Homeಮುಖಪುಟಪಂಜಾಬ್ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯ ಒತ್ತಡದಲ್ಲಿ ಕಾಂಗ್ರೆಸ್

ಪಂಜಾಬ್ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯ ಒತ್ತಡದಲ್ಲಿ ಕಾಂಗ್ರೆಸ್

- Advertisement -
- Advertisement -

ಫೆಬ್ರವರಿ 20 ರಂದು ನಡೆಯಲಿರುವ ಪಂಜಾಬ್ ರಾಜ್ಯ ವಿಧಾನಸಭಾ ಚುನಾವಣೆಗೆ ಈಗಾಗಲೇ ಆಮ್ ಆದ್ಮಿ ಪಕ್ಷ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಿದೆ. ಆದರೆ, ಕಾಂಗ್ರೆಸ್ ಪಕ್ಷಕ್ಕೆ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯ ಘೋಷಣೆಯೇ ದೊಡ್ಡ ಒತ್ತಡ ಉಂಟುಮಾಡುತ್ತಿದೆ.

ಸಿಎಂ ಅಭ್ಯರ್ಥಿ ಆಯ್ಕೆ ಬಗ್ಗೆ ಪಕ್ಷದ ಹೈಕಮಾಂಡ್ ನಿರ್ಧರಿಸುತ್ತದೆ ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಶನಿವಾರ ಹೇಳಿದ್ದಾರೆ.

“ಕಾಂಗ್ರೆಸ್ ಪ್ರತಿಯೊಬ್ಬ ನಾಯಕರ ಗುಣಗಳನ್ನು ವಿಶ್ಲೇಷಿಸಿದ ನಂತರ ನಿರ್ಧಾರಗಳನ್ನು ತೆಗೆದುಕೊಳ್ಳಲಾಗುತ್ತದೆ. ನನಗೆ ಪಕ್ಷದ ಮೇಲೆ ಸಂಪೂರ್ಣ ನಂಬಿಕೆಯಿದೆ. ಸಿಎಂ ಅಭ್ಯರ್ಥಿಯನ್ನು ನಿರ್ಧರಿಸಲು ಪಕ್ಷದ ಹೈಕಮಾಂಡ್ ಇದೆ. ಪಕ್ಷದ ಹೈಕಮಾಂಡ್ ಏನು ತೀರ್ಮಾನಿಸುತ್ತದೆಯೋ ಆ ನಾವು ನಿರ್ಧಾರವನ್ನು ನಾವು ಒಪ್ಪಿಕೊಳ್ಳುತ್ತೇವೆ” ಎಂದು ನವಜೋತ್ ಸಿಂಗ್ ಸಿಧು ತಿಳಿಸಿದ್ದಾರೆ.

ಇದನ್ನೂ ಓದಿ: ರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

ಪಂಜಾಬ್ ಮಾಜಿ ಮುಖ್ಯಮಂತ್ರಿ ಅಮರಿಂದರ್‌ ಸಿಂಗ್ ಮತ್ತು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ನಡುವಿನ ಮನಸ್ತಾಪದ ಬಳಿಕ ಸಿಎಂ ಸ್ಥಾನಕ್ಕೆ ಕ್ಯಾಪ್ಟನ್ ರಾಜೀನಾಮೆ ನೀಡಿದ್ದರು. ಬಳಿಕ ಚರಣ್‌ಜಿತ್‌ ಸಿಂಗ್ ಚನ್ನಿಯವರನ್ನು ಮುಖ್ಯಮಂತ್ರಿಯಾಗಿ ಆಯ್ಕೆ ಮಾಡಲಾಗಿತ್ತು.

ಕಳೆದ ಮೂರು ತಿಂಗಳಲ್ಲಿ ನೂತನ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ತಾವು ಮುಂದಿನ ಸಿಎಂ ಅಭ್ಯರ್ಥಿಯಾಗಲು ಸೂಕ್ತ ಎಂಬುದನ್ನು ಸಾಬೀತು ಪಡಿಸಿದ್ದಾರೆ. ಇತ್ತ ಹಲವು ಕಾಂಗ್ರೆಸ್ ನಾಯಕರು ಕೂಡ ಚನ್ನಿ ಮುಂದಿನ ಸಿಎಂ ಆಗಲು ಸೂಕ್ತ ಎನ್ನುತ್ತಿದ್ದಾರೆ. ಇದರ ನಡುವೆ ಸಾಮೂಹಿಕ ನಾಯಕತ್ವದಲ್ಲಿ ಚುನಾವಣೆ ಎದುರಿಸುವುದಾಗಿ ಕಾಂಗ್ರೆಸ್ ಹೇಳಿಕೊಂಡಿದೆ.

ಇನ್ನು, ಮುಂದಿನ ತಿಂಗಳು ನಡೆಯಲಿರುವ ಐದು ರಾಜ್ಯ ಚುನಾವಣೆಗಳ ಪ್ರಚಾರಕ್ಕಾಗಿ ರೋಡ್‌ಶೋಗಳು ಮತ್ತು ರ್‍ಯಾಲಿಗಳ ಮೇಲೆ ವಿಧಿಸಿದ್ದ ನಿಷೇಧವನ್ನು ಚುನಾವಣಾ ಆಯೋಗವು ಈ ತಿಂಗಳ ಅಂತ್ಯದವರೆಗೆ ವಿಸ್ತರಿಸಿದೆ. ಆದರೆ, ಫೆಬ್ರವರಿ 10 ಮತ್ತು 14 ರಂದು ನಡೆಯಲಿರುವ ಮೊದಲ ಎರಡು ಹಂತದ ಚುನಾವಣೆಗೆ ಸಡಿಲಿಕೆ ನೀಡಿದೆ.

ಚುನಾವಣಾ ಆಯೋಗವು ಈ ಮೊದಲು ಜನವರಿ 15 ರವರೆಗೆ ಚುನಾವಣಾ ರ್‍ಯಾಲಿಗಳು ಮತ್ತು ರೋಡ್‌ಶೋಗಳನ್ನು ನಿಷೇಧಿಸಿತ್ತು. ಅದನ್ನು ನಂತರ ಜನವರಿ 22 ರವರೆಗೆ ವಿಸ್ತರಿಸಿತು. ಈಗ ಜನವರಿ 31 ರ ವರೆಗೆ ನಿರ್ಬಂಧ ಹೇರಿದೆ.

ಮುಂದಿನ ತಿಂಗಳು ಉತ್ತರ ಪ್ರದೇಶ, ಉತ್ತರಾಖಂಡ, ಪಂಜಾಬ್, ಮಣಿಪುರ ಮತ್ತು ಗೋವಾ ವಿಧಾನಸಭಾ ಚುನಾವಣೆಗಳು ನಡೆಯಲಿವೆ. ಮಾರ್ಚ್ 10ಕ್ಕೆ ಫಲಿತಾಂಶ ಪ್ರಕಟವಾಗಲಿದೆ.


ಇದನ್ನೂ ಓದಿ: ಅರವಿಂದ್ ಕೇಜ್ರಿವಾಲ್ ವಿರುದ್ಧ ಮಾನನಷ್ಟ ಮೊಕದ್ದಮೆ ದಾಖಲಿಸುವೆ ಎಂದ ಪಂಜಾಬ್ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...