Homeಮುಖಪುಟಪಂಜಾಬ್ ಮುಖ್ಯಮಂತ್ರಿ ಬದಲಾವಣೆ: ಈ ದಿನದ ಬೆಳವಣಿಗೆಯ 5 ಅಂಶಗಳು

ಪಂಜಾಬ್ ಮುಖ್ಯಮಂತ್ರಿ ಬದಲಾವಣೆ: ಈ ದಿನದ ಬೆಳವಣಿಗೆಯ 5 ಅಂಶಗಳು

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಈ ವೇಳೆ ಅವರು ಕಳೆದ ಎರಡು ತಿಂಗಳಿನಿಂದ ಮೂರು ಬಾರಿ ಅವಮಾನಿತನಾಗಿದ್ದೆ ಎಂಬ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ನವಜ್ಯೋತ್‌ ಸಿಂಗ್ ಸಿಧು ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷವು ತಮಗೆ ನಂಬಿಕಸ್ಥರಾದ ಯಾರನ್ನಾದರೂ ಮುಖ್ಯಮಂತ್ರಿ ಮಾಡಲಿ, ಆದರೆ ಅಸಮರ್ಥನಾದ ನವಜ್ಯೋತ್ ಸಿಂಗ್ ಸಿಧುವನ್ನು ಮುಖ್ಯಮಂತ್ರಿ ಮಾಡುವುದನ್ನು ಒಪ್ಪುವುದಿಲ್ಲ ಎಂದು ಗುಡುಗಿದ್ದರು. ಇಂದಿನ ಬೆಳವಣಿಗೆಯ 5 ಅಂಶಗಳು ಇಲ್ಲಿವೆ.

  1. ಪಂಜಾಬ್‌ನ ಮುಂದಿನ ಮುಖ್ಯಮಂತ್ರಿಯಾಗುವ ಪ್ರಸ್ತಾಪವನ್ನು ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸದಸ್ಯೆ ಅಂಬಿಕಾ ಸೋನಿ ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯೊಂದಿಗೆ ತಡರಾತ್ರಿವರೆಗೂ ನಡೆದ ಸಭೆಯಲ್ಲಿ ಅವರು ಸಿಖ್ ಅಲ್ಲದ ವ್ಯಕ್ತಿ ಪಂಜಾಬ್ ಮುಖ್ಯಮಂತ್ರಿಯಾಗುವುದು ಪಕ್ಷಕ್ಕೆ ಒಳ್ಳೆಯದು ಮಾಡುವುದಿಲ್ಲ ಎಂಬ ಕಾರಣದೊಂದಿಗೆ ಪ್ರಸ್ತಾಪ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
  2. ಇನ್ನು ಸಿಎಂ ಸ್ಥಾನಕ್ಕೆ ಸದ್ಯಕ್ಕೆ ನಾಲ್ವರು ನಾಯಕರ ಹೆಸರುಗಳು ಚಾಲ್ತಿಯಲ್ಲಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಸುಖಜಿಂದರ್ ರಾಂಧವಾ ಜೊತೆಗೆ ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥರುಗಳಾದ ಸುನೀಲ್ ಜಖರ್ ಮತ್ತು ಪ್ರತಾಪ್ ಸಿಂಗ್ ಬಾಜ್ವಾರೊಂದಿಗೆ ಬಿಯಾಂತ್ ಸಿಂಗ್ ಅವರ ಮೊಮ್ಮಗ ರವಣೀತ್ ಸಿಂಗ್ ಬಿಟ್ಟು ಕೂಡ ಸ್ಪರ್ಧೆಯಲ್ಲಿದ್ದಾರೆ ಎನ್ನಲಾಗಿದೆ.
  3. ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥರಾದ ಸುನೀಲ್ ಜಖರ್ ಹೆಸರೂ ಮುಂಚೂಣಿಯಲ್ಲಿದೆ. ಒಂದು ವೇಳೆ ಅವರು ಮುಖ್ಯಮಂತ್ರಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಸಿಖ್ ಅಲ್ಲದ ಮುಖ್ಯಮಂತ್ರಿಯಾಗಲಿದ್ದಾರೆ.
  4. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಲ್ಲಕ್ಕಿಂತ ಹೆಚ್ಚಾಗಿ ಪಕ್ಷದ ಹಿತ ಕಾಪಾಡಲು ಮುಂದಾಗಿ ಎಂದು ಅಮರಿಂದರ್‌ ಸಿಂಗ್‌ರವರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಧೀರ್ಘ ಪತ್ರ ಬರೆದಿರುವ ಅವರು “ನಮ್ಮನ್ನು ಮೀರಿ ಮತ್ತು ಪಕ್ಷದ ಮತ್ತು ದೇಶದ ಹಿತಾಸಕ್ತಿಗಾಗಿ ಯೋಚಿಸುತ್ತೀರಿ ಎಂಬ ಭರವಸೆಯಿದೆ” ಎಂದಿದ್ದಾರೆ.
  5. ಇಂದು ಮಧ್ಯಾಹ್ನ 1 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಅಲ್ಲಿ ಹೊಸ ಮುಖ್ಯಮಂತ್ರಿಗಳನ್ನು ಘೋಷಿಸುವ ಸಾಧ್ಯತೆಯಿದೆ. ಒಟ್ಟು 117 ಜನರ ಪಂಜಾಬ್ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಸದ್ಯಕ್ಕೆ 80 ಶಾಸಕರನ್ನು ಹೊಂದಿದೆ. ಮುಖ್ಯಮಂತ್ರಿಯೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳಿರಲಿದ್ದಾರೆ ಎನ್ನಲಾಗಿದೆ

ಇದನ್ನೂ ಓದಿ: ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದ ಹಿಂದೂ ಮಹಾಸಭಾ ಕಾರ್ಯದರ್ಶಿ ಯೂಟರ್ನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...