯ

ಕಾನ್ಫಿಡೆಂಟ್ ಗ್ರೂಪ್ ಅಧ್ಯಕ್ಷ ಸಿಜೆ ರಾಯ್ ಅವರ ಆತ್ಮಹತ್ಯೆಯ ಮರಣೋತ್ತರ ಪರೀಕ್ಷೆಯ ವರದಿಗಯನ್ನು ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕ ಡಾ. ಅರವಿಂದ್ ಎಂಎನ್ ವಿವರಿಸಿದ್ದಾರೆ. 6.35 ಎಂಎಂ ಗುಂಡಿನ ದಾಳಿಯು ತಕ್ಷಣದ...

ಮುಂಬೈ| ನಿರ್ದೇಶಕ ರೋಹಿತ್ ಶೆಟ್ಟಿ ಮನೆಯ ಹೊರಗೆ 4 ಸುತ್ತು ಗುಂಡು ಹಾರಿಸಿದ ಅಪರಿಚಿತರು

ಶನಿವಾರ ತಡರಾತ್ರಿ, ಬಾಲಿವುಡ್ ನಿರ್ದೇಶಕ ರೋಹಿತ್ ಶೆಟ್ಟಿ ಅವರ ಮುಂಬೈನ ಜುಹು ನಿವಾಸದ ಹೊರಗೆ ನಾಲ್ಕು ಸುತ್ತು ಗುಂಡು ಹಾರಿಸಲಾಗಿದ್ದು, ಘಟನೆಯಲ್ಲಿ ಯಾವುದೇ ಗಾಯಗಳಾಗಿಲ್ಲ ಎಂದು ವರದಿಯಾಗಿದೆ. ಚಿತ್ರ ನಿರ್ಮಾಪಕ-ನಿರ್ದೇಶಕರ ಕಟ್ಟಡದ ಬಳಿ ಅಪರಿಚಿತ...

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...