Homeಮುಖಪುಟಪಂಜಾಬ್ ಮುಖ್ಯಮಂತ್ರಿ ಬದಲಾವಣೆ: ಈ ದಿನದ ಬೆಳವಣಿಗೆಯ 5 ಅಂಶಗಳು

ಪಂಜಾಬ್ ಮುಖ್ಯಮಂತ್ರಿ ಬದಲಾವಣೆ: ಈ ದಿನದ ಬೆಳವಣಿಗೆಯ 5 ಅಂಶಗಳು

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಸ್ಥಾನಕ್ಕೆ ನಿನ್ನೆ ಕ್ಯಾಪ್ಟನ್ ಅಮರಿಂದರ್ ಸಿಂಗ್ ರಾಜೀನಾಮೆ ನೀಡಿದ್ದಾರೆ. ಈ ವೇಳೆ ಅವರು ಕಳೆದ ಎರಡು ತಿಂಗಳಿನಿಂದ ಮೂರು ಬಾರಿ ಅವಮಾನಿತನಾಗಿದ್ದೆ ಎಂಬ ಹೇಳಿಕೆ ನೀಡುವ ಮೂಲಕ ಪರೋಕ್ಷವಾಗಿ ನವಜ್ಯೋತ್‌ ಸಿಂಗ್ ಸಿಧು ವಿರುದ್ಧ ಹರಿಹಾಯ್ದಿದ್ದರು. ಅಲ್ಲದೇ ಕಾಂಗ್ರೆಸ್ ಪಕ್ಷವು ತಮಗೆ ನಂಬಿಕಸ್ಥರಾದ ಯಾರನ್ನಾದರೂ ಮುಖ್ಯಮಂತ್ರಿ ಮಾಡಲಿ, ಆದರೆ ಅಸಮರ್ಥನಾದ ನವಜ್ಯೋತ್ ಸಿಂಗ್ ಸಿಧುವನ್ನು ಮುಖ್ಯಮಂತ್ರಿ ಮಾಡುವುದನ್ನು ಒಪ್ಪುವುದಿಲ್ಲ ಎಂದು ಗುಡುಗಿದ್ದರು. ಇಂದಿನ ಬೆಳವಣಿಗೆಯ 5 ಅಂಶಗಳು ಇಲ್ಲಿವೆ.

  1. ಪಂಜಾಬ್‌ನ ಮುಂದಿನ ಮುಖ್ಯಮಂತ್ರಿಯಾಗುವ ಪ್ರಸ್ತಾಪವನ್ನು ಕಾಂಗ್ರೆಸ್ ನಾಯಕಿ, ರಾಜ್ಯಸಭಾ ಸದಸ್ಯೆ ಅಂಬಿಕಾ ಸೋನಿ ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯೊಂದಿಗೆ ತಡರಾತ್ರಿವರೆಗೂ ನಡೆದ ಸಭೆಯಲ್ಲಿ ಅವರು ಸಿಖ್ ಅಲ್ಲದ ವ್ಯಕ್ತಿ ಪಂಜಾಬ್ ಮುಖ್ಯಮಂತ್ರಿಯಾಗುವುದು ಪಕ್ಷಕ್ಕೆ ಒಳ್ಳೆಯದು ಮಾಡುವುದಿಲ್ಲ ಎಂಬ ಕಾರಣದೊಂದಿಗೆ ಪ್ರಸ್ತಾಪ ತಿರಸ್ಕರಿಸಿದ್ದಾರೆ ಎನ್ನಲಾಗಿದೆ.
  2. ಇನ್ನು ಸಿಎಂ ಸ್ಥಾನಕ್ಕೆ ಸದ್ಯಕ್ಕೆ ನಾಲ್ವರು ನಾಯಕರ ಹೆಸರುಗಳು ಚಾಲ್ತಿಯಲ್ಲಿವೆ ಎಂದು ಎನ್‌ಡಿಟಿವಿ ವರದಿ ಮಾಡಿದೆ. ಸುಖಜಿಂದರ್ ರಾಂಧವಾ ಜೊತೆಗೆ ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥರುಗಳಾದ ಸುನೀಲ್ ಜಖರ್ ಮತ್ತು ಪ್ರತಾಪ್ ಸಿಂಗ್ ಬಾಜ್ವಾರೊಂದಿಗೆ ಬಿಯಾಂತ್ ಸಿಂಗ್ ಅವರ ಮೊಮ್ಮಗ ರವಣೀತ್ ಸಿಂಗ್ ಬಿಟ್ಟು ಕೂಡ ಸ್ಪರ್ಧೆಯಲ್ಲಿದ್ದಾರೆ ಎನ್ನಲಾಗಿದೆ.
  3. ಪಂಜಾಬ್ ಕಾಂಗ್ರೆಸ್‌ನ ಮಾಜಿ ಮುಖ್ಯಸ್ಥರಾದ ಸುನೀಲ್ ಜಖರ್ ಹೆಸರೂ ಮುಂಚೂಣಿಯಲ್ಲಿದೆ. ಒಂದು ವೇಳೆ ಅವರು ಮುಖ್ಯಮಂತ್ರಿಯಾದಲ್ಲಿ ಇತ್ತೀಚಿನ ದಿನಗಳಲ್ಲಿ ಸಿಖ್ ಅಲ್ಲದ ಮುಖ್ಯಮಂತ್ರಿಯಾಗಲಿದ್ದಾರೆ.
  4. ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಎಲ್ಲಕ್ಕಿಂತ ಹೆಚ್ಚಾಗಿ ಪಕ್ಷದ ಹಿತ ಕಾಪಾಡಲು ಮುಂದಾಗಿ ಎಂದು ಅಮರಿಂದರ್‌ ಸಿಂಗ್‌ರವರಲ್ಲಿ ಮನವಿ ಮಾಡಿದ್ದಾರೆ. ಈ ಕುರಿತು ಧೀರ್ಘ ಪತ್ರ ಬರೆದಿರುವ ಅವರು “ನಮ್ಮನ್ನು ಮೀರಿ ಮತ್ತು ಪಕ್ಷದ ಮತ್ತು ದೇಶದ ಹಿತಾಸಕ್ತಿಗಾಗಿ ಯೋಚಿಸುತ್ತೀರಿ ಎಂಬ ಭರವಸೆಯಿದೆ” ಎಂದಿದ್ದಾರೆ.
  5. ಇಂದು ಮಧ್ಯಾಹ್ನ 1 ಗಂಟೆಗೆ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ. ಅಲ್ಲಿ ಹೊಸ ಮುಖ್ಯಮಂತ್ರಿಗಳನ್ನು ಘೋಷಿಸುವ ಸಾಧ್ಯತೆಯಿದೆ. ಒಟ್ಟು 117 ಜನರ ಪಂಜಾಬ್ ವಿಧಾನಸಭೆಯಲ್ಲಿ ಕಾಂಗ್ರೆಸ್ ಪಕ್ಷವು ಸದ್ಯಕ್ಕೆ 80 ಶಾಸಕರನ್ನು ಹೊಂದಿದೆ. ಮುಖ್ಯಮಂತ್ರಿಯೊಂದಿಗೆ ಇಬ್ಬರು ಉಪಮುಖ್ಯಮಂತ್ರಿಗಳಿರಲಿದ್ದಾರೆ ಎನ್ನಲಾಗಿದೆ

ಇದನ್ನೂ ಓದಿ: ಸಿಎಂಗೆ ಕೊಲೆ ಬೆದರಿಕೆ ಹಾಕಿದ್ದ ಹಿಂದೂ ಮಹಾಸಭಾ ಕಾರ್ಯದರ್ಶಿ ಯೂಟರ್ನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸತೀಶ್‌ ಜಾರಕಿಹೊಳಿ ಮೇಲಿನ ಇಡಿ ದಾಳಿಯನ್ನು ‘ಚಾರಿತ್ರ್ಯ ಹರಣ’ ಎಂದ ವಿಜಯ್ ಮಲ್ಯ

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಅವರ ಮನೆ ಹಾಗೂ ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯವು (ಇಡಿ) ನಡೆಸಿದ ದಾಳಿಯನ್ನು ಮಾಜಿ ಸಂಸದ ಮತ್ತು ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಸಾರ್ವಜನಿಕವಾಗಿ ಚಾರಿತ್ರ್ಯ...

ಒಗ್ಗಟ್ಟಿನ ಮಾತುಗಳಷ್ಟೇ ಸಾಲದು, ಕೃತಿಯಲ್ಲಿರಲಿ ದಿಟ್ಟತನ : ಬ್ರಿಕ್ಸ್ ವಿಚಾರದಲ್ಲಿ ಕೇಂದ್ರಕ್ಕೆ ಕಾಂಗ್ರೆಸ್ ಚಾಟಿ

ಜಾಗತಿಕ ಮಟ್ಟದಲ್ಲಿ ಬ್ರಿಕ್ಸ್ (BRICS) ಒಕ್ಕೂಟದ ಪ್ರಭಾವ ಹೆಚ್ಚುತ್ತಿರುವುದನ್ನು ಸ್ವಾಗತಿಸಿರುವ ಕಾಂಗ್ರೆಸ್, ಈ ಒಕ್ಕೂಟದ ಅಧ್ಯಕ್ಷತೆಯನ್ನು ವಹಿಸಿರುವ ಭಾರತವು ‘ಗ್ಲೋಬಲ್ ಸೌತ್’ (Global South) ರಾಷ್ಟ್ರಗಳ ನಡುವೆ ತನ್ನ ರಾಜತಾಂತ್ರಿಕ ಸ್ಥಾನಮಾನವನ್ನು ಮರುಸ್ಥಾಪಿಸಲು...

9/11 ರ ಹಿಂದಿನ ದಾಳಿಯನ್ನು ಇರಾನ್ ಜೊತೆಗಿನ ಇಂದಿನ ಯುದ್ಧಕ್ಕೆ ಜೋಡಿಸಿದ ಡೊನಾಲ್ಡ್‌ ಟ್ರಂಪ್

"ಸೆಪ್ಟೆಂಬರ್ 11, 2001 ರ ದಾಳಿಯನ್ನು ಯುನೈಟೆಡ್ ಸ್ಟೇಟ್ಸ್ ಎಂದಿಗೂ ಮರೆಯುವುದಿಲ್ಲ. 25 ವರ್ಷಗಳ ನಂತರವೂ ಇರಾನ್ ಮೇಲೆ ದಾಳಿ ಮಾಡುವ ಮೂಲಕ ದೇಶವು ಭಯೋತ್ಪಾದನೆ ವಿರುದ್ಧದ ಯುದ್ಧವನ್ನು ಮುಂದುವರೆಸಿದೆ" ಎಂದು ಅಧ್ಯಕ್ಷ...

SIR ನೋಟಿಸ್ ಮತ್ತು ವಿಚಾರಣೆಯಲ್ಲಿ ಅಕ್ರಮ : ಚು. ಆಯೋಗದ ವಿರುದ್ಧ ನಾಗರಿಕ ಸಂಘಟನೆಗಳಿಂದ 2ನೇ ಎಫ್‌ಐಆರ್

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಭಾಗವಾಗಿ, ಆಗಸ್ಟ್ 24ರಂದು ರಾಜ್ಯ ಚುನಾವಣಾ ಆಯೋಗ ಬಿಡುಗಡೆ ಮಾಡಿದ್ದ ಕರಡು ಮತದಾರರ ಪಟ್ಟಿಯನ್ನು ತಿರಸ್ಕರಿಸಿ ಕೇಂದ್ರ ಚುನಾವಣಾ ಆಯೋಗದ ವಿರುದ್ಧ ಎಫ್‌ಐಆರ್ ಬಿಡುಗಡೆ...

‘ಕೊಂಕಣಿ – ಮಾಲ್ವಣಿ ಸಮುದಾಯಗಳು ಹಿಂದುತ್ವದ ಬೆಂಬಲಿಗರು..’; ಮಹಾರಾಷ್ಟ್ರ ಬಿಜೆಪಿ ನಾಯಕ ಅಮೀತ್ ಸತಮ್

ಮುಂಬೈನಲ್ಲಿ ವಾಸಿಸುತ್ತಿರುವ ಕೊಂಕಣಿ ಮತ್ತು ಮಾಲ್ವಣಿ ಸಮುದಾಯಗಳು ಸೇರಿದಂತೆ ಕೊಂಕಣ ಪ್ರದೇಶದ ಜನರು ಹಿಂದುತ್ವವನ್ನು ಬೆಂಬಲಿಸುತ್ತಾರೆ ಎಂದು ಬಿಜೆಪಿ ನಾಯಕ ಅಮೀತ್ ಸತಮ್ ಹೇಳಿದ್ದಾರೆ. ಮಹಾರಾಷ್ಟ್ರದ ಕೊಂಕಣ ಪ್ರದೇಶದ ಸಾವಂತವಾಡಿಗೆ ಗಣಪತಿ ಭಕ್ತರಿಗಾಗಿ ಛತ್ರಪತಿ...

SIR! ಸಾಮಾನ್ಯರಿಗೆ ಸಂಕಷ್ಟ; ಗಣ್ಯರಿಗೆ ಮನೆ ಬಾಗಿಲಲ್ಲೇ ಸೇವೆ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಕರ್ನಾಟಕದಲ್ಲಿ ಮುಂದುವರೆದಿರುವ ನಡುವೆಯೇ, ಅದರ ಜಾರಿಯಲ್ಲಿ ಸಾಮಾನ್ಯ ಮತದಾರರು ಮತ್ತು ಪ್ರಭಾವಿ ವ್ಯಕ್ತಿಗಳ ಅನುಭವದ ನಡುವಿನ ವ್ಯತ್ಯಾಸದ ಕುರಿತು ಪ್ರಶ್ನೆಗಳು ಎದ್ದಿವೆ. ಮತದಾರರ ಪಟ್ಟಿಯಲ್ಲಿನ...

ದಲಿತ ಬಾಲಕಿ ನಿಶು ಆಜಾದ್ ಕುಟುಂಬಕ್ಕೆ ನಿಲ್ಲದ ಕಿರುಕುಳ; ಅಸಭ್ಯ ಭಾಷೆ – ಬೆದರಿಕೆ ಸಂದೇಶ ರವಾನೆ

ಸಿಜೆಪಿ ಪ್ರತಿಭಟನೆಯಲ್ಲಿ ಗಮನ ಸೆಳೆದಿದ್ದ ಹದಿನಾಲ್ಕು ವರ್ಷ ವಯಸ್ಸಿನ ದಲಿತ ಸಮುದಾಯದ ಕಂಟೆಂಟ್ ಕ್ರಿಯೇಟರ್ ನಿಶು ಆಜಾದ್ ಮತ್ತು ಅವರ ಕುಟುಂಬಕ್ಕೆ ಮೊಬೈಲ್‌ ಫೋನ್‌ ಮೂಲಕ ನಿರಂತರ ಕಿರುಕುಳ ಸಂದೇಶ ಬರುತ್ತಿವೆ ಎಂದು...

ಉತ್ತರ ಪ್ರದೇಶ| 8ನೇ ತರಗತಿಯ ದಲಿತ ವಿದ್ಯಾರ್ಥಿಗೆ ಶಿಕ್ಷಕಿಯಿಂದ ಜಾತಿ ತಾರತಮ್ಯ

ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಸರ್ಕಾರಿ ಉನ್ನತ ಪ್ರಾಥಮಿಕ ಶಾಲೆಯ 8ನೇ ತರಗತಿಯ ವಿದ್ಯಾರ್ಥಿಯೊಬ್ಬರು ಶಿಕ್ಷಕಿಯಿಂದ ಜಾತಿ ಆಧಾರಿತ ತಾರತಮ್ಯ ಎಸಗಲಾಗಿದೆ ಎಂದು ಆರೋಪಿಸಿದ್ದಾನೆ. ಕೃಷ್ಣ ಎಂದು ಗುರುತಿಸಲ್ಪಟ್ಟ ಈ ವಿದ್ಯಾರ್ಥಿ ಪರಿಶಿಷ್ಟ...

ಯೆಮನ್ | ಸಂಪೂರ್ಣ ರೆಡ್ ಸೀ ಕರಾವಳಿಯನ್ನು ನಿಯಂತ್ರಣಕ್ಕೆ ತೆಗೆದುಕೊಂಡ ಹೌತಿ ಪಡೆ : ಮಂದೇಬ್ ಜಲಸಂಧಿ ಮೇಲೆಯೂ ಹಿಡಿತ ಸಾಧಿಸಿರುವುದಾಗಿ ವರದಿ

ಮಹತ್ವದ ಬೆಳವಣಿಗೆಯಲ್ಲಿ, ಹೌತಿ ಬಂಡುಕೋರರು ಯೆಮನ್‌ನ ಇಡೀ ಕೆಂಪು ಸಮುದ್ರದ (ರೆಡ್ ಸೀ) ಕರಾವಳಿಯನ್ನು ತಮ್ಮ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ವರದಿಯಾಗಿದೆ. ಇರಾನ್ ಬೆಂಬಲಿತ ಹೌತಿ ಸಶಸ್ತ್ರ ಪಡೆಗಳು ಯೆಮನ್ ಸರ್ಕಾರದ ನಿಯಂತ್ರಣದಲ್ಲಿದ್ದ...

ಭಾರತದ ಚುನಾವಣಾ ಪ್ರಕ್ರಿಯೆಯು ಅತ್ಯಂತ ಪಾರದರ್ಶಕವಾಗಿದೆ: ಸಿಇಸಿ ಜ್ಞಾನೇಶ್ ಕುಮಾರ್

ಭಾರತದ ಚುನಾವಣಾ ಪ್ರಕ್ರಿಯೆಯು ವಿಶ್ವದಲ್ಲೇ ಅತ್ಯಂತ ಪಾರದರ್ಶಕವಾದದ್ದು ಎಂದು ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ (ಸೆ.11) ಹೇಳಿದ್ದಾರೆ. ಗುಜರಾತ್ ವಿಶ್ವವಿದ್ಯಾಲಯದ ಅಟಲ್ ಕಲಾಂ ಸಭಾಂಗಣದಲ್ಲಿ ನಡೆದ 'ಮತಗಟ್ಟೆ ಮಟ್ಟದ ಅಧಿಕಾರಿಗಳೊಂದಿಗೆ...