Homeಮುಖಪುಟಭಗತ್‌ ಸಿಂಗ್‌‌ ಸ್ವಗ್ರಾಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಪಂಜಾಬ್ ಚುನಾಯಿತ ಮುಖ್ಯಮಂತ್ರಿ

ಭಗತ್‌ ಸಿಂಗ್‌‌ ಸ್ವಗ್ರಾಮದಲ್ಲಿ ಪ್ರಮಾಣ ವಚನ ಸ್ವೀಕರಿಸಲಿರುವ ಪಂಜಾಬ್ ಚುನಾಯಿತ ಮುಖ್ಯಮಂತ್ರಿ

- Advertisement -
- Advertisement -

ಆಮ್ ಆದ್ಮಿ ಪಕ್ಷದ ನಾಯಕ, ಪಂಜಾಬ್‌ನ ಚುನಾಯಿತ ಮುಖ್ಯಮಂತ್ರಿ ಭಗವಂತ್ ಮಾನ್ ಅವರು ಶನಿವಾರ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಅವರನ್ನು ಭೇಟಿ ಮಾಡಿ ರಾಜ್ಯದಲ್ಲಿ ಹೊಸ ಸರ್ಕಾರ ರಚಿಸಲು ಹಕ್ಕು ಮಂಡಿಸಿದ್ದಾರೆ. ಮಾರ್ಚ್ 16 ರಂದು ಮಧ್ಯಾಹ್ನ 12.30 ಕ್ಕೆ ಸ್ವಾತಂತ್ರ್ಯ ಹೋರಾಟಗಾರ ಭಗತ್ ಸಿಂಗ್ ಅವರ ಸ್ವಗ್ರಾಮದಲ್ಲಿ ಪ್ರಮಾಣ ವಚನ ಸ್ವೀಕಾರ ಸಮಾರಂಭ ನಡೆಯಲಿದೆ ಎಂದು ಅವರು ರಾಜಭವನದ ಹೊರಗೆ ತಿಳಿಸಿದ್ದಾರೆ.

“ಪಂಜಾಬ್‌ನಾದ್ಯಂತ ಇರುವ ಮನೆಗಳಿಂದ ಜನರು ಸಮಾರಂಭಕ್ಕೆ ಬರುತ್ತಾರೆ ಮತ್ತು ಭಗತ್ ಸಿಂಗ್‌ಗೆ ಗೌರವ ಸಲ್ಲಿಸುತ್ತಾರೆ. ಉತ್ತಮ ಕ್ಯಾಬಿನೆಟ್ ಇರಲಿದ್ದು, ಹಿಂದೆಂದೂ ಮಾಡದ ಐತಿಹಾಸಿಕ ನಿರ್ಧಾರಗಳನ್ನು ಮಾಡಲಾಗುವುದು” ಎಂದು ಭಗವಂತ್‌ ಮಾನ್ ಅವರು ಸುದ್ದಿ ಸಂಸ್ಥೆ ANI ಗೆ ತಿಳಿಸಿದ್ದಾರೆ.

ಇದನ್ನೂ ಓದಿ:  Punjab Election Results | ಪಂಜಾಬ್‌‌ನಲ್ಲಿ AAP ಭರ್ಜರಿ ಜಯ; ಸಂಪೂರ್ಣ ಫಲಿತಾಂಶ ಹೀಗಿದೆ

ಶುಕ್ರವಾರ ಮೊಹಾಲಿಯಲ್ಲಿ ನಡೆದ ಪಕ್ಷದ ಶಾಸಕರ ಸಭೆಯಲ್ಲಿ ಧುರಿ ಕ್ಷೇತ್ರದಿಂದ 58,000 ಮತಗಳಿಂದ ಗೆದ್ದಿರುವ ಮಾನ್ ಅವರನ್ನು ಎಎಪಿಯ ಶಾಸಕಾಂಗ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಆಮ್ ಆದ್ಮಿ ಪಕ್ಷದ ಹೊಸ ಶಾಸಕರಿಗೆ ತಮ್ಮ ಮೊದಲ ನಿರ್ದೇಶನದ ನೀಡಿದ ಮಾನ್ ಅವರು, ತಮ್ಮ ತಮ್ಮ ಕ್ಷೇತ್ರಗಳಲ್ಲಿ ಗರಿಷ್ಠ ಸಮಯವನ್ನು ಕಳೆಯಬೇಕೆ ಹೊರತು, ರಾಜಧಾನಿ ಚಂಡೀಗಡದಲ್ಲಿ ಅಲ್ಲ ಮತ್ತು ಕ್ಯಾಬಿನೆಟ್ ಸ್ಥಾನಗಳಿಗಾಗಿ ಹಾತೊರೆಯಬೇಡಿ ಎಂದು ಹೇಳಿದ್ದಾರೆ.

“ನಾವು ಮತ ​​ಕೇಳಲು ಹೋದ ಎಲ್ಲ ಸ್ಥಳಗಳಿಗೆ ಹೋಗಿ ನಾವು ಕೆಲಸ ಮಾಡಬೇಕು. ಎಲ್ಲಾ ಶಾಸಕರು ಚಂಡೀಗಢದಲ್ಲಿ ಉಳಿಯದೆ ಅವರು ಆಯ್ಕೆಯಾದ ಪ್ರದೇಶಗಳಲ್ಲಿ ಕೆಲಸ ಮಾಡಬೇಕು” ಎಂದು ಮಾನ್ ಹೇಳಿದ್ದಾರೆ.

“ಮುಖ್ಯಮಂತ್ರಿ ಹೊರತುಪಡಿಸಿ 17 ಮಂದಿ ಕ್ಯಾಬಿನೆಟ್ ಮಂತ್ರಿಗಳನ್ನು ಹೊಂದಬಹುದು. ಯಾರೂ ಅಸಮಾಧಾನಗೊಳ್ಳಬೇಕಾಗಿಲ್ಲ, ನೀವೆಲ್ಲರೂ ಕ್ಯಾಬಿನೆಟ್ ಮಂತ್ರಿಗಳೆ” ಎಂದು ಅವರು ತಮ್ಮನ್ನು ಒಳಗೊಂಡಂತೆ 92 ಶಾಸಕರ ಸಭೆಯಲ್ಲಿ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್‌ನಲ್ಲಿ ಅಭೂತಪೂರ್ವ ಜಯ ದಾಖಲಿಸಿದ ಆಪ್: ಕರ್ನಾಟಕದ ಮುಖಂಡರ ಪ್ರತಿಕ್ರಿಯೆ ಹೀಗಿದೆ 

ಪಕ್ಷಕ್ಕೆ ಮತ ಹಾಕದವರ ಪರವಾಗಿಯೂ ದುರಹಂಕಾರಕ್ಕೆ ಒಳಗಾಗದೆ ಕೆಲಸ ಮಾಡಿ ಎಂದು ಅವರು ಮನವಿ ಮಾಡಿದ್ದಾರೆ.

“ಯಾವುದೆ ದುರಹಂಕಾರ ಬೇಡ ಎಂದು ನಿಮ್ಮೆಲ್ಲರಲ್ಲಿ ಮನವಿ ಮಾಡುತ್ತೇನೆ. ನಿಮಗೆ ಮತ ಹಾಕದವರಿಗಾಗಿಯೂ ಕೆಲಸ ಮಾಡಿ, ನೀವು ಪಂಜಾಬಿಗಳ ಶಾಸಕರಾಗಿದ್ದೀರಿ” ಎಂದು ಅವರು ಹೇಳಿದ್ದಾರೆ.

117 ಸದಸ್ಯ ಬಲದ ಅಸೆಂಬ್ಲಿಯಲ್ಲಿ ಎಎಪಿ 92 ಸ್ಥಾನಗಳನ್ನು ಗಳಿಸುವ ಮೂಲಕ ಚುನಾವಣೆಯಲ್ಲಿ ಭಾರಿ ಗೆಲುವು ದಾಖಲಿಸಿದೆ.

ಹಾಲಿ ಮುಖ್ಯಮಂತ್ರಿ ಚರಣ್‌ಜಿತ್‌ ಸಿಂಗ್‌ ಚನ್ನಿ, ಕಾಂಗ್ರೆಸ್‌ ರಾಜ್ಯ ಮುಖ್ಯಸ್ಥ ನವಜೋತ್‌ ಸಿಂಗ್‌ ಸಿಧು ಮತ್ತು ಮಾಜಿ ಮುಖ್ಯಮಂತ್ರಿ ಕ್ಯಾಪ್ಟನ್‌ ಅಮರಿಂದರ್‌ ಸಿಂಗ್‌ ಸೇರಿದಂತೆ ವಿವಿಧ ಪಕ್ಷಗಳ ಹಿರಿಯ ನಾಯಕರನ್ನು ಎಎಪಿ ಸೋಲಿಸಿದೆ. 60 ವರ್ಷಗಳ ಇತಿಹಾಸದಲ್ಲಿ ರಾಜ್ಯದಲ್ಲಿ ಒಂದು ಪಕ್ಷ ಇಷ್ಟು ಹೆಚ್ಚಿನ ಸ್ಥಾನಗಳನ್ನು ಪಡೆದಿರುವುದು ಇದುವೆ ಮೊದಲ ಬಾರಿಯಾಗಿದೆ.

ಇದನ್ನೂ ಓದಿ: ಪಂಜಾಬ್‌: ಹಾಲಿ, ಮಾಜಿ ಸಿಎಂಗಳಿಗೆಲ್ಲ ಸೋಲಿನ ರುಚಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...