Homeಮುಖಪುಟಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು: ಪಂಜಾಬ್‌ ಅಸೆಂಬ್ಲಿಯಲ್ಲಿ ಮೂರು ಹೊಸ ಮಸೂದೆಗಳ ಮಂಡನೆ!

ಕೇಂದ್ರದ ಕೃಷಿ ಕಾಯ್ದೆಗಳಿಗೆ ಸೆಡ್ಡು: ಪಂಜಾಬ್‌ ಅಸೆಂಬ್ಲಿಯಲ್ಲಿ ಮೂರು ಹೊಸ ಮಸೂದೆಗಳ ಮಂಡನೆ!

ಕೇಂದ್ರದ ಕೃಷಿ ಕಾನೂನುಗಳು ರೈತರು ಮತ್ತು ಭೂಹೀನ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಕ್ಯಾಪ್ಟನ್ ಅಮರಿಂದರ್ ಸಿಂಗ್ ತಿಳಿಸಿದ್ದಾರೆ.

- Advertisement -
- Advertisement -

ಕ್ಯಾಪ್ಟನ್ ಅಮರಿಂದರ್ ಸಿಂಗ್ ನೇತೃತ್ವದ ಪಂಜಾಬ್ ಸರ್ಕಾರ ವಿಧಾನಸಭೆಯಲ್ಲಿ ಕೇಂದ್ರ ಸರ್ಕಾರ ಅಂಗೀಕರಿಸಿದ ಮೂರು ಹೊಸ ಕೃಷಿ ಕಾನೂನುಗಳನ್ನು ತಿರಸ್ಕರಿಸುವ ನಿರ್ಣಯವನ್ನು ಮಂಡಿಸಿದೆ. ಕೇಂದ್ರದ ಕೃಷಿ ಕಾನೂನುಗಳು ರೈತರು ಮತ್ತು ಭೂಹೀನ ಕಾರ್ಮಿಕರ ಹಿತಾಸಕ್ತಿಗೆ ವಿರುದ್ಧವಾಗಿವೆ ಎಂದು ಅವರು ಹೇಳಿದ್ದಾರೆ.

“ಕೃಷಿ ಸುಗ್ರೀವಾಜ್ಞೆಗಳು ಮತ್ತು ವಿದ್ಯುತ್ ಕಾಯ್ದೆಯ ತಿದ್ದುಪಡಿಗಳ ವಿರುದ್ಧದ ನಿರ್ಣಯವು ಮುಗಿದಿದೆ. ಮೂರು ಕೃಷಿ ಶಾಸನಗಳು ಮತ್ತು ಪ್ರಸ್ತಾವಿತ ವಿದ್ಯುತ್ (ತಿದ್ದುಪಡಿ) ಮಸೂದೆ, ರೈತರು ಮತ್ತು ಭೂಹೀನ ಕಾರ್ಮಿಕರ ಹಿತಾಸಕ್ತಿಗಳಿಗೆ ವಿರುದ್ಧವಾಗಿದೆ” ಎಂದು ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಹೇಳಿದ್ದಾರೆ.

ಇದನ್ನೂ ಒದಿ: ಕೃಷಿ ಮಸೂದೆಗೆ ವಿರೋಧ: ಪಂಜಾಬ್ BJP ಪ್ರಧಾನ ಕಾರ್ಯದರ್ಶಿ ರಾಜೀನಾಮೆ!

ಕೇಂದ್ರದ ಕೃಷಿ ಕಾನೂನುಗಳನ್ನು ಪ್ರಶ್ನಿಸಿ ನಿರ್ಣಯವನ್ನು ಮಂಡಿಸಿದ ಮೊದಲ ರಾಜ್ಯ ಪಂಜಾಬ್ ಆಗಿದೆ. ನಿರ್ಣಯದ ಹೊರತಾಗಿ, ರೈತರ ಉತ್ಪಾದನಾ ಸೌಲಭ್ಯ ಕಾಯ್ದೆಗೆ ತಿದ್ದುಪಡಿ, ಅಗತ್ಯ ಸರಕುಗಳ ಕಾಯ್ದೆಗೆ ತಿದ್ದುಪಡಿ, ರೈತರ ಒಪ್ಪಂದಕ್ಕೆ ತಿದ್ದುಪಡಿ ಮತ್ತು ಕೃಷಿ ಸೇವೆಗಳ ಕಾಯ್ದೆ ಸೇರಿದಂತೆ ಒಟ್ಟು ಮೂರು ಹೊಸ ಮಸೂದೆಗಳನ್ನು ಮುಖ್ಯಮಂತ್ರಿ ಇಂದು ಅಸೆಂಬ್ಲಿಯಲ್ಲಿ ಮಂಡಿಸಿದ್ದಾರೆ.

ಈ ತಿದ್ದುಪಡಿಗಳಿಗೆ ಭಾರತದ ರಾಷ್ಟ್ರಪತಿಗಳ ಒಪ್ಪಿಗೆಯ ಅಗತ್ಯವಿರುತ್ತದೆ. ಇದಕ್ಕೂ ಮೊದಲು, ಆಗಸ್ಟ್ 28 ರಂದು, ವಿಧಾನಸಭೆಯಲ್ಲಿ ಕೇಂದ್ರದ ಮೂರು ವಿವಾದಾತ್ಮಕ ಕೃಷಿ ಮಸೂದೆಗಳನ್ನು ತಿರಸ್ಕರಿಸುವ ನಿರ್ಣಯವನ್ನು ಅಂಗೀಕರಿಸಿತ್ತು.

ಮಸೂದೆಯ ಪ್ರತಿಗಾಗಿ ಎಎಪಿ ಹಟ

ವಿರೋಧ ಪಕ್ಷ ಎಎಪಿ ಮಸೂದೆಯ ಪ್ರತಿಗಳನ್ನು ನೀಡುವಂತೆ ಧರಣಿ ಮಾಡುತ್ತಿದೆ. ಸೋಮವಾರ ಮಧ್ಯಾಹ್ನ ಅಧಿವೇಶನವನ್ನು ಮುಂದೂಡಿದ ನಂತರವು ಎಎಪಿ ಶಾಸಕರು ತಮ್ಮ ಧರಣಿಯನ್ನು ಮುಂದುವರೆಸಿ, ಕೇಂದ್ರವು ಜಾರಿಗೆ ತಂದ ಶಾಸನವನ್ನು ಎದುರಿಸುವ ಮಸೂದೆಯ ಪ್ರತಿಗಳನ್ನು ಕೋರಿದ್ದರು.

ಪಂಜಾಬ್ ಹಣಕಾಸು ಮತ್ತು ಕಾರ್ಯಕಾರಿ ಸಂಸದೀಯ ವ್ಯವಹಾರಗಳ ಸಚಿವ ಮನ್‌ಪ್ರೀತ್ ಸಿಂಗ್ ಬಾದಲ್, ಹೊಸ ಕೃಷಿ ಕಾನೂನುಗಳನ್ನು ಎದುರಿಸಲು ರಾಜ್ಯ ಸರ್ಕಾರ ಸಾಂವಿಧಾನಿಕ ತಜ್ಞರೊಂದಿಗೆ ಸಮಾಲೋಚಿಸುತ್ತಿದೆ ಮತ್ತು ಅಧಿವೇಶನದಲ್ಲಿ ಮಂಡಿಸಬೇಕಾದ ವಿವಿಧ ಮಸೂದೆಗಳ ಪ್ರತಿಗಳನ್ನು ಪ್ರತಿಪಕ್ಷಗಳಿಗೆ ಸಂಜೆಯ ಹೊತ್ತಿಗೆ ನೀಡಲಾಗುವುದು ಎಂದು ನಿನ್ನೆ ಹೇಳಿದ್ದರು.

ಪ್ರತಿಪಕ್ಷದ ನಾಯಕ ಮತ್ತು ಎಎಪಿ ಮುಖಂಡ ಹರ್ಪಾಲ್ ಸಿಂಗ್ ಚೀಮಾ, “ಸದನದಲ್ಲಿ ಮಂಡಿಸಲಾಗುವ ಮಸೂದೆಗಳ ಪ್ರತಿ ಸಿಗುವ ತನಕ ನಾವು ಇಲ್ಲಿ ಪ್ರತಿಭಟನೆಯನ್ನು ಮುಂದುವರೆಸುತ್ತೇವೆ” ಎಂದು ನಿನ್ನೆ ತಡರಾತ್ರಿ ಹೇಳಿದ್ದಾರೆ.

“ಕೃಷಿ ಕಾನೂನುಗಳ ವಿರುದ್ಧದ ಶಾಸನವನ್ನು ಎಎಪಿ ಬೆಂಬಲಿಸುತ್ತದೆ ಆದರೆ ಸರ್ಕಾರವು ಅದರ ಪ್ರತಿಗಳನ್ನು ನಮಗೆ ನೀಡಬೇಕಾಗಿತ್ತು. ನಮಗೆ ಇತರ ಮಸೂದೆಗಳ ಪ್ರತಿಗಳೂ ಸಿಕ್ಕಿಲ್ಲ. ಇದು ಸಿಗದೆ ನಮ್ಮ ಶಾಸಕರು ಪ್ರಮುಖ ವಿಷಯಗಳ ಬಗ್ಗೆ ಹೇಗೆ ಚರ್ಚಿಸುತ್ತಾರೆ” ಎಂದು ಚೀಮಾ ಹೇಳಿದ್ದಾರೆ.

ಇದನ್ನೂ ಓದಿ: ’ಮಹಾಘಟಬಂಧನ್’ ಗೆದ್ದರೆ ಕೇಂದ್ರದ ಕೃಷಿ ವಿರೋಧಿ ಕಾನೂನುಗಳು ರದ್ದು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...