Homeಮುಖಪುಟಪಂಜಾಬ್ ಮುಖ್ಯಮಂತ್ರಿ ಕೇಜ್ರಿವಾಲ್, ಭಗವಂತ್ ಮಾನ್ ಅಲ್ಲ..: ಸುಖಬೀರ್ ಸಿಂಗ್ ಬಾದಲ್

ಪಂಜಾಬ್ ಮುಖ್ಯಮಂತ್ರಿ ಕೇಜ್ರಿವಾಲ್, ಭಗವಂತ್ ಮಾನ್ ಅಲ್ಲ..: ಸುಖಬೀರ್ ಸಿಂಗ್ ಬಾದಲ್

- Advertisement -
- Advertisement -

‘ದೆಹಲಿ ಮುಖ್ಯಮಂತ್ರಿ ಹಾಗೂ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಪಂಜಾಬ್ ಸರ್ಕಾರವನ್ನು ನಡೆಸುತ್ತಿದ್ದಾರೆ. ಅವರು (ಎಎಪಿ) ರಾಜ್ಯವನ್ನು ಲೂಟಿ ಮಾಡುತ್ತಿದ್ದು, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅಲ್ಲ’ ಎಂದು ಶಿರೋಮಣಿ ಅಕಾಲಿದಳದ ಮುಖ್ಯಸ್ಥ ಸುಖಬೀರ್ ಸಿಂಗ್ ಬಾದಲ್ ವಾಗ್ದಾಳಿ ನಡೆಸಿದ್ದಾರೆ.

ಪಂಜಾಬ್ ಆಡಳಿತಾರೂಢ ಎಎಪಿ ನಾಯಕರ ವಿರುದ್ಧ ಸೋಮವಾರ ವಾಗ್ದಾಳಿ ನಡೆಸಿದ ಅವರು, ‘ಸಿಖ್ಖರ ಇತಿಹಾಸ ಗೊತ್ತಿಲ್ಲದ ಕಾರಣ ನಾನು ಅವರನ್ನು (ಭಗವಂತ್ ಮಾನ್) ಸಿಖ್ ಎಂದು ಪರಿಗಣಿಸುವುದಿಲ್ಲ. ಅವರು ತಮ್ಮನ್ನು ತಾವು ಸಿಖ್ ಎಂದು ಬಿಂಬಿಸಿಕೊಳ್ಳಲು ಪೇಟ ಧರಿಸುತ್ತಾರೆ. ಆದರೆ, ಅವರಿಗೆ ನಮ್ಮ ಇತಿಹಾಸ ತಿಳಿದಿಲ್ಲ. ಅವರನ್ನು ನೋಡಿದಾಗ ಮತ್ತು ಅವರ ಹೇಳಿಕೆಗಳನ್ನು ಕೇಳಿದಾಗ ನಮಗೆ ದುಃಖವಾಗುತ್ತದೆ’ ಎಂದು ದೆಹಲಿಯಲ್ಲಿ ನಡೆದ ಸಿಖ್ ಮುಖಂಡರ ಸಭೆಯಲ್ಲಿ ಕಿಡಿಕಾರಿದರು.

‘ದೇಶದಲ್ಲಿ ಮುಸ್ಲಿಮರ ಜನಸಂಖ್ಯೆಯು ಸುಮಾರು ಶೇ.18ರಷ್ಟಿದೆ. ಅವರಲ್ಲಿ ಒಗ್ಗಟ್ಟಿಲ್ಲದ ಕಾರಣಕ್ಕೆ ಅವರಿಗೆ ಅವರಿಗೆ ನಾಯಕತ್ವವಿಲ್ಲ. ನಾವು ಶೇ.2ರಷ್ಟಿದ್ದರೂ ನಮಗೆ ಶ್ರೀ ಅಕಲ್ ತಖ್ತ್ ಸಾಹಿಬ್ ಅವರ ನಾಯಕತ್ವದಲ್ಲಿ ಒಗ್ಗೂಡಿದ್ದೇವೆ’ ಎಂದು ಹೇಳಿದರು.

61 ವರ್ಷದ ಅಕಾಲಿ ನಾಯಕ ಸೋಮವಾರ ಬಿಹಾರ ಮತ್ತು ಮಹಾರಾಷ್ಟ್ರದ ಸಿಖ್ ಸಂಗತ್ ಸದಸ್ಯರನ್ನು ಪಕ್ಷದ ದೆಹಲಿ ರಾಜ್ಯ ಘಟಕದ ಅಧ್ಯಕ್ಷ ಎಸ್ ಪರಮ್ಜಿತ್ ಸಿಂಗ್ ಸರ್ನಾ ಅವರ ನಿವಾಸದಲ್ಲಿ ಭೇಟಿಯಾದರು. ‘ಶಿರೋಮಣಿ ಅಕಾಲಿದಳವು ಸಿಖ್ ಜನಸಂಖ್ಯೆಯನ್ನು ಹೊಂದಿರುವ ಎಲ್ಲ ರಾಜ್ಯಗಳಲ್ಲಿ ಪಕ್ಷದ ಘಟಕಗಳನ್ನು ಸ್ಥಾಪಿಸುತ್ತದೆ’ ಎಂದು ಅವರು ಘೋಷಿಸಿದರು.

ಒಗ್ಗಟ್ಟಾಗಿ ಉಳಿಯಲು ಸಮುದಾಯಕ್ಕೆ ಮನವಿ:

‘ಒಡೆದು ಹೋಗಬೇಡಿ, ಒಗ್ಗಟ್ಟಾಗಿ ಉಳಿಯುವಂತೆ ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ… ಶಿರೋಮಣಿ ಅಕಾಲಿದಳವು ಎಲ್ಲ ರಾಜ್ಯಗಳಲ್ಲಿ ಪಕ್ಷದ ಘಟಕಗಳನ್ನು ಸ್ಥಾಪಿಸಲಿದೆ…’ ಎಂದು ಹೇಳಿದರು. ಇದೇ ಸಂದರ್ಭದಲ್ಲಿ ಹಿರಿಯ ಅಕಾಲಿ ನಾಯಕ ಎಸ್ ಮಂಜಿತ್ ಸಿಂಗ್ ಜಿಕೆ ಅವರು ತಮ್ಮ ಸಂಪೂರ್ಣ ಜಾಗೋ ಪಕ್ಷದ ತಂಡದೊಂದಿಗೆ ಶಿರೋಮಣಿ ಅಕಾಲಿ ದಳಕ್ಕೆ ಮರುಸೇರ್ಪಡೆಯಾಗುವುದಕ್ಕೆ ಸಭೆ ಸಾಕ್ಷಿಯಾಯಿತು.

‘ಈ ಏಕತೆಯು ಸಿಖ್ ಸಮುದಾಯವನ್ನು ಬಲಪಡಿಸುವುದಲ್ಲದೆ, ನಮ್ಮ ಎಲ್ಲಾ ಬಾಕಿ ಇರುವ ಬೇಡಿಕೆಗಳ ಪರಿಹಾರಕ್ಕೆ ದಾರಿ ಮಾಡಿಕೊಡುತ್ತದೆ ಎಂದು ನನಗೆ ಖಾತ್ರಿಯಿದೆ. ಸಿಖ್ ಸಮುದಾಯವು ವಿವಿಧ ಸವಾಲುಗಳನ್ನು ಎದುರಿಸುತ್ತಿದೆ ಮತ್ತು ಎಲ್ಲರ ನಿರ್ಣಯವನ್ನು ಸಾಧಿಸಲು ಮಾತ್ರ ನಾವು ಎಲ್ಲರೂ ಪಂಥ್ನ ಧ್ವಜದ ಅಡಿಯಲ್ಲಿ ಒಂದಾಗಬಹುದು’ ಎಂದು ಬಾದಲ್ ಹೇಳಿದರು.

ಇದನ್ನೂ ಓದಿ; ಬ್ರಿಟನ್‌ನಲ್ಲಿ ರಾಜಕೀಯದ ಚಿತ್ರಣ ಬದಲಿಸಿದ ಇಸ್ರೇಲ್‌-ಪ್ಯಾಲೆಸ್ತೀನ್‌ ಯುದ್ಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...