Homeಮುಖಪುಟಪೊಲೀಸ್ ದಾಳಿಗೆ ರೈತ ಸಾವು ಆರೋಪ: ಎಫ್‌ಐಆರ್ ದಾಖಲಿಸಲು ಪಟ್ಟು ಹಿಡಿದ ರೈತರು

ಪೊಲೀಸ್ ದಾಳಿಗೆ ರೈತ ಸಾವು ಆರೋಪ: ಎಫ್‌ಐಆರ್ ದಾಖಲಿಸಲು ಪಟ್ಟು ಹಿಡಿದ ರೈತರು

- Advertisement -
- Advertisement -

‘ದೆಹಲಿ ಚಲೋ’ ಪ್ರತಿಭಟನಾ ನಿರತ ಯುವ ರೈತ ಶುಭಕರನ್ ಸಿಂಗ್ ಸಾವಿನ ಸಂಬಂಧ ಎಫ್ಐಆರ್ ದಾಖಲಿಸಲು ರೈತ ಸಂಘಟನೆಗಳು ಪಟ್ಟು ಹಿಡಿದಿವೆ.

ಎಫ್ಐಆರ್ ದಾಖಲಿಸುವವರೆಗೆ ನಾವು ಅಂತ್ಯ ಸಂಸ್ಕಾರ ನಡೆಸುವುದಿಲ್ಲ. ಪಂಜಾಬ್ ಮುಖ್ಯಮಂತ್ರಿ ಘೋಷಿಸಿರುವ 1 ಕೋಟಿ ರೂಪಾಯಿ ಪರಿಹಾರ ಹಣ ಬೇಡ ಎಂದು ಶುಭಕರನ್ ಸಂಬಂಧಿಕರು ಹೇಳಿದ್ದಾರೆ.

ವರದಿಗಳ ಪ್ರಕಾರ ಶುಭಕರನ್ ಸಾವಿಗೆ ಕಾರಣರಾದವರ ವಿರುದ್ದ ಇನ್ನೂ ಎಫ್‌ಐಆರ್ ದಾಖಲಾಗಿಲ್ಲ. ಅಧಿಕಾರ ವ್ಯಾಪ್ತಿಯ ಸಮಸ್ಯೆಗಳನ್ನು ಉಲ್ಲೇಖಿಸಿ ಪಂಜಾಬ್ ಪೊಲೀಸರು ತಮ್ಮ ಅಸಹಾಯಕತೆ ವ್ಯಕ್ತಪಡಿಸಿದ್ದಾರೆ ಎಂದು ಖಾಸಗಿ ಮೂಲಗಳನ್ನು ಉಲ್ಲೇಖಿಸಿ ಹಿಂದುಸ್ಥಾನ್ ಟೈಮ್ಸ್ ವರದಿ ಮಾಡಿದೆ.

ಶುಭಕರನ್ ಹರಿಯಾಣ ರಾಜ್ಯದ ವ್ಯಾಪ್ತಿಯಲ್ಲಿ ಗಾಯಗೊಂಡಿದ್ದು, ಹಾಗಾಗಿ ನಾವು ಪ್ರಕರಣ ದಾಖಲಿಸುವುದು ಅಸಾಧ್ಯ ಎಂದು ಪಂಜಾಬ್ ಪೊಲೀಸರು ಹೇಳಿದ್ದಾಗಿ ವರದಿ ತಿಳಿಸಿದೆ.

ಫೆಬ್ರವರಿ 21 ರಂದು, ಪಂಜಾಬ್-ಹರಿಯಾಣದ ಗಡಿ ಪ್ರದೇಶ ಖಾನೌರಿಯಲ್ಲಿ ರೈತರು ಮತ್ತು ಹರಿಯಾಣ ಪೊಲೀಸರ ನಡುವೆ ಹಿಂಸಾತ್ಮಕ ಘರ್ಷಣೆ ನಡೆದಿತ್ತು. ಈ ವೇಳೆ ಪಂಜಾಬ್‌ನ ಬಟಿಂಡಾದ ಬಲೋಹ್ ಗ್ರಾಮದ 21 ವರ್ಷದ ಪ್ರತಿಭಟನಾಕಾರ ಶುಭಕರನ್ ಸಿಂಗ್ ಅವರು ತೀವ್ರವಾಗಿ ಗಾಯಗೊಂಡಿದ್ದರು. ತಲೆಗೆ ಪೆಟ್ಟಾಗಿ ಪಟಿಯಾಲದ ರಾಜೀಂದ್ರ ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆ ಅವರು ಮೃತಪಟ್ಟಿದ್ದರು.

ಹರಿಯಾಣ ಪೊಲೀಸರ ಗುಂಡಿಗೆ ಶುಭಕರನ್ ಬಲಿಯಾಗಿದ್ದಾರೆ. ಅವರ ತಲೆಗೆ ಗುಂಡು ಹಾರಿಸಲಾಗಿದೆ ಎಂದು ರೈತರು ಆರೋಪಿಸಿದ್ದಾರೆ.

ಯುವ ರೈತನ ಸಾವಿನ ಬೆನ್ನಲ್ಲೇ ಪಟಿಯಾಲದ ರಾಜೀಂದ್ರ ಆಸ್ಪತ್ರೆಯಲ್ಲಿ ಹಾಜರಿದ್ದ ಅವರ ಸಂಬಂಧಿಕರು ಮತ್ತು ರೈತ ಮುಖಂಡರು 1 ಕೋಟಿ ರೂಪಾಯಿ ಪರಿಹಾರ, ಶುಭಕರನ್‌ಗೆ ಹುತಾತ್ಮನ ಸ್ಥಾನಮಾನ ಮತ್ತು ಅವರ ಕುಟುಂಬದ ಸದಸ್ಯರೊಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಒತ್ತಾಯಿಸಿದ್ದರು. ಅವರ ಮರಣೋತ್ತರ ಪರೀಕ್ಷೆಯನ್ನು ವೈದ್ಯರ ಸಮಿತಿಯ ಮುಂದೆ ನಡೆಸಬೇಕು ಮತ್ತು ಹರಿಯಾಣ ಪೊಲೀಸರ ವಿರುದ್ಧ ಎಫ್‌ಐಆರ್ ದಾಖಲಿಸಬೇಕು ಎಂದು ಆಗ್ರಹಿಸಿದ್ದರು.

ಅಧಿಕಾರಿಗಳು ತಮ್ಮ ಬೇಡಿಕೆಗಳನ್ನು ಈಡೇರಿಸದ ಹೊರತು ಮರಣೋತ್ತರ ಪರೀಕ್ಷೆ ನಡೆಸಲು ಬಿಡುವುದಿಲ್ಲ ಎಂದು ರೈತರು ಪಟ್ಟು ಹಿಡಿದಿದ್ದರು.

ಎರಡೂವರೆ ಎಕರೆ ಜಮೀನು ಹೊಂದಿದ್ದ ಶುಭಕರನ್, ಅವರ ಕುಟುಂಬದ ಏಕೈಕ ಆಧಾರವಾಗಿದ್ದರು ಎಂದು ಅವರ ಚಿಕ್ಕಮ್ಮ ಹರ್‌ಪ್ರೀತ್ ಕೌರ್ ತಿಳಿಸಿದ್ದಾಗಿ ನ್ಯೂಸ್‌ಲಾಂಡ್ರಿ ವರದಿ ಮಾಡಿದೆ. ಮಾನಸಿಕ ಖಾಯಿಲೆ ಹೊಂದಿದ್ದ ತಂದೆ, ಅಜ್ಜಿ ಮತ್ತು ಇಬ್ಬರು ಸಹೋದರಿಯರನ್ನು ಶುಭಕರನ್ ಅಗಲಿದ್ದಾರೆ.

ಫೆಬ್ರವರಿ 23 ರಂದು, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಅವರು “ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳುವುದು ಸೇರಿದಂತೆ ರೈತರ ಎಲ್ಲಾ ಬೇಡಿಕೆಗಳನ್ನು ರಾಜ್ಯ ಸರ್ಕಾರ ಈಡೇರಿಸಲಿದೆ ಎಂದು ಎಕ್ಸ್‌ನಲ್ಲಿ ಬರೆದುಕೊಂಡಿದ್ದರು. ಆದರೆ, ಅಂದು ಸಂಜೆ 5 ಗಂಟೆಯವರೆಗೂ ಹರಿಯಾಣ ಪೊಲೀಸರ ವಿರುದ್ಧ ಎಫ್‌ಐಆರ್‌ ದಾಖಲಿಸಬೇಕೆಂಬ ಬೇಡಿಕೆಗೆ ಅವರು ಸ್ಪಂದಿಸಿರಲಿಲ್ಲ.

ಇಂದಿಗೆ (ಫೆ.24) ಘಟನೆ ನಡೆದು ಮೂರು ದಿನಗಳಾಗಿವೆ. ವರದಿಗಳ ಪ್ರಕಾರ ಶುಭಕರನ್ ಸಾವಿನ ಸಂಬಂಧ  ಇನ್ನೂ ಯಾವುದೇ ಪ್ರಕರಣ ದಾಖಲಾಗಿಲ್ಲ. ಪಂಜಾಬ್ ಪೊಲೀಸರು ಪ್ರಕರಣ ದಾಖಲಿಸಲು ಸಿದ್ದರಿದ್ದರೂ ಅವರಿಗೆ ಪ್ರಾದೇಶಿಕ ಸಮಸ್ಯೆ ಉಂಟಾಗಿದೆ‌.

ಇದನ್ನೂ ಓದಿ : ಹಕ್ಕುಗಳ ಉಲ್ಲಂಘನೆ: ಸುಪ್ರೀಂಕೋರ್ಟ್ ಮೆಟ್ಟಿಲೇರಿದ ರೈತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...

ದೆಹಲಿ ಪೊಲೀಸರಿಂದ 10 ಮಂದಿ ಹೋರಾಟಗಾರರ ಅಪಹರಣ ಆರೋಪ : ಹೈಕೋರ್ಟ್‌ಗೆ ಹೇಬಿಯಸ್ ಕಾರ್ಪಸ್ ಅರ್ಜಿ

ಸಿವಿಲ್ ಸೊಸೈಟಿಯ ಹತ್ತು ಮಂದಿ ಹೋರಾಟಗಾರರನ್ನು ದೆಹಲಿ ಪೊಲೀಸರು ಅಪಹರಿಸಿದ್ದಾರೆ ಅಥವಾ ಅಕ್ರಮವಾಗಿ ಬಂಧಿಸಿದ್ದಾರೆ ಎಂದು ಮಾನವ ಹಕ್ಕುಗಳ ಗುಂಪುಗಳು ಆರೋಪಿಸಿವೆ. ಹತ್ತು ಮಂದಿಯನ್ನು ದೆಹಲಿ ಪೊಲೀಸರು ಮತ್ತು ಇತರ ರಾಜ್ಯಗಳ ಏಜೆನ್ಸಿಗಳು ಅಪಹರಿಸಿವೆ...

ಗುಜರಾತ್‌: 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ: ವಿಧಾನಸಭೆಗೆ ಮಾಹಿತಿ ನೀಡಿದ ಸರ್ಕಾರ

ಗಾಂಧಿನಗರ: ರಾಜ್ಯದ 34 ಜಿಲ್ಲೆಗಳ ಪೈಕಿ 20 ಜಿಲ್ಲೆಗಳಲ್ಲಿ 2 ಲಕ್ಷಕ್ಕೂ ಹೆಚ್ಚು ಮಕ್ಕಳು ಅಪೌಷ್ಟಿಕತೆಯಿಂದ ಬಳಲುತ್ತಿದ್ದಾರೆ ಮತ್ತು ಪರಿಸ್ಥಿತಿಯನ್ನು ಸುಧಾರಿಸಲು ವಿವಿಧ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ಗುಜರಾತ್ ಸರ್ಕಾರ ಶನಿವಾರ ವಿಧಾನಸಭೆಗೆ...