Homeಮುಖಪುಟಉಪವಾಸ ಕೊನೆಗೊಳಿಸುವಂತೆ ರೈತ ನಾಯಕ ದಲ್ಲೆವಾಲ್ ಅವರಲ್ಲಿ ಪಂಜಾಬ್ ಡಿಜಿಪಿ-ಎಂಎಚ್‌ಎ ಮನವಿ

ಉಪವಾಸ ಕೊನೆಗೊಳಿಸುವಂತೆ ರೈತ ನಾಯಕ ದಲ್ಲೆವಾಲ್ ಅವರಲ್ಲಿ ಪಂಜಾಬ್ ಡಿಜಿಪಿ-ಎಂಎಚ್‌ಎ ಮನವಿ

- Advertisement -
- Advertisement -

ತಮ್ಮ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಆಮರಣಾಂತ ಉಪವಾಸ ನಡೆಸುತ್ತಿರುವ ರೈತ ನಾಯಕ ಜಗಜಿತ್ ಸಿಂಗ್ ದಲ್ಲೆವಾಲ್ ಅವರನ್ನು ಪಂಜಾಬ್ ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಗೌರವ್ ಯಾದವ್ ಮತ್ತು ಕೇಂದ್ರ ಗೃಹ ಸಚಿವಾಲಯದ ಮಯಾಂಕ್ ಮಿಶ್ರಾ ಭಾನುವಾರ ಭೇಟಿಯಾಗಿ, ಅವರ ಆರೋಗ್ಯ ವಿಚಾರಿಸಿದರು. ತಮ್ಮ 20-ದಿನಗಳ ಉಪವಾಸವನ್ನು ಕೊನೆಗೊಳಿಸಬೇಕು ಎಂದು ಮನವಿ ಮಾಡಿದ್ದಾರೆ.

ಫೆಬ್ರವರಿಯಲ್ಲಿ ರೈತರೊಂದಿಗೆ ಮಾತುಕತೆ ಅನಿಶ್ಚಿತವಾದ ನಂತರ ಕೇಂದ್ರ ಸರ್ಕಾರ ಮತ್ತು ರೈತ ಮುಖಂಡರ ನಡುವಿನ ಮೊದಲ ಸಭೆ ಇದಾಗಿದೆ.

70 ವರ್ಷದ ಕ್ಯಾನ್ಸರ್ ರೋಗಿ ದಲ್ಲೆವಾಲ್ ಅವರು ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ (ಎಂಎಸ್‌ಪಿ), ಸಾಲಕ್ಕೆ ಕಾನೂನು ಖಾತರಿ ಸೇರಿದಂತೆ ತಮ್ಮ ಬಹುಕಾಲದ ಬೇಡಿಕೆಗಳನ್ನು ಬೆಂಬಲಿಸಿ ನವೆಂಬರ್ 26 ರಿಂದ ಪಂಜಾಬ್ ಮತ್ತು ಹರಿಯಾಣದ ಗಡಿ ಬಿಂದುವಾದ ಖಾನೌರಿಯಲ್ಲಿ ಉಪವಾಸ ಮಾಡುತ್ತಿದ್ದಾರೆ.

ರೈತ ಮುಖಂಡರನ್ನು ಭೇಟಿ ಮಾಡಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಯಾದವ್, ದಲ್ಲೆವಾಲ್ ಅವರ ಆರೋಗ್ಯ ವಿಚಾರಿಸಲು ಬಂದಿದ್ದೇವೆ. ಯಾವುದೇ ಮಾತಿಲ್ಲದೆ, ಅವರ (ದಲ್ಲೆವಾಲ್) ಬೇಡಿಕೆಗಳನ್ನು ನಾವು ಕೇಳಿದ್ದೇವೆ. ಅವರ ಮಾತುಗಳನ್ನು ಕೇಳಲು ಮತ್ತು ಸುಪ್ರೀಂ ಕೋರ್ಟ್ ಆದೇಶದ ಅನುಷ್ಠಾನಕ್ಕಾಗಿ ನಾನು ಇಲ್ಲಿಗೆ ಬಂದಿದ್ದೇನೆ” ಎಂದರು.

ದಲ್ಲೆವಾಲ್ ಅವರ ಪರಿಸ್ಥಿತಿಯನ್ನು ಸರ್ಕಾರ ಗಮನಿಸಿದೆ ಎಂದು ನಾವು ದಲ್ಲೆವಾಲ್ ಅವರಿಗೆ ಮನವಿ ಮಾಡಿದ್ದೇವೆ. ಪಂಜಾಬ್ ಸರ್ಕಾರವು ದಲ್ಲೆವಾಲ್ ಮತ್ತು ಅವರ ಸಹಚರರೊಂದಿಗೆ ಮಾತನಾಡಿ ಅವರಿಗೆ ವೈದ್ಯಕೀಯ ನೆರವು ನೀಡುವುದಾಗಿ ಹೇಳಿದೆ ಎಂದು ಡಿಜಿಪಿ ಯಾದವ್ ಹೇಳಿದ್ದಾರೆ.

“ನಾವು ರೈತರ ಬೇಡಿಕೆಗಳನ್ನು ಪರಿಹರಿಸಲು ಮತ್ತು ಸರ್ಕಾರದ ನಡುವೆ ಮಾತುಕತೆಯ ಮಾರ್ಗಗಳನ್ನು ತೆರೆಯಲು ಪ್ರಯತ್ನಿಸುತ್ತಿದ್ದೇವೆ. ನಾವು ಜಗಜಿತ್ ಸಿಂಗ್ ದಲ್ಲೆವಾಲ್ ಮತ್ತು ಇತರ ರೈತ ಮುಖಂಡರಿಗೆ ಮನವಿ ಮಾಡಿದ್ದೇವೆ. ಅವರಿಗೆ ವೈದ್ಯಕೀಯ ಸೌಲಭ್ಯಗಳನ್ನು ಒದಗಿಸಲಾಗಿದೆ. ನಾವು ಅವರೊಂದಿಗೆ ಸಮನ್ವಯದಿಂದ ಸಮಸ್ಯೆಯನ್ನು ಪರಿಹರಿಸಲು ಪ್ರಯತ್ನಿಸುತ್ತಿದ್ದೇವೆ” ಎಂದು ಅವರು ಹೇಳಿದರು.

ದಲ್ಲೆವಾಲ್ ಅವರನ್ನು ತಕ್ಷಣವೇ ಭೇಟಿ ಮಾಡುವಂತೆ ಎರಡು ದಿನಗಳ ಹಿಂದೆ ಕೇಂದ್ರ ಮತ್ತು ಪಂಜಾಬ್ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ನಿರ್ದೇಶನ ನೀಡಿದ ಹಿನ್ನೆಲೆಯಲ್ಲಿ ಈ ಸಭೆ ನಡೆದಿದೆ. ಅವರ ಜೀವ ಅಮೂಲ್ಯವಾದುದು ಎಂದು ಹೇಳಿದ ನ್ಯಾಯಾಲಯ, ಅವರಿಗೆ ವೈದ್ಯಕೀಯ ನೆರವು ನೀಡುವಂತೆ ಹಾಗೂ ಅನಿರ್ದಿಷ್ಟಾವಧಿ ಉಪವಾಸ ಮುರಿಯುವಂತೆ ಮನವೊಲಿಸಲು ಕೋರಿತ್ತು.

ಸರ್ಕಾರದ ಅಧಿಕಾರಿಗಳು ಭರವಸೆ ನೀಡಿದರೂ, ದಲ್ಲೆವಾಲ್ ಆಮರಣಾಂತ ಉಪವಾಸವನ್ನು ಮುಂದುವರೆಸಲು ಅಚಲವಾಗಿದ್ದರು ಎಂದು ರೈತ ಮುಖಂಡರು ತಿಳಿಸಿದ್ದಾರೆ.

ದೀರ್ಘಕಾಲದ ಉಪವಾಸದಿಂದಾಗಿ ದಲ್ಲೆವಾಲ್ ದುರ್ಬಲಗೊಂಡಿದ್ದರಿಂದ ವೈದ್ಯರು ತಕ್ಷಣ ಆಸ್ಪತ್ರೆಗೆ ಸೇರಿಸಲು ವೈದ್ಯರು ಸಲಹೆ ನೀಡಿದ್ದಾರೆ.

ಪ್ರತಿಭಟನಾ ಸ್ಥಳವನ್ನು ತಲುಪುವ ಮೊದಲು, ಯಾದವ್ ಅವರು ಸುಖಜಿತ್ ಸಿಂಗ್ ಹರ್ದೋಜಾಂಡೆ ಮತ್ತು ಕಾಕಾ ಸಿಂಗ್ ಕೊಟ್ಡಾ ಸೇರಿದಂತೆ ರೈತ ಮುಖಂಡರೊಂದಿಗೆ ಸಭೆ ನಡೆಸಿದರು.

ಪಂಜಾಬ್ ಮತ್ತು ಹರಿಯಾಣ ನಡುವಿನ ಶಂಭು ಗಡಿ ಬಿಂದುವಿನಲ್ಲಿ ರಸ್ತೆತಡೆ ಹಂತವಾಗಿ ನಿರ್ಮಿಸಲಾದ ಬಹು-ಪದರದ ಬ್ಯಾರಿಕೇಡ್‌ಗಳನ್ನು ದಾಟಲು ಪ್ರಯತ್ನಿಸುತ್ತಿದ್ದ ಪ್ರತಿಭಟನಾಕಾರರನ್ನು ಚದುರಿಸಲು ಹರಿಯಾಣದ ಭದ್ರತಾ ಸಿಬ್ಬಂದಿ ಶನಿವಾರ ಅಶ್ರುವಾಯು ಶೆಲ್‌ಗಳನ್ನು ಸಿಡಿಸಿದರು.

ರಾಷ್ಟ್ರ ರಾಜಧಾನಿಗೆ ಹೋಗಲು ಅನುಮತಿ ಇಲ್ಲದಿರುವುದರಿಂದ ಹರಿಯಾಣ ಪ್ರವೇಶಿಸಬಾರದು, ವಾಪಸ್ ಹೋಗಬೇಕು ಎಂದು 101 ರೈತರ ನಿಯೋಗಕ್ಕೆ ಮನವರಿಕೆ ಮಾಡಲು ಪ್ರಯತ್ನಿಸುತ್ತಿದ್ದ ಪೊಲೀಸರು ಅವರನ್ನು ಚದುರಿಸಲು ಜಲಫಿರಂಗಿಯನ್ನೂ ಬಳಸಿದರು.

ಇದೀಗ 10 ತಿಂಗಳುಗಳನ್ನು ಪೂರೈಸಿರುವ ನಡೆಯುತ್ತಿರುವ ಪ್ರತಿಭಟನೆಯ ಭಾಗವಾಗಿ 101 ರೈತರು ರಾಷ್ಟ್ರ ರಾಜಧಾನಿಯತ್ತ ಸಾಗಲು ನಡೆಸಿದ ಮೂರನೇ ಪ್ರಯತ್ನ ಇದಾಗಿದೆ. ಇದಕ್ಕೂ ಮುನ್ನ ಅವರು ಡಿಸೆಂಬರ್ 6 ಮತ್ತು 8 ರಂದು ದೆಹಲಿ ಕಡೆಗೆ ಮೆರವಣಿಗೆ ನಡೆಸಲು ಪ್ರಯತ್ನಿಸಿದರು.

ಭದ್ರತಾ ಪಡೆಗಳು ದೆಹಲಿಗೆ ತೆರಳುವ ಪ್ರಯತ್ನವನ್ನು ನಿಲ್ಲಿಸಿದ ನಂತರ ಪ್ರತಿಭಟನಾಕಾರರು ಫೆಬ್ರವರಿ 13 ರಿಂದ ಪಂಜಾಬ್‌ನ ಶಂಭು ಮತ್ತು ಖಾನೌರಿ ಗಡಿಗಳಲ್ಲಿ ಮೊಕ್ಕಾಂ ಹೂಡಿದ್ದಾರೆ.

ಪಂಜಾಬ್‌ನಲ್ಲಿ ಡಿಸೆಂಬರ್ 18 ರಂದು ತಮ್ಮ ಪ್ರತಿಭಟನೆಯನ್ನು ಸಲ್ಲಿಸಲು ರೈಲುಗಳನ್ನು ಸ್ಥಗಿತಗೊಳಿಸುವುದಾಗಿ ರೈತ ಮುಖಂಡ ಸರ್ವಾನ್ ಸಿಂಗ್ ಪಂಧೇರ್ ಘೋಷಿಸಿದ್ದಾರೆ.

ಇದನ್ನೂ ಓದಿ; ವೈದ್ಯೆ ಅತ್ಯಾಚಾರ-ಕೊಲೆ ಪ್ರಕರಣದ ಪ್ರಮುಖ ಆರೋಪಿಗಳಿಗೆ ಜಾಮೀನು; ಕೋಲ್ಕತ್ತಾದಲ್ಲಿ ಭುಗಿಲೆದ್ದ ಪ್ರತಿಭಟನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...