Homeಮುಖಪುಟಪಂಜಾಬ್ ಮುಖ್ಯಮಂತ್ರಿ ಬದಲಾವಣೆ: ಈ ದಿನದ ಬೆಳವಣಿಗೆಯ 5 ಅಂಶಗಳು

ಪಂಜಾಬ್ ಮುಖ್ಯಮಂತ್ರಿ ಬದಲಾವಣೆ: ಈ ದಿನದ ಬೆಳವಣಿಗೆಯ 5 ಅಂಶಗಳು

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಈ ವೇಳೆ ಅವರು ಕಳೆದ ಎರಡು ತಿಂಗಳಿನಿಂದ ಮೂರು ಬಾರಿ ಅವಮಾನಿತನಾಗಿದ್ದೆ ಎಂಬ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ನವಜ್ಯೋತ್‌ ಸಿಂಗ್ ಸಿಧು ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷವು ತಮಗೆ ನಂಬಿಕಸ್ಥರಾದ ಯಾರನ್ನಾದರೂ ಮುಖ್ಯಮಂತ್ರಿ ಮಾಡಲಿ, ಆದರೆ ಅಸಮರ್ಥನಾದ ನವಜ್ಯೋತ್ ಸಿಂಗ್ ಸಿಧುವನ್ನು ಮುಖ್ಯಮಂತ್ರಿ ಮಾಡುವುದನ್ನು ಒಪ್ಪುವುದಿಲ್ಲ ಎಂದು ಗುಡುಗಿದ್ದರು. ಇಂದಿನ ಬೆಳವಣಿಗೆಯ 5 ಅಂಶಗಳು ಇಲ್ಲಿವೆ.

  1. ಪಂಜಾಬ್‌ನ ಮುಂದಿನ ಮುಖ್ಯಮಂತ್ರಿಯಾಗುವ ಪ್ರಸ್ತಾಪವನ್ನು ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸದಸ್ಯೆ ಅಂಬಿಕಾ ಸೋನಿ ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯೊಂದಿಗೆ ತಡರಾತ್ರಿವರೆಗೂ ನಡೆದ ಸಭೆಯಲ್ಲಿ ಅವರು ಸಿಖ್ ಅಲ್ಲದ ವ್ಯಕ್ತಿ ಪಂಜಾಬ್ ಮುಖ್ಯಮಂತ್ರಿಯಾಗುವುದು ಪಕ್ಷಕ್ಕೆ ಒಳ್ಳೆಯದು ಮಾಡುವುದಿಲ್ಲ ಎಂಬ ಕಾರಣದೊಂದಿಗೆ ಪ್ರಸ್ತಾಪ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
  2. ಇನ್ನು ಸಿಎಂ ಸ್ಥಾನಕ್ಕೆ ಸದ್ಯಕ್ಕೆ ನಾಲ್ವರು ನಾಯಕರ ಹೆಸರುಗಳು ಚಾಲ್ತಿಯಲ್ಲಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಸುಖಜಿಂದರ್ ರಾಂಧವಾ ಜೊತೆಗೆ ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥರುಗಳಾದ ಸುನೀಲ್ ಜಖರ್ ಮತ್ತು ಪ್ರತಾಪ್ ಸಿಂಗ್ ಬಾಜ್ವಾರೊಂದಿಗೆ ಬಿಯಾಂತ್ ಸಿಂಗ್ ಅವರ ಮೊಮ್ಮಗ ರವಣೀತ್ ಸಿಂಗ್ ಬಿಟ್ಟು ಕೂಡ ಸ್ಪರ್ಧೆಯಲ್ಲಿದ್ದಾರೆ ಎನ್ನಲಾಗಿದೆ.
  3. ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥರಾದ ಸುನೀಲ್ ಜಖರ್ ಹೆಸರೂ ಮುಂಚೂಣಿಯಲ್ಲಿದೆ. ಒಂದು ವೇಳೆ ಅವರು ಮುಖ್ಯಮಂತ್ರಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಸಿಖ್ ಅಲ್ಲದ ಮುಖ್ಯಮಂತ್ರಿಯಾಗಲಿದ್ದಾರೆ.
  4. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಲ್ಲಕ್ಕಿಂತ ಹೆಚ್ಚಾಗಿ ಪಕ್ಷದ ಹಿತ ಕಾಪಾಡಲು ಮುಂದಾಗಿ ಎಂದು ಅಮರಿಂದರ್‌ ಸಿಂಗ್‌ರವರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಧೀರ್ಘ ಪತ್ರ ಬರೆದಿರುವ ಅವರು “ನಮ್ಮನ್ನು ಮೀರಿ ಮತ್ತು ಪಕ್ಷದ ಮತ್ತು ದೇಶದ ಹಿತಾಸಕ್ತಿಗಾಗಿ ಯೋಚಿಸುತ್ತೀರಿ ಎಂಬ ಭರವಸೆಯಿದೆ” ಎಂದಿದ್ದಾರೆ.
  5. ಇಂದು ಮಧ್ಯಾಹ್ನ 1 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಅಲ್ಲಿ ಹೊಸ ಮುಖ್ಯಮಂತ್ರಿಗಳನ್ನು ಘೋಷಿಸುವ ಸಾಧ್ಯತೆಯಿದೆ. ಒಟ್ಟು 117 ಜನರ ಪಂಜಾಬ್ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಸದ್ಯಕ್ಕೆ 80 ಶಾಸಕರನ್ನು ಹೊಂದಿದೆ. ಮುಖ್ಯಮಂತ್ರಿಯೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳಿರಲಿದ್ದಾರೆ ಎನ್ನಲಾಗಿದೆ

ಇದನ್ನೂ ಓದಿ: ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದ ಹಿಂದೂ ಮಹಾಸಭಾ ಕಾರ್ಯದರ್ಶಿ ಯೂಟರ್ನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲಂಚ ಪಡೆಯುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕ; ಲೋಕಾಯುಕ್ತ ಪೊಲೀಸರಿಂದ ಚಂದ್ರು ಲಮಾಣಿ ಬಂಧನ

ಲಂಚ ಪಡೆಯುವಾಗಲೇ ಲೋಕಾಯುಕ್ತ ಪೊಲೀಸರು ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರನ್ನು ಬಂಧಿಸಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಗುತ್ತಿಗೆದಾರ ವಿಜಯ್ ಪೂಜಾರ್ ಅವರ ದೂರಿನ ಮೇರೆಗೆ ಗದಗ ಲೋಕಾಯುಕ್ತ ಪೊಲೀಸರು ನಡೆಸಿದ...

ಎಐ ಶೃಂಗಸಭೆಯಲ್ಲಿ ಪ್ರತಿಭಟನೆ : ನಾಲ್ವರು ಯುವ ಕಾಂಗ್ರೆಸ್‌ ಕಾರ್ಯಕರ್ತರು 5 ದಿನ ಪೊಲೀಸ್ ಕಸ್ಟಡಿಗೆ

ನವದೆಹಲಿಯ ಭಾರತ ಮಂಟಪದಲ್ಲಿ ಆಯೋಜಿಸಿದ್ದ ಎಐ ಶೃಂಗಸಭೆಯಲ್ಲಿ ಶರ್ಟ್ ಬಿಚ್ಚಿ ಪ್ರತಿಭಟಿಸಿದ್ದ ನಾಲ್ವರು ಯುವ ಕಾಂಗ್ರೆಸ್ ಕಾರ್ಯಕರ್ತರನ್ನು ದೆಹಲಿ ನ್ಯಾಯಾಲಯ ಶನಿವಾರ (ಫೆ.21) 5 ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದೆ. ದೆಹಲಿ ಪೊಲೀಸರು...

ಮೈಮೇಲೆ ದೇವರು ಬಂದಂತೆ ನಟಿಸಿ ದಲಿತ ನವದಂಪತಿ ದೇವಸ್ಥಾನ ಪ್ರವೇಶ ನಿರಾಕರಣೆ: ವ್ಯಕ್ತಿ ಬಂಧನ

ಮೈಮೇಲೆ ದೇವರು ಬಂದಂತೆ ನಾಟಕವಾಡಿದ ವ್ಯಕ್ತಿಯೊಬ್ಬ, ದೇವಸ್ಥಾನಕ್ಕೆ ಬಂದಿದ್ದ ದಲಿತ ನವದಂಪತಿಯನ್ನು ಹೊರಗೆ ಕಳುಹಿಸುವ ಮೂಲಕ ಅಸ್ಪೃಶ್ಯತೆ ಆಚರಣೆ ಮಾಡಿರುವ ಘಟನೆ ತುಮಕೂರು ಜಿಲ್ಲೆಯ ತುರುವೇಕೆರೆ ತಾಲೂಕಿನ ಗೋಣಿ ತುಮಕೂರಿನಲ್ಲಿ (ಫೆ.20) ನಡೆದಿದೆ. ಗೃಹ...

ಜಾತಿವಾದಿ ಹೇಳಿಕೆ: ಜೆಎನ್‌ಯು ಉಪಕುಲಪತಿ ರಾಜೀನಾಮೆಗೆ ವಿದ್ಯಾರ್ಥಿ ಸಂಘ ಆಗ್ರಹ

ದೆಹಲಿಯ ಜವಾಹರಲಾಲ್ ನೆಹರು ವಿಶ್ವ ವಿದ್ಯಾಲಯದ (ಜೆಎನ್‌ಯು) ಉಪಕುಲಪತಿ ಶಾಂತಿಶ್ರೀ ಧೂಳಿಪುಡಿ ಪಂಡಿತ್ ಅವರು 'ದ ಸಂಡೇ ಗಾರ್ಡಿಯನ್' ಯೂಟ್ಯೂಬ್‌ ಚಾನೆಲ್‌ನ ಪಾಡ್‌ಕಾಸ್ಟ್‌ನಲ್ಲಿ 'ಜಾತಿ ಮತ್ತು ವಿಕ್ಟಿಮ್ ಕಾರ್ಡ್' ಕುರಿತು ನೀಡಿದ ಹೇಳಿಕೆ...

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...