Homeಮುಖಪುಟಪಂಜಾಬ್ ಚುನಾವಣೆ; ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿರುವ ಸಿಎಂ ಚರಣ್‌ ಜಿತ್ ಚನ್ನಿ

ಪಂಜಾಬ್ ಚುನಾವಣೆ; ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿರುವ ಸಿಎಂ ಚರಣ್‌ ಜಿತ್ ಚನ್ನಿ

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಚರಣ್‌ ಜಿತ್ ಚನ್ನಿಯವರು ಫೆಬ್ರವರಿ 20 ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಮ್ಕೌರ್ ಸಾಹಿಬ್ ಮತ್ತು ಭದೌರ್ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.

ಪಂಜಾಬ್ ವಿಧಾನಸಭೆ ಚುನಾವಣೆಗೆ ಎಂಟು ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಕಾಂಗ್ರೆಸ್ ಬಿಡುಗಡೆ ಮಾಡಿದ್ದು ಭದೌರ್ ನಲ್ಲಿ ಸಿಎಂ ಚರಣ್‌ ಜಿತ್ ಚನ್ನಿಯವರಿಗೆ ಟಿಕೆಟ್ ಘೋಷಿಸಿದೆ. ಈ ಮೊದಲು ಅವರಿಗೆ ಚಮ್ಕೌರ್ ಸಾಹಿಬ್ ಸ್ಥಾನದಿಂದ ಟಿಕೆಟ್ ನೀಡಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಆಮ್‌ ಆದ್ಮಿ ಪಕ್ಷದ ಮುಖಂಡರಾದ ಅರವಿಂದ್ ಕೇಜ್ರಿವಾಲ್ “ಚಮ್ಕೌರ್ ಸಾಹಿಬ್ ಕ್ಷೇತ್ರದಲ್ಲಿ ಚರಣ್ ಜಿತ್ ಚನ್ನ ಸೋಲನ್ನು ಅನುಭವಿಸುತ್ತಾರೆ ಎಂದು ಆಮ್ ಆದ್ಮಿ ಪಕ್ಷದ ಸಮೀಕ್ಷೆ ಘೋಷಿಸಿತ್ತು. ಹಾಗಾಗಿ ಸೋಲಿನ ಭಯದಲ್ಲಿ ಕಾಂಗ್ರೆಸ್ ಚನ್ನಿಯವರನ್ನು ಎರಡು ಕ್ಷೇತ್ರದಿಂದ ಕಣಕ್ಕಿಳಿಸುತ್ತಿದೆ. ಹಾಗಾಗಿ ಅದು ಆಪ್ ಸರ್ವೆಯನ್ನು ಒಪ್ಪಿಕೊಂಡಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್ ಈ ಬಾರಿ ಪಂಜಾಬ್‌ನಲ್ಲಿ ಆಪ್ ಜಯಗಳಿಸಲಿದೆ ಎಂದು ತಿಳಿಸಿದ್ದಾರೆ.

ಪಂಜಾಬ್‌ನಲ್ಲಿ 34 ಎಸ್‌ಸಿ ಮೀಸಲು ಕ್ಷೇತ್ರಗಳಿವೆ. ಶೇ.32ರಷ್ಟು ಸಂಖ್ಯೆಯ ದಲಿತ ಸಮುದಾಯವಿದೆ. ಅವರಲ್ಲಿ ಹೆಚ್ಚಿನವರು 2017ರಲ್ಲಿ ಆಪ್ ಪಕ್ಷಕ್ಕೆ ಮತ ಚಲಾಯಿಸಿದ್ದರು ಎಂಬ ವರದಿಯಿದೆ. ಆಪ್ ಚಿಹ್ನೆ ಪೊರಕೆಯಾಗಿದ್ದ ಕಾರಣಕ್ಕೂ ಬಹಳಷ್ಟು ದಲಿತರು ಅದು ನಮ್ಮದು ಎಂದುಕೊಂಡು ಬೆಂಬಲಿಸಿದ್ದರು. ಈ ಬೆಂಬಲ ಈಗಲೂ ಉಳಿದಿದೆ ಎನ್ನಲಾಗುತ್ತಿದ್ದರೂ, ಚನ್ನಿಯವರು ಸಹ ದಲಿತರಾದ್ದರಿಂದ ಕಾಂಗ್ರೆಸ್‌ಗೆ ಒಂದಷ್ಟು ದಲಿತ ಸಮುದಾಯದ ಮತಗಳು ಬರುವುದು ಗ್ಯಾರಂಟಿ ಎನ್ನಲಾಗುತ್ತಿದೆ.

ಫೆಬ್ರವರಿ 20 ರಂದು ರಾಜ್ಯದ 117 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಉಳಿದ ನಾಲ್ಕು ರಾಜ್ಯಗಳೊಂದಿಗೆ ಪಂಜಾಬ್‌ನ ಫಲಿತಾಂಶ ಘೋಷಣೆಯಾಗಲಿದೆ.


ಇದನ್ನೂ ಓದಿ: ರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...