Homeಮುಖಪುಟಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು: ಪಂಜಾಬ್‌ ಅಸೆಂಬ್ಲಿಯಲ್ಲಿ ಮೂರು ಹೊಸ ಮಸೂದೆಗಳ ಮಂಡನೆ!

ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು: ಪಂಜಾಬ್‌ ಅಸೆಂಬ್ಲಿಯಲ್ಲಿ ಮೂರು ಹೊಸ ಮಸೂದೆಗಳ ಮಂಡನೆ!

ಕೇಂದ್ರದ ಕೃಷಿ ಕಾನೂನುಗಳು ರೈತರು ಮತ್ತು ಭೂಹೀನ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

- Advertisement -
- Advertisement -

ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿದ ಮೂರು ಹೊಸ ಕೃಷಿ ಕಾನೂನುಗಳನ್ನು ತಿರಸ್ಕರಿಸುವ ನಿರ್ಣಯವನ್ನು ಮಂಡಿಸಿದೆ. ಕೇಂದ್ರದ ಕೃಷಿ ಕಾನೂನುಗಳು ರೈತರು ಮತ್ತು ಭೂಹೀನ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಅವರು ಹೇಳಿದ್ದಾರೆ.

“ಕೃಷಿ ಸುಗ್ರೀವಾಜ್ಞೆಗಳು ಮತ್ತು ವಿದ್ಯುತ್ ಕಾಯ್ದೆಯ ತಿದ್ದುಪಡಿಗಳ ವಿರುದ್ಧದ ನಿರ್ಣಯವು ಮುಗಿದಿದೆ. ಮೂರು ಕೃಷಿ ಶಾಸನಗಳು ಮತ್ತು ಪ್ರಸ್ತಾವಿತ ವಿದ್ಯುತ್ (ತಿದ್ದುಪಡಿ) ಮಸೂದೆ, ರೈತರು ಮತ್ತು ಭೂಹೀನ ಕಾರ್ಮಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ” ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಒದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ಕೇಂದ್ರದ ಕೃಷಿ ಕಾನೂನುಗಳನ್ನು ಪ್ರಶ್ನಿಸಿ ನಿರ್ಣಯವನ್ನು ಮಂಡಿಸಿದ ಮೊದಲ ರಾಜ್ಯ ಪಂಜಾಬ್ ಆಗಿದೆ. ನಿರ್ಣಯದ ಹೊರತಾಗಿ, ರೈತರ ಉತ್ಪಾದನಾ ಸೌಲಭ್ಯ ಕಾಯ್ದೆಗೆ ತಿದ್ದುಪಡಿ, ಅಗತ್ಯ ಸರಕುಗಳ ಕಾಯ್ದೆಗೆ ತಿದ್ದುಪಡಿ, ರೈತರ ಒಪ್ಪಂದಕ್ಕೆ ತಿದ್ದುಪಡಿ ಮತ್ತು ಕೃಷಿ ಸೇವೆಗಳ ಕಾಯ್ದೆ ಸೇರಿದಂತೆ ಒಟ್ಟು ಮೂರು ಹೊಸ ಮಸೂದೆಗಳನ್ನು ಮುಖ್ಯಮಂತ್ರಿ ಇಂದು ಅಸೆಂಬ್ಲಿಯಲ್ಲಿ ಮಂಡಿಸಿದ್ದಾರೆ.

ಈ ತಿದ್ದುಪಡಿಗಳಿಗೆ ಭಾರತದ ರಾಷ್ಟ್ರಪತಿಗಳ ಒಪ್ಪಿಗೆಯ ಅಗತ್ಯವಿರುತ್ತದೆ. ಇದಕ್ಕೂ ಮೊದಲು, ಆಗಸ್ಟ್ 28 ರಂದು, ವಿಧಾನಸಭೆಯಲ್ಲಿ ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ತಿರಸ್ಕರಿಸುವ ನಿರ್ಣಯವನ್ನು ಅಂಗೀಕರಿಸಿತ್ತು.

ಮಸೂದೆಯ ಪ್ರತಿಗಾಗಿ ಎಎಪಿ ಹಟ

ವಿರೋಧ ಪಕ್ಷ ಎಎಪಿ ಮಸೂದೆಯ ಪ್ರತಿಗಳನ್ನು ನೀಡುವಂತೆ ಧರಣಿ ಮಾಡುತ್ತಿದೆ. ಸೋಮವಾರ ಮಧ್ಯಾಹ್ನ ಅಧಿವೇಶನವನ್ನು ಮುಂದೂಡಿದ ನಂತರವು ಎಎಪಿ ಶಾಸಕರು ತಮ್ಮ ಧರಣಿಯನ್ನು ಮುಂದುವರೆಸಿ, ಕೇಂದ್ರವು ಜಾರಿಗೆ ತಂದ ಶಾಸನವನ್ನು ಎದುರಿಸುವ ಮಸೂದೆಯ ಪ್ರತಿಗಳನ್ನು ಕೋರಿದ್ದರು.

ಪಂಜಾಬ್ ಹಣಕಾಸು ಮತ್ತು ಕಾರ್ಯಕಾರಿ ಸಂಸದೀಯ ವ್ಯವಹಾರಗಳ ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್, ಹೊಸ ಕೃಷಿ ಕಾನೂನುಗಳನ್ನು ಎದುರಿಸಲು ರಾಜ್ಯ ಸರ್ಕಾರ ಸಾಂವಿಧಾನಿಕ ತಜ್ಞರೊಂದಿಗೆ ಸಮಾಲೋಚಿಸುತ್ತಿದೆ ಮತ್ತು ಅಧಿವೇಶನದಲ್ಲಿ ಮಂಡಿಸಬೇಕಾದ ವಿವಿಧ ಮಸೂದೆಗಳ ಪ್ರತಿಗಳನ್ನು ಪ್ರತಿಪಕ್ಷಗಳಿಗೆ ಸಂಜೆಯ ಹೊತ್ತಿಗೆ ನೀಡಲಾಗುವುದು ಎಂದು ನಿನ್ನೆ ಹೇಳಿದ್ದರು.

ಪ್ರತಿಪಕ್ಷದ ನಾಯಕ ಮತ್ತು ಎಎಪಿ ಮುಖಂಡ ಹರ್ಪಾಲ್ ಸಿಂಗ್ ಚೀಮಾ, “ಸದನದಲ್ಲಿ ಮಂಡಿಸಲಾಗುವ ಮಸೂದೆಗಳ ಪ್ರತಿ ಸಿಗುವ ತನಕ ನಾವು ಇಲ್ಲಿ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ” ಎಂದು ನಿನ್ನೆ ತಡರಾತ್ರಿ ಹೇಳಿದ್ದಾರೆ.

“ಕೃಷಿ ಕಾನೂನುಗಳ ವಿರುದ್ಧದ ಶಾಸನವನ್ನು ಎಎಪಿ ಬೆಂಬಲಿಸುತ್ತದೆ ಆದರೆ ಸರ್ಕಾರವು ಅದರ ಪ್ರತಿಗಳನ್ನು ನಮಗೆ ನೀಡಬೇಕಾಗಿತ್ತು. ನಮಗೆ ಇತರ ಮಸೂದೆಗಳ ಪ್ರತಿಗಳೂ ಸಿಕ್ಕಿಲ್ಲ. ಇದು ಸಿಗದೆ ನಮ್ಮ ಶಾಸಕರು ಪ್ರಮುಖ ವಿಷಯಗಳ ಬಗ್ಗೆ ಹೇಗೆ ಚರ್ಚಿಸುತ್ತಾರೆ” ಎಂದು ಚೀಮಾ ಹೇಳಿದ್ದಾರೆ.

ಇದನ್ನೂ ಓದಿ: ’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...