Homeಮುಖಪುಟಪಂಜಾಬ್ ಚುನಾವಣೆ: ನನ್ನ ಕುಟುಂಬದವರ ಮತವೇ ನನಗೆ ಬಿದ್ದಿಲ್ಲ ಎಂದ ಬಿಜೆಪಿ ಅಭ್ಯರ್ಥಿ!

ಪಂಜಾಬ್ ಚುನಾವಣೆ: ನನ್ನ ಕುಟುಂಬದವರ ಮತವೇ ನನಗೆ ಬಿದ್ದಿಲ್ಲ ಎಂದ ಬಿಜೆಪಿ ಅಭ್ಯರ್ಥಿ!

"ಇದು ಕೃಷಿ ಕಾನೂನುಗಳ ಪರಿಣಾಮ. ಹಾಗಾಗಿ ಯಾವೊಬ್ಬ ವ್ಯಕ್ತಿಯೂ ಬಿಜೆಪಿಯ ಪರವಾಗಿದ್ದರೆ, ಆ ವ್ಯಕ್ತಿಯ ಕುಟುಂಬಸ್ಥರೇ ಅವರನ್ನು ನಿರಾಕರಿಸುತ್ತಾರೆ ಎಂಬುದಕ್ಕೆ ಇದು ಉದಾಹರಣೆ" ಎಂದು ಕೆಲವರು ಹೇಳಿದ್ದಾರೆ.

- Advertisement -
- Advertisement -

“ನನ್ನ ಕುಟುಂಬದಲ್ಲಿ 15-20 ಜನರಿದ್ದಾರೆ. ಆದರೆ ಚುನಾವಣೆಯಲ್ಲಿ ನನಗೆ ಕೇವಲ 9 ಮತಗಳು ಮಾತ್ರ ಸಿಕ್ಕಿವೆ”- ಇದು ಪಂಜಾಬ್ ಸ್ಥಳೀಯ ಚುನಾವಣೆಯಲ್ಲಿ ಸ್ಪರ್ಧಿಸಿದ್ದ ಬಿಜೆಪಿಯ ಅಭ್ಯರ್ಥಿ ಕಿರಣ್ ಕೌರ್ ಅವರ ಅಳಲು.

ಪಂಜಾಬ್‌ನಲ್ಲಿ ಫೆಬ್ರವರಿ 14 ರಂದು ನಗರ ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಮತದಾನ ನಡೆದಿತ್ತು. ಇದರ ಫಲಿತಾಂಶ ನಿನ್ನೆ (ಫೆ. 17) ಹೊರಬಿದ್ದಿತ್ತು. ಈ ಫಲಿತಾಂಶದಿಂದ ಗುರುದಾಸ್‌ಪುರ ಮುನ್ಸಿಪಲ್ ಕೌನ್ಸಿಲ್‌ನ 12 ನೇ ವಾರ್ಡ್‌ನ ಬಿಜೆಪಿ ಕಿರಣ್ ಕೌರ್ ಆಘಾತಕ್ಕೊಳಗಾಗಿದ್ದು, ಚುನಾವಣೆಯ ವಿರುದ್ಧ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

“ನನ್ನ ಕುಟುಂಬದ 15-20 ಜನರು ನನಗೆ ಮತ ಚಲಾಯಿಸಿದ್ದಾರೆ. ಆದರೆ ನನಗೆ ಕೇವಲ 9 ಮತಗಳು ಮಾತ್ರ ಬಿದ್ದಿವೆ. ಮತ ಚಲಾವಣೆಯ ನಂತರ ಕಾಂಗ್ರೆಸ್ ಕಾರ್ಯಕರ್ತರು ಇವಿಎಂ ಅನ್ನು ಬದಲಾಯಿಸಿದ್ದಾರೆ. ನನ್ನ ಏರಿಯಾದ ಜನರೆಲ್ಲಾ ನನಗೆ ಭರವಸೆ ನೀಡಿದ್ದರು. ನಾನು ಚುನಾವಣೆಯಲ್ಲಿ ಗೆದ್ದಿದ್ದೇನೆ. ಆದರೆ ಅವರ ಮತಗಳು ನನಗೆ ಬಿದ್ದಿಲ್ಲ. ಕಾಂಗ್ರೆಸ್ ನನಗೆ ದ್ರೋಹ ಬಗೆದಿದೆ” ಎಂದು ಆರೋಪಿಸಿದ್ದಾರೆ.

ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ಈ ಕುರಿತು ಕಿರಣ್ ಕೌರ್ ಮಾತನಾಡಿರುವ ವೀಡಿಯೋ ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್ ಆಗುತ್ತಿದೆ. ಅದರಲ್ಲಿ, “ಕಾಂಗ್ರೆಸ್ ಪಕ್ಷವು ಚುನಾವಣೆಯಲ್ಲಿ ಜಾಣತನದಿಂದ ಕೆಲಸ ಮಾಡಿದೆ. ಇತರೆ ಅಭ್ಯರ್ಥಿಗಳಿಗೆ ಕಿರುಕುಳ ನೀಡುತ್ತಿದೆ. ಇವಿಎಂ ಯಂತ್ರಗಳನ್ನು ಬದಲಿಸುತ್ತಿದೆ” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇದನ್ನೂ ಓದಿ: ಮದುವೆಗಳಲ್ಲಿಯೂ ರೈತ ಹೋರಾಟಕ್ಕೆ ಬೆಂಬಲ!: ಹರಿಯಾಣ-ಪಂಜಾಬ್‌ನಲ್ಲಿ ವಿಭಿನ್ನ ಪ್ರತಿರೋಧ

“ಈ ಹಿಂದೆ ಹಲವು ಬಾರಿ 12 ನೇ ವಾರ್ಡ್‌ನಿಂದ ಗೆದ್ದಿದ್ದರೂ ಸಹ, ಈ ಬಾರಿ ಕೇವಲ ಒಂಬತ್ತು ಮತಗಳನ್ನು ಪಡೆದಿದ್ದೇನೆ. ಇದನ್ನು ನಂಬಲು ಸಾಧ್ಯವಿಲ್ಲ. ನಮಗೆ ಕಾಂಗ್ರೆಸ್ ಸಾಕಷ್ಟು ಕಿರುಕುಳ ನೀಡಿದೆ. ನಾನು ಪಾಠ ಮಾಡುತ್ತಿದ್ದ ಶಾಲೆ ನನ್ನನ್ನು ಕೆಲಸದಿಂದ ತೆಗೆದಿದೆ” ಎಂದು ಮುಂತಾದ ಆರೋಪಗಳನ್ನು ಮಾಡಿರುವುದನ್ನು ವೀಡಿಯೋದಲ್ಲಿ ಕಾಣಬಹುದು.

ಆದರೆ ಸಾಮಾಜಿಕ ಮಾಧ್ಯಮಗಳಲ್ಲಿ ಇವರ ಆರೋಪವನ್ನು ಕೆಲವರು ಅಲ್ಲಗಳೆದಿದ್ದಾರೆ. “ಇದು ಕೃಷಿ ಕಾನೂನುಗಳ ಪರಿಣಾಮ. ಹಾಗಾಗಿ ಯಾವೊಬ್ಬ ವ್ಯಕ್ತಿಯೂ ಬಿಜೆಪಿಯ ಪರವಾಗಿದ್ದರೆ, ಆ ವ್ಯಕ್ತಿಯ ಕುಟುಂಬಸ್ಥರೇ ಅವರನ್ನು ನಿರಾಕರಿಸುತ್ತಾರೆ ಎಂಬುದಕ್ಕೆ ಇದು ಉದಾಹರಣೆ” ಎಂದಿದ್ದಾರೆ.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳ ವಿರುದ್ಧ ಲಕ್ಷಾಂತರ ರೈತರು ದೆಹಲಿಯ ಗಡಿಗಳಲ್ಲಿ ಹೋರಾಟ ಮಾಡುತ್ತಿದ್ದಾರೆ. ಇವರಲ್ಲಿ ಬಹುಪಾಲು ರೈತರು ಪಂಜಾಬ್ ಮತ್ತು ಹರಿಯಾಣದವರಾಗಿದ್ದಾರೆ. ಹಾಗಾಗಿ ಈ ಎರಡೂ ರಾಜ್ಯಗಳಲ್ಲಿ ಬಿಜೆಪಿಯ ವಿರುದ್ಧ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಇದರ ನಡುವೆಯೇ ಪಂಜಾಬ್‌ ನಲ್ಲಿ ಸ್ಥಳೀಯ ಚುನಾವಣೆ ನಡೆದಿದೆ. 8 ಕ್ಕೆ 8 ಮುನಿಸಿಪಲ್ ಕಾರ್ಪೋರೇಷನ್‌ಗಳಲ್ಲಿ ಕಾಂಗ್ರೆಸ್ ಗೆಲುವು ಸಾಧಿಸಿದೆ. ಅಲ್ಲದೆ 109 ಮುನಿಸಿಪಲ್ ಕೌನ್ಸಿಲ್‌ಗಳಲ್ಲಿ‌ ಬಹುತೇಕ ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆದ್ದಿದೆ. ಬಿಜೆಪಿಗೆ ಹೀನಾಯ ಸೋಲುಂಟಾಗಿದೆ. ಇದು ರೈತರ ಆಕ್ರೋಶಕ್ಕೆ ಸ್ಪಷ್ಟ ಉದಾಹರಣೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.


ಇದನ್ನೂ ಓದಿ: ಗ್ರೌಂಡ್ ರಿಪೋರ್ಟ್: ರೈತಹೋರಾಟದ ತವರು ಪಂಜಾಬ್‌ನಲ್ಲಿ ತೀವ್ರಗೊಳ್ಳುತ್ತಿರುವ ಚಳವಳಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...