Homeಮುಖಪುಟಪಂಜಾಬ್ ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಮನವಿ

ಪಂಜಾಬ್ ಚುನಾವಣೆ ಮುಂದೂಡುವಂತೆ ಚುನಾವಣಾ ಆಯೋಗಕ್ಕೆ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿ ಮನವಿ

- Advertisement -
- Advertisement -

ಗುರು ರವಿದಾಸ್ ಜಯಂತಿಯ ಹಿನ್ನೆಲೆಯಲ್ಲಿ ಫೆಬ್ರವರಿ 14 ರಂದು ನಡೆಯಲಿರುವ ಪಂಜಾಬ್ ವಿಧಾನಸಭಾ ಚುನಾವಣೆಯನ್ನು ಆರು ದಿನಗಳ ಕಾಲ ಮುಂದೂಡುವಂತೆ ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರು ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.

ಪಂಜಾಬ್‌ನ 117 ವಿಧಾನಸಭಾ ಸ್ಥಾನಗಳಿಗೆ ಫೆಬ್ರವರಿ 14 ರಂದು ಮತದಾನ ನಡೆಯಲಿದ್ದು, ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.

ಮುಖ್ಯ ಚುನಾವಣಾ ಆಯುಕ್ತ ಸುಶೀಲ್ ಚಂದ್ರ ಅವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ, ರಾಜ್ಯದ ಜನಸಂಖ್ಯೆಯ ಶೇಕಡಾ 32 ರಷ್ಟಿರುವ ಪರಿಶಿಷ್ಟ ಜಾತಿಗಳ ಸಮುದಾಯದ ಜನರು ಫೆಬ್ರವರಿ 16 ರಂದು ನಡೆಯಲಿರುವ ಗುರು ರವಿದಾಸ್ ಅವರ ಜನ್ಮದಿನದಲ್ಲಿ ಭಾಗಿಯಾಗಲಿದ್ದಾರೆ ಎಂದಿದ್ದಾರೆ.

ಇದನ್ನೂ ಓದಿ: ಪಂಜಾಬ್‌‌ ಚುನಾವಣೆ-2022: ಕಾಂಗ್ರೆಸ್‌ನಿಂದ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

“ಈ ಸಂದರ್ಭದಲ್ಲಿ, ರಾಜ್ಯದಿಂದ ಸುಮಾರು 20 ಲಕ್ಷಕ್ಕೂ ಹೆಚ್ಚಿನ ಸಂಖ್ಯೆಯ ಪರಿಶಿಷ್ಟ ಜಾತಿ ಸಮುದಾಯದವರು ಫೆಬ್ರವರಿ 10 ರಿಂದ 16 ರವರೆಗೆ ಉತ್ತರ ಪ್ರದೇಶದ ಬನಾರಸ್‌ಗೆ ಭೇಟಿ ನೀಡುವ ಸಾಧ್ಯತೆಯಿದೆ. ಹೀಗಾಗಿ ಈ ಸಮುದಾಯದ ಅನೇಕ ಜನರು ರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮತ ಚಲಾಯಿಸಲು ಸಾಧ್ಯವಾಗುವುದಿಲ್ಲ” ಎಂದು ಪತ್ರದಲ್ಲಿ ತಿಳಿಸಿದ್ದಾರೆ.

“ಫೆಬ್ರವರಿ 10 ರಿಂದ ಫೆಬ್ರವರಿ 16 ರವರೆಗೆ ಬನಾರಸ್‌ಗೆ ಭೇಟಿ ನೀಡಲು ಮತ್ತು ವಿಧಾನಸಭಾ ಚುನಾವಣೆಯಲ್ಲಿ ಭಾಗವಹಿಸಲು ಸಾಧ್ಯವಾಗುವ ರೀತಿಯಲ್ಲಿ ಮತದಾನದ ದಿನಾಂಕವನ್ನು ವಿಸ್ತರಿಸಬಹುದು” ಎಂದು ಮನವಿ ಮಾಡಿದ್ದಾರೆ.

2022 ರ ಪಂಜಾಬ್ ವಿಧಾನಸಭಾ ಚುನಾವಣೆಯ ಮತದಾನದ ದಿನವನ್ನು ಕನಿಷ್ಠ ಆರು ದಿನಗಳವರೆಗೆ ಮುಂದೂಡುವುದು ನ್ಯಾಯಸಮ್ಮತ ಮತ್ತು ಸೂಕ್ತವಾಗಿದೆ. ಸುಮಾರು 20 ಲಕ್ಷ ಜನರ ಮತದಾನ ಮಾಡುವ ಸಾಂವಿಧಾನಿಕ ಹಕ್ಕನ್ನು ಬಳಸಿಕೊಳ್ಳಲು ಅನುವು ಮಾಡಿಕೊಡಬೇಕು ಎಂದು ಚನ್ನಿ ಒತ್ತಾಯಿಸಿದ್ದಾರೆ.

ಇದಕ್ಕೂ ಮುನ್ನ ಬಹುಜನ ಸಮಾಜ ಪಕ್ಷದ ಪಂಜಾಬ್ ಮುಖ್ಯಸ್ಥ ಜಸ್ವೀರ್ ಸಿಂಗ್ ಗಾರ್ಹಿ ಕೂಡ ಚುನಾವಣೆಯನ್ನು ಫೆಬ್ರವರಿ 14 ರಿಂದ ಫೆಬ್ರವರಿ 20 ಕ್ಕೆ ಮರು ನಿಗದಿಪಡಿಸುವಂತೆ ಚುನಾವಣಾ ಆಯೋಗಕ್ಕೆ ಮನವಿ ಕೋರಿದ್ದರು.


ಇದನ್ನೂ ಓದಿ: ಪಂಚರಾಜ್ಯ ಚುನಾವಣೆ: ಜನವರಿ 22 ವರೆಗೆ ರ್‍ಯಾಲಿ ಮತ್ತು ರೋಡ್‌ಶೋಗಳು ನಿಷೇಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....