Homeಚಳವಳಿಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

ಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

"ಭಾನುವಾರದವರೆಗೆ 1,411 ಟೆಲಿಕಾಂ ಟವರ್‌ಗಳಿಗೆ ಹಾನಿಯಾಗಿದೆ. ಸೋಮವಾರ ಈ ಸಂಖ್ಯೆ 1,500ನ್ನು ದಾಟಿದೆ. ಜಲಂಧರ್‌ನಲ್ಲಿ ಜಿಯೊ ಸಂಸ್ಥೆಗೆ ಸೇರಿದ ಕೇಬಲ್‌ಗಳ ಮೂಟೆಗೆ ಬೆಂಕಿ ಹಚ್ಚಲಾಗಿದೆ"

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಪಂಜಾಬ್‌ನಲ್ಲಿ 1,500ಕ್ಕೂ ಅಧಿಕ ಜಿಯೋ ಟೆಲಿಕಾಂ ಟವರ್‌ಗಳಿಗೆ ಹಾನಿ ಮಾಡಿದ್ದು, ಇದರಿಂದ ಕೆಲವು ಪ್ರದೇಶಗಳಲ್ಲಿ ಸಂಪರ್ಕ ಸೇವೆಗೆ ತೊಡಕಾಗಿದೆ. ಈ ಮೂಲಕ ರೈತರು ತಮ್ಮ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತಿದ್ದಾರೆ.

ಟೆಲಿಕಾಂ ಸೇವೆಯ ಟವರ್‌ಗಳಿಗೆ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡುವುದರ ಮೂಲಕ ಮುಖೇಶ್ ಅಂಬಾನಿಯವರ ಜಿಯೋ ಸಂಸ್ಥೆ ಹಾಗೂ ಉದ್ಯಮಿ ಗೌತಮ್ ಅದಾನಿಗೆ ಸೇರಿದ ಸಂಸ್ಥೆಗಳ ಮೂಲಸೌಕರ್ಯಕ್ಕೆ ತೊಂದರೆಯುಂಟುಮಾಡಲಾಗಿದೆ.

ಭಾನುವಾರದವರೆಗೆ 1,411 ಟೆಲಿಕಾಂ ಟವರ್‌ಗಳಿಗೆ ಹಾನಿಯಾಗಿದೆ. ಸೋಮವಾರ ಈ ಸಂಖ್ಯೆ 1,500ನ್ನು ದಾಟಿದೆ. ಜಲಂಧರ್‌ನಲ್ಲಿ ಜಿಯೊ ಸಂಸ್ಥೆಗೆ ಸೇರಿದ ಕೇಬಲ್‌ಗಳ ಮೂಟೆಗೆ ಬೆಂಕಿ ಹಚ್ಚಲಾಗಿದೆ. ಪಂಜಾಬ್‌ನಲ್ಲಿ ಜಿಯೋ ಮೊಬೈಲ್ ಸಂಸ್ಥೆಯ 9,000ಕ್ಕೂ ಅಧಿಕ ಟವರ್‌ಗಳಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: TRP ಹಗರಣ: ಅರ್ನಾಬ್ ಲಕ್ಷಗಟ್ಟಲೆ ಲಂಚ ನೀಡಿದ್ದರು ಎಂದು ಒಪ್ಪಿಕೊಂಡ ಬಾರ್ಕ್ ಮಾಜಿ ಮುಖ್ಯಸ್ಥ

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು, ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಇದು ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಗಳಿಸಿ ಜಿಯೋ ಕಂಪನಿಗೆ ಹೊಡೆತ ಕೊಟ್ಟಿತ್ತು.

ಸೋಮವಾರ (ಡಿ.28) ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಆಂದೋಲನ ಆರಂಭವಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಿದ್ದಾರೆ.

ಇದನ್ನೂ ಓದಿ: ನಾನು ದನದ ಮಾಂಸ ತಿನ್ನುತ್ತೇನೆ, ನೀನು ಯಾವನಯ್ಯ ನನ್ನನ್ನು ಕೇಳೋಕೆ: ಸಿದ್ದರಾಮಯ್ಯ

ಈಗಾಗಲೇ ಕಳೆದೊಂದು ತಿಂಗಳಿನಿಂದ #BoycottJio ಅಭಿಯಾನ ನಡೆಯುತ್ತಿದ್ದು ಲಕ್ಷಾಂತರ ರೈತರು-ಯುವಜನರು ಜಿಯೋದಿಂದ ಹೊರಬಂದಿದ್ದಾರೆ. ಡಿಸೆಂಬರ್ ಎರಡನೇ ವಾರದಲ್ಲಿ ಬರೋಬ್ಬರಿ 26 ಲಕ್ಷ ಜನ ಜಿಯೋ ಸಿಮ್‌ನಿಂದ ಪೋರ್ಟ್ ಆಗಿದ್ದರು. ಹಾಗಾಗಿ ಜಿಯೋ ಕಂಪನಿ ಏರ್‌ಟೆಲ್ ಮತ್ತು ವೋಡೋಪೋನ್ ಐಡಿಯಾ ವಿರುದ್ಧ ಟ್ರಾಯ್ (Telecom Regulator Authority of India) ಬಳಿ ದೂರು ನೀಡಿ, ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ‘ಬಾಯ್ಕಾಟ್ ಜಿಯೋ’ ಹಿಂದೆ ಈ ಕಂಪನಿಗಳ ಪಿತೂರಿಯಿದೆ ಎಂದು ಆರೋಪಿಸಿತ್ತು.

ಈಗ ಹೊರಬಿದ್ದಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಸಕ್ರಿಯ ಬಳಕೆದಾರರಿದ್ದರೆ ಜಿಯೋಗೆ 33.2% ಸಕ್ರಿಯ ಬಳಕೆದಾರರಿದ್ದಾರೆ. ಅಲ್ಲದೇ ನಿರಂತರವಾಗಿ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್‌ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು ಜಿಯೋವನ್ನು ಆತಂಕಕ್ಕೆ ದೂಡಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಜನರು ಜಿಯೋದಿಂದ ಪೋರ್ಟ್ ಆಗಲು ಸಿದ್ದರಾಗಿದ್ದಾರೆ.


ಇದನ್ನೂ ಓದಿ: ಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ – BJP ಗೆ ಆಘಾತ ನೀಡಿದ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...