Homeಮುಖಪುಟಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿಗೆ ಕಾಂಗ್ರೆಸ್ ಮತ್ತೊಂದು ಅವಕಾಶ ನೀಡಬೇಕು: ನಟ ಸೋನು ಸೂದ್

ಪಂಜಾಬ್ ಸಿಎಂ ಚರಣ್‌ಜಿತ್ ಸಿಂಗ್ ಚನ್ನಿಗೆ ಕಾಂಗ್ರೆಸ್ ಮತ್ತೊಂದು ಅವಕಾಶ ನೀಡಬೇಕು: ನಟ ಸೋನು ಸೂದ್

- Advertisement -
- Advertisement -

”ಪಂಜಾಬ್ ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಅವರಿಗೆ ರಾಜ್ಯದಲ್ಲಿ ಸಿಎಂ ಆಗಿ ಕೆಲಸ ನಿರ್ವಹಿಸಲು ಹೆಚ್ಚು ಸಮಯ ಸಿಗದ ಕಾರಣ ಕಾಂಗ್ರೆಸ್ ನಾಯಕತ್ವ ಅವರಿಗೆ ಮತ್ತೊಂದು ಅವಕಾಶ ನೀಡಬೇಕು’ ಎಂದು ನಟ, ಸಾಮಾಜಿಕ ಕಾರ್ಯಕರ್ತ ಸೋನು ಸೂದ್ ಎನ್‌ಡಿಟಿವಿಗೆ ತಿಳಿಸಿದ್ದಾರೆ.

ತಾವು ಯಾವುದೇ ರಾಜಕೀಯ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ ಎಂದು ಹೇಳಿರುವ ಅವರು, ಪಂಜಾಬ್ ರಾಜ್ಯ ಕಾಂಗ್ರೆಸ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಅವರು ಒಳ್ಳೆಯ ಮತ್ತು ಪ್ರಾಮಾಣಿಕ ವ್ಯಕ್ತಿ. ಅವರು ಯಾವಾಗಲೂ ಪೂರ್ಣ ಮನಸ್ಸಿನಿಂದ ಮಾತನಾಡುತ್ತಾರೆ ಎಂದು ಹೇಳಿದ್ದಾರೆ.

“ನಾನು ಚರಣ್‌ಜಿತ್ ಸಿಂಗ್ ಚನ್ನಿ ಅವರನ್ನು ಭೇಟಿ ಮಾಡಿದ್ದೇನೆ. ಕಳೆದ ಮೂರು ತಿಂಗಳಲ್ಲಿ ಅವರು ಮುಖ್ಯಮಂತ್ರಿಯಾಗಿ ಮಾಡಿದ ಕೆಲಸ ಶ್ಲಾಘನೀಯವಾಗಿದೆ. ಆದರೆ ಯಾರಿಗೆ ಆದರೂ ಇದು ಕೆಲಸ ಮಾಡಲು ತುಂಬಾ ಕಡಿಮೆ ಸಮಯ. ಅವರು ಬ್ಯಾಟಿಂಗ್‌ಗೆ ಹೋಗಿ ನಿಂತು ಚೆಂಡಿನ ಕಡೆ ಕಣ್ಣು ಇಟ್ಟಿದ್ದರು. ಆದರೆ, ಇದ್ದಕ್ಕಿದ್ದಂತೆ ಚಹಾ ವಿರಾಮ ಘೋಷಿಸಲಾಗಿದೆ. ಚಹಾ ವಿರಾಮದ ನಂತರ ಅವರು ಬ್ಯಾಟಿಂಗ್‌ಗೆ ಮತ್ತೆ ಬರಬೇಕು “ಎಂದು ಸೋನು ಸೂದ್ ಹೇಳಿದ್ದಾರೆ.

ಇದನ್ನೂ ಓದಿ: ಪಂಜಾಬ್ ಚುನಾವಣೆ: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಯ ಒತ್ತಡದಲ್ಲಿ ಕಾಂಗ್ರೆಸ್

“ಜನರು ತಮ್ಮ ನಾಯಕ ಯಾರು ಎಂದು ಗುರುತಿಸಲು ಸಹಾಯ ಮಾಡಲು ಕಾಂಗ್ರೆಸ್ ತನ್ನ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಬೇಕು. ಅದನ್ನು ತಿಳಿದುಕೊಳ್ಳುವುದು ಜನರ ಹಕ್ಕು. ನಾನು ಹೈಕಮಾಂಡ್ ಭೇಟಿಯಾದಾಗ, ನೀವು ಸಿಎಂ ಅಭ್ಯರ್ಥಿ ಘೋಷಣೆ ಮಾಡುವುದು ಬಹಳ ಮುಖ್ಯ ಎಂದು ನಾನು ಹೇಳಿದೆ” ಎಂದಿದ್ದಾರೆ.

ಇನ್ನು ಆಮ್ ಆದ್ಮಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಭಗವಂತ್ ಮಾನ್ ಅವರನ್ನು ರಾಜಕೀಯವಾಗಿ ಹೆಚ್ಚು ಅನುಸರಿಸಿಲ್ಲ. ಹಲವು ವರ್ಷಗಳ ಹಿಂದೆ ಕಲಾವಿದನಾಗಿ ಅವರನ್ನು ಒಮ್ಮೆ ಭೇಟಿಯಾಗಿದ್ದೆ. ಅವರು ನಾಯಕರಾಗಿ ಹೇಗೆ ಗುರುತಿಸಿಕೊಳ್ಳುತ್ತಾರೆ ಎಂಬುದನ್ನು ನಾನು ಇನ್ನೂ ನೋಡಿಲ್ಲ. ಆದರೆ, ಅವರ ಪಕ್ಷವು ನಿರ್ಧರಿಸಿರುವುದರಿಂದ ಅವರು ಅದರ ಬಗ್ಗೆ ಯೋಚಿಸಿರಬೇಕು” ಎಂದು ಹೇಳಿದ್ದಾರೆ.

ನಟ ಸೋನು ಸೂದ್ ಅವರ ಸಹೋದರಿ ಮಾಳವಿಕಾ ಸೂದ್ ಸಾಚಾರ್ ಅವರು ತಮ್ಮ ಪೂರ್ವಜರ ಸ್ಥಳವಾದ ಮೊಗಾದಿಂದ ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಟಿಕೆಟ್‌ನಲ್ಲಿ ಸ್ಪರ್ಧಿಸುತ್ತಿದ್ದಾರೆ. ತಾವು ಯಾವುದೇ ಪಕ್ಷದೊಂದಿಗೆ ಸಂಬಂಧ ಹೊಂದಿಲ್ಲ. ತಮ್ಮ ಸಹೋದರಿಯನ್ನು ಮಾತ್ರ ಬೆಂಬಲಿಸುತ್ತಿರುವುದಾಗಿ ತಿಳಿಸಿದ್ದಾರೆ.

“ಮೊಗದಲ್ಲಿರುವ ಎಲ್ಲಾ ಶಾಲೆಗಳು, ಕಾಲೇಜುಗಳು ಮತ್ತು ಧರ್ಮಶಾಲೆಗಳನ್ನು (inn) ನನ್ನ ಕುಟುಂಬದವರು ನಿರ್ಮಿಸಿದ್ದಾರೆ. ನನ್ನ ತಾಯಿ ಬಹಳಷ್ಟು ಮಕ್ಕಳಿಗೆ ಉಚಿತವಾಗಿ ಶಿಕ್ಷಣ ನೀಡಿದ್ದಾರೆ. ಸಮಾಜ ಸೇವೆ ನಮ್ಮ ರಕ್ತದಲ್ಲಿದೆ. ನಾನು ನನ್ನ ಸಹೋದರಿ ಇಬ್ಬರೂ ಸಾಮಾಜಿಕ ಕೆಲಸಗಳಲ್ಲಿ ತಮ್ಮ ಪೋಷಕರ ಹಾದಿಯನ್ನು ಅನುಸರಿಸುತ್ತಿದ್ದೇವೆ. ನನ್ನ ಸಹೋದರಿ ನಗರದಲ್ಲಿ ಅರ್ಧದಷ್ಟು ಜನರಿಗೆ ಕೋವಿಡ್ ಲಸಿಕೆ ಹಾಕಿದ್ದಾರೆ” ಎಂದು ಸೋನು ಸೂದ್ ತಿಳಿಸಿದ್ದಾರೆ.

ಮಾಳವಿಕಾ ಸೂದ್ ಸಾಚಾರ್ ಮೊಗಾ ಪಟ್ಟಣದ ಪ್ರಮುಖ ಸಾಮಾಜಿಕ ಕಾರ್ಯಕರ್ತೆಯಾಗಿದ್ದು, ನಟ ಸೋನು ಸೂದ್ ಮತ್ತು ಮಾಳವಿಕಾ ಸೂದ್ ಸಾಚಾರ್ ಜೋಡಿಯು ಸೂದ್ ಚಾರಿಟಿ ಫೌಂಡೇಶನ್ ಅನ್ನು ನಡೆಸುತ್ತಿದೆ.


ಇದನ್ನೂ ಓದಿ: ರೈತ ಚಳವಳಿಯ ಕಣ ಪಂಜಾಬ್‌ನಲ್ಲಿ ಚುನಾವಣೆ: ಯಾರಿಗೆ ಲಾಭ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...