Homeಮುಖಪುಟಪಂಜಾಬ್ ಚುನಾವಣೆ - ಬಿಜೆಪಿಗಿಂತ ಹೆಚ್ಚು ಮತ ಪಡೆದ NOTA

ಪಂಜಾಬ್ ಚುನಾವಣೆ – ಬಿಜೆಪಿಗಿಂತ ಹೆಚ್ಚು ಮತ ಪಡೆದ NOTA

ಅಮೃತಸರ ಜಿಲ್ಲೆಯಲ್ಲಿರುವ ಮುನ್ಸಿಪಲ್ ಕೌನ್ಸಿಲ್ ಕಾರ್ಪೊರೇಷನ್, ನಗರ ಪಂಚಾಯತ್ ಮತ್ತು ಪುರಸಭೆಯ ಒಟ್ಟು 40 ವಾರ್ಡ್‌ಗಳಲ್ಲಿ ಬಿಜೆಪಿಗೆ ಒಂದೇ ಸ್ಥಾನವನ್ನು ಗೆಲ್ಲಲಾಗಿಲ್ಲ

- Advertisement -
- Advertisement -

ಪಂಜಾಬ್‌‌‌‌ನಲ್ಲಿ ಬುಧವಾರ ಸ್ಥಳೀಯ ಸಂಸ್ಥೆಗಳ ಚುನಾವಣಾ ಮತ ಎಣಿಕೆ ನಡೆದಿದ್ದು, ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಅಮೃತಸರ ಮಹಾನಗರ ಪಾಲಿಕೆಯ 37 ನೇ ವಾರ್ಡ್‌ನಲ್ಲಿ ಬಿಜೆಪಿಗಿಂತ ಹೆಚ್ಚಿನ ಮತಗಳನ್ನು NOTA ಪಡೆದಿದ್ದು, ಪಕ್ಷವೂ ಭಾರಿ ಮುಖಭಂಗಕ್ಕೊಳಗಾಗಿದೆ.

ಅಮೃತಸರ ಮಹಾನಗರ ಪಾಲಿಕೆಯ ಚುನಾವಣೆಯ ಅಧಿಕೃತ ಅಂಕಿಅಂಶಗಳ ಪ್ರಕಾರ, ಬಿಜೆಪಿ ಅಭ್ಯರ್ಥಿ ಮನೋಹರ್ ಸಿಂಗ್ ಅವರಿಗೆ 52 ಮತಗಳು ಪಡೆದಿದ್ದು, NOTA 60 ಮತಗಳನ್ನು ಪಡೆದಿದೆ.

ಇದನ್ನೂ ಓದಿ: ರೈತ ಹೋರಾಟದ ಆಕ್ರೋಶ: ಪಂಜಾಬ್‌ ಸ್ಥಳೀಯ ಚುನಾವಣೆಯಲ್ಲಿ ಬಿಜೆಪಿ ಧೂಳಿಪಟ

ಇಲ್ಲಿ, ಕಾಂಗ್ರೆಸ್ ಅಭ್ಯರ್ಥಿ ಗಗನ್‌ದೀಪ್ ಸಿಂಗ್ 3,223 ಮತಗಳನ್ನು ಗಳಿಸಿ ವಿಜೇತರಾಗಿದ್ದು, ಎಸ್‌ಎಡಿ ಅಭ್ಯರ್ಥಿ ಇಂದರ್ಜಿತ್ ಸಿಂಗ್ 3,088 ಮತಗಳನ್ನು ಪಡೆದರು ಎರಡನೆ ಸ್ಥಾನ ಗಳಿಸಿಕೊಂಡರು. ಅಮೃತಸರ ಜಿಲ್ಲೆಯಲ್ಲಿರುವ ಮುನ್ಸಿಪಲ್ ಕೌನ್ಸಿಲ್ ಕಾರ್ಪೊರೇಷನ್, ನಗರ ಪಂಚಾಯತ್ ಮತ್ತು ಪುರಸಭೆಯ ಒಟ್ಟು 40 ವಾರ್ಡ್‌ಗಳಲ್ಲಿ ಬಿಜೆಪಿಯು ಒಂದೇ ಸ್ಥಾನವನ್ನು ಗೆಲ್ಲಲಿಲ್ಲ.

ಫೆಬ್ರವರಿ 14 ರಂದು ರಾಜ್ಯದ 109 ನಗರ ಪಂಚಾಯತ್‌ ಹಾಗೂ ಮುನ್ಸಿಪಲ್ ಕೌನ್ಸಿಲ್‌ ಮತ್ತು 8 ಮುನಿಸಿಪಲ್ ಕಾರ್ಪೋರೇಷನ್‌‌‌ಗಳಲ್ಲಿ ಚುನಾವಣೆ ನಡೆದಿತ್ತು. ಇದರಲ್ಲಿ ಮೊಗ್ಗ, ಹೋಶಿಯಾರ್‌ಪುರ್, ಕಪುರ್ಥಾಲಾ, ಅಬೋಹರ್, ಪಠಾಣ್‌ಕೋಟ್, ಬತಾಲ ಮತ್ತು ಬಟಿಂಡಾ ಮುನ್ಸಿಪಲ್ ಕಾರ್ಪೋರೇಷನ್‌ಗಳನ್ನು 7 ಮುನ್ಸಿಪಲ್ ಕಾರ್ಪೋರೇಷನ್‌ಗಳನ್ನು ಕಾಂಗ್ರೆಸ್ ಗೆದ್ದುಕೊಂಡಿದೆ. ಮತ್ತೊಂದು ಕಾರ್ಪೋರೇಷನ್‌‌‌ಗಳಾದ ಎಸ್‌ಎಎಸ್‌ ನಗರದ ಮತ ಎಣಿಕೆಯು ಫೆಬ್ರವರಿ 18 ರಲ್ಲಿ ನಡೆಯುತ್ತದೆ ಎಂದು ಚುನಾವಣಾ ಅಧಿಕಾರಿಗಳು ತಿಳಿಸಿದ್ದಾರೆ.

ಇದನ್ನೂ ಓದಿ: ಪಂಜಾಬ್ ಸ್ಥಳೀಯ ಚುನಾವಣೆ – ಕಾಂಗ್ರೆಸ್‌ಗೆ ಭರ್ಜರಿ ಜಯ, ಬಿಜೆಪಿಗೆ ಮುಖಭಂಗ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ನಮಸ್ತೆ
    ನನ್ನ ಹೆಸರು ಎಂ.ನಾಗೇಂದ್ರಕುಮಾರ್
    ನಿಮ್ಮ ಪತ್ರಿಕೆ ಪ್ರತಿನಿಧಿ ಹಾಗೂ ವರದಿಗಾರರಾಗಿ ಸೇವೆ ಸಲ್ಲಿಸಲು ಆಸಕ್ತಿ ಹೊಂದಿದ್ದೇನೆ.
    ನಿಮ್ಮ ಜೊತೆ ಮಾತನಾಡಲು ನಿಮ್ಮ ದೂರವಾಣಿ ಸಂಖ್ಯೆ ಮೆಸೇಜ್ ಮಾಡಿ
    ನನ್ನ ಮೊಬೈಲ್‌ ಸಂಖ್ಯೆ
    ೯೯೬೪೩೨೬೪೬೬

LEAVE A REPLY

Please enter your comment!
Please enter your name here

- Advertisment -

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...