Homeಮುಖಪುಟಪಂಜಾಬ್ ಚುನಾವಣೆ; ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿರುವ ಸಿಎಂ ಚರಣ್‌ ಜಿತ್ ಚನ್ನಿ

ಪಂಜಾಬ್ ಚುನಾವಣೆ; ಎರಡು ಕ್ಷೇತ್ರಗಳಿಂದ ಕಣಕ್ಕಿಳಿಯಲಿರುವ ಸಿಎಂ ಚರಣ್‌ ಜಿತ್ ಚನ್ನಿ

- Advertisement -
- Advertisement -

ಪಂಜಾಬ್ ಮುಖ್ಯಮಂತ್ರಿ ಚರಣ್‌ ಜಿತ್ ಚನ್ನಿಯವರು ಫೆಬ್ರವರಿ 20 ರಂದು ನಡೆಯುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಚಮ್ಕೌರ್ ಸಾಹಿಬ್ ಮತ್ತು ಭದೌರ್ ಎರಡೂ ಕ್ಷೇತ್ರಗಳಿಂದ ಸ್ಪರ್ಧಿಸಲಿದ್ದಾರೆ.

ಪಂಜಾಬ್ ವಿಧಾನಸಭೆ ಚುನಾವಣೆಗೆ ಎಂಟು ಅಭ್ಯರ್ಥಿಗಳ ಮೂರನೇ ಪಟ್ಟಿಯನ್ನು ಇಂದು ಕಾಂಗ್ರೆಸ್ ಬಿಡುಗಡೆ ಮಾಡಿದ್ದು ಭದೌರ್ ನಲ್ಲಿ ಸಿಎಂ ಚರಣ್‌ ಜಿತ್ ಚನ್ನಿಯವರಿಗೆ ಟಿಕೆಟ್ ಘೋಷಿಸಿದೆ. ಈ ಮೊದಲು ಅವರಿಗೆ ಚಮ್ಕೌರ್ ಸಾಹಿಬ್ ಸ್ಥಾನದಿಂದ ಟಿಕೆಟ್ ನೀಡಲಾಗಿತ್ತು.

ಈ ಕುರಿತು ಪ್ರತಿಕ್ರಿಯಿಸಿರುವ ಆಮ್‌ ಆದ್ಮಿ ಪಕ್ಷದ ಮುಖಂಡರಾದ ಅರವಿಂದ್ ಕೇಜ್ರಿವಾಲ್ “ಚಮ್ಕೌರ್ ಸಾಹಿಬ್ ಕ್ಷೇತ್ರದಲ್ಲಿ ಚರಣ್ ಜಿತ್ ಚನ್ನ ಸೋಲನ್ನು ಅನುಭವಿಸುತ್ತಾರೆ ಎಂದು ಆಮ್ ಆದ್ಮಿ ಪಕ್ಷದ ಸಮೀಕ್ಷೆ ಘೋಷಿಸಿತ್ತು. ಹಾಗಾಗಿ ಸೋಲಿನ ಭಯದಲ್ಲಿ ಕಾಂಗ್ರೆಸ್ ಚನ್ನಿಯವರನ್ನು ಎರಡು ಕ್ಷೇತ್ರದಿಂದ ಕಣಕ್ಕಿಳಿಸುತ್ತಿದೆ. ಹಾಗಾಗಿ ಅದು ಆಪ್ ಸರ್ವೆಯನ್ನು ಒಪ್ಪಿಕೊಂಡಿದೆ” ಎಂದು ವ್ಯಂಗ್ಯವಾಡಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್ ಈ ಬಾರಿ ಪಂಜಾಬ್‌ನಲ್ಲಿ ಆಪ್ ಜಯಗಳಿಸಲಿದೆ ಎಂದು ತಿಳಿಸಿದ್ದಾರೆ.

ಪಂಜಾಬ್‌ನಲ್ಲಿ 34 ಎಸ್‌ಸಿ ಮೀಸಲು ಕ್ಷೇತ್ರಗಳಿವೆ. ಶೇ.32ರಷ್ಟು ಸಂಖ್ಯೆಯ ದಲಿತ ಸಮುದಾಯವಿದೆ. ಅವರಲ್ಲಿ ಹೆಚ್ಚಿನವರು 2017ರಲ್ಲಿ ಆಪ್ ಪಕ್ಷಕ್ಕೆ ಮತ ಚಲಾಯಿಸಿದ್ದರು ಎಂಬ ವರದಿಯಿದೆ. ಆಪ್ ಚಿಹ್ನೆ ಪೊರಕೆಯಾಗಿದ್ದ ಕಾರಣಕ್ಕೂ ಬಹಳಷ್ಟು ದಲಿತರು ಅದು ನಮ್ಮದು ಎಂದುಕೊಂಡು ಬೆಂಬಲಿಸಿದ್ದರು. ಈ ಬೆಂಬಲ ಈಗಲೂ ಉಳಿದಿದೆ ಎನ್ನಲಾಗುತ್ತಿದ್ದರೂ, ಚನ್ನಿಯವರು ಸಹ ದಲಿತರಾದ್ದರಿಂದ ಕಾಂಗ್ರೆಸ್‌ಗೆ ಒಂದಷ್ಟು ದಲಿತ ಸಮುದಾಯದ ಮತಗಳು ಬರುವುದು ಗ್ಯಾರಂಟಿ ಎನ್ನಲಾಗುತ್ತಿದೆ.

ಫೆಬ್ರವರಿ 20 ರಂದು ರಾಜ್ಯದ 117 ವಿಧಾನಸಭಾ ಕ್ಷೇತ್ರಗಳಿಗೆ ಚುನಾವಣೆ ನಡೆಯಲಿದ್ದು, ಮಾರ್ಚ್ 10 ರಂದು ಉಳಿದ ನಾಲ್ಕು ರಾಜ್ಯಗಳೊಂದಿಗೆ ಪಂಜಾಬ್‌ನ ಫಲಿತಾಂಶ ಘೋಷಣೆಯಾಗಲಿದೆ.


ಇದನ್ನೂ ಓದಿ: ರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...