ಕರ್ನಾಟಕದ ಅನ್ನಭಾಗ್ಯ ಯೋಜನೆಗೆ ಅಕ್ಕಿ ಪೂರೈಸಲು ಪಂಜಾಬ್ ಸಿಎಂ ಭಗವಂತ್ ಮಾನ್ ನೇತೃತ್ವದ ಸರ್ಕಾರ ಸಿದ್ದವಿದೆ ಎಂದು ಸಿಎಂ ಸಿದ್ದರಾಮಯ್ಯನವರಿಗೆ ಕರ್ನಾಟಕ ಆಪ್ ರಾಜ್ಯಾಧ್ಯಕ್ಷ ಪೃಥ್ವಿರೆಡ್ಡಿ ಪತ್ರ ಬರೆದಿದ್ದಾರೆ.
AAP Karnataka state
president Shri @aapkaprithvi has written a letter to CM @siddaramaiah stating that @BhagwantMann lead @AamAadmiParty Punjab government is ready to provide rice required for the implementation of Annabhagya scheme in Karnataka pic.twitter.com/F4BSBoHQYf— AAP Karnataka (@AAPKarnataka) June 19, 2023
ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಕರ್ನಾಟಕ ಸರ್ಕಾರ ರಾಜ್ಯದಲ್ಲಿ ಅನ್ನಭಾಗ್ಯ ಯೋಜನೆ ಜಾರಿಗೊಳಿಸಲು ಅಗತ್ಯವಿರುವ ಹೆಚ್ಚುವರಿ ಅಕ್ಕಿಯನ್ನು ನೀಡಲು ನಿರಾಕರಿಸುವುದು ಆಶ್ಚರ್ಯ ಮತ್ತು ನೋವು ತಂದಿದೆ. ರಾಜಕೀಯ ಭಿನ್ನಾಭಿಪ್ರಾಯಗಳ ಹೊರತಾಗಿಯೂ ನಮ್ಮ ದೇಶದ ಜನರಿಗೆ ಸಹಾಯ ಮಾಡುವ ಉದ್ದೇಶದಿಂದ ಜಾರಿಯಾಗುವ ಉಪಕ್ರಮಗಳನ್ನು ಎಲ್ಲಾ ಪಕ್ಷಗಳು ಬೆಂಬಲಿಸಬೇಕೆಂಬುದನ್ನು ಆಪ್ ಬಲವಾಗಿ ನಂಬುತ್ತದೆ ಎಂದು ಪತ್ರದಲ್ಲಿ ಬರೆದಿದ್ದಾರೆ.
ಅಗತ್ಯವಿರುವ ಹೆಚ್ಚುವರಿ ಅಕ್ಕಿಯನ್ನು ನೀಡಲು ನಿರಾಕರಿಸುವುದು ಬಿಜೆಪಿಯ ಬಡವರ ವಿರೋಧಿ ಧೋರಣೆಯನ್ನು ಬಹಿರಂಗಪಡಿಸುತ್ತದೆ. ಬಿಜೆಪಿಯೇತರ ಆಡಳಿತದ ರಾಜ್ಯಗಳ ಬಗ್ಗೆ ಅವರ ಮಲತಾಯಿ ಧೋರಣೆಯನ್ನು ನಾವು ಬಲವಾಗಿ ಖಂಡಿಸುತ್ತೇವೆ ಎಂದು ಪೃಥ್ವಿರೆಡ್ಡಿ ಹೇಳಿದ್ದಾರೆ.
ನಮ್ಮ ರಾಜ್ಯದ ಜನರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು, ನಿನ್ನೆ, ನಾನು ಪಂಜಾಬ್ ಮುಖ್ಯಮಂತ್ರಿ ಶ್ರೀ ಭಗವಂತ್ ಮಾನ್ ಅವರೊಂದಿಗೆ ಈ ವಿಷಯದ ಬಗ್ಗೆ ವಿವರವಾದ ಚರ್ಚೆ ನಡೆಸಿದ್ದೇನೆ. ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ರಾಜ್ಯದಲ್ಲಿನ ಅಕ್ಕಿ ಕೊರತೆಯನ್ನು ಪಂಜಾಬ್ ನಿಂದ ಪೂರೈಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಎಎಪಿ ಕರ್ನಾಟಕ ನಮ್ಮ ಜನರ ಆಹಾರ ಭದ್ರತೆಗಾಗಿ ತನ್ನ ಪಾತ್ರವನ್ನು ಮಾಡಲು ಸಿದ್ಧವಾಗಿದೆ. ಆದ್ದರಿಂದ ದಯವಿಟ್ಟು ಈ ವಿಷಯವನ್ನು ಮುಂದಕ್ಕೆ ಕೊಂಡೊಯ್ಯಲು ನಾನು ವಿನಂತಿಸುತ್ತೇನೆ ಮತ್ತು ಈ ವಿಷಯವನ್ನು ಸುಗಮಗೊಳಿಸಲು ನಿಮಗೆ AAP ಕರ್ನಾಟಕದಿಂದ ಯಾವುದೇ ಸಹಾಯ ಬೇಕಾದರೆ ನನಗೆ ತಿಳಿಸಿ ಎಂದು ಅವರು ಪತ್ರದಲ್ಲಿ ಬರೆದಿದ್ದಾರೆ.
ಇದನ್ನೂ ಓದಿ: ದ್ವೇಷಕ್ಕೆ ಜನರನ್ನ ದೇವರ ಬಳಿ ಕರೆದೊಯ್ಯಲು ಸಾಧ್ಯವಿಲ್ಲ – ಪ್ರಿಯಾಂಕ್ ಖರ್ಗೆ