Homeಮುಖಪುಟಪಂಜಾಬ್ ಚುನಾವಣೆ: ಕಾಂಗ್ರೆಸ್ ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ, ನಿರ್ಧಾರಕ್ಕೆ ಬದ್ಧ ಎಂದ ಸಿಧು

ಪಂಜಾಬ್ ಚುನಾವಣೆ: ಕಾಂಗ್ರೆಸ್ ಸಿಎಂ ಅಭ್ಯರ್ಥಿ ಘೋಷಣೆ ಸಾಧ್ಯತೆ, ನಿರ್ಧಾರಕ್ಕೆ ಬದ್ಧ ಎಂದ ಸಿಧು

- Advertisement -
- Advertisement -

ಪಂಜಾಬ್ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆ ಬಗ್ಗೆ ಕಾಂಗ್ರೆಸ್ ಪಕ್ಷದ ಮುಖಂಡ ರಾಹುಲ್ ಗಾಂಧಿ ಘೋಷಿಸುವ ನಿರ್ಧಾರಕ್ಕೆ ಎಲ್ಲರೂ ಬದ್ಧರಾಗಿರುತ್ತಾರೆ ಎಂದು ಪಂಜಾಬ್ ಮುಖ್ಯಸ್ಥ ನವಜೋತ್ ಸಿಂಗ್ ಸಿಧು ಭಾನುವಾರ ಹೇಳಿದ್ದಾರೆ.

ಚುನಾವಣೆಗೆ ಕಾಂಗ್ರೆಸ್ ಇನ್ನು ಅಭ್ಯರ್ಥಿಯನ್ನು ಘೋಷಿಸಲಿಲ್ಲ. ಇಂದು (ಫೆ.6) ರಾಜ್ಯದಲ್ಲಿ ವರ್ಚುವಲ್ ರ್‍ಯಾಲಿ ನಡೆಸಲು ಮತ್ತು ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ರಾಹುಲ್ ಗಾಂಧಿ ಲುಧಿಯಾನಕ್ಕೆ ಆಗಮಿಸಿದ್ದಾರೆ ಎಂದು ಹೇಳಲಾಗಿದೆ.

“ನಿರ್ಧಾರದ ಕ್ರಿಯೆಯಿಲ್ಲದೆ ಏನನ್ನೂ ಸಾಧಿಸಲಾಗಿಲ್ಲ. ಪಂಜಾಬ್‌ಗೆ ಸ್ಪಷ್ಟತೆ ನೀಡಲು ಬರುತ್ತಿರುವ ರಾಹುಲ್ ಜಿ ಅವರಿಗೆ ಆತ್ಮೀಯ ಸ್ವಾಗತ. ಎಲ್ಲರೂ ಅವರ ನಿರ್ಧಾರಕ್ಕೆ ಬದ್ಧರಾಗುತ್ತಾರೆ” ಎಂದು ನವಜೋತ್ ಸಿಂಗ್ ಸಿಧು ಟ್ವೀಟ್ ಮಾಡಿದ್ದಾರೆ.

ಲುಧಿಯಾನದಲ್ಲಿ ಇಂದು ನಡೆಯಲಿರುವ ತಮ್ಮ ವರ್ಚುವಲ್ ರ್‍ಯಾಲಿಯಲ್ಲಿ ರಾಹುಲ್ ಗಾಂಧಿ ಪಕ್ಷದ ಮುಖ್ಯಮಂತ್ರಿ ಅಭ್ಯರ್ಥಿಯನ್ನು ಘೋಷಿಸಲಿದ್ದಾರೆ ಎಂದು ಈ ಹಿಂದೆ ಕಾಂಗ್ರೆಸ್ ಪಂಜಾಬ್ ಉಸ್ತುವಾರಿ ಹರೀಶ್ ಚೌಧರಿ ಹೇಳಿದ್ದರು.

ಇದನ್ನೂ ಓದಿ: ಮೈಸೂರು: ‘ಹಿಜಾಬ್‌‌’ ವಿವಾದದ ನಡುವೆ ಮುಚ್ಚಿಹೋದ ಶತಮಾನದ ಹೆಣ್ಣು ಮಕ್ಕಳ ಶಾಲೆ!

ಮುಖ್ಯಮಂತ್ರಿ ಅಭ್ಯರ್ಥಿಗೆ ಸಿಧು ಮತ್ತು ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಪ್ರಮುಖ ಸ್ಪರ್ಧಿಗಳು. ಪಕ್ಷದ ನಿರ್ಧಾರಕ್ಕೆ ಬದ್ಧರಾಗುವುದಾಗಿ ಇಬ್ಬರೂ ಗಾಂಧಿ ಅವರಿಗೆ ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಚರಣ್‌ಜಿತ್ ಸಿಂಗ್ ಚನ್ನಿ ಈ ರೇಸ್‌ನಲ್ಲಿ ಮುಂಚೂಣಿಯಲ್ಲಿದ್ದಾರೆ ಎಂಬ ವದಂತಿಯಿದೆ.

ಜನವರಿ 27 ರಂದು ರಾಜ್ಯಕ್ಕೆ ಭೇಟಿ ನೀಡಿದ್ದ ರಾಹುಲ್ ಗಾಂಧಿ, ಪಕ್ಷವು ಸಿಎಂ ಅಭ್ಯರ್ಥಿಯ ಘೋಷಣೆ ಮಾಡಿ ಚುನಾವಣೆಯನ್ನು ಎದುರಿಸಲಿದೆ, ಇದನ್ನು ಪಕ್ಷದ ಕಾರ್ಯಕರ್ತರನ್ನು ಸಂಪರ್ಕಿಸಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳಲಾಗುವುದು. ಮುಖ್ಯಮಂತ್ರಿ ಅಭ್ಯರ್ಥಿಯಾಗಿ ಯಾರನ್ನು ಆಯ್ಕೆ ಮಾಡಿದರೂ ಒಬ್ಬರು ಇನ್ನೊಬ್ಬರು ಬೆಂಬಲಿಸುತ್ತಾರೆ ಎಂದು ಇಬ್ಬರೂ ನಾಯಕರು ಭರವಸೆ ನೀಡಿದ್ದಾರೆ ಎಂದು ಅವರು ಹೇಳಿದ್ದರು.

 

ಕಾಂಗ್ರೆಸ್ ತನ್ನ ನಾಯಕರು ಮತ್ತು ಕಾರ್ಯಕರ್ತರಿಂದ ಪ್ರತಿಕ್ರಿಯೆಯನ್ನು ತೆಗೆದುಕೊಳ್ಳುವುದರ ಜೊತೆಗೆ, ಫೋನ್ ಕರೆ ವ್ಯವಸ್ಥೆಯ ಮೂಲಕ ತಮ್ಮ ಮುಖ್ಯಮಂತ್ರಿ ಅಭ್ಯರ್ಥಿ ಯಾರಾಗಬೇಕೆಂಬುದರ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯವನ್ನು ಕೇಳಿದೆ.

ಫೆಬ್ರವರಿ 20 ರಂದು 117 ಸದಸ್ಯ ಬಲದ ಪಂಜಾಬ್‌ ವಿಧಾನಸಭೆಗೆ ಚುನಾವಣೆ ನಡೆಯಲಿದೆ. ಮಾರ್ಚ್ 10 ರಂದು ಮತ ಎಣಿಕೆ ನಡೆಯಲಿದೆ.


ಇದನ್ನೂ ಓದಿ: ಪಂಜಾಬ್‌‌: ಮುಖ್ಯಮಂತ್ರಿ ಅಭ್ಯರ್ಥಿ ಆಯ್ಕೆಗೆ ಜನಾಭಿಪ್ರಾಯದ ಮೊರೆ ಹೋದ ಕಾಂಗ್ರೆಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...