Homeಮುಖಪುಟಪಂಜಾಬ್: 8 ಬಾರಿ ಸಂಸದರಾಗಿದ್ದ ಕಾಂಗ್ರೆಸ್‌ ನಾಯಕ ಬೂಟಾ ಸಿಂಗ್ ನಿಧನ

ಪಂಜಾಬ್: 8 ಬಾರಿ ಸಂಸದರಾಗಿದ್ದ ಕಾಂಗ್ರೆಸ್‌ ನಾಯಕ ಬೂಟಾ ಸಿಂಗ್ ನಿಧನ

ಜವಹರಲಾಲ್ ನೆಹರೂ ಅವರ ಕಾಲದಿಂದಲೂ ಕಾಂಗ್ರೆಸ್‌ನಲ್ಲಿದ್ದ ಇವರು, ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿಯವರಿಗೆ ಅಪ್ತರಾಗಿದ್ದರು. ಕಾಂಗ್ರೆಸ್ ಸಂಪುಟದಲ್ಲಿ ವಿವಿಧ ಹುದ್ದೆಗಳನ್ನು ವಹಿಸಿಕೊಂಡಿದ್ದರು

- Advertisement -
- Advertisement -

ಪಂಜಾಬ್ ಮೂಲದ ಮಾಜಿ ಕೇಂದ್ರ ಸಚಿವ ಮತ್ತು ಕಾಂಗ್ರೆಸ್ ಮುಖಂಡ ಬೂಟಾ ಸಿಂಗ್ ಶನಿವಾರ ನಿಧನರಾಗಿದ್ದಾರೆ. ಇವರು ಇಂದಿರಾ ಗಾಂಧಿಯವರ ಸಂಪುಟದಲ್ಲಿ ಗೃಹ ಸಚಿವರಾಗಿ ಕಾರ್ಯನಿರ್ವಹಿಸಿದ್ದರು.

86 ವರ್ಷದ ಬೂಟಾ ಸಿಂಗ್ ಬಿಹಾರದ ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದು, 2007-2010 ರವರೆಗೆ ಪರಿಶಿಷ್ಟ ವರ್ಗದ ರಾಷ್ಟ್ರೀಯ ಆಯೋಗದ ಅಧ್ಯಕ್ಷರಾಗಿದ್ದರು.

ಪತ್ರಕರ್ತರಾಗಿ ತಮ್ಮ ಜೀವನವನ್ನು ಆರಂಭಿಸಿದ ದಲಿತ ಸಮುದಾಯಕ್ಕೆ ಸೇರಿದ ಬೂಟಾ ಸಿಂಗ್, ನಂತರ ಅಕಾಲಿ ದಳ ಪಕ್ಷಕ್ಕೆ ಸೇರಿದರು. ಅಕಾಲಿ ದಳ ವಿಭಜನೆಯಾದ ನಂತರ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಂಡರು. 8 ಬಾರಿ ಸಂಸದರಾಗಿ ಆಯ್ಕೆಯಾಗಿದ್ದ ಬೂಟಾ ಸಿಂಗ್, ಜವಹರಲಾಲ್ ನೆಹರೂ ಅವರ ಕಾಲದಿಂದಲೂ ಕಾಂಗ್ರೆಸ್‌ನಲ್ಲಿದ್ದು ಇಂದಿರಾಗಾಂಧಿ ಮತ್ತು ರಾಜೀವ್ ಗಾಂಧಿಯವರಿಗೆ ಅಪ್ತರಾಗಿದ್ದರು. ಕಾಂಗ್ರೆಸ್ ಸಂಪುಟದಲ್ಲಿ ವಿವಿಧ ಹುದ್ದೆಗಳನ್ನು ವಹಿಸಿಕೊಂಡಿದ್ದರು. 1978-80 ರಲ್ಲಿ ಕಾಂಗ್ರೆಸ್‌ನ ಜನರಲ್ ಸೆಕ್ರೆಟರಿಯಾಗಿ ಕೂಡ ಕಾರ್ಯನಿರ್ವಹಿಸಿದ್ದರು. ಇಂದಿರಾ ಗಾಂಧಿಯವರ ಆಡಳಿತದಲ್ಲಿ ರಾಷ್ಟ್ರಪತಿ ಹುದ್ದೆಗೂ ಇವರ ಹೆಸರು ನಾಮ ನಿರ್ದೇಶನವಾಗಿತ್ತು.

ಇದನ್ನೂ ಓದಿ: ಹಿಂದೂಗಳು ಮಾತ್ರ ದೇಶಭಕ್ತರಾಗಲು ಸಾಧ್ಯ: ವಿವಾದಾತ್ಮಕ ಹೇಳಿಕೆ ನೀಡಿದ ಮೋಹನ್ ಭಾಗವತ್

ಇಂದಿರಾ ಗಾಂಧಿಯವರ ಆಡಳಿತದಲ್ಲಿ ಅಮೃತಸರದ ಗೋಲ್ಡನ್ ಟೆಂಪಲ್‌ ಮೇಲೆ ದಾಳಿ (ಆಪರೇಷನ್ ಬ್ಲೂ ಸ್ಟಾರ್) ನಡೆಸಲಾಗಿತ್ತು. ನಂತರ ಇದನ್ನು ಸಹಿಸಲಾರದೆ, ಇಂದಿರಾಗಾಂಧಿಯವರನ್ನು ಅವರ ಸಿಖ್ ಅಂಗರಕ್ಷಕರೇ ಕೊಂದಿದ್ದರು. ಈ ಸಂದರ್ಭದಲ್ಲಿ ಅಂದು ಕೇಂದ್ರ ಸಚಿವರಾಗಿದ್ದ ಬೂಟಾ ಸಿಂಗ್ ಕ್ಷಮೆ ಕೇಳಬೇಕಾದ ಸಂದರ್ಭ ಎದುರಾಗಿತ್ತು. ಅದರಂತೆ ಕ್ಷಮೆ ಕೇಳಿದ್ದರು. ಇದನ್ನು ಸಹಿಸಲಾರದ ಸಿಖ್ ಸಮುದಾಯ, ಪಂಜಾಬ್‌ನ ದಲಿತ ಸಿಖ್ಖರಾದ ಬೂಟಾ ಸಿಂಗ್ ಅವರಿಗೆ ಮಂದಿರಕ್ಕೆ ಬರುವವರ ಬೂಟ್ ಪಾಲಿಶ್ ಮಾಡುವ ಶಿಕ್ಷೆ ವಿಧಿಸಿತ್ತು. ಇದನ್ನೂ ಸಹ ಅವರು ಮಾಡಿದ್ದರು.


ಇದನ್ನೂ ಓದಿ: ಷೇರು-ವ್ಯಾಪಾರ ನಿಯಮ ಉಲ್ಲಂಘನೆ: ಅಂಬಾನಿಗೆ 40 ಕೋಟಿ ದಂಡ ವಿಧಿಸಿದ SEBI

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...