Homeಮುಖಪುಟಪಂಜಾಬ್ ಮುಖ್ಯಮಂತ್ರಿ ಕೇಜ್ರಿವಾಲ್, ಭಗವಂತ್ ಮಾನ್ ಅಲ್ಲ..: ಸುಖಬೀರ್ ಸಿಂಗ್ ಬಾದಲ್

ಪಂಜಾಬ್ ಮುಖ್ಯಮಂತ್ರಿ ಕೇಜ್ರಿವಾಲ್, ಭಗವಂತ್ ಮಾನ್ ಅಲ್ಲ..: ಸುಖಬೀರ್ ಸಿಂಗ್ ಬಾದಲ್

- Advertisement -
- Advertisement -

‘ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಂಜಾಬ್ ಸರ್ಕಾರವನ್ನು ನಡೆಸುತ್ತಿದ್ದಾರೆ. ಅವರು (ಎಎಪಿ) ರಾಜ್ಯವನ್ನು ಲೂಟಿ ಮಾಡುತ್ತಿದ್ದು, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅಲ್ಲ’ ಎಂದು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್ ಆಡಳಿತಾರೂಢ ಎಎಪಿ ನಾಯಕರ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ ಅವರು, ‘ಸಿಖ್ಖರ ಇತಿಹಾಸ ಗೊತ್ತಿಲ್ಲದ ಕಾರಣ ನಾನು ಅವರನ್ನು (ಭಗವಂತ್ ಮಾನ್) ಸಿಖ್ ಎಂದು ಪರಿಗಣಿಸುವುದಿಲ್ಲ. ಅವರು ತಮ್ಮನ್ನು ತಾವು ಸಿಖ್ ಎಂದು ಬಿಂಬಿಸಿಕೊಳ್ಳಲು ಪೇಟ ಧರಿಸುತ್ತಾರೆ. ಆದರೆ, ಅವರಿಗೆ ನಮ್ಮ ಇತಿಹಾಸ ತಿಳಿದಿಲ್ಲ. ಅವರನ್ನು ನೋಡಿದಾಗ ಮತ್ತು ಅವರ ಹೇಳಿಕೆಗಳನ್ನು ಕೇಳಿದಾಗ ನಮಗೆ ದುಃಖವಾಗುತ್ತದೆ’ ಎಂದು ದೆಹಲಿಯಲ್ಲಿ ನಡೆದ ಸಿಖ್ ಮುಖಂಡರ ಸಭೆಯಲ್ಲಿ ಕಿಡಿಕಾರಿದರು.

‘ದೇಶದಲ್ಲಿ ಮುಸ್ಲಿಮರ ಜನಸಂಖ್ಯೆಯು ಸುಮಾರು ಶೇ.18ರಷ್ಟಿದೆ. ಅವರಲ್ಲಿ ಒಗ್ಗಟ್ಟಿಲ್ಲದ ಕಾರಣಕ್ಕೆ ಅವರಿಗೆ ಅವರಿಗೆ ನಾಯಕತ್ವವಿಲ್ಲ. ನಾವು ಶೇ.2ರಷ್ಟಿದ್ದರೂ ನಮಗೆ ಶ್ರೀ ಅಕಲ್ ತಖ್ತ್ ಸಾಹಿಬ್ ಅವರ ನಾಯಕತ್ವದಲ್ಲಿ ಒಗ್ಗೂಡಿದ್ದೇವೆ’ ಎಂದು ಹೇಳಿದರು.

61 ವರ್ಷದ ಅಕಾಲಿ ನಾಯಕ ಸೋಮವಾರ ಬಿಹಾರ ಮತ್ತು ಮಹಾರಾಷ್ಟ್ರದ ಸಿಖ್ ಸಂಗತ್ ಸದಸ್ಯರನ್ನು ಪಕ್ಷದ ದೆಹಲಿ ರಾಜ್ಯ ಘಟಕದ ಅಧ್ಯಕ್ಷ ಎಸ್ ಪರಮ್ಜಿತ್ ಸಿಂಗ್ ಸರ್ನಾ ಅವರ ನಿವಾಸದಲ್ಲಿ ಭೇಟಿಯಾದರು. ‘ಶಿರೋಮಣಿ ಅಕಾಲಿದಳವು ಸಿಖ್ ಜನಸಂಖ್ಯೆಯನ್ನು ಹೊಂದಿರುವ ಎಲ್ಲ ರಾಜ್ಯಗಳಲ್ಲಿ ಪಕ್ಷದ ಘಟಕಗಳನ್ನು ಸ್ಥಾಪಿಸುತ್ತದೆ’ ಎಂದು ಅವರು ಘೋಷಿಸಿದರು.

ಒಗ್ಗಟ್ಟಾಗಿ ಉಳಿಯಲು ಸಮುದಾಯಕ್ಕೆ ಮನವಿ:

‘ಒಡೆದು ಹೋಗಬೇಡಿ, ಒಗ್ಗಟ್ಟಾಗಿ ಉಳಿಯುವಂತೆ ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ… ಶಿರೋಮಣಿ ಅಕಾಲಿದಳವು ಎಲ್ಲ ರಾಜ್ಯಗಳಲ್ಲಿ ಪಕ್ಷದ ಘಟಕಗಳನ್ನು ಸ್ಥಾಪಿಸಲಿದೆ…’ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಹಿರಿಯ ಅಕಾಲಿ ನಾಯಕ ಎಸ್ ಮಂಜಿತ್ ಸಿಂಗ್ ಜಿಕೆ ಅವರು ತಮ್ಮ ಸಂಪೂರ್ಣ ಜಾಗೋ ಪಕ್ಷದ ತಂಡದೊಂದಿಗೆ ಶಿರೋಮಣಿ ಅಕಾಲಿ ದಳಕ್ಕೆ ಮರುಸೇರ್ಪಡೆಯಾಗುವುದಕ್ಕೆ ಸಭೆ ಸಾಕ್ಷಿಯಾಯಿತು.

‘ಈ ಏಕತೆಯು ಸಿಖ್ ಸಮುದಾಯವನ್ನು ಬಲಪಡಿಸುವುದಲ್ಲದೆ, ನಮ್ಮ ಎಲ್ಲಾ ಬಾಕಿ ಇರುವ ಬೇಡಿಕೆಗಳ ಪರಿಹಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ನನಗೆ ಖಾತ್ರಿಯಿದೆ. ಸಿಖ್ ಸಮುದಾಯವು ವಿವಿಧ ಸವಾಲುಗಳನ್ನು ಎದುರಿಸುತ್ತಿದೆ ಮತ್ತು ಎಲ್ಲರ ನಿರ್ಣಯವನ್ನು ಸಾಧಿಸಲು ಮಾತ್ರ ನಾವು ಎಲ್ಲರೂ ಪಂಥ್ನ ಧ್ವಜದ ಅಡಿಯಲ್ಲಿ ಒಂದಾಗಬಹುದು’ ಎಂದು ಬಾದಲ್ ಹೇಳಿದರು.

ಇದನ್ನೂ ಓದಿ; ಬ್ರಿಟನ್‌ನಲ್ಲಿ ರಾಜಕೀಯದ ಚಿತ್ರಣ ಬದಲಿಸಿದ ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...