Homeಚಳವಳಿಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

ಪಂಜಾಬ್: 1500 ಕ್ಕೂ ಹೆಚ್ಚು ಜಿಯೋ ಟವರ್‌ಗಳಿಗೆ ಹಾನಿ ಮಾಡಿದ ರೈತ ಹೋರಾಟಗಾರರು

"ಭಾನುವಾರದವರೆಗೆ 1,411 ಟೆಲಿಕಾಂ ಟವರ್‌ಗಳಿಗೆ ಹಾನಿಯಾಗಿದೆ. ಸೋಮವಾರ ಈ ಸಂಖ್ಯೆ 1,500ನ್ನು ದಾಟಿದೆ. ಜಲಂಧರ್‌ನಲ್ಲಿ ಜಿಯೊ ಸಂಸ್ಥೆಗೆ ಸೇರಿದ ಕೇಬಲ್‌ಗಳ ಮೂಟೆಗೆ ಬೆಂಕಿ ಹಚ್ಚಲಾಗಿದೆ"

- Advertisement -
- Advertisement -

ಕೇಂದ್ರ ಸರ್ಕಾರದ ಕೃಷಿ ಕಾಯ್ದೆಗಳನ್ನು ವಿರೋಧಿಸಿ ಪ್ರತಿಭಟನೆ ನಡೆಸುತ್ತಿರುವ ರೈತರು ಪಂಜಾಬ್‌ನಲ್ಲಿ 1,500ಕ್ಕೂ ಅಧಿಕ ಜಿಯೋ ಟೆಲಿಕಾಂ ಟವರ್‌ಗಳಿಗೆ ಹಾನಿ ಮಾಡಿದ್ದು, ಇದರಿಂದ ಕೆಲವು ಪ್ರದೇಶಗಳಲ್ಲಿ ಸಂಪರ್ಕ ಸೇವೆಗೆ ತೊಡಕಾಗಿದೆ. ಈ ಮೂಲಕ ರೈತರು ತಮ್ಮ ಪ್ರತಿಭಟನೆಯನ್ನು ಇನ್ನಷ್ಟು ತೀವ್ರಗೊಳಿಸುತ್ತಿದ್ದಾರೆ.

ಟೆಲಿಕಾಂ ಸೇವೆಯ ಟವರ್‌ಗಳಿಗೆ ವಿದ್ಯುತ್ ಸಂಪರ್ಕವನ್ನು ಕಡಿತ ಮಾಡುವುದರ ಮೂಲಕ ಮುಖೇಶ್ ಅಂಬಾನಿಯವರ ಜಿಯೋ ಸಂಸ್ಥೆ ಹಾಗೂ ಉದ್ಯಮಿ ಗೌತಮ್ ಅದಾನಿಗೆ ಸೇರಿದ ಸಂಸ್ಥೆಗಳ ಮೂಲಸೌಕರ್ಯಕ್ಕೆ ತೊಂದರೆಯುಂಟುಮಾಡಲಾಗಿದೆ.

ಭಾನುವಾರದವರೆಗೆ 1,411 ಟೆಲಿಕಾಂ ಟವರ್‌ಗಳಿಗೆ ಹಾನಿಯಾಗಿದೆ. ಸೋಮವಾರ ಈ ಸಂಖ್ಯೆ 1,500ನ್ನು ದಾಟಿದೆ. ಜಲಂಧರ್‌ನಲ್ಲಿ ಜಿಯೊ ಸಂಸ್ಥೆಗೆ ಸೇರಿದ ಕೇಬಲ್‌ಗಳ ಮೂಟೆಗೆ ಬೆಂಕಿ ಹಚ್ಚಲಾಗಿದೆ. ಪಂಜಾಬ್‌ನಲ್ಲಿ ಜಿಯೋ ಮೊಬೈಲ್ ಸಂಸ್ಥೆಯ 9,000ಕ್ಕೂ ಅಧಿಕ ಟವರ್‌ಗಳಿವೆ ಎಂದು ಅಧಿಕಾರಿಗಳು ಹೇಳಿದ್ದಾರೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ಇದನ್ನೂ ಓದಿ: TRP ಹಗರಣ: ಅರ್ನಾಬ್ ಲಕ್ಷಗಟ್ಟಲೆ ಲಂಚ ನೀಡಿದ್ದರು ಎಂದು ಒಪ್ಪಿಕೊಂಡ ಬಾರ್ಕ್ ಮಾಜಿ ಮುಖ್ಯಸ್ಥ

ನರೇಂದ್ರ ಮೋದಿ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾನೂನುಗಳು ಮುಖೇಶ್ ಅಂಬಾನಿ ಮತ್ತು ಗೌತಮ್ ಅದಾನಿಯಂತಹ ಕಾರ್ಪೊರೇಟ್ ಕಂಪನಿಗಳ ಪರವಾಗಿವೆ ಎಂದು ಆರೋಪಿಸಿರುವ ರೈತರು, ಅವರ ಎಲ್ಲಾ ಉತ್ಪನ್ನಗಳನ್ನು ಬಹಿಷ್ಕಾರ ಮಾಡಿದ್ದಾರೆ. ಇದು ದೇಶಾದ್ಯಂತ ವ್ಯಾಪಕ ಮೆಚ್ಚುಗೆ ಗಳಿಸಿ ಜಿಯೋ ಕಂಪನಿಗೆ ಹೊಡೆತ ಕೊಟ್ಟಿತ್ತು.

ಸೋಮವಾರ (ಡಿ.28) ಅದೇ ಮಾದರಿಯಲ್ಲಿ ಕರ್ನಾಟಕದಲ್ಲಿಯೂ ಆಂದೋಲನ ಆರಂಭವಾಗಿದ್ದು, ಕರ್ನಾಟಕ ರಾಜ್ಯ ರೈತ ಸಂಘದ ರಾಜ್ಯ ಗೌರವಾಧ್ಯಕ್ಷರಾದ ಎಚ್.ಆರ್ ಬಸವರಾಜಪ್ಪನವರ ನೇತೃತ್ವದಲ್ಲಿ ನೂರಾರು ಕಾರ್ಯಕರ್ತರು ಸಾಮೂಹಿಕವಾಗಿ ಜಿಯೋ ಸಿಮ್‌ನಿಂದ ಏರ್‌ಟೆಲ್‌ ಸಿಮ್‌ಗೆ ಪೋರ್ಟ್ ಆಗಿದ್ದಾರೆ.

ಇದನ್ನೂ ಓದಿ: ನಾನು ದನದ ಮಾಂಸ ತಿನ್ನುತ್ತೇನೆ, ನೀನು ಯಾವನಯ್ಯ ನನ್ನನ್ನು ಕೇಳೋಕೆ: ಸಿದ್ದರಾಮಯ್ಯ

ಈಗಾಗಲೇ ಕಳೆದೊಂದು ತಿಂಗಳಿನಿಂದ #BoycottJio ಅಭಿಯಾನ ನಡೆಯುತ್ತಿದ್ದು ಲಕ್ಷಾಂತರ ರೈತರು-ಯುವಜನರು ಜಿಯೋದಿಂದ ಹೊರಬಂದಿದ್ದಾರೆ. ಡಿಸೆಂಬರ್ ಎರಡನೇ ವಾರದಲ್ಲಿ ಬರೋಬ್ಬರಿ 26 ಲಕ್ಷ ಜನ ಜಿಯೋ ಸಿಮ್‌ನಿಂದ ಪೋರ್ಟ್ ಆಗಿದ್ದರು. ಹಾಗಾಗಿ ಜಿಯೋ ಕಂಪನಿ ಏರ್‌ಟೆಲ್ ಮತ್ತು ವೋಡೋಪೋನ್ ಐಡಿಯಾ ವಿರುದ್ಧ ಟ್ರಾಯ್ (Telecom Regulator Authority of India) ಬಳಿ ದೂರು ನೀಡಿ, ದೆಹಲಿಯಲ್ಲಿ ಹೋರಾಟ ನಡೆಸುತ್ತಿರುವ ರೈತರು ಕರೆ ನೀಡಿರುವ ‘ಬಾಯ್ಕಾಟ್ ಜಿಯೋ’ ಹಿಂದೆ ಈ ಕಂಪನಿಗಳ ಪಿತೂರಿಯಿದೆ ಎಂದು ಆರೋಪಿಸಿತ್ತು.

ಈಗ ಹೊರಬಿದ್ದಿರುವ ಅಂಕಿ ಅಂಶಗಳ ಪ್ರಕಾರ ಭಾರತದಲ್ಲಿನ ಸಕ್ರಿಯ ಬಳಕೆದಾರರ ವಿಭಾಗದಲ್ಲಿ ಏರ್‌ಟೆಲ್ ಜಿಯೋವನ್ನು ಹಿಂದಿಕ್ಕಿದೆ. ಏರ್‌ಟೆಲ್‌ಗೆ ಒಟ್ಟು 33.3% ಸಕ್ರಿಯ ಬಳಕೆದಾರರಿದ್ದರೆ ಜಿಯೋಗೆ 33.2% ಸಕ್ರಿಯ ಬಳಕೆದಾರರಿದ್ದಾರೆ. ಅಲ್ಲದೇ ನಿರಂತರವಾಗಿ ಜಿಯೋದಿಂದ ಏರ್‌ಟೆಲ್‌ಗೆ ಪೋರ್ಟ್‌ ಆಗುತ್ತಿರುವವರ ಸಂಖ್ಯೆ ಹೆಚ್ಚುತ್ತಿದೆ. ಇದು ಜಿಯೋವನ್ನು ಆತಂಕಕ್ಕೆ ದೂಡಿದೆ. ಇಂತಹ ಸಂದರ್ಭದಲ್ಲಿ ಮತ್ತಷ್ಟು ಜನರು ಜಿಯೋದಿಂದ ಪೋರ್ಟ್ ಆಗಲು ಸಿದ್ದರಾಗಿದ್ದಾರೆ.


ಇದನ್ನೂ ಓದಿ: ಕಳಚಿಕೊಳ್ಳುತ್ತಿದೆ NDA ನ ಒಂದೊಂದೇ ಕೊಂಡಿ – BJP ಗೆ ಆಘಾತ ನೀಡಿದ ತಮಿಳುನಾಡು!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...