Homeಮುಖಪುಟತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತ ಸಾವು

ದೆಹಲಿಯಲ್ಲಿ ದಿನೇ ದಿನೇ ಪ್ರತಿಭಟನಾ ನಿರತ ರೈತರು ಸಾವನಪ್ಪುತ್ತಿದ್ದರೂ ಸಹ ಪ್ರಧಾನಿ ಮೋದಿ ತಿರುಗಿ ನೋಡುತ್ತಿಲ್ಲ. ಇದು ಅವರ ಕಲ್ಲೆದೆಯನ್ನು, ರೈತರ ಬಗೆಗಿನ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಹಲವರು ಕಿಡಿಕಾರಿದ್ದಾರೆ.

- Advertisement -
- Advertisement -

ಇಂದು ಮುಂಜಾನೆ ತೀವ್ರ ಚಳಿಗಾಳಿಯಿಂದಾಗಿ ಪಂಜಾಬ್- ಹರಿಯಾಣ ಗಡಿಯಲ್ಲಿ ಪ್ರತಿಭಟನಾ ನಿರತ ರೈತನೊಬ್ಬ ಸಾವನಪ್ಪಿದ್ದಾನೆ ಎಂದು ರೈತ ಸಂಘಟನೆಗಳು ತಿಳಿಸಿವೆ. 22 ದಿನಗಳಿಂದ ನಡೆಯುತ್ತಿರುವ ಕೇಂದ್ರದ ಕೃಷಿ ಕಾಯ್ದೆಗಳ ವಿರುರದ್ಧ ಹೋರಾಟದಲ್ಲಿ ಸುಮಾರು 24 ಜನ ರೈತರು ಮೃತಪಟ್ಟಿದ್ದಾರೆ ಎಂದು ರೈತರು ತಿಳಿಸಿದ್ದಾರೆ.

ಸಾವನಪ್ಪಿದ ಪಂಜಾಬ್‌ನ ರೈತನಿಗೆ ಮೂರು ಜನ ಮಕ್ಕಳಿದ್ದು ಕಳೆದ 22 ದಿನಗಳಿಂದಲೂ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿದ್ದ ಎನ್ನಲಾಗಿದೆ. ತೀವ್ರ ಕೊರೆಯುವ ಚಳಿಯಿಂದಾಗಿಯೇ ಆತ ಮೃತಪಟ್ಟಿದ್ದಾನೆ ಎಂದು ರೈತರು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ದೆಹಲಿ ಮತ್ತು ಅದರ ನೆರೆಹೊರೆಯಲ್ಲಿ ತಾಪಮಾನವು ಐದು ಡಿಗ್ರಿ ಅಥವಾ ಅದಕ್ಕಿಂತ ಕಡಿಮೆಯಾಗಿದೆ. ದಿನದ ತಾಪಮಾನವು ಸಾಮಾನ್ಯಕ್ಕಿಂತ ನಾಲ್ಕು ಡಿಗ್ರಿಗಳಿಗಿಂತಲೂ ಕಡಿಮೆಯಾಗಿದೆ.

ನಿನ್ನೆ ತಾನೇ ಸಿಖ್ ಧರ್ಮಗುರುವೊಬ್ಬರು ಪ್ರತಿಭಟನಾನಿರತ ರೈತರನ್ನು ಬೆಂಬಲಿಸಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದರು. ಸರ್ಕಾರದ ವಿರುದ್ಧ ಕೋಪ ಮತ್ತು ನೋವನ್ನು ವ್ಯಕ್ತಪಡಿಸಲು ತಮ್ಮ ಪ್ರಾಣವನ್ನು ತ್ಯಾಗ ಮಾಡುತ್ತಿದ್ದೇನೆ ಎಂದು ಅವರು ಆತ್ಮಹತ್ಯಾ ಪತ್ರವನ್ನು ಬರೆದಿಟ್ಟಿದ್ದರು.

ಹರಿಯಾಣದ ಗುರುದ್ವಾರವೊಂದರಲ್ಲಿ ಸಿಖ್ ಧರ್ಮಗುರುವಾಗಿದ್ದ ಬಾಬಾ ರಾಮ್ ಸಿಂಗ್‌ರವರು “ರೈತರು ತಮ್ಮ ಹಕ್ಕುಗಳನ್ನು ಪಡೆದುಕೊಳ್ಳಲು ಹೋರಾಡುತ್ತಿದ್ದಾರೆ. ಆ ನೋವನ್ನು ನಾನೂ ಅನುಭವಿಸುತ್ತಿದ್ದೇನೆ… ಸರ್ಕಾರವು ಅವರಿಗೆ ನ್ಯಾಯ ಒದಗಿಸದ ಕಾರಣ ನಾನೂ ಅವರ ನೋವನ್ನು ಹಂಚಿಕೊಳ್ಳುತ್ತೇನೆ. ಅನ್ಯಾಯವನ್ನು ಮಾಡುವುದು ಪಾಪ, ಆದರೆ ಅನ್ಯಾಯವನ್ನು ಸಹಿಸುವುದು ಕೂಡಾ ಪಾಪವಾಗಿದೆ. ರೈತರನ್ನು ಬೆಂಬಲಿಸಲು, ಕೆಲವರು ತಮ್ಮ ಪ್ರಶಸ್ತಿಗಳನ್ನು ಸರ್ಕಾರಕ್ಕೆ ಹಿಂದಿರುಗಿಸಿದ್ದಾರೆ. ನಾನು ನನ್ನ ಪ್ರಾಣವನ್ನು ತ್ಯಾಗ ಮಾಡಲು ನಿರ್ಧರಿಸಿದ್ದೇನೆ” ಎಂದು ಬರೆದು ಆತ್ಮಹತ್ಯೆಗೆ ಶರಣಾಗಿದ್ದರು.

ಇನ್ನು ದೆಹಲಿಯಲ್ಲಿ ದಿನೇ ದಿನೇ ಪ್ರತಿಭಟನಾ ನಿರತ ರೈತರು ಸಾವನಪ್ಪುತ್ತಿದ್ದರೂ ಸಹ ಪ್ರಧಾನಿ ಮೋದಿ ತಿರುಗಿ ನೋಡುತ್ತಿಲ್ಲ. ಇದು ಅವರ ಕಲ್ಲೆದೆಯನ್ನು, ರೈತರ ಬಗೆಗಿನ ನಿರ್ಲಕ್ಷ್ಯವನ್ನು ತೋರಿಸುತ್ತದೆ ಎಂದು ಹಲವರು ಕಿಡಿಕಾರಿದ್ದಾರೆ.


ಇದನ್ನೂ ಓದಿ: ರೈತ ಹೋರಾಟವನ್ನು ಬೆಂಬಲಿಸಿ ಆತ್ಮಹತ್ಯೆ ಮಾಡಿಕೊಂಡ ಸಿಖ್ ಧರ್ಮಗುರು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...